Homeಮುಖಪುಟನಾಳೆಯಿಂದ ರೈಲುಗಳ ಓಡಾಟ ಆರಂಭ : ದರ ಮಾತ್ರ ದುಬಾರಿ!

ನಾಳೆಯಿಂದ ರೈಲುಗಳ ಓಡಾಟ ಆರಂಭ : ದರ ಮಾತ್ರ ದುಬಾರಿ!

- Advertisement -
- Advertisement -

ಭಾರತೀಯ ರೈಲ್ವೆ ನಾಳೆ (ಮೇ-12)ಯಿಂದ ದೇಶಾದ್ಯಂತ ರೈಲುಗಳನ್ನು ಓಡಿಸಲು ಯೋಜಿಸಿದೆ. ಮೊದಲ ಬಾರಿಗೆ 15 ರೈಲುಗಳು ಓಡಾಡಲಿವೆ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ. ಪ್ರಯಾಣಿಕರಿಗೆ ಸ್ಕ್ರೀನಿಂಗ್ ಮತ್ತು ಸಾಮಾಜಿಕ ಅಂತರ ಕಡ್ಡಾಯಗೊಳಿಸಲಾಗಿದೆ. ಕಾಯ್ದಿರಿಸಿದ ಟಿಕೆಟ್‌ ಉಳ್ಳವರಿಗೆ ಮಾತ್ರ ಪ್ರಯಾಣ ಅವಕಾಶವಿದ್ದು, ಇಂದು ಸಂಜೆ 04 ಗಂಟೆಯಿಂದ ಟಿಕೆಟ್ ಕಾಯ್ದಿರಿಸಲು ಭಾರತೀಯ ರೈಲ್ವೆ ಇಲಾಖೆ ಅವಕಾಶ ಮಾಡಿಕೊಟ್ಟಿದೆ.

ಲಾಕ್ ಡೌನ್ ಘೋಷಣೆ ಮಾಡಿದ ನಂತರ ಇದೇ ಮೊದಲ ಬಾರಿಗೆ ಪ್ಯಾಸೆಂಜರ್ ರೈಲುಗಳ ಓಡಾಟಕ್ಕೆ ಅವಕಾಶ ಕಲ್ಪಿಸಲಾಗಿದೆ. ವಿಶೇಷ ರೈಲುಗಳು ನವದೆಹಲಿಯಿಂದ ದೇಶದ ವಿವಿಧ ಭಾಗಗಳಿಗೆ ಪ್ರಯಾಣ ಬೆಳೆಸಲಿವೆ.

ನವದೆಹಲಿಯಿಂದ ದಿಬುಘಡ್, ಅಗರ್ತಲ, ಹೌರಾ, ಪಾಟ್ನಾ, ಬಿಲಾಸ್ ಪುರ, ರಾಂಚಿ, ಭುವನೇಶ್ವರ್, ಸಿಕಿಂದರಾಬಾದ್, ಬೆಂಗಳೂರು, ಚೆನ್ನೈ, ತಿರುವನಂತಪುರಂ, ಮಡಗಾಂವ್, ಮುಂಬೈ ಸೆಂಟ್ರಲ್, ಅಹಮದಾಬಾದ್, ಜಮ್ಮು ತಾರಿ ರೈಲ್ವೆ ನಿಲ್ದಾಣಗಳಿಗೆ ರೈಲುಗಳು ಸಂಚರಿಸಲಿವೆ.

ಭಾರತೀಯ ರೈಲ್ವೆ ಲಾಕ್ ಡೌನ್ ನಿಂದ ಸಂಕಷ್ಟಕ್ಕೆ ಸಿಲುಕಿರುವ ವಲಸೆ ಕಾರ್ಮಿಕರನ್ನು ಕರೆದೊಯ್ಯಲು 300 ಶ್ರಮಿಕ್ ರೈಲುಗಳನ್ನು ಮೀಸಲಿಡಲಾಗಿದ್ದು ನಿತ್ಯವೂ ವಲಸೆ ಕಾರ್ಮಿಕರನ್ನು ಕರೆದೊಯ್ಯುತ್ತಿವೆ. ಇದಕ್ಕಾಗಿ 20000 ಕೋಚ್ ಗಳನ್ನು ಮೀಸಲಿಡಲಾಗಿದೆ.

ಹೊಸ ಮಾರ್ಗಗಳಲ್ಲಿ ರೈಲು ಓಡಿಸಲು ಸಿದ್ದತೆ ನಡೆದಿದ್ದು ಹೆಚ್ಚುವರಿ ಭೋಗಿಗಳು ಲಭ್ಯವಾದರೆ ಶೀಘ್ರವೇ ಹೊಸ ಮಾರ್ಗದಲ್ಲೂ ರೈಲುಗಳ ಸಂಚಾರಕ್ಕೆ ಅವಕಾಶ ನೀಡಲಾಗುವುದು ಎಂದು ಭಾರತೀಯ ರೈಲ್ವೆ ತಿಳಿಸಿದೆ.

ಒಂದು ರೈಲಿನ ಬೋಗಿಯಲ್ಲಿ 72 ಆಸನ ಇರುತ್ತದೆ. ಆದರೆ, ಶ್ರಮಿಕ್ ರೈಲಿನಲ್ಲಿ ಕೇವಲ 54 ಪ್ರಯಾಣಿಕರನ್ನು ಮಾತ್ರ ಅನುಮತಿಸಲಾಗಿತ್ತು. ಈ ವಿಶೇಷ ರೈಲು ಶ್ರಮಿಕ್ ರೈಲಿನಂತಲ್ಲದೆ 72 ಜನ ಪ್ರಯಾಣಿಕರೊಂದಿಗೆ ಸಂಪೂರ್ಣ ಸಾಮರ್ಥ್ಯದಲ್ಲಿ ಕಾರ್ಯನಿರ್ವಹಿಸುತ್ತದೆ. ಶುಲ್ಕದಲ್ಲೂ ಯಾವುದೇ ರಿಯಾಯಿತಿ ಇರುವುದಿಲ್ಲ.

ರೈಲು ನಿರ್ಗಮನಕ್ಕೆ ಕನಿಷ್ಠ ಒಂದು ಗಂಟೆ ಮೊದಲು ಪ್ರಯಾಣಿಕರು ನಿಲ್ದಾಣಕ್ಕೆ ಬರಬೇಕಾಗುತ್ತದೆ. ಆರಂಭದಲ್ಲಿ, ಎಲ್ಲಾ ಹವಾನಿಯಂತ್ರಿತ ಸೇವೆಗಳು 15 ರಾಜಧಾನಿ ಮಾರ್ಗಗಳಲ್ಲಿ ಪ್ರಾರಂಭವಾಗಲಿದ್ದು, ಶುಲ್ಕವು ಸೂಪರ್-ಫಾಸ್ಟ್ ರೈಲಿಗೆ ಸಮನಾಗಿರುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದಲ್ಲದೆ ಪ್ರಯಾಣಿಕರಿಗೆ ನೀಡುವ ಟಿಕೆಟ್‌ನಲ್ಲಿ ಏನು ಮಾಡಬೇಕು? ಮತ್ತು ಏನು ಮಾಡಬಾರದು? ಎಂಬ ಸಂಪೂರ್ಣ ವಿವರವನ್ನು ಮುದ್ರಿಸಲಾಗಿರುತ್ತದೆ.- ಉದಾಹರಣೆಗೆ:- ಸ್ಕ್ರೀನಿಂಗ್ ಮತ್ತು ಇತರ ಕರೋನವೈರಸ್ ಪ್ರೋಟೋಕಾಲ್‌ಗಳಿಗಾಗಿ ಪ್ರಯಾಣಿಕರು ರೈಲು ನಿಲ್ದಾಣಕ್ಕೆ ಕನಿಷ್ಠ ಒಂದು ಗಂಟೆ ಮುಂಚಿತವಾಗಿ ಆಗಮಿಸುವುದು, ಮಾಸ್ಕ್‌ಗಳ ಕಡ್ಡಾಯ ಬಳಕೆ ಮತ್ತು ಆರೋಗ್ಯಾ ಸೇತು ಮೊಬೈಲ್ ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿಕೊಳ್ಳುಬೇಕು ಎಂದು ಸೂಚಿಸಲಾಗುತ್ತದೆ.

ಪ್ರಯಾಣಿಕರು ಮಾಸ್ಕ್ ಧರಿಸಬೇಕು ಮತ್ತು ನಿರ್ಗಮನದ ಸಮಯದಲ್ಲಿ ಸ್ಕ್ರೀನಿಂಗ್‌ಗೆ ಒಳಗಾಗುವುದು ಕಡ್ಡಾಯವಾಗಿರುತ್ತದೆ. ರೋಗ ಲಕ್ಷಣವಿಲ್ಲದ ಪ್ರಯಾಣಿಕರಿಗೆ ಮಾತ್ರ ರೈಲುಗಳಲ್ಲಿ ಪ್ರಯಾಣಿಸಲು ಅವಕಾಶವಿರುತ್ತದೆ. ಪ್ರಯಾಣದ ಸಮಯದಲ್ಲಿ ಕೆಲವು ನಿಲುಗಡೆಗಳಲ್ಲಿ ಮಾತ್ರ ರೈಲನ್ನು ನಿಲ್ಲಿಸಲಾಗುವುದು.

ದೃಢಪಡಿಸಿದ ರೈಲ್ವೆ ಟಿಕೆಟ್ ಹೊಂದಿರುವ ಪ್ರಯಾಣಿಕರಿಗೆ ಮಾತ್ರ ರೈಲ್ವೆ ನಿಲ್ದಾಣಗಳಿಗೆ ಪ್ರವೇಶಿಸಲು ಅವಕಾಶವಿರುತ್ತದೆ. ನಿಲ್ದಾಣಗಳಲ್ಲಿ ಜನಸಂದಣಿಯನ್ನು ತಪ್ಪಿಸಲು ಈ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಲಾಗಿದೆ. ಮುಂದಿನ ದಿನಗಳಲ್ಲಿ ಕಾರ್ಯಾಚರಣೆಗಳನ್ನು ಕ್ರಮೇಣ ವಿಸ್ತರಿಸಲಾಗುವುದು ಮತ್ತು ಹೊಸ ಮಾರ್ಗಗಳಲ್ಲಿ ಹೆಚ್ಚಿನ ವಿಶೇಷ ಸೇವೆಗಳನ್ನು ಘೋಷಿಸಲಾಗುವುದು ಎಂದು ರೈಲ್ವೆ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.


ಇದನ್ನೂ ಓದಿ: ಉಚಿತ ಟ್ರೈನ್‌ ಎಂಬುದು ದೊಡ್ಡ ಸುಳ್ಳು: ಕಾರ್ಮಿಕರಿಂದ ಹಣ ವಸೂಲಿಗಿಳಿದ ಕೇಂದ್ರ ಸರ್ಕಾರ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...

‘ನಿಮ್ಮನ್ನು ನಂಬಿ ಬಂದ ನಕ್ಸಲ್ ಕಾರ್ಯಕರ್ತರಿಗೆ ಕೊಟ್ಟ ಮಾತು ಉಳಿಸಿಕೊಳ್ಳಿ’: ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ ಶಾಂತಿಗಾಗಿ ನಾಗರೀಕ ವೇದಿಕೆ

ಬೆಂಗಳೂರು: ‘ಮುಖ್ಯವಾಹಿನಿಗೆ ಬಂದ ಏಳೂ ಜನ ನಕ್ಸಲೀಯರು ಜೈಲಿನಲ್ಲೇ ಇದ್ದಾರೆ. ಬಹಳ ಸೊರಗಿದ್ದಾರೆ. ತೀವ್ರ ದೈಹಿಕ ಹಾಗೂ ಮಾನಸಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರನ್ನು ಹೋಗಿ ಕಾಣುವುದೇ ನಮ್ಮ ಪಾಲಿಗೆ ದೊಡ್ಡ ಹಿಂಸೆಯಾಗಿದೆ ಎಂದು...

ಕೋಗಿಲು ಮನೆಗಳ ನೆಲಸಮ : ಪ್ರತಿಭಟಿಸಿದ ಹೋರಾಟಗಾರರ ಮೇಲೆ ಎಫ್‌ಐಆರ್

ಕೋಗಿಲು ಬಡಾವಣೆಯಲ್ಲಿ ಬಡವರ ಮನೆಗಳ ನೆಲಸಮ ವೇಳೆ ಬಿಗುವಿನ ವಾತಾವರಣ ಸೃಷ್ಟಿಸಿದ್ದಾರೆ ಎಂಬ ಆರೋಪದ ಮೇಲೆ ಹೋರಾಟಗಾರರ ವಿರುದ್ದ ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಜನಪರ ವೇದಿಕೆಯ ಮುಖಂಡರಾದ ಗೌರಮ್ಮ ಮತ್ತು ಮನೋಹರ್,...