Homeಮುಖಪುಟರೈಲು ದುರಂತ: ಗಾಯಾಳುಗಳ ಚಿಕಿತ್ಸೆಗೆ ರಕ್ತದಾನ ಮಾಡಲು ಸಾಲುಗಟ್ಟಿ ನಿಂತ ಜನ

ರೈಲು ದುರಂತ: ಗಾಯಾಳುಗಳ ಚಿಕಿತ್ಸೆಗೆ ರಕ್ತದಾನ ಮಾಡಲು ಸಾಲುಗಟ್ಟಿ ನಿಂತ ಜನ

- Advertisement -
- Advertisement -

ಇತ್ತೀಚಿನ ವರ್ಷಗಳಲ್ಲಿ ಕಂಡರಿಯದಂತಹ ಮಹಾ ರೈಲು ದುರಂತವೊಂದು ಘಟಿಸಿಹೋಗಿದೆ. ಎರಡು ರೈಲುಗಳು ಹಳಿ ತಪ್ಪಿ ಗೂಡ್ಸ್‌ರೈಲಿಗೆ ಡಿಕ್ಕಿ ಹೊಡೆದ ಪರಿಣಾಮ 238 ಜನರು ಅಸು ನೀಗಿದ್ದಾರೆ. 900ಕ್ಕೂ ಹೆಚ್ಚು ಮಂದಿ ಸಾವು-ಬದುಕಿನ ನಡುವೆ ಹೋರಾಡುತ್ತಿದ್ದಾರೆ. ಅವರ ಚಿಕಿತ್ಸೆಗೆ ರಕ್ತದಾನ ಮಾಡಲು ನೂರಾರು ನಾಗರೀಕರು ಆಸ್ಪತ್ರೆಗಳ ಮುಂದೆ ಸಾಲು ಗಟ್ಟಿ ನಿಂತಿರುವ ದೃಶ್ಯಗಳು ಕಂಡುಬರುತ್ತಿವೆ.

ಭದ್ರಕ್‌ನ ಜಿಲ್ಲಾ ಕೇಂದ್ರ ಆಸ್ಪತ್ರೆಯಲ್ಲಿ ಗಾಯಗೊಂಡವರಿಗೆ ರಕ್ತದಾನ ಮಾಡಲು ರಕ್ತದಾನಿಗಳು ಮುಂದಾಗಿದ್ದಾರೆ. ಈಗಾಗಲೇ ಹಲವಾರು ಜನ ರಕ್ತದಾನ ಮಾಡಿದ್ದು, ಇನ್ನು ಉದ್ದನೆಯ ಸರತಿ ಸಾಲು ಕಂಡುಬಂದಿದೆ. ದುರಂತದ ಸಂದರ್ಭದಲ್ಲಿ ಮಾನವೀಯತೆ ಮೆರೆದಿದ್ದಾರೆ.

ಅತ್ಯಂತ ದುರಂತ ರೈಲು ಅಪಘಾತ… ಅನಾಹುತದಿಂದ ಜನರನ್ನು ರಕ್ಷಿಸಲು ರಾತ್ರಿಯಿಡೀ ಶ್ರಮಿಸಿದ ಸ್ಥಳೀಯ ತಂಡಗಳು, ಸ್ಥಳೀಯ ಜನರು ಮತ್ತು ಇತರರಿಗೆ ನಾನು ಧನ್ಯವಾದ ಹೇಳಬೇಕು… ರೈಲ್ವೆ ಸುರಕ್ಷತೆಗೆ ಯಾವಾಗಲೂ ಮೊದಲ ಆದ್ಯತೆ ನೀಡಬೇಕು… ಗಾಯಗೊಂಡ ಜನರನ್ನು ಬಾಲಸೋರ್ ಮತ್ತು ಕಟಕ್‌ನ ಆಸ್ಪತ್ರೆಗಳಿಗೆ ಸೇರಿಸಲಾಗಿದೆ. ಅವರು ಸಾಧ್ಯವಾದಷ್ಟು ಬೇಗ ಚೇತರಿಸಿಕೊಳ್ಳುತ್ತಾರೆ ಎಂದು ಒಡಿಸ್ಸಾ ಸಿಎಂ ನವೀನ್ ಪಟ್ನಾಯಕ್ ಹೇಳಿದ್ದಾರೆ.

ಇನ್ನು ರೈಲು ಹಳಿ ತಪ್ಪಿದ ಕಾರಣಕ್ಕಾಗಿ ಮಾರ್ಗ ಬಂದ್ ಆದ ಕಾರಣ ಹತ್ತಾರು ರೈಲುಗಳನ್ನು ರದ್ದುಗೊಳಿಸಲಾಗಿದೆ. ನೂರಾರು ರೈಲುಗಳ ಮಾರ್ಗ ಬದಲಿಸಲಾಗಿದೆ. ಆಗ್ನೇಯ ರೈಲ್ವೆಯು ಬಾಲಸೋರ್ ಅಪಘಾತದ ನಂತರ ರದ್ದುಗೊಳಿಸಲಾದ ರೈಲುಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ

ದೇಶ-ವಿದೇಶಗಳಿಂದ ಹರಿದು ಬಂದ ಸಂತಾಪ

ಪ್ರಧಾನಿ ನರೇಂದ್ರ ಮೋದಿ ಒಡಿಸ್ಸಾ ರೈಲು ದುರಂತದ ಪರಿಸ್ಥಿತಿ ಅವಲೋಕನ ನಡೆಸಲು ಸಭೆ ಕರೆದಿದ್ದಾರೆ. ತಮಿಳುನಾಡು ಸಿಎಂ ಸ್ಟಾಲಿನ್ ಈಗಾಗಲೇ ಕಾರ್ಯಪ್ರವೃತ್ತರಾಗಿದ್ದು, ತಮ್ಮ ರಾಜ್ಯದ ಗಾಯಾಳುಗಳ ಚಿಕಿತ್ಸೆಗೆ ಶ್ರಮಿಸುತ್ತಿದ್ದಾರೆ. ಮೃತರ ಕುಟುಂಬಕ್ಕೆ 5 ಲಕ್ಷ ರೂ ಪರಿಹಾರ ಘೋಷಿಸಿದ್ದಾರೆ. ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಘಟನೆ ನಡೆದ ಸ್ಥಳಕ್ಕೆ ಭೇಟಿ ನೀಡಲು ಮುಂದಾಗಿದ್ದಾರೆ. ಎನ್‌ಸಿಪಿ ಪಕ್ಷವು ದುರಂತದ ಸಂಪೂರ್ಣ ತನಿಖೆಗೆ ಒತ್ತಾಯಿಸಿದೆ.

ಓಡಿಸ್ಸಾ ರೈಲು ದುರಂತಕ್ಕೆ ದೇಶ-ವಿದೇಶದ ನಾಯಕರು ಸಂತಾಪ ಸೂಚಿಸಿದ್ದಾರೆ. ಕೆನಡಾ ಪ್ರಧಾನಿ ಜಸ್ಟಿನ್ ಟ್ರೂಡು, ತೈವಾನ್ ಪ್ರಧಾನಿ ತ್ಸೈ ಇಂಗ್-ವೆನ್, ಆಸ್ಟ್ರೇಲಿಯಾ ಮತ್ತು ಶ್ರೀಲಂಕಾ ವಿದೇಶಾಂಗ ಸಚಿವರು ರೈಲು ದುರಂತದಲ್ಲಿ ಮಡಿದವರಿಗೆ ಸಂತಾಪ ಸೂಚಿಸಿದ್ದಾರೆ.

ಇದನ್ನೂ ಓದಿ: ಡಿಸ್ಸಾ ಭೀಕರ ರೈಲು ದುರಂತಕ್ಕೆ 233 ಮಂದಿ ಸಾವು, 900ಕ್ಕೂ ಅಧಿಕ ಮಂದಿಗೆ ಗಾಯ: ಮೂರು ರೈಲುಗಳು ಹಳಿತಪ್ಪಿದ್ದು ಹೇಗೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...