Homeಕರ್ನಾಟಕಇಂದಿನಿಂದ ರೈಲ್ವೇ ಟಿಕೆಟ್ ಬುಕಿಂಗ್ ಶುರು; ಜೂನ್ ಒಂದರಿಂದ ರೈಲು ಸಂಚಾರ ಪ್ರಾರಂಭ

ಇಂದಿನಿಂದ ರೈಲ್ವೇ ಟಿಕೆಟ್ ಬುಕಿಂಗ್ ಶುರು; ಜೂನ್ ಒಂದರಿಂದ ರೈಲು ಸಂಚಾರ ಪ್ರಾರಂಭ

ಆನ್‌ಲೈನ್‌ ಮೂಲಕ ಮಾತ್ರ ಟಿಕೆಟ್‌ ಬುಕಿಂಗ್‌ ಮಾಡಬಹುದಾಗಿದೆ. ಐಆರ್‌ಸಿಟಿಸಿ ವೆಬ್‌ಸೈಟ್ ಮೂಲಕ ಅಥವಾ ಮೊಬೈಲ್ ಆ್ಯಪ್ ಮೂಲಕ ಇ-ಟಿಕೆಟ್‌ ಬುಕಿಂಗ್ ಮಾಡಿಕೊಳ್ಳಬಹುದಾಗಿದೆ.

- Advertisement -
- Advertisement -

ರೈಲ್ವೆ ಇಲಾಖೆಯು ಜೂನ್‌ 1 ರಿಂದ ಸಂಚರಿಸುವ ರೈಲುಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಇಂದಿನಿಂದ ಆನ್‌ಲೈನ್‌ ಮೂಲಕ ಟಿಕೆಟ್‌ ಬುಕಿಂಗ್‌ ಮಾಡಬಹುದಾಗಿದೆ. ಐಆರ್‌ಸಿಟಿಸಿ ವೆಬ್‌ಸೈಟ್ ಮೂಲಕ ಅಥವಾ ಮೊಬೈಲ್ ಆ್ಯಪ್ ಮೂಲಕ ರೈಲು ಇ-ಟಿಕೆಟ್‌ ಬುಕಿಂಗ್ ಮಾಡಿಕೊಳ್ಳಬಹುದಾಗಿದೆ.

ಆದರೆ ಯಾವುದೇ ರೈಲು ನಿಲ್ದಾಣದ ಕೌಂಟರ್‌ಗಳಲ್ಲಿ ಟಿಕೆಟ್‌ಗಳು ಲಭ್ಯವಿರುವುದಿಲ್ಲ ಎಂದು ರೈಲ್ವೆ ಇಲಾಖೆ ತಿಳಿಸಿದೆ.‌ ಗರಿಷ್ಠ 30 ದಿನಗಳ ವರೆಗೆ ಟಿಕೆಟ್‌ ಕಾಯ್ದಿರಿಸಬಹುದಾಗಿದ್ದು, ನೋಂದಣಿ ಮಾಡಿಕೊಂಡ ಟಿಕೆಟ್‌ ರದ್ದುಪಡಿಸುವುದಕ್ಕೆ ಸಂಬಂಧಿಸಿದಂತೆ ನಿಯಮ ರೂಪಿಸಲಾಗುವುದು. ಅಲ್ಲದೆ ವೆಯ್ಟಿಂಗ್‌ ಲಿಸ್ಟ್‌ ಟಿಕೆಟ್‌ ಇರುವವರು ಪ್ರಯಾಣಿಸಲು ಅವಕಾಶ ಇರುವುದಿಲ್ಲ ಎಂದು ಇಲಾಖೆ ಹೇಳಿದೆ.

ಎಲ್ಲವೂ ಕಾಯ್ದಿರಿಸಿದ ಟಿಕೆಟ್‌ಗಳೇ ಆಗಿದ್ದು, ಸ್ಥಳದಲ್ಲಿ ಟಿಕೆಟ್‌ ನೀಡುವುದು ಅಥವಾ ತತ್ಕಾಲ್‌ ಬುಕಿಂಗ್‌ಗಳಿಗೆ ಅವಕಾಶ ಇರುವುದಿಲ್ಲ ಎಂದು ಇಲಾಖೆ ಸ್ಪಷ್ಟಪಡಿಸಿದೆ. ಜೂನ್‌ 1ರಿಂದ ಸಂಚರಿಸಲಿರುವ 100 ರೈಲುಗಳ ಪಟ್ಟಿಯನ್ನು ರೈಲ್ವೆ ಇಲಾಖೆ ಬುಧವಾರ ಪ್ರಕಟಿಸಿದೆ. ಈ ರೈಲುಗಳಲ್ಲಿ ಎ.ಸಿ ಹಾಗೂ ಎ.ಸಿ ರಹಿತ ಕೋಚ್‌ಗಳು ಇರಲಿವೆ ಎಂದು ಇಲಾಖೆ ತಿಳಸಿದೆ.
ಯಾವ ರೈಲುಗಳು ಸಂಚರಿಸಲಿವೆ:

ಮುಂಬೈ-ಕೆಎಸ್ಆರ್ ಬೆಂಗಳೂರು ಉದ್ಯಾನ್ ಎಕ್ಸಪ್ರೆಸ್‌, ಮುಂಬೈ-ಗದಗ ಎಕ್ಸ್‌ಪ್ರೆಸ್‌, ದಾನಪುರ-ಕೆಎಸ್ಆರ್ ಬೆಂಗಳೂರು ಸಂಘಮಿತ್ರ ಎಕ್ಸ್‌ಪ್ರೆಸ್‌, ವಾರಕ್ಕೆ ಎರಡು ಬಾರಿ ಸಂಚರಿಸುವ ನವದೆಹಲಿ-ಯಶವಂತಪುರ ಕರ್ನಾಟಕ ಸಂಪರ್ಕ ಕ್ರಾಂತಿ ಎಕ್ಸ್‌ಪ್ರೆಸ್, ಹುಬ್ಬಳ್ಳಿ-ಬೆಂಗಳೂರು ಜನಶತಾಬ್ದಿ ಎಕ್ಸ್‌ಪ್ರೆಸ್, ಯಶವಂತಪುರ-ಶಿವಮೊಗ್ಗ ಜನಶತಾಬ್ದಿ ಎಕ್ಸ್‌ಪ್ರೆಸ್‌, ವಾಸ್ಕೋಡಗಾಮ-ಹಜರತ್ ನಿಜಾಮುದ್ದೀನ್ ಗೋವಾ ಎಕ್ಸ್‌ಪ್ರೆಸ್‌ ಮತ್ತು ಹೌರಾ- ಯಶವಂತಪುರ ಹೌರಾ ದುರಂತೊ ಎಕ್ಸ್‌ಪ್ರೆಸ್‌ ರೈಲುಗಳು ಜೂನ್ 1ರಿಂದ ಸಂಚರಿಸಲಿವೆ ಎಂದು ನೈರುತ್ಯ ರೈಲ್ವೇ ತಿಳಿಸಿದೆ.

ರೈಲ್ವೆ ಸಚಿವ ಪಿಯೂಶ್‌ ಗೋಯಲ್, ಜೂನ್‌ 1 ರಿಂದ ದೇಶದಾದ್ಯಂತ ಸುಮಾರು 200 ಎಸಿ ಅಲ್ಲದ ದ್ವಿತೀಯ ದರ್ಜೆಯ ರೈಲುಗಳ ಸಂಚಾರ ಆರಂಭಿಸಲಾಗುವುದು ಎಂದು ಈ ಹಿಂದೆಯೇ ತಿಳಿಸಿದ್ದರು. ಹೀಗಾಗಿ ರಾಜ್ಯದಲ್ಲೂ ಜೂನ್‌ 01 ರಿಂದ ರೈಲ್ವೆ ಸೇವೆ ಆರಂಭವಾಗಲಿದೆ.

ಕೊರೊನಾದಿಂದಾಗಿ ರಾಷ್ಟ್ರದಾದ್ಯಂತ ಕಳೆದ ಎರಡು ತಿಂಗಳಿನಿಂದ ಲಾಕ್‌ಡೌನ್‌ ಘೋಷಿಸಲಾಗಿದ್ದು, ರೈಲು ಸಂಚಾರವನ್ನೂ ಸ್ಥಗಿತ ಮಾಡಲಾಗಿತ್ತು. ಇದರಿಂದಾಗಿ ಲಕ್ಷಾಂತರ ವಲಸೆ ಕಾರ್ಮಿಕರು ತಮ್ಮ ದೂರದ ರಾಜ್ಯಗಳಿಗೆ ಹೋಗಲಾಗದೇ ಕಾಲ್ನಡಿಗೆಯನ್ನು ಪ್ರಾರಂಭಿಸಿದ್ದರು. ಈ ಮಹಾನಡಿಗೆಯಲ್ಲಿ ಹಲವಾರು ವಲಸೆ ಕಾರ್ಮಿಕರು ರಸ್ತೆ ಅಫಘಾತ, ಬಳಲಿಕೆಯಿಂದ ಪ್ರಾಣ ಕಳೆದು ಕೊಂಡಿದ್ದರು. ಇದರ ನಂತರ ಎಚ್ಚೆತ್ತ ಕೇಂದ್ರ ಸರ್ಕಾರ, ವಲಸೆ ಕಾರ್ಮಿಕರು ತಮ್ಮ ರಾಜ್ಯಗಳಿಗೆ ತಲುಪಲು ಶ್ರಮಿಕ್‌ ರೈಲುಗಳನ್ನು ಆರಂಭಿಸಿತ್ತು.

ಶ್ರಮಿಕ ರೈಲುಗಳಲ್ಲದೆ 15 ಜೋಡಿ ವಿಶೇಷ ರೈಲು ಸೇವೆಗೂ ಲಾಕ್ ಡೌನ್ ಸಮಯದಲ್ಲಿ ಗ್ರೀನ್‌ ಸಿಗ್ನಲ್ ನೀಡಿತ್ತು. ಆದರೆ ಈಗ ರೈಲ್ವೆ ಇಲಾಖೆ ಹಂತ ಹಂತವಾಗಿ ಪೂರ್ಣ ಪ್ರಮಾಣ ಸೇವೆ ಆರಂಭಿಸುವ ಪ್ರಯತ್ನದಲ್ಲಿದೆ.


ಓದಿ: ಫ್ಯಾಕ್ಟ್‌ಚೆಕ್‌: ಲಾಕ್‌ಡೌನ್ ನಡುವೆ ಮುಂಬೈ ರೈಲು ನಿಲ್ದಾಣದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದ್ದು ನಿಜವೇ?


ಓದಿ: ದೇಶೀಯ ನಾಗರಿಕ ವಿಮಾನಯಾನಗಳು ಸೋಮವಾರದಿಂದ ಪ್ರಾರಂಭ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....