Homeಮುಖಪುಟನಾಳೆಯಿಂದ ರೈಲುಗಳ ಓಡಾಟ ಆರಂಭ : ದರ ಮಾತ್ರ ದುಬಾರಿ!

ನಾಳೆಯಿಂದ ರೈಲುಗಳ ಓಡಾಟ ಆರಂಭ : ದರ ಮಾತ್ರ ದುಬಾರಿ!

- Advertisement -
- Advertisement -

ಭಾರತೀಯ ರೈಲ್ವೆ ನಾಳೆ (ಮೇ-12)ಯಿಂದ ದೇಶಾದ್ಯಂತ ರೈಲುಗಳನ್ನು ಓಡಿಸಲು ಯೋಜಿಸಿದೆ. ಮೊದಲ ಬಾರಿಗೆ 15 ರೈಲುಗಳು ಓಡಾಡಲಿವೆ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ. ಪ್ರಯಾಣಿಕರಿಗೆ ಸ್ಕ್ರೀನಿಂಗ್ ಮತ್ತು ಸಾಮಾಜಿಕ ಅಂತರ ಕಡ್ಡಾಯಗೊಳಿಸಲಾಗಿದೆ. ಕಾಯ್ದಿರಿಸಿದ ಟಿಕೆಟ್‌ ಉಳ್ಳವರಿಗೆ ಮಾತ್ರ ಪ್ರಯಾಣ ಅವಕಾಶವಿದ್ದು, ಇಂದು ಸಂಜೆ 04 ಗಂಟೆಯಿಂದ ಟಿಕೆಟ್ ಕಾಯ್ದಿರಿಸಲು ಭಾರತೀಯ ರೈಲ್ವೆ ಇಲಾಖೆ ಅವಕಾಶ ಮಾಡಿಕೊಟ್ಟಿದೆ.

ಲಾಕ್ ಡೌನ್ ಘೋಷಣೆ ಮಾಡಿದ ನಂತರ ಇದೇ ಮೊದಲ ಬಾರಿಗೆ ಪ್ಯಾಸೆಂಜರ್ ರೈಲುಗಳ ಓಡಾಟಕ್ಕೆ ಅವಕಾಶ ಕಲ್ಪಿಸಲಾಗಿದೆ. ವಿಶೇಷ ರೈಲುಗಳು ನವದೆಹಲಿಯಿಂದ ದೇಶದ ವಿವಿಧ ಭಾಗಗಳಿಗೆ ಪ್ರಯಾಣ ಬೆಳೆಸಲಿವೆ.

ನವದೆಹಲಿಯಿಂದ ದಿಬುಘಡ್, ಅಗರ್ತಲ, ಹೌರಾ, ಪಾಟ್ನಾ, ಬಿಲಾಸ್ ಪುರ, ರಾಂಚಿ, ಭುವನೇಶ್ವರ್, ಸಿಕಿಂದರಾಬಾದ್, ಬೆಂಗಳೂರು, ಚೆನ್ನೈ, ತಿರುವನಂತಪುರಂ, ಮಡಗಾಂವ್, ಮುಂಬೈ ಸೆಂಟ್ರಲ್, ಅಹಮದಾಬಾದ್, ಜಮ್ಮು ತಾರಿ ರೈಲ್ವೆ ನಿಲ್ದಾಣಗಳಿಗೆ ರೈಲುಗಳು ಸಂಚರಿಸಲಿವೆ.

ಭಾರತೀಯ ರೈಲ್ವೆ ಲಾಕ್ ಡೌನ್ ನಿಂದ ಸಂಕಷ್ಟಕ್ಕೆ ಸಿಲುಕಿರುವ ವಲಸೆ ಕಾರ್ಮಿಕರನ್ನು ಕರೆದೊಯ್ಯಲು 300 ಶ್ರಮಿಕ್ ರೈಲುಗಳನ್ನು ಮೀಸಲಿಡಲಾಗಿದ್ದು ನಿತ್ಯವೂ ವಲಸೆ ಕಾರ್ಮಿಕರನ್ನು ಕರೆದೊಯ್ಯುತ್ತಿವೆ. ಇದಕ್ಕಾಗಿ 20000 ಕೋಚ್ ಗಳನ್ನು ಮೀಸಲಿಡಲಾಗಿದೆ.

ಹೊಸ ಮಾರ್ಗಗಳಲ್ಲಿ ರೈಲು ಓಡಿಸಲು ಸಿದ್ದತೆ ನಡೆದಿದ್ದು ಹೆಚ್ಚುವರಿ ಭೋಗಿಗಳು ಲಭ್ಯವಾದರೆ ಶೀಘ್ರವೇ ಹೊಸ ಮಾರ್ಗದಲ್ಲೂ ರೈಲುಗಳ ಸಂಚಾರಕ್ಕೆ ಅವಕಾಶ ನೀಡಲಾಗುವುದು ಎಂದು ಭಾರತೀಯ ರೈಲ್ವೆ ತಿಳಿಸಿದೆ.

ಒಂದು ರೈಲಿನ ಬೋಗಿಯಲ್ಲಿ 72 ಆಸನ ಇರುತ್ತದೆ. ಆದರೆ, ಶ್ರಮಿಕ್ ರೈಲಿನಲ್ಲಿ ಕೇವಲ 54 ಪ್ರಯಾಣಿಕರನ್ನು ಮಾತ್ರ ಅನುಮತಿಸಲಾಗಿತ್ತು. ಈ ವಿಶೇಷ ರೈಲು ಶ್ರಮಿಕ್ ರೈಲಿನಂತಲ್ಲದೆ 72 ಜನ ಪ್ರಯಾಣಿಕರೊಂದಿಗೆ ಸಂಪೂರ್ಣ ಸಾಮರ್ಥ್ಯದಲ್ಲಿ ಕಾರ್ಯನಿರ್ವಹಿಸುತ್ತದೆ. ಶುಲ್ಕದಲ್ಲೂ ಯಾವುದೇ ರಿಯಾಯಿತಿ ಇರುವುದಿಲ್ಲ.

ರೈಲು ನಿರ್ಗಮನಕ್ಕೆ ಕನಿಷ್ಠ ಒಂದು ಗಂಟೆ ಮೊದಲು ಪ್ರಯಾಣಿಕರು ನಿಲ್ದಾಣಕ್ಕೆ ಬರಬೇಕಾಗುತ್ತದೆ. ಆರಂಭದಲ್ಲಿ, ಎಲ್ಲಾ ಹವಾನಿಯಂತ್ರಿತ ಸೇವೆಗಳು 15 ರಾಜಧಾನಿ ಮಾರ್ಗಗಳಲ್ಲಿ ಪ್ರಾರಂಭವಾಗಲಿದ್ದು, ಶುಲ್ಕವು ಸೂಪರ್-ಫಾಸ್ಟ್ ರೈಲಿಗೆ ಸಮನಾಗಿರುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದಲ್ಲದೆ ಪ್ರಯಾಣಿಕರಿಗೆ ನೀಡುವ ಟಿಕೆಟ್‌ನಲ್ಲಿ ಏನು ಮಾಡಬೇಕು? ಮತ್ತು ಏನು ಮಾಡಬಾರದು? ಎಂಬ ಸಂಪೂರ್ಣ ವಿವರವನ್ನು ಮುದ್ರಿಸಲಾಗಿರುತ್ತದೆ.- ಉದಾಹರಣೆಗೆ:- ಸ್ಕ್ರೀನಿಂಗ್ ಮತ್ತು ಇತರ ಕರೋನವೈರಸ್ ಪ್ರೋಟೋಕಾಲ್‌ಗಳಿಗಾಗಿ ಪ್ರಯಾಣಿಕರು ರೈಲು ನಿಲ್ದಾಣಕ್ಕೆ ಕನಿಷ್ಠ ಒಂದು ಗಂಟೆ ಮುಂಚಿತವಾಗಿ ಆಗಮಿಸುವುದು, ಮಾಸ್ಕ್‌ಗಳ ಕಡ್ಡಾಯ ಬಳಕೆ ಮತ್ತು ಆರೋಗ್ಯಾ ಸೇತು ಮೊಬೈಲ್ ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿಕೊಳ್ಳುಬೇಕು ಎಂದು ಸೂಚಿಸಲಾಗುತ್ತದೆ.

ಪ್ರಯಾಣಿಕರು ಮಾಸ್ಕ್ ಧರಿಸಬೇಕು ಮತ್ತು ನಿರ್ಗಮನದ ಸಮಯದಲ್ಲಿ ಸ್ಕ್ರೀನಿಂಗ್‌ಗೆ ಒಳಗಾಗುವುದು ಕಡ್ಡಾಯವಾಗಿರುತ್ತದೆ. ರೋಗ ಲಕ್ಷಣವಿಲ್ಲದ ಪ್ರಯಾಣಿಕರಿಗೆ ಮಾತ್ರ ರೈಲುಗಳಲ್ಲಿ ಪ್ರಯಾಣಿಸಲು ಅವಕಾಶವಿರುತ್ತದೆ. ಪ್ರಯಾಣದ ಸಮಯದಲ್ಲಿ ಕೆಲವು ನಿಲುಗಡೆಗಳಲ್ಲಿ ಮಾತ್ರ ರೈಲನ್ನು ನಿಲ್ಲಿಸಲಾಗುವುದು.

ದೃಢಪಡಿಸಿದ ರೈಲ್ವೆ ಟಿಕೆಟ್ ಹೊಂದಿರುವ ಪ್ರಯಾಣಿಕರಿಗೆ ಮಾತ್ರ ರೈಲ್ವೆ ನಿಲ್ದಾಣಗಳಿಗೆ ಪ್ರವೇಶಿಸಲು ಅವಕಾಶವಿರುತ್ತದೆ. ನಿಲ್ದಾಣಗಳಲ್ಲಿ ಜನಸಂದಣಿಯನ್ನು ತಪ್ಪಿಸಲು ಈ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಲಾಗಿದೆ. ಮುಂದಿನ ದಿನಗಳಲ್ಲಿ ಕಾರ್ಯಾಚರಣೆಗಳನ್ನು ಕ್ರಮೇಣ ವಿಸ್ತರಿಸಲಾಗುವುದು ಮತ್ತು ಹೊಸ ಮಾರ್ಗಗಳಲ್ಲಿ ಹೆಚ್ಚಿನ ವಿಶೇಷ ಸೇವೆಗಳನ್ನು ಘೋಷಿಸಲಾಗುವುದು ಎಂದು ರೈಲ್ವೆ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.


ಇದನ್ನೂ ಓದಿ: ಉಚಿತ ಟ್ರೈನ್‌ ಎಂಬುದು ದೊಡ್ಡ ಸುಳ್ಳು: ಕಾರ್ಮಿಕರಿಂದ ಹಣ ವಸೂಲಿಗಿಳಿದ ಕೇಂದ್ರ ಸರ್ಕಾರ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...