Homeಮುಖಪುಟರೈಲು ಅಪಘಾತ | 'ಇನ್ನೆಷ್ಟು ಕುಟುಂಬಗಳು ಬಲಿಯಾಗಬೇಕು?': ಕೇಂದ್ರದ ವಿರುದ್ಧ ರಾಹುಲ್ ವಾಗ್ದಾಳಿ

ರೈಲು ಅಪಘಾತ | ‘ಇನ್ನೆಷ್ಟು ಕುಟುಂಬಗಳು ಬಲಿಯಾಗಬೇಕು?’: ಕೇಂದ್ರದ ವಿರುದ್ಧ ರಾಹುಲ್ ವಾಗ್ದಾಳಿ

- Advertisement -
- Advertisement -

ತಮಿಳುನಾಡಿನಲ್ಲಿ ಸಂಭವಿಸಿದ ರೈಲು ಅಪಘಾತಕ್ಕೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಶನಿವಾರ ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದ್ದು, ಹಲವಾರು ಅಪಘಾತಗಳಲ್ಲಿ ಅನೇಕ ಜೀವಗಳನ್ನು ಕಳೆದುಕೊಂಡಿದ್ದರೂ, ಯಾವುದೇ ಪಾಠ ಕಲಿತಿಲ್ಲ. ಇನ್ನೂ ಎಷ್ಟು ಕುಟುಂಬಗಳು ಬಲಿಯಾಗಬೇಕು? ಎಂದು ಸರ್ಕಾರವನ್ನು ಪ್ರಶ್ನಿಸಿದ್ದಾರೆ.

ಜವಾಬ್ದಾರಿಯು ಮೇಲ್ಭಾಗದಿಂದ (ಕೇಂದ್ರದಿಂದ) ಪ್ರಾರಂಭವಾಗುತ್ತದೆ ಎಂದು ರಾಹುಲ್ ಗಾಂಧಿ ಹೇಳಿದ್ದು, ರೈಲು ಅಪಘಾತಗಳು ಸಂಭವಿಸಿದಾಗ ಅದನ್ನು ಕೆಳ ಹಂತದ ಸಿಬ್ಬಂದಿಯ ತಲೆಗೆ ಕಟ್ಟಬೇಡಿ ಎಂದಿದ್ದಾರೆ.

ಎಕ್ಸ್‌ನಲ್ಲಿ ಪೋಸ್ಟ್‌ ಹಾಕಿರುವ ರಾಹುಲ್ ಗಾಂಧಿ, “ಮೈಸೂರು-ದರ್ಭಾಂಗ ರೈಲು ಅಪಘಾತವು ಭೀಕರವಾದ ಬಾಲಸೋರ್ ಅಪಘಾತವನ್ನು ಪ್ರತಿಬಿಂಬಿಸುತ್ತದೆ. ಒಂದು ಪ್ಯಾಸೆಂಜರ್ ರೈಲು ನಿಂತಿದ್ದ ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದಿದೆ. ಹಲವಾರು ಅಪಘಾತಗಳಲ್ಲಿ ಅನೇಕ ಜೀವಗಳನ್ನು ಕಳೆದುಕೊಂಡರೂ, ಕೇಂದ್ರ ಸರ್ಕಾರ ಯಾವುದೇ ಪಾಠಗಳನ್ನು ಕಲಿತಿಲ್ಲ. ಉತ್ತರದಾಯಿತ್ವವು ಮೇಲ್ಭಾಗದಿಂದ ಪ್ರಾರಂಭವಾಗುತ್ತದೆ. ಈ ಸರ್ಕಾರವು ಎಚ್ಚೆತ್ತುಕೊಳ್ಳುವ ಮೊದಲು ಇನ್ನೂ ಎಷ್ಟು ಕುಟುಂಬಗಳು ಬಲಿಯಾಗಬೇಕು? ಎಂದು ಬರೆದುಕೊಂಡಿದ್ದಾರೆ.

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಕೂಡ ರೈಲು ಅಪಘಾತಕ್ಕೆ ಸಂಬಂಧಿಸಿದಂತೆ ಕೇಂದ್ರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

“ರೈಲು ಅಪಘಾತಗಳು ದೇಶದಲ್ಲಿ ತುಂಬಾ ಸಾಮಾನ್ಯವಾಗಿದೆ. ಒಂದರ ನಂತರ ಒಂದರಂತೆ ಸಂಭವಿಸುತ್ತಿದ್ದರೂ, ಸರ್ಕಾರ ತಲೆಕೆಡಿಸಿಕೊಳ್ಳುತ್ತಿಲ್ಲ. ಯಾವುದೇ ಕ್ರಮಗಳನ್ನು ತೆಗೆದುಕೊಳ್ಳುತ್ತಿಲ್ಲ” ಎಂದು ಅವರು ತಮ್ಮ ವಾಟ್ಸಾಪ್ ಚಾನೆಲ್‌ನಲ್ಲಿ ಹಿಂದಿಯಲ್ಲಿ ಪೋಸ್ಟ್ ಮಾಡಿದ್ದಾರೆ.

“ಸುರಕ್ಷಿತ ರೈಲು ಪ್ರಯಾಣದ ಹೊಣೆಗಾರಿಕೆಯ ಬಗ್ಗೆ ಸರ್ಕಾರ ತಲೆ ಕೆಡಿಸಿಕೊಳ್ಳದ ಕಾರಣ, ದೇಶದ ಕೋಟಿಗಟ್ಟಲೆ ಜನ ಸಾಮಾನ್ಯರು ತಮ್ಮ ಪ್ರಾಣವನ್ನೇ ಪಣಕ್ಕಿಟ್ಟು ಭಯ ಮತ್ತು ಅವ್ಯವಸ್ಥೆಯ ಚಕ್ರಗಳ ಮೇಲೆ ಓಡುವ ರೈಲುಗಳಲ್ಲಿ ಪ್ರಯಾಣಿಸಬೇಕಾದ ಅನಿವಾರ್ಯತೆಗೆ ಸಿಲುಕಿದ್ದಾರೆ. ಮತ್ತೊಮ್ಮೆ, ತಮಿಳುನಾಡಿನಲ್ಲಿ ಮೈಸೂರು-ದರ್ಭಾಂಗ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಬಾಲಸೋರ್‌ನಂತಹ ಅಪಘಾತ ಸಂಭವಿಸಿದೆ” ಎಂದು ಪ್ರಿಯಾಂಕಾ ಗಾಂಧಿ ಹೇಳಿದ್ದಾರೆ.

ಚೆನ್ನೈ ಸಮೀಪದ ಕವರೈಪೆಟ್ಟೈ ರೈಲು ನಿಲ್ದಾಣದ ಬಳಿ ನಿಂತಿದ್ದ ಗೂಡ್ಸ್ ರೈಲಿಗೆ ಮೈಸೂರು-ದರ್ಭಾಂಗ ಎಕ್ಸ್‌ಪ್ರೆಸ್ ರೈಲು ಡಿಕ್ಕಿ ಹೊಡೆದಿದ್ದು, ಘಟನೆಯಲ್ಲಿ 19 ಪ್ರಯಾಣಿಕರು ಗಾಯಗೊಂಡಿದ್ದಾರೆ.

ನಿನ್ನೆ(ಅ.11) ರಾತ್ರಿ 8:30ರ ಸುಮಾರಿಗೆ ಚೆನ್ನೈ-ಗುಡೂರು ವಿಭಾಗದ ಪೊನ್ನೇರಿ ಮತ್ತು ಕವರೈಪ್ಪೆಟ್ಟೈ ನಡುವೆ ಸಂಭವಿಸಿದ ಈ ಅಪಘಾತದಲ್ಲಿ ಪ್ಯಾಸೆಂಜರ್ ರೈಲಿನ 12 ರಿಂದ 13 ಬೋಗಿಗಳು ಹಳಿ ತಪ್ಪಿವೆ.

ರೈಲ್ವೆ ಅಧಿಕಾರಿಗಳ ಪ್ರಕಾರ, ಗಂಟೆಗೆ 75 ಕಿ.ಮೀ ವೇಗದಲ್ಲಿ ಚಲಿಸುತ್ತಿದ್ದ ಎಕ್ಸ್‌ಪ್ರೆಸ್ ರೈಲು, ಮುಖ್ಯ ಮಾರ್ಗದ ಬದಲಿಗೆ ಲೂಪ್ ಲೈನ್ ಅನ್ನು ತಪ್ಪಾಗಿ ಪ್ರವೇಶಿಸಿ ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಗೂಡ್ಸ್‌ ರೈಲಿನಲ್ಲಿದ್ದ ಪಾರ್ಸೆಲ್ ವ್ಯಾನ್‌ಗೆ ಬೆಂಕಿ ಹೊತ್ತಿಕೊಂಡಿದೆ.

ಇದನ್ನೂ ಓದಿ : ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದ ಮೈಸೂರು-ದರ್ಭಾಂಗ ಎಕ್ಸ್‌ಪ್ರೆಸ್ : 19 ಮಂದಿಗೆ ಗಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...

ಹನೂರು ಶೂಟೌಟ್ ಪ್ರಕರಣ: ಮೂವರು ಅರಣ್ಯ ಸಿಬ್ಬಂದಿಗೆ ನಿರೀಕ್ಷಣಾ ಜಾಮೀನು.!

ಕಾವೇರಿ ವನ್ಯಜೀವಿ ಅಭಯಾರಣ್ಯದ ಹನೂರು ವ್ಯಾಪ್ತಿಯಲ್ಲಿ ಮೂವರು ಮೃತಪಟ್ಟಿದ್ದ ವಿವಾದಾತ್ಮಕ ಗುಂಡಿನ ದಾಳಿ ಪ್ರಕರಣಕ್ಕೆ ಇದೀಗ ಕಾನೂನು ತಿರುವು ಸಿಕ್ಕಿದೆ. ಪ್ರಕರಣದಲ್ಲಿ ಆರೋಪ ಎದುರಿಸುತ್ತಿರುವ ಮೂವರು ಅರಣ್ಯ ಸಿಬ್ಬಂದಿಗೆ ಕೊಳ್ಳೇಗಾಲದ ಮೊದಲ ಹೆಚ್ಚುವರಿ...

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...