ಇತ್ತೀಚಿನ ವರ್ಷಗಳಲ್ಲಿ ಕಂಡರಿಯದಂತಹ ಮಹಾ ರೈಲು ದುರಂತವೊಂದು ಘಟಿಸಿಹೋಗಿದೆ. ಎರಡು ರೈಲುಗಳು ಹಳಿ ತಪ್ಪಿ ಗೂಡ್ಸ್ರೈಲಿಗೆ ಡಿಕ್ಕಿ ಹೊಡೆದ ಪರಿಣಾಮ 238 ಜನರು ಅಸು ನೀಗಿದ್ದಾರೆ. 900ಕ್ಕೂ ಹೆಚ್ಚು ಮಂದಿ ಸಾವು-ಬದುಕಿನ ನಡುವೆ ಹೋರಾಡುತ್ತಿದ್ದಾರೆ. ಅವರ ಚಿಕಿತ್ಸೆಗೆ ರಕ್ತದಾನ ಮಾಡಲು ನೂರಾರು ನಾಗರೀಕರು ಆಸ್ಪತ್ರೆಗಳ ಮುಂದೆ ಸಾಲು ಗಟ್ಟಿ ನಿಂತಿರುವ ದೃಶ್ಯಗಳು ಕಂಡುಬರುತ್ತಿವೆ.
ಭದ್ರಕ್ನ ಜಿಲ್ಲಾ ಕೇಂದ್ರ ಆಸ್ಪತ್ರೆಯಲ್ಲಿ ಗಾಯಗೊಂಡವರಿಗೆ ರಕ್ತದಾನ ಮಾಡಲು ರಕ್ತದಾನಿಗಳು ಮುಂದಾಗಿದ್ದಾರೆ. ಈಗಾಗಲೇ ಹಲವಾರು ಜನ ರಕ್ತದಾನ ಮಾಡಿದ್ದು, ಇನ್ನು ಉದ್ದನೆಯ ಸರತಿ ಸಾಲು ಕಂಡುಬಂದಿದೆ. ದುರಂತದ ಸಂದರ್ಭದಲ್ಲಿ ಮಾನವೀಯತೆ ಮೆರೆದಿದ್ದಾರೆ.
Humanity first always 🙏🙏
At mid night : Hundreds of People queue up in Balasore to donate blood after the horrific #TrainAccident #TrainMishap pic.twitter.com/SXtulgyhbM
— Vandana Gupta 🇮🇳 (@im_vandy) June 3, 2023
ಅತ್ಯಂತ ದುರಂತ ರೈಲು ಅಪಘಾತ… ಅನಾಹುತದಿಂದ ಜನರನ್ನು ರಕ್ಷಿಸಲು ರಾತ್ರಿಯಿಡೀ ಶ್ರಮಿಸಿದ ಸ್ಥಳೀಯ ತಂಡಗಳು, ಸ್ಥಳೀಯ ಜನರು ಮತ್ತು ಇತರರಿಗೆ ನಾನು ಧನ್ಯವಾದ ಹೇಳಬೇಕು… ರೈಲ್ವೆ ಸುರಕ್ಷತೆಗೆ ಯಾವಾಗಲೂ ಮೊದಲ ಆದ್ಯತೆ ನೀಡಬೇಕು… ಗಾಯಗೊಂಡ ಜನರನ್ನು ಬಾಲಸೋರ್ ಮತ್ತು ಕಟಕ್ನ ಆಸ್ಪತ್ರೆಗಳಿಗೆ ಸೇರಿಸಲಾಗಿದೆ. ಅವರು ಸಾಧ್ಯವಾದಷ್ಟು ಬೇಗ ಚೇತರಿಸಿಕೊಳ್ಳುತ್ತಾರೆ ಎಂದು ಒಡಿಸ್ಸಾ ಸಿಎಂ ನವೀನ್ ಪಟ್ನಾಯಕ್ ಹೇಳಿದ್ದಾರೆ.
ಇನ್ನು ರೈಲು ಹಳಿ ತಪ್ಪಿದ ಕಾರಣಕ್ಕಾಗಿ ಮಾರ್ಗ ಬಂದ್ ಆದ ಕಾರಣ ಹತ್ತಾರು ರೈಲುಗಳನ್ನು ರದ್ದುಗೊಳಿಸಲಾಗಿದೆ. ನೂರಾರು ರೈಲುಗಳ ಮಾರ್ಗ ಬದಲಿಸಲಾಗಿದೆ. ಆಗ್ನೇಯ ರೈಲ್ವೆಯು ಬಾಲಸೋರ್ ಅಪಘಾತದ ನಂತರ ರದ್ದುಗೊಳಿಸಲಾದ ರೈಲುಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ
#ser #IndianRailways pic.twitter.com/PwFvL6kfmX
— South Eastern Railway (@serailwaykol) June 3, 2023
ದೇಶ-ವಿದೇಶಗಳಿಂದ ಹರಿದು ಬಂದ ಸಂತಾಪ
ಪ್ರಧಾನಿ ನರೇಂದ್ರ ಮೋದಿ ಒಡಿಸ್ಸಾ ರೈಲು ದುರಂತದ ಪರಿಸ್ಥಿತಿ ಅವಲೋಕನ ನಡೆಸಲು ಸಭೆ ಕರೆದಿದ್ದಾರೆ. ತಮಿಳುನಾಡು ಸಿಎಂ ಸ್ಟಾಲಿನ್ ಈಗಾಗಲೇ ಕಾರ್ಯಪ್ರವೃತ್ತರಾಗಿದ್ದು, ತಮ್ಮ ರಾಜ್ಯದ ಗಾಯಾಳುಗಳ ಚಿಕಿತ್ಸೆಗೆ ಶ್ರಮಿಸುತ್ತಿದ್ದಾರೆ. ಮೃತರ ಕುಟುಂಬಕ್ಕೆ 5 ಲಕ್ಷ ರೂ ಪರಿಹಾರ ಘೋಷಿಸಿದ್ದಾರೆ. ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಘಟನೆ ನಡೆದ ಸ್ಥಳಕ್ಕೆ ಭೇಟಿ ನೀಡಲು ಮುಂದಾಗಿದ್ದಾರೆ. ಎನ್ಸಿಪಿ ಪಕ್ಷವು ದುರಂತದ ಸಂಪೂರ್ಣ ತನಿಖೆಗೆ ಒತ್ತಾಯಿಸಿದೆ.
ಓಡಿಸ್ಸಾ ರೈಲು ದುರಂತಕ್ಕೆ ದೇಶ-ವಿದೇಶದ ನಾಯಕರು ಸಂತಾಪ ಸೂಚಿಸಿದ್ದಾರೆ. ಕೆನಡಾ ಪ್ರಧಾನಿ ಜಸ್ಟಿನ್ ಟ್ರೂಡು, ತೈವಾನ್ ಪ್ರಧಾನಿ ತ್ಸೈ ಇಂಗ್-ವೆನ್, ಆಸ್ಟ್ರೇಲಿಯಾ ಮತ್ತು ಶ್ರೀಲಂಕಾ ವಿದೇಶಾಂಗ ಸಚಿವರು ರೈಲು ದುರಂತದಲ್ಲಿ ಮಡಿದವರಿಗೆ ಸಂತಾಪ ಸೂಚಿಸಿದ್ದಾರೆ.
ಇದನ್ನೂ ಓದಿ: ಒಡಿಸ್ಸಾ ಭೀಕರ ರೈಲು ದುರಂತಕ್ಕೆ 233 ಮಂದಿ ಸಾವು, 900ಕ್ಕೂ ಅಧಿಕ ಮಂದಿಗೆ ಗಾಯ: ಮೂರು ರೈಲುಗಳು ಹಳಿತಪ್ಪಿದ್ದು ಹೇಗೆ?