Homeಮುಖಪುಟರೈಲು ದುರಂತ: ಗಾಯಾಳುಗಳ ಚಿಕಿತ್ಸೆಗೆ ರಕ್ತದಾನ ಮಾಡಲು ಸಾಲುಗಟ್ಟಿ ನಿಂತ ಜನ

ರೈಲು ದುರಂತ: ಗಾಯಾಳುಗಳ ಚಿಕಿತ್ಸೆಗೆ ರಕ್ತದಾನ ಮಾಡಲು ಸಾಲುಗಟ್ಟಿ ನಿಂತ ಜನ

- Advertisement -
- Advertisement -

ಇತ್ತೀಚಿನ ವರ್ಷಗಳಲ್ಲಿ ಕಂಡರಿಯದಂತಹ ಮಹಾ ರೈಲು ದುರಂತವೊಂದು ಘಟಿಸಿಹೋಗಿದೆ. ಎರಡು ರೈಲುಗಳು ಹಳಿ ತಪ್ಪಿ ಗೂಡ್ಸ್‌ರೈಲಿಗೆ ಡಿಕ್ಕಿ ಹೊಡೆದ ಪರಿಣಾಮ 238 ಜನರು ಅಸು ನೀಗಿದ್ದಾರೆ. 900ಕ್ಕೂ ಹೆಚ್ಚು ಮಂದಿ ಸಾವು-ಬದುಕಿನ ನಡುವೆ ಹೋರಾಡುತ್ತಿದ್ದಾರೆ. ಅವರ ಚಿಕಿತ್ಸೆಗೆ ರಕ್ತದಾನ ಮಾಡಲು ನೂರಾರು ನಾಗರೀಕರು ಆಸ್ಪತ್ರೆಗಳ ಮುಂದೆ ಸಾಲು ಗಟ್ಟಿ ನಿಂತಿರುವ ದೃಶ್ಯಗಳು ಕಂಡುಬರುತ್ತಿವೆ.

ಭದ್ರಕ್‌ನ ಜಿಲ್ಲಾ ಕೇಂದ್ರ ಆಸ್ಪತ್ರೆಯಲ್ಲಿ ಗಾಯಗೊಂಡವರಿಗೆ ರಕ್ತದಾನ ಮಾಡಲು ರಕ್ತದಾನಿಗಳು ಮುಂದಾಗಿದ್ದಾರೆ. ಈಗಾಗಲೇ ಹಲವಾರು ಜನ ರಕ್ತದಾನ ಮಾಡಿದ್ದು, ಇನ್ನು ಉದ್ದನೆಯ ಸರತಿ ಸಾಲು ಕಂಡುಬಂದಿದೆ. ದುರಂತದ ಸಂದರ್ಭದಲ್ಲಿ ಮಾನವೀಯತೆ ಮೆರೆದಿದ್ದಾರೆ.

ಅತ್ಯಂತ ದುರಂತ ರೈಲು ಅಪಘಾತ… ಅನಾಹುತದಿಂದ ಜನರನ್ನು ರಕ್ಷಿಸಲು ರಾತ್ರಿಯಿಡೀ ಶ್ರಮಿಸಿದ ಸ್ಥಳೀಯ ತಂಡಗಳು, ಸ್ಥಳೀಯ ಜನರು ಮತ್ತು ಇತರರಿಗೆ ನಾನು ಧನ್ಯವಾದ ಹೇಳಬೇಕು… ರೈಲ್ವೆ ಸುರಕ್ಷತೆಗೆ ಯಾವಾಗಲೂ ಮೊದಲ ಆದ್ಯತೆ ನೀಡಬೇಕು… ಗಾಯಗೊಂಡ ಜನರನ್ನು ಬಾಲಸೋರ್ ಮತ್ತು ಕಟಕ್‌ನ ಆಸ್ಪತ್ರೆಗಳಿಗೆ ಸೇರಿಸಲಾಗಿದೆ. ಅವರು ಸಾಧ್ಯವಾದಷ್ಟು ಬೇಗ ಚೇತರಿಸಿಕೊಳ್ಳುತ್ತಾರೆ ಎಂದು ಒಡಿಸ್ಸಾ ಸಿಎಂ ನವೀನ್ ಪಟ್ನಾಯಕ್ ಹೇಳಿದ್ದಾರೆ.

ಇನ್ನು ರೈಲು ಹಳಿ ತಪ್ಪಿದ ಕಾರಣಕ್ಕಾಗಿ ಮಾರ್ಗ ಬಂದ್ ಆದ ಕಾರಣ ಹತ್ತಾರು ರೈಲುಗಳನ್ನು ರದ್ದುಗೊಳಿಸಲಾಗಿದೆ. ನೂರಾರು ರೈಲುಗಳ ಮಾರ್ಗ ಬದಲಿಸಲಾಗಿದೆ. ಆಗ್ನೇಯ ರೈಲ್ವೆಯು ಬಾಲಸೋರ್ ಅಪಘಾತದ ನಂತರ ರದ್ದುಗೊಳಿಸಲಾದ ರೈಲುಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ

ದೇಶ-ವಿದೇಶಗಳಿಂದ ಹರಿದು ಬಂದ ಸಂತಾಪ

ಪ್ರಧಾನಿ ನರೇಂದ್ರ ಮೋದಿ ಒಡಿಸ್ಸಾ ರೈಲು ದುರಂತದ ಪರಿಸ್ಥಿತಿ ಅವಲೋಕನ ನಡೆಸಲು ಸಭೆ ಕರೆದಿದ್ದಾರೆ. ತಮಿಳುನಾಡು ಸಿಎಂ ಸ್ಟಾಲಿನ್ ಈಗಾಗಲೇ ಕಾರ್ಯಪ್ರವೃತ್ತರಾಗಿದ್ದು, ತಮ್ಮ ರಾಜ್ಯದ ಗಾಯಾಳುಗಳ ಚಿಕಿತ್ಸೆಗೆ ಶ್ರಮಿಸುತ್ತಿದ್ದಾರೆ. ಮೃತರ ಕುಟುಂಬಕ್ಕೆ 5 ಲಕ್ಷ ರೂ ಪರಿಹಾರ ಘೋಷಿಸಿದ್ದಾರೆ. ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಘಟನೆ ನಡೆದ ಸ್ಥಳಕ್ಕೆ ಭೇಟಿ ನೀಡಲು ಮುಂದಾಗಿದ್ದಾರೆ. ಎನ್‌ಸಿಪಿ ಪಕ್ಷವು ದುರಂತದ ಸಂಪೂರ್ಣ ತನಿಖೆಗೆ ಒತ್ತಾಯಿಸಿದೆ.

ಓಡಿಸ್ಸಾ ರೈಲು ದುರಂತಕ್ಕೆ ದೇಶ-ವಿದೇಶದ ನಾಯಕರು ಸಂತಾಪ ಸೂಚಿಸಿದ್ದಾರೆ. ಕೆನಡಾ ಪ್ರಧಾನಿ ಜಸ್ಟಿನ್ ಟ್ರೂಡು, ತೈವಾನ್ ಪ್ರಧಾನಿ ತ್ಸೈ ಇಂಗ್-ವೆನ್, ಆಸ್ಟ್ರೇಲಿಯಾ ಮತ್ತು ಶ್ರೀಲಂಕಾ ವಿದೇಶಾಂಗ ಸಚಿವರು ರೈಲು ದುರಂತದಲ್ಲಿ ಮಡಿದವರಿಗೆ ಸಂತಾಪ ಸೂಚಿಸಿದ್ದಾರೆ.

ಇದನ್ನೂ ಓದಿ: ಡಿಸ್ಸಾ ಭೀಕರ ರೈಲು ದುರಂತಕ್ಕೆ 233 ಮಂದಿ ಸಾವು, 900ಕ್ಕೂ ಅಧಿಕ ಮಂದಿಗೆ ಗಾಯ: ಮೂರು ರೈಲುಗಳು ಹಳಿತಪ್ಪಿದ್ದು ಹೇಗೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...