Homeಕರ್ನಾಟಕಇಂದಿನಿಂದ ರೈಲ್ವೇ ಟಿಕೆಟ್ ಬುಕಿಂಗ್ ಶುರು; ಜೂನ್ ಒಂದರಿಂದ ರೈಲು ಸಂಚಾರ ಪ್ರಾರಂಭ

ಇಂದಿನಿಂದ ರೈಲ್ವೇ ಟಿಕೆಟ್ ಬುಕಿಂಗ್ ಶುರು; ಜೂನ್ ಒಂದರಿಂದ ರೈಲು ಸಂಚಾರ ಪ್ರಾರಂಭ

ಆನ್‌ಲೈನ್‌ ಮೂಲಕ ಮಾತ್ರ ಟಿಕೆಟ್‌ ಬುಕಿಂಗ್‌ ಮಾಡಬಹುದಾಗಿದೆ. ಐಆರ್‌ಸಿಟಿಸಿ ವೆಬ್‌ಸೈಟ್ ಮೂಲಕ ಅಥವಾ ಮೊಬೈಲ್ ಆ್ಯಪ್ ಮೂಲಕ ಇ-ಟಿಕೆಟ್‌ ಬುಕಿಂಗ್ ಮಾಡಿಕೊಳ್ಳಬಹುದಾಗಿದೆ.

- Advertisement -
- Advertisement -

ರೈಲ್ವೆ ಇಲಾಖೆಯು ಜೂನ್‌ 1 ರಿಂದ ಸಂಚರಿಸುವ ರೈಲುಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಇಂದಿನಿಂದ ಆನ್‌ಲೈನ್‌ ಮೂಲಕ ಟಿಕೆಟ್‌ ಬುಕಿಂಗ್‌ ಮಾಡಬಹುದಾಗಿದೆ. ಐಆರ್‌ಸಿಟಿಸಿ ವೆಬ್‌ಸೈಟ್ ಮೂಲಕ ಅಥವಾ ಮೊಬೈಲ್ ಆ್ಯಪ್ ಮೂಲಕ ರೈಲು ಇ-ಟಿಕೆಟ್‌ ಬುಕಿಂಗ್ ಮಾಡಿಕೊಳ್ಳಬಹುದಾಗಿದೆ.

ಆದರೆ ಯಾವುದೇ ರೈಲು ನಿಲ್ದಾಣದ ಕೌಂಟರ್‌ಗಳಲ್ಲಿ ಟಿಕೆಟ್‌ಗಳು ಲಭ್ಯವಿರುವುದಿಲ್ಲ ಎಂದು ರೈಲ್ವೆ ಇಲಾಖೆ ತಿಳಿಸಿದೆ.‌ ಗರಿಷ್ಠ 30 ದಿನಗಳ ವರೆಗೆ ಟಿಕೆಟ್‌ ಕಾಯ್ದಿರಿಸಬಹುದಾಗಿದ್ದು, ನೋಂದಣಿ ಮಾಡಿಕೊಂಡ ಟಿಕೆಟ್‌ ರದ್ದುಪಡಿಸುವುದಕ್ಕೆ ಸಂಬಂಧಿಸಿದಂತೆ ನಿಯಮ ರೂಪಿಸಲಾಗುವುದು. ಅಲ್ಲದೆ ವೆಯ್ಟಿಂಗ್‌ ಲಿಸ್ಟ್‌ ಟಿಕೆಟ್‌ ಇರುವವರು ಪ್ರಯಾಣಿಸಲು ಅವಕಾಶ ಇರುವುದಿಲ್ಲ ಎಂದು ಇಲಾಖೆ ಹೇಳಿದೆ.

ಎಲ್ಲವೂ ಕಾಯ್ದಿರಿಸಿದ ಟಿಕೆಟ್‌ಗಳೇ ಆಗಿದ್ದು, ಸ್ಥಳದಲ್ಲಿ ಟಿಕೆಟ್‌ ನೀಡುವುದು ಅಥವಾ ತತ್ಕಾಲ್‌ ಬುಕಿಂಗ್‌ಗಳಿಗೆ ಅವಕಾಶ ಇರುವುದಿಲ್ಲ ಎಂದು ಇಲಾಖೆ ಸ್ಪಷ್ಟಪಡಿಸಿದೆ. ಜೂನ್‌ 1ರಿಂದ ಸಂಚರಿಸಲಿರುವ 100 ರೈಲುಗಳ ಪಟ್ಟಿಯನ್ನು ರೈಲ್ವೆ ಇಲಾಖೆ ಬುಧವಾರ ಪ್ರಕಟಿಸಿದೆ. ಈ ರೈಲುಗಳಲ್ಲಿ ಎ.ಸಿ ಹಾಗೂ ಎ.ಸಿ ರಹಿತ ಕೋಚ್‌ಗಳು ಇರಲಿವೆ ಎಂದು ಇಲಾಖೆ ತಿಳಸಿದೆ.
ಯಾವ ರೈಲುಗಳು ಸಂಚರಿಸಲಿವೆ:

ಮುಂಬೈ-ಕೆಎಸ್ಆರ್ ಬೆಂಗಳೂರು ಉದ್ಯಾನ್ ಎಕ್ಸಪ್ರೆಸ್‌, ಮುಂಬೈ-ಗದಗ ಎಕ್ಸ್‌ಪ್ರೆಸ್‌, ದಾನಪುರ-ಕೆಎಸ್ಆರ್ ಬೆಂಗಳೂರು ಸಂಘಮಿತ್ರ ಎಕ್ಸ್‌ಪ್ರೆಸ್‌, ವಾರಕ್ಕೆ ಎರಡು ಬಾರಿ ಸಂಚರಿಸುವ ನವದೆಹಲಿ-ಯಶವಂತಪುರ ಕರ್ನಾಟಕ ಸಂಪರ್ಕ ಕ್ರಾಂತಿ ಎಕ್ಸ್‌ಪ್ರೆಸ್, ಹುಬ್ಬಳ್ಳಿ-ಬೆಂಗಳೂರು ಜನಶತಾಬ್ದಿ ಎಕ್ಸ್‌ಪ್ರೆಸ್, ಯಶವಂತಪುರ-ಶಿವಮೊಗ್ಗ ಜನಶತಾಬ್ದಿ ಎಕ್ಸ್‌ಪ್ರೆಸ್‌, ವಾಸ್ಕೋಡಗಾಮ-ಹಜರತ್ ನಿಜಾಮುದ್ದೀನ್ ಗೋವಾ ಎಕ್ಸ್‌ಪ್ರೆಸ್‌ ಮತ್ತು ಹೌರಾ- ಯಶವಂತಪುರ ಹೌರಾ ದುರಂತೊ ಎಕ್ಸ್‌ಪ್ರೆಸ್‌ ರೈಲುಗಳು ಜೂನ್ 1ರಿಂದ ಸಂಚರಿಸಲಿವೆ ಎಂದು ನೈರುತ್ಯ ರೈಲ್ವೇ ತಿಳಿಸಿದೆ.

ರೈಲ್ವೆ ಸಚಿವ ಪಿಯೂಶ್‌ ಗೋಯಲ್, ಜೂನ್‌ 1 ರಿಂದ ದೇಶದಾದ್ಯಂತ ಸುಮಾರು 200 ಎಸಿ ಅಲ್ಲದ ದ್ವಿತೀಯ ದರ್ಜೆಯ ರೈಲುಗಳ ಸಂಚಾರ ಆರಂಭಿಸಲಾಗುವುದು ಎಂದು ಈ ಹಿಂದೆಯೇ ತಿಳಿಸಿದ್ದರು. ಹೀಗಾಗಿ ರಾಜ್ಯದಲ್ಲೂ ಜೂನ್‌ 01 ರಿಂದ ರೈಲ್ವೆ ಸೇವೆ ಆರಂಭವಾಗಲಿದೆ.

ಕೊರೊನಾದಿಂದಾಗಿ ರಾಷ್ಟ್ರದಾದ್ಯಂತ ಕಳೆದ ಎರಡು ತಿಂಗಳಿನಿಂದ ಲಾಕ್‌ಡೌನ್‌ ಘೋಷಿಸಲಾಗಿದ್ದು, ರೈಲು ಸಂಚಾರವನ್ನೂ ಸ್ಥಗಿತ ಮಾಡಲಾಗಿತ್ತು. ಇದರಿಂದಾಗಿ ಲಕ್ಷಾಂತರ ವಲಸೆ ಕಾರ್ಮಿಕರು ತಮ್ಮ ದೂರದ ರಾಜ್ಯಗಳಿಗೆ ಹೋಗಲಾಗದೇ ಕಾಲ್ನಡಿಗೆಯನ್ನು ಪ್ರಾರಂಭಿಸಿದ್ದರು. ಈ ಮಹಾನಡಿಗೆಯಲ್ಲಿ ಹಲವಾರು ವಲಸೆ ಕಾರ್ಮಿಕರು ರಸ್ತೆ ಅಫಘಾತ, ಬಳಲಿಕೆಯಿಂದ ಪ್ರಾಣ ಕಳೆದು ಕೊಂಡಿದ್ದರು. ಇದರ ನಂತರ ಎಚ್ಚೆತ್ತ ಕೇಂದ್ರ ಸರ್ಕಾರ, ವಲಸೆ ಕಾರ್ಮಿಕರು ತಮ್ಮ ರಾಜ್ಯಗಳಿಗೆ ತಲುಪಲು ಶ್ರಮಿಕ್‌ ರೈಲುಗಳನ್ನು ಆರಂಭಿಸಿತ್ತು.

ಶ್ರಮಿಕ ರೈಲುಗಳಲ್ಲದೆ 15 ಜೋಡಿ ವಿಶೇಷ ರೈಲು ಸೇವೆಗೂ ಲಾಕ್ ಡೌನ್ ಸಮಯದಲ್ಲಿ ಗ್ರೀನ್‌ ಸಿಗ್ನಲ್ ನೀಡಿತ್ತು. ಆದರೆ ಈಗ ರೈಲ್ವೆ ಇಲಾಖೆ ಹಂತ ಹಂತವಾಗಿ ಪೂರ್ಣ ಪ್ರಮಾಣ ಸೇವೆ ಆರಂಭಿಸುವ ಪ್ರಯತ್ನದಲ್ಲಿದೆ.


ಓದಿ: ಫ್ಯಾಕ್ಟ್‌ಚೆಕ್‌: ಲಾಕ್‌ಡೌನ್ ನಡುವೆ ಮುಂಬೈ ರೈಲು ನಿಲ್ದಾಣದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದ್ದು ನಿಜವೇ?


ಓದಿ: ದೇಶೀಯ ನಾಗರಿಕ ವಿಮಾನಯಾನಗಳು ಸೋಮವಾರದಿಂದ ಪ್ರಾರಂಭ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಿಯಾ ಮುಸ್ಲಿಮರು ನಮ್ಮ ಶತ್ರುಗಳಲ್ಲ..’; ಚುನಾವಣೆ ಸನಿಹದಲ್ಲಿ ಮಾತು ಬದಲಿಸಿದ ಅಸ್ಸಾಂ ಸಿಎಂ

ಭಾರತೀಯ ಜನತಾ ಪಕ್ಷವು (ಬಿಜೆಪಿ) ಅಸ್ಸಾಂನಲ್ಲಿರುವ ಬಂಗಾಳಿ ಮೂಲದ ಮುಸ್ಲಿಂ ಸಮುದಾಯವಾದ ಮಿಯಾ ಮುಸ್ಲಿಮರನ್ನು ತನ್ನ ಶತ್ರುಗಳೆಂದು ಪರಿಗಣಿಸುವುದಿಲ್ಲ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಗುರುವಾರ ಹೇಳಿದ್ದಾರೆ. ಇದೇ ವರ್ಷದ...

ಜೈಲಿನಲ್ಲಿರುವ ಪಿಎಫ್‌ಐ ನಾಯಕ ಇ ಅಬೂಬಕರ್ ಆರೋಗ್ಯ ಸ್ಥಿತಿ ಗಂಭೀರ

ಸುಮಾರು ನಾಲ್ಕು ವರ್ಷಗಳ ಕಾಲ ಜೈಲಿನಲ್ಲಿ ಶಿಕ್ಷೆ ಅನುಭವಿಸುತ್ತಿರುವ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಸ್ಥಾಪಕ ಅಧ್ಯಕ್ಷ ಎರಪ್ಪುಂಗಲ್ ಅಬೂಬಕರ್ ಅವರ ಆರೋಗ್ಯ ಹದಗೆಟ್ಟ ನಂತರ ಬುಧವಾರದಿಂದ ಆಸ್ಪತ್ರೆಯಲ್ಲಿ ತೀವ್ರ ನಿಗಾ...

‘ಭಾರತ ನಮ್ಮನ್ನು ಹಿಂದುಕ್ಕುವುದಕ್ಕೆ ಬಿಡಲ್ಲ; ಅಮೆರಿಕದ ಹಿತಾಸಕ್ತಿಗಳಿಗೆ ಮೊದಲ ಆದ್ಯತೆ..’; ಕ್ರಿಸ್ಟೋಫರ್ ಲ್ಯಾಂಡೌ

ನಮ್ಮ ಪ್ರಮುಖ ಪ್ರತಿಸ್ಪರ್ಧಿಯಾಗಿ ಹೊರಹೊಮ್ಮಲು ಚೀನಾಗೆ ಮಾಡಿಕೊಟ್ಟ ಆರ್ಥಿಕ ಅನುಕೂಲಗಳನ್ನು ನಾವು ಭಾರತಕ್ಕೆ ನೀಡುವುದಿಲ್ಲ ಎಂದು ಯುನೈಟೆಡ್ ಸ್ಟೇಟ್ಸ್‌ (ಯುಎಸ್‌) ಉಪ ಕಾರ್ಯದರ್ಶಿ ಕ್ರಿಸ್ಟೋಫರ್ ಲ್ಯಾಂಡೌ ಗುರುವಾರ ಹೇಳಿದ್ದಾರೆ. ಅಮೆರಿಕ ಮತ್ತು ಭಾರತ...

ರೋಹಿತ್ ಆ್ಯಕ್ಟ್| ಸರ್ಕಾರದ ನಿರ್ಧಾರ ಸ್ವಾಗತಿಸಿದ ಹೋರಾಟಗಾರರು; ಕಾಯ್ದೆ ಪರಿಣಾಮಕಾರಿ ಜಾರಿಗೆ ಆಗ್ರಹ

“ರಾಜ್ಯದ ಎಲ್ಲಾ ಸರ್ಕಾರಿ, ಖಾಸಗಿ ಮತ್ತು ಡೀಮ್ಡ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರದ ಮೇಲೆ ವಿದ್ಯಾರ್ಥಿಗಳ ಮೇಲೆ ನಡೆಯುವ ʻಶೈಕ್ಷಣಿಕ ಮತ್ತು ಸಾಮಾಜಿಕ ದೌರ್ಜನ್ಯʼವನ್ನು ನಿಲ್ಲಿಸಲು ʻರೋಹಿತ್ ವೇಮುಲ ಕಾಯ್ದೆʼಯನ್ನು ಜಾರಿಗೆ ತರಲಾಗುವುದು” ಎಂದು...

Karnataka Budget 2026| ಸಮಾಜ ಕಲ್ಯಾಣ ಇಲಾಖೆಯಡಿ ‘ಬೌದ್ಧ ಅಭಿವೃದ್ಧಿ ನಿಗಮ’ ಸ್ಥಾಪನೆ

ಸಮಾಜ ಕಲ್ಯಾಣ ಇಲಾಖೆಯಡಿ 'ಬೌದ್ಧ ಅಭಿವೃದ್ಧಿ ನಿಗಮ' ಸ್ಥಾಪನೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದಿನ 2026-27ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿದರು. "ನಮ್ಮ ಸರ್ಕಾರವು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳ...

Karnataka Budget 2026| ಗೃಹಲಕ್ಷ್ಮಿ ಯೋಜನೆಗೆ 28,608 ಕೋಟಿ ರೂ. ಮೀಸಲು; ದೇವದಾಸಿ-ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಅರಿಯಲು ಸಮೀಕ್ಷೆ

2026-27 ಸಾಲಿನ ಆಯವ್ಯಯ ಮಂಡಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಸಾಕಷ್ಟು ಅನುದಾನ ಘೋಷಣೆ ಮಾಡಿದ್ದಾರೆ. ಗೃಹಲಕ್ಷ್ಮಿ ಯೋಜನೆಗೆ 28,608 ಕೋಟಿ ರೂ. ಮೀಸಲಿಡಲಾಗಿದ್ದು, ಮಾಜಿ ದೇವದಾಸಿ ಮಹಿಳೆಯರು...

ಬಂಗಾಳ ರಾಜ್ಯಪಾಲ ಸಿ.ವಿ. ಆನಂದ ಬೋಸ್ ವಿಧಾನಸಭಾ ಚುನಾವಣೆಗೆ ಮುನ್ನ ರಾಜೀನಾಮೆ; ರಾಜಕೀಯ ಒತ್ತಡದ ಆರೋಪ

ಪಶ್ಚಿಮ ಬಂಗಾಳದ ರಾಜ್ಯಪಾಲ ಸಿ.ವಿ. ಆನಂದ ಬೋಸ್ ಅವರು ಸುಮಾರು ಮೂರುವರೆ ವರ್ಷಗಳ ಕಾಲ ಅಧಿಕಾರದಲ್ಲಿದ್ದ ನಂತರ ಗುರುವಾರ ರಾಜೀನಾಮೆ ನೀಡಿದ್ದಾರೆ. ಈ ಕ್ರಮವು ರಾಜ್ಯದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಗೆ ಮುನ್ನ ರಾಜಕೀಯ...

Karnataka Budget 2026| ವಿಕ್ಟೋರಿಯಾ ಹೆಸರು ಬದಲಾವಣೆ; ʻಶಾಂತವೇರಿ ಗೋಪಾಲಗೌಡ ಆಸ್ಪತ್ರೆʼ ಎಂದು ಮರುನಾಮಕರಣ

ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯನ್ನು ʻಶಾಂತವೇರಿ ಗೋಪಾಲಗೌಡ ಆಸ್ಪತ್ರೆʼ ಎಂದು ಮರುನಾಮಕರಣಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ತಮ್ಮ ಬಜೆಟ್‌ ಭಾಷಣದಲ್ಲಿ ಘೋಷಿಸಿದರು. ತಮ್ಮ ಆಯವ್ಯಯದಲ್ಲಿ ವೈದ್ಯಕೀಯ ಶಿಕ್ಷಣ ಇಲಾಖೆಗೆ ಸಂಬಂಧಿಸಿದ ಘೋಷಣೆಗಳನ್ನು ಮಾಡಿದ...

Karnataka Budget 2026| ವಿಶ್ವ ವಿದ್ಯಾಲಯಗಳಲ್ಲಿ ಜಾತಿ ಆಧಾರಿತ ದೌರ್ಜನ್ಯ ತಡೆಗೆ ‘ರೋಹಿತ್ ವೇಮುಲ ಕಾಯ್ದೆ’

"ರಾಜ್ಯದ ಎಲ್ಲಾ ಸರ್ಕಾರಿ, ಖಾಸಗಿ ಮತ್ತು ಡೀಮ್ಡ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರದ ಮೇಲೆ ವಿದ್ಯಾರ್ಥಿಗಳ ಮೇಲೆ ನಡೆಯುವ ʻಶೈಕ್ಷಣಿಕ ಮತ್ತು ಸಾಮಾಜಿಕ ದೌರ್ಜನ್ಯʼವನ್ನು ನಿಲ್ಲಿಸಲು ʻರೋಹಿತ್ ವೇಮುಲ ಕಾಯ್ದೆʼಯನ್ನು ಜಾರಿಗೆ ತರಲಾಗುವುದು" ಎಂದು...

ಕರ್ನಾಟಕ ಬಜೆಟ್ 2026: 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ನಿಷೇಧ – ಸಿಎಂ ಸಿದ್ದರಾಮಯ್ಯ ಘೋಷಣೆ

ಮಾರ್ಚ್ 6, ಶುಕ್ರವಾರದಂದು 2026 ರ ರಾಜ್ಯ ಬಜೆಟ್ ಮಂಡಿಸಿದ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, 16 ವರ್ಷದೊಳಗಿನ ಮಕ್ಕಳು ಸಾಮಾಜಿಕ ಮಾಧ್ಯಮ ಬಳಸುವುದನ್ನು ನಿಷೇಧಿಸುವುದಾಗಿ ಘೋಷಿಸಿದರು. "ಮಕ್ಕಳ ಮೇಲೆ ಹೆಚ್ಚುತ್ತಿರುವ ಮೊಬೈಲ್...