Homeಮುಖಪುಟನಾಳೆಯಿಂದ ರೈಲುಗಳ ಓಡಾಟ ಆರಂಭ : ದರ ಮಾತ್ರ ದುಬಾರಿ!

ನಾಳೆಯಿಂದ ರೈಲುಗಳ ಓಡಾಟ ಆರಂಭ : ದರ ಮಾತ್ರ ದುಬಾರಿ!

- Advertisement -
- Advertisement -

ಭಾರತೀಯ ರೈಲ್ವೆ ನಾಳೆ (ಮೇ-12)ಯಿಂದ ದೇಶಾದ್ಯಂತ ರೈಲುಗಳನ್ನು ಓಡಿಸಲು ಯೋಜಿಸಿದೆ. ಮೊದಲ ಬಾರಿಗೆ 15 ರೈಲುಗಳು ಓಡಾಡಲಿವೆ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ. ಪ್ರಯಾಣಿಕರಿಗೆ ಸ್ಕ್ರೀನಿಂಗ್ ಮತ್ತು ಸಾಮಾಜಿಕ ಅಂತರ ಕಡ್ಡಾಯಗೊಳಿಸಲಾಗಿದೆ. ಕಾಯ್ದಿರಿಸಿದ ಟಿಕೆಟ್‌ ಉಳ್ಳವರಿಗೆ ಮಾತ್ರ ಪ್ರಯಾಣ ಅವಕಾಶವಿದ್ದು, ಇಂದು ಸಂಜೆ 04 ಗಂಟೆಯಿಂದ ಟಿಕೆಟ್ ಕಾಯ್ದಿರಿಸಲು ಭಾರತೀಯ ರೈಲ್ವೆ ಇಲಾಖೆ ಅವಕಾಶ ಮಾಡಿಕೊಟ್ಟಿದೆ.

ಲಾಕ್ ಡೌನ್ ಘೋಷಣೆ ಮಾಡಿದ ನಂತರ ಇದೇ ಮೊದಲ ಬಾರಿಗೆ ಪ್ಯಾಸೆಂಜರ್ ರೈಲುಗಳ ಓಡಾಟಕ್ಕೆ ಅವಕಾಶ ಕಲ್ಪಿಸಲಾಗಿದೆ. ವಿಶೇಷ ರೈಲುಗಳು ನವದೆಹಲಿಯಿಂದ ದೇಶದ ವಿವಿಧ ಭಾಗಗಳಿಗೆ ಪ್ರಯಾಣ ಬೆಳೆಸಲಿವೆ.

ನವದೆಹಲಿಯಿಂದ ದಿಬುಘಡ್, ಅಗರ್ತಲ, ಹೌರಾ, ಪಾಟ್ನಾ, ಬಿಲಾಸ್ ಪುರ, ರಾಂಚಿ, ಭುವನೇಶ್ವರ್, ಸಿಕಿಂದರಾಬಾದ್, ಬೆಂಗಳೂರು, ಚೆನ್ನೈ, ತಿರುವನಂತಪುರಂ, ಮಡಗಾಂವ್, ಮುಂಬೈ ಸೆಂಟ್ರಲ್, ಅಹಮದಾಬಾದ್, ಜಮ್ಮು ತಾರಿ ರೈಲ್ವೆ ನಿಲ್ದಾಣಗಳಿಗೆ ರೈಲುಗಳು ಸಂಚರಿಸಲಿವೆ.

ಭಾರತೀಯ ರೈಲ್ವೆ ಲಾಕ್ ಡೌನ್ ನಿಂದ ಸಂಕಷ್ಟಕ್ಕೆ ಸಿಲುಕಿರುವ ವಲಸೆ ಕಾರ್ಮಿಕರನ್ನು ಕರೆದೊಯ್ಯಲು 300 ಶ್ರಮಿಕ್ ರೈಲುಗಳನ್ನು ಮೀಸಲಿಡಲಾಗಿದ್ದು ನಿತ್ಯವೂ ವಲಸೆ ಕಾರ್ಮಿಕರನ್ನು ಕರೆದೊಯ್ಯುತ್ತಿವೆ. ಇದಕ್ಕಾಗಿ 20000 ಕೋಚ್ ಗಳನ್ನು ಮೀಸಲಿಡಲಾಗಿದೆ.

ಹೊಸ ಮಾರ್ಗಗಳಲ್ಲಿ ರೈಲು ಓಡಿಸಲು ಸಿದ್ದತೆ ನಡೆದಿದ್ದು ಹೆಚ್ಚುವರಿ ಭೋಗಿಗಳು ಲಭ್ಯವಾದರೆ ಶೀಘ್ರವೇ ಹೊಸ ಮಾರ್ಗದಲ್ಲೂ ರೈಲುಗಳ ಸಂಚಾರಕ್ಕೆ ಅವಕಾಶ ನೀಡಲಾಗುವುದು ಎಂದು ಭಾರತೀಯ ರೈಲ್ವೆ ತಿಳಿಸಿದೆ.

ಒಂದು ರೈಲಿನ ಬೋಗಿಯಲ್ಲಿ 72 ಆಸನ ಇರುತ್ತದೆ. ಆದರೆ, ಶ್ರಮಿಕ್ ರೈಲಿನಲ್ಲಿ ಕೇವಲ 54 ಪ್ರಯಾಣಿಕರನ್ನು ಮಾತ್ರ ಅನುಮತಿಸಲಾಗಿತ್ತು. ಈ ವಿಶೇಷ ರೈಲು ಶ್ರಮಿಕ್ ರೈಲಿನಂತಲ್ಲದೆ 72 ಜನ ಪ್ರಯಾಣಿಕರೊಂದಿಗೆ ಸಂಪೂರ್ಣ ಸಾಮರ್ಥ್ಯದಲ್ಲಿ ಕಾರ್ಯನಿರ್ವಹಿಸುತ್ತದೆ. ಶುಲ್ಕದಲ್ಲೂ ಯಾವುದೇ ರಿಯಾಯಿತಿ ಇರುವುದಿಲ್ಲ.

ರೈಲು ನಿರ್ಗಮನಕ್ಕೆ ಕನಿಷ್ಠ ಒಂದು ಗಂಟೆ ಮೊದಲು ಪ್ರಯಾಣಿಕರು ನಿಲ್ದಾಣಕ್ಕೆ ಬರಬೇಕಾಗುತ್ತದೆ. ಆರಂಭದಲ್ಲಿ, ಎಲ್ಲಾ ಹವಾನಿಯಂತ್ರಿತ ಸೇವೆಗಳು 15 ರಾಜಧಾನಿ ಮಾರ್ಗಗಳಲ್ಲಿ ಪ್ರಾರಂಭವಾಗಲಿದ್ದು, ಶುಲ್ಕವು ಸೂಪರ್-ಫಾಸ್ಟ್ ರೈಲಿಗೆ ಸಮನಾಗಿರುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದಲ್ಲದೆ ಪ್ರಯಾಣಿಕರಿಗೆ ನೀಡುವ ಟಿಕೆಟ್‌ನಲ್ಲಿ ಏನು ಮಾಡಬೇಕು? ಮತ್ತು ಏನು ಮಾಡಬಾರದು? ಎಂಬ ಸಂಪೂರ್ಣ ವಿವರವನ್ನು ಮುದ್ರಿಸಲಾಗಿರುತ್ತದೆ.- ಉದಾಹರಣೆಗೆ:- ಸ್ಕ್ರೀನಿಂಗ್ ಮತ್ತು ಇತರ ಕರೋನವೈರಸ್ ಪ್ರೋಟೋಕಾಲ್‌ಗಳಿಗಾಗಿ ಪ್ರಯಾಣಿಕರು ರೈಲು ನಿಲ್ದಾಣಕ್ಕೆ ಕನಿಷ್ಠ ಒಂದು ಗಂಟೆ ಮುಂಚಿತವಾಗಿ ಆಗಮಿಸುವುದು, ಮಾಸ್ಕ್‌ಗಳ ಕಡ್ಡಾಯ ಬಳಕೆ ಮತ್ತು ಆರೋಗ್ಯಾ ಸೇತು ಮೊಬೈಲ್ ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿಕೊಳ್ಳುಬೇಕು ಎಂದು ಸೂಚಿಸಲಾಗುತ್ತದೆ.

ಪ್ರಯಾಣಿಕರು ಮಾಸ್ಕ್ ಧರಿಸಬೇಕು ಮತ್ತು ನಿರ್ಗಮನದ ಸಮಯದಲ್ಲಿ ಸ್ಕ್ರೀನಿಂಗ್‌ಗೆ ಒಳಗಾಗುವುದು ಕಡ್ಡಾಯವಾಗಿರುತ್ತದೆ. ರೋಗ ಲಕ್ಷಣವಿಲ್ಲದ ಪ್ರಯಾಣಿಕರಿಗೆ ಮಾತ್ರ ರೈಲುಗಳಲ್ಲಿ ಪ್ರಯಾಣಿಸಲು ಅವಕಾಶವಿರುತ್ತದೆ. ಪ್ರಯಾಣದ ಸಮಯದಲ್ಲಿ ಕೆಲವು ನಿಲುಗಡೆಗಳಲ್ಲಿ ಮಾತ್ರ ರೈಲನ್ನು ನಿಲ್ಲಿಸಲಾಗುವುದು.

ದೃಢಪಡಿಸಿದ ರೈಲ್ವೆ ಟಿಕೆಟ್ ಹೊಂದಿರುವ ಪ್ರಯಾಣಿಕರಿಗೆ ಮಾತ್ರ ರೈಲ್ವೆ ನಿಲ್ದಾಣಗಳಿಗೆ ಪ್ರವೇಶಿಸಲು ಅವಕಾಶವಿರುತ್ತದೆ. ನಿಲ್ದಾಣಗಳಲ್ಲಿ ಜನಸಂದಣಿಯನ್ನು ತಪ್ಪಿಸಲು ಈ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಲಾಗಿದೆ. ಮುಂದಿನ ದಿನಗಳಲ್ಲಿ ಕಾರ್ಯಾಚರಣೆಗಳನ್ನು ಕ್ರಮೇಣ ವಿಸ್ತರಿಸಲಾಗುವುದು ಮತ್ತು ಹೊಸ ಮಾರ್ಗಗಳಲ್ಲಿ ಹೆಚ್ಚಿನ ವಿಶೇಷ ಸೇವೆಗಳನ್ನು ಘೋಷಿಸಲಾಗುವುದು ಎಂದು ರೈಲ್ವೆ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.


ಇದನ್ನೂ ಓದಿ: ಉಚಿತ ಟ್ರೈನ್‌ ಎಂಬುದು ದೊಡ್ಡ ಸುಳ್ಳು: ಕಾರ್ಮಿಕರಿಂದ ಹಣ ವಸೂಲಿಗಿಳಿದ ಕೇಂದ್ರ ಸರ್ಕಾರ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...