Homeಮುಖಪುಟನಾಳೆಯಿಂದ ರೈಲುಗಳ ಓಡಾಟ ಆರಂಭ : ದರ ಮಾತ್ರ ದುಬಾರಿ!

ನಾಳೆಯಿಂದ ರೈಲುಗಳ ಓಡಾಟ ಆರಂಭ : ದರ ಮಾತ್ರ ದುಬಾರಿ!

- Advertisement -
- Advertisement -

ಭಾರತೀಯ ರೈಲ್ವೆ ನಾಳೆ (ಮೇ-12)ಯಿಂದ ದೇಶಾದ್ಯಂತ ರೈಲುಗಳನ್ನು ಓಡಿಸಲು ಯೋಜಿಸಿದೆ. ಮೊದಲ ಬಾರಿಗೆ 15 ರೈಲುಗಳು ಓಡಾಡಲಿವೆ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ. ಪ್ರಯಾಣಿಕರಿಗೆ ಸ್ಕ್ರೀನಿಂಗ್ ಮತ್ತು ಸಾಮಾಜಿಕ ಅಂತರ ಕಡ್ಡಾಯಗೊಳಿಸಲಾಗಿದೆ. ಕಾಯ್ದಿರಿಸಿದ ಟಿಕೆಟ್‌ ಉಳ್ಳವರಿಗೆ ಮಾತ್ರ ಪ್ರಯಾಣ ಅವಕಾಶವಿದ್ದು, ಇಂದು ಸಂಜೆ 04 ಗಂಟೆಯಿಂದ ಟಿಕೆಟ್ ಕಾಯ್ದಿರಿಸಲು ಭಾರತೀಯ ರೈಲ್ವೆ ಇಲಾಖೆ ಅವಕಾಶ ಮಾಡಿಕೊಟ್ಟಿದೆ.

ಲಾಕ್ ಡೌನ್ ಘೋಷಣೆ ಮಾಡಿದ ನಂತರ ಇದೇ ಮೊದಲ ಬಾರಿಗೆ ಪ್ಯಾಸೆಂಜರ್ ರೈಲುಗಳ ಓಡಾಟಕ್ಕೆ ಅವಕಾಶ ಕಲ್ಪಿಸಲಾಗಿದೆ. ವಿಶೇಷ ರೈಲುಗಳು ನವದೆಹಲಿಯಿಂದ ದೇಶದ ವಿವಿಧ ಭಾಗಗಳಿಗೆ ಪ್ರಯಾಣ ಬೆಳೆಸಲಿವೆ.

ನವದೆಹಲಿಯಿಂದ ದಿಬುಘಡ್, ಅಗರ್ತಲ, ಹೌರಾ, ಪಾಟ್ನಾ, ಬಿಲಾಸ್ ಪುರ, ರಾಂಚಿ, ಭುವನೇಶ್ವರ್, ಸಿಕಿಂದರಾಬಾದ್, ಬೆಂಗಳೂರು, ಚೆನ್ನೈ, ತಿರುವನಂತಪುರಂ, ಮಡಗಾಂವ್, ಮುಂಬೈ ಸೆಂಟ್ರಲ್, ಅಹಮದಾಬಾದ್, ಜಮ್ಮು ತಾರಿ ರೈಲ್ವೆ ನಿಲ್ದಾಣಗಳಿಗೆ ರೈಲುಗಳು ಸಂಚರಿಸಲಿವೆ.

ಭಾರತೀಯ ರೈಲ್ವೆ ಲಾಕ್ ಡೌನ್ ನಿಂದ ಸಂಕಷ್ಟಕ್ಕೆ ಸಿಲುಕಿರುವ ವಲಸೆ ಕಾರ್ಮಿಕರನ್ನು ಕರೆದೊಯ್ಯಲು 300 ಶ್ರಮಿಕ್ ರೈಲುಗಳನ್ನು ಮೀಸಲಿಡಲಾಗಿದ್ದು ನಿತ್ಯವೂ ವಲಸೆ ಕಾರ್ಮಿಕರನ್ನು ಕರೆದೊಯ್ಯುತ್ತಿವೆ. ಇದಕ್ಕಾಗಿ 20000 ಕೋಚ್ ಗಳನ್ನು ಮೀಸಲಿಡಲಾಗಿದೆ.

ಹೊಸ ಮಾರ್ಗಗಳಲ್ಲಿ ರೈಲು ಓಡಿಸಲು ಸಿದ್ದತೆ ನಡೆದಿದ್ದು ಹೆಚ್ಚುವರಿ ಭೋಗಿಗಳು ಲಭ್ಯವಾದರೆ ಶೀಘ್ರವೇ ಹೊಸ ಮಾರ್ಗದಲ್ಲೂ ರೈಲುಗಳ ಸಂಚಾರಕ್ಕೆ ಅವಕಾಶ ನೀಡಲಾಗುವುದು ಎಂದು ಭಾರತೀಯ ರೈಲ್ವೆ ತಿಳಿಸಿದೆ.

ಒಂದು ರೈಲಿನ ಬೋಗಿಯಲ್ಲಿ 72 ಆಸನ ಇರುತ್ತದೆ. ಆದರೆ, ಶ್ರಮಿಕ್ ರೈಲಿನಲ್ಲಿ ಕೇವಲ 54 ಪ್ರಯಾಣಿಕರನ್ನು ಮಾತ್ರ ಅನುಮತಿಸಲಾಗಿತ್ತು. ಈ ವಿಶೇಷ ರೈಲು ಶ್ರಮಿಕ್ ರೈಲಿನಂತಲ್ಲದೆ 72 ಜನ ಪ್ರಯಾಣಿಕರೊಂದಿಗೆ ಸಂಪೂರ್ಣ ಸಾಮರ್ಥ್ಯದಲ್ಲಿ ಕಾರ್ಯನಿರ್ವಹಿಸುತ್ತದೆ. ಶುಲ್ಕದಲ್ಲೂ ಯಾವುದೇ ರಿಯಾಯಿತಿ ಇರುವುದಿಲ್ಲ.

ರೈಲು ನಿರ್ಗಮನಕ್ಕೆ ಕನಿಷ್ಠ ಒಂದು ಗಂಟೆ ಮೊದಲು ಪ್ರಯಾಣಿಕರು ನಿಲ್ದಾಣಕ್ಕೆ ಬರಬೇಕಾಗುತ್ತದೆ. ಆರಂಭದಲ್ಲಿ, ಎಲ್ಲಾ ಹವಾನಿಯಂತ್ರಿತ ಸೇವೆಗಳು 15 ರಾಜಧಾನಿ ಮಾರ್ಗಗಳಲ್ಲಿ ಪ್ರಾರಂಭವಾಗಲಿದ್ದು, ಶುಲ್ಕವು ಸೂಪರ್-ಫಾಸ್ಟ್ ರೈಲಿಗೆ ಸಮನಾಗಿರುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದಲ್ಲದೆ ಪ್ರಯಾಣಿಕರಿಗೆ ನೀಡುವ ಟಿಕೆಟ್‌ನಲ್ಲಿ ಏನು ಮಾಡಬೇಕು? ಮತ್ತು ಏನು ಮಾಡಬಾರದು? ಎಂಬ ಸಂಪೂರ್ಣ ವಿವರವನ್ನು ಮುದ್ರಿಸಲಾಗಿರುತ್ತದೆ.- ಉದಾಹರಣೆಗೆ:- ಸ್ಕ್ರೀನಿಂಗ್ ಮತ್ತು ಇತರ ಕರೋನವೈರಸ್ ಪ್ರೋಟೋಕಾಲ್‌ಗಳಿಗಾಗಿ ಪ್ರಯಾಣಿಕರು ರೈಲು ನಿಲ್ದಾಣಕ್ಕೆ ಕನಿಷ್ಠ ಒಂದು ಗಂಟೆ ಮುಂಚಿತವಾಗಿ ಆಗಮಿಸುವುದು, ಮಾಸ್ಕ್‌ಗಳ ಕಡ್ಡಾಯ ಬಳಕೆ ಮತ್ತು ಆರೋಗ್ಯಾ ಸೇತು ಮೊಬೈಲ್ ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿಕೊಳ್ಳುಬೇಕು ಎಂದು ಸೂಚಿಸಲಾಗುತ್ತದೆ.

ಪ್ರಯಾಣಿಕರು ಮಾಸ್ಕ್ ಧರಿಸಬೇಕು ಮತ್ತು ನಿರ್ಗಮನದ ಸಮಯದಲ್ಲಿ ಸ್ಕ್ರೀನಿಂಗ್‌ಗೆ ಒಳಗಾಗುವುದು ಕಡ್ಡಾಯವಾಗಿರುತ್ತದೆ. ರೋಗ ಲಕ್ಷಣವಿಲ್ಲದ ಪ್ರಯಾಣಿಕರಿಗೆ ಮಾತ್ರ ರೈಲುಗಳಲ್ಲಿ ಪ್ರಯಾಣಿಸಲು ಅವಕಾಶವಿರುತ್ತದೆ. ಪ್ರಯಾಣದ ಸಮಯದಲ್ಲಿ ಕೆಲವು ನಿಲುಗಡೆಗಳಲ್ಲಿ ಮಾತ್ರ ರೈಲನ್ನು ನಿಲ್ಲಿಸಲಾಗುವುದು.

ದೃಢಪಡಿಸಿದ ರೈಲ್ವೆ ಟಿಕೆಟ್ ಹೊಂದಿರುವ ಪ್ರಯಾಣಿಕರಿಗೆ ಮಾತ್ರ ರೈಲ್ವೆ ನಿಲ್ದಾಣಗಳಿಗೆ ಪ್ರವೇಶಿಸಲು ಅವಕಾಶವಿರುತ್ತದೆ. ನಿಲ್ದಾಣಗಳಲ್ಲಿ ಜನಸಂದಣಿಯನ್ನು ತಪ್ಪಿಸಲು ಈ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಲಾಗಿದೆ. ಮುಂದಿನ ದಿನಗಳಲ್ಲಿ ಕಾರ್ಯಾಚರಣೆಗಳನ್ನು ಕ್ರಮೇಣ ವಿಸ್ತರಿಸಲಾಗುವುದು ಮತ್ತು ಹೊಸ ಮಾರ್ಗಗಳಲ್ಲಿ ಹೆಚ್ಚಿನ ವಿಶೇಷ ಸೇವೆಗಳನ್ನು ಘೋಷಿಸಲಾಗುವುದು ಎಂದು ರೈಲ್ವೆ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.


ಇದನ್ನೂ ಓದಿ: ಉಚಿತ ಟ್ರೈನ್‌ ಎಂಬುದು ದೊಡ್ಡ ಸುಳ್ಳು: ಕಾರ್ಮಿಕರಿಂದ ಹಣ ವಸೂಲಿಗಿಳಿದ ಕೇಂದ್ರ ಸರ್ಕಾರ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...