Homeಕರ್ನಾಟಕಇಂದಿನಿಂದ ರೈಲ್ವೇ ಟಿಕೆಟ್ ಬುಕಿಂಗ್ ಶುರು; ಜೂನ್ ಒಂದರಿಂದ ರೈಲು ಸಂಚಾರ ಪ್ರಾರಂಭ

ಇಂದಿನಿಂದ ರೈಲ್ವೇ ಟಿಕೆಟ್ ಬುಕಿಂಗ್ ಶುರು; ಜೂನ್ ಒಂದರಿಂದ ರೈಲು ಸಂಚಾರ ಪ್ರಾರಂಭ

ಆನ್‌ಲೈನ್‌ ಮೂಲಕ ಮಾತ್ರ ಟಿಕೆಟ್‌ ಬುಕಿಂಗ್‌ ಮಾಡಬಹುದಾಗಿದೆ. ಐಆರ್‌ಸಿಟಿಸಿ ವೆಬ್‌ಸೈಟ್ ಮೂಲಕ ಅಥವಾ ಮೊಬೈಲ್ ಆ್ಯಪ್ ಮೂಲಕ ಇ-ಟಿಕೆಟ್‌ ಬುಕಿಂಗ್ ಮಾಡಿಕೊಳ್ಳಬಹುದಾಗಿದೆ.

- Advertisement -
- Advertisement -

ರೈಲ್ವೆ ಇಲಾಖೆಯು ಜೂನ್‌ 1 ರಿಂದ ಸಂಚರಿಸುವ ರೈಲುಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಇಂದಿನಿಂದ ಆನ್‌ಲೈನ್‌ ಮೂಲಕ ಟಿಕೆಟ್‌ ಬುಕಿಂಗ್‌ ಮಾಡಬಹುದಾಗಿದೆ. ಐಆರ್‌ಸಿಟಿಸಿ ವೆಬ್‌ಸೈಟ್ ಮೂಲಕ ಅಥವಾ ಮೊಬೈಲ್ ಆ್ಯಪ್ ಮೂಲಕ ರೈಲು ಇ-ಟಿಕೆಟ್‌ ಬುಕಿಂಗ್ ಮಾಡಿಕೊಳ್ಳಬಹುದಾಗಿದೆ.

ಆದರೆ ಯಾವುದೇ ರೈಲು ನಿಲ್ದಾಣದ ಕೌಂಟರ್‌ಗಳಲ್ಲಿ ಟಿಕೆಟ್‌ಗಳು ಲಭ್ಯವಿರುವುದಿಲ್ಲ ಎಂದು ರೈಲ್ವೆ ಇಲಾಖೆ ತಿಳಿಸಿದೆ.‌ ಗರಿಷ್ಠ 30 ದಿನಗಳ ವರೆಗೆ ಟಿಕೆಟ್‌ ಕಾಯ್ದಿರಿಸಬಹುದಾಗಿದ್ದು, ನೋಂದಣಿ ಮಾಡಿಕೊಂಡ ಟಿಕೆಟ್‌ ರದ್ದುಪಡಿಸುವುದಕ್ಕೆ ಸಂಬಂಧಿಸಿದಂತೆ ನಿಯಮ ರೂಪಿಸಲಾಗುವುದು. ಅಲ್ಲದೆ ವೆಯ್ಟಿಂಗ್‌ ಲಿಸ್ಟ್‌ ಟಿಕೆಟ್‌ ಇರುವವರು ಪ್ರಯಾಣಿಸಲು ಅವಕಾಶ ಇರುವುದಿಲ್ಲ ಎಂದು ಇಲಾಖೆ ಹೇಳಿದೆ.

ಎಲ್ಲವೂ ಕಾಯ್ದಿರಿಸಿದ ಟಿಕೆಟ್‌ಗಳೇ ಆಗಿದ್ದು, ಸ್ಥಳದಲ್ಲಿ ಟಿಕೆಟ್‌ ನೀಡುವುದು ಅಥವಾ ತತ್ಕಾಲ್‌ ಬುಕಿಂಗ್‌ಗಳಿಗೆ ಅವಕಾಶ ಇರುವುದಿಲ್ಲ ಎಂದು ಇಲಾಖೆ ಸ್ಪಷ್ಟಪಡಿಸಿದೆ. ಜೂನ್‌ 1ರಿಂದ ಸಂಚರಿಸಲಿರುವ 100 ರೈಲುಗಳ ಪಟ್ಟಿಯನ್ನು ರೈಲ್ವೆ ಇಲಾಖೆ ಬುಧವಾರ ಪ್ರಕಟಿಸಿದೆ. ಈ ರೈಲುಗಳಲ್ಲಿ ಎ.ಸಿ ಹಾಗೂ ಎ.ಸಿ ರಹಿತ ಕೋಚ್‌ಗಳು ಇರಲಿವೆ ಎಂದು ಇಲಾಖೆ ತಿಳಸಿದೆ.
ಯಾವ ರೈಲುಗಳು ಸಂಚರಿಸಲಿವೆ:

ಮುಂಬೈ-ಕೆಎಸ್ಆರ್ ಬೆಂಗಳೂರು ಉದ್ಯಾನ್ ಎಕ್ಸಪ್ರೆಸ್‌, ಮುಂಬೈ-ಗದಗ ಎಕ್ಸ್‌ಪ್ರೆಸ್‌, ದಾನಪುರ-ಕೆಎಸ್ಆರ್ ಬೆಂಗಳೂರು ಸಂಘಮಿತ್ರ ಎಕ್ಸ್‌ಪ್ರೆಸ್‌, ವಾರಕ್ಕೆ ಎರಡು ಬಾರಿ ಸಂಚರಿಸುವ ನವದೆಹಲಿ-ಯಶವಂತಪುರ ಕರ್ನಾಟಕ ಸಂಪರ್ಕ ಕ್ರಾಂತಿ ಎಕ್ಸ್‌ಪ್ರೆಸ್, ಹುಬ್ಬಳ್ಳಿ-ಬೆಂಗಳೂರು ಜನಶತಾಬ್ದಿ ಎಕ್ಸ್‌ಪ್ರೆಸ್, ಯಶವಂತಪುರ-ಶಿವಮೊಗ್ಗ ಜನಶತಾಬ್ದಿ ಎಕ್ಸ್‌ಪ್ರೆಸ್‌, ವಾಸ್ಕೋಡಗಾಮ-ಹಜರತ್ ನಿಜಾಮುದ್ದೀನ್ ಗೋವಾ ಎಕ್ಸ್‌ಪ್ರೆಸ್‌ ಮತ್ತು ಹೌರಾ- ಯಶವಂತಪುರ ಹೌರಾ ದುರಂತೊ ಎಕ್ಸ್‌ಪ್ರೆಸ್‌ ರೈಲುಗಳು ಜೂನ್ 1ರಿಂದ ಸಂಚರಿಸಲಿವೆ ಎಂದು ನೈರುತ್ಯ ರೈಲ್ವೇ ತಿಳಿಸಿದೆ.

ರೈಲ್ವೆ ಸಚಿವ ಪಿಯೂಶ್‌ ಗೋಯಲ್, ಜೂನ್‌ 1 ರಿಂದ ದೇಶದಾದ್ಯಂತ ಸುಮಾರು 200 ಎಸಿ ಅಲ್ಲದ ದ್ವಿತೀಯ ದರ್ಜೆಯ ರೈಲುಗಳ ಸಂಚಾರ ಆರಂಭಿಸಲಾಗುವುದು ಎಂದು ಈ ಹಿಂದೆಯೇ ತಿಳಿಸಿದ್ದರು. ಹೀಗಾಗಿ ರಾಜ್ಯದಲ್ಲೂ ಜೂನ್‌ 01 ರಿಂದ ರೈಲ್ವೆ ಸೇವೆ ಆರಂಭವಾಗಲಿದೆ.

ಕೊರೊನಾದಿಂದಾಗಿ ರಾಷ್ಟ್ರದಾದ್ಯಂತ ಕಳೆದ ಎರಡು ತಿಂಗಳಿನಿಂದ ಲಾಕ್‌ಡೌನ್‌ ಘೋಷಿಸಲಾಗಿದ್ದು, ರೈಲು ಸಂಚಾರವನ್ನೂ ಸ್ಥಗಿತ ಮಾಡಲಾಗಿತ್ತು. ಇದರಿಂದಾಗಿ ಲಕ್ಷಾಂತರ ವಲಸೆ ಕಾರ್ಮಿಕರು ತಮ್ಮ ದೂರದ ರಾಜ್ಯಗಳಿಗೆ ಹೋಗಲಾಗದೇ ಕಾಲ್ನಡಿಗೆಯನ್ನು ಪ್ರಾರಂಭಿಸಿದ್ದರು. ಈ ಮಹಾನಡಿಗೆಯಲ್ಲಿ ಹಲವಾರು ವಲಸೆ ಕಾರ್ಮಿಕರು ರಸ್ತೆ ಅಫಘಾತ, ಬಳಲಿಕೆಯಿಂದ ಪ್ರಾಣ ಕಳೆದು ಕೊಂಡಿದ್ದರು. ಇದರ ನಂತರ ಎಚ್ಚೆತ್ತ ಕೇಂದ್ರ ಸರ್ಕಾರ, ವಲಸೆ ಕಾರ್ಮಿಕರು ತಮ್ಮ ರಾಜ್ಯಗಳಿಗೆ ತಲುಪಲು ಶ್ರಮಿಕ್‌ ರೈಲುಗಳನ್ನು ಆರಂಭಿಸಿತ್ತು.

ಶ್ರಮಿಕ ರೈಲುಗಳಲ್ಲದೆ 15 ಜೋಡಿ ವಿಶೇಷ ರೈಲು ಸೇವೆಗೂ ಲಾಕ್ ಡೌನ್ ಸಮಯದಲ್ಲಿ ಗ್ರೀನ್‌ ಸಿಗ್ನಲ್ ನೀಡಿತ್ತು. ಆದರೆ ಈಗ ರೈಲ್ವೆ ಇಲಾಖೆ ಹಂತ ಹಂತವಾಗಿ ಪೂರ್ಣ ಪ್ರಮಾಣ ಸೇವೆ ಆರಂಭಿಸುವ ಪ್ರಯತ್ನದಲ್ಲಿದೆ.


ಓದಿ: ಫ್ಯಾಕ್ಟ್‌ಚೆಕ್‌: ಲಾಕ್‌ಡೌನ್ ನಡುವೆ ಮುಂಬೈ ರೈಲು ನಿಲ್ದಾಣದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದ್ದು ನಿಜವೇ?


ಓದಿ: ದೇಶೀಯ ನಾಗರಿಕ ವಿಮಾನಯಾನಗಳು ಸೋಮವಾರದಿಂದ ಪ್ರಾರಂಭ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೋದಿ ಅಣಕ: ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ವಿರುದ್ಧ ಬಿಜೆಪಿ ಕಿಡಿ

ಮಧ್ಯಪ್ರದೇಶದ ಇಂದೋರ್‌ನಲ್ಲಿ ನಡೆದ ‘ಛಾತ್ರೋಂ ಕಿ ಗೂಂಜ್’ ಕಾರ್ಯಕ್ರಮದಲ್ಲಿ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ವೇದಿಕೆ ಹಂಚಿಕೊಂಡ ಸ್ಟ್ಯಾಂಡಪ್ ಕಾಮೆಡಿಯನ್‌ ಒಬ್ಬರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಣಕಿಸಿರುವ ವಿಚಾರ...

ಪ.ಬಂಗಾಳ: ನಂದಿಗ್ರಾಮದಲ್ಲಿ ಕಾಂಗ್ರೆಸ್‌ಗೆ ಮಮತಾ ಬೆಂಬಲ: ಬಂಗಾಳದ ವಿರೋಧ ಪಕ್ಷಗಳ ರಾಜಕೀಯದಲ್ಲಿ ಮರುಹೊಂದಾಣಿಕೆಯ ಸುಳಿವು

ಕೋಲ್ಕತ್ತಾ: ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ದಿನದಿಂದ ದಿನಕ್ಕೆ ಹೊಸ ರಾಜಕೀಯ ತಿರುವುಗಳನ್ನು ಪಡೆದುಕೊಳ್ಳುತ್ತಿದ್ದು, ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ಬಣ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ ಅವರಿಗೆ...

SIR ಎಂದರೆ ‘ಶಾ ಇನ್ಸ್ಟಿಗೇಟೆಡ್ ರಿಮೂವಲ್ʼ : ಕಾಂಗ್ರೆಸ್

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯಲ್ಲಿ (ಎಸ್‌ಐಆರ್) ದೊಡ್ಡ ಪ್ರಮಾಣದಲ್ಲಿ ಮತದಾರರ ಹೆಸರುಗಳನ್ನು ಕೈಬಿಡುತ್ತಿರುವ ವಿಷಯವನ್ನು ಪ್ರಸ್ತಾಪಿಸಿರುವ ಕಾಂಗ್ರೆಸ್, ಈ ಎಸ್‌ಐಆರ್ ಪ್ರಕ್ರಿಯೆಯು ವಾಸ್ತವವಾಗಿ ಮತದಾರರ ಬೃಹತ್ "ಶಾ...

ಟಿ. ನರಸೀಪುರ ಗಣೇಶೋತ್ಸವದಲ್ಲಿ ಪ್ರಚೋದನಕಾರಿ ಭಾಷಣ: ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್ ದಾಖಲು

ಗಣೇಶೋತ್ಸವ ಮೆರವಣಿಗೆಯ ವೇಳೆ ಪ್ರಚೋದನಕಾರಿ ಭಾಷಣ ಮಾಡಿದ ಮತ್ತು ಸ್ಥಳದಲ್ಲಿದ್ದ ಪೊಲೀಸ್ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ ಗಂಭೀರ ಆರೋಪದ ಮೇಲೆ ಬಿಜೆಪಿ ಮುಖಂಡ ಹಾಗೂ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್...

ದೆಹಲಿ ವಿವಿ ಚುನಾವಣಾ ಫಲಿತಾಂಶ: ABVPಯನ್ನು ಸೋಲಿಸಬಹುದಾಗಿದ್ದ ಚುನಾವಣೆಯಲ್ಲಿ ಕಾಂಗ್ರೆಸ್ ಮಾಡಿಕೊಂಡ ಎಡವಟ್ಟು

ಜಂತರ್ ಮಂತರ್‌ನಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಬೀದಿಗಿಳಿದು ನಡೆಸಿದ ಧರಣಿ ಹಾಗೂ ಇನ್‌ಸ್ಟಾಗ್ರಾಮ್‌ ನಂತಹ ಡಿಜಿಟಲ್ ವೇದಿಕೆಗಳಲ್ಲಿ ಹರಿದಾಡಿದ ರೀಲ್ಸ್‌ಗಳು ಬಿಜೆಪಿಯ ಜನಪ್ರಿಯತೆ ಕುಸಿದಿರುವುದನ್ನು ಬಿಂಬಿಸಿದ್ದವು. ಕ್ಯಾಂಪಸ್‌ಗಳಲ್ಲಿ ಬಿಜೆಪಿ ಮತ್ತು ಎಬಿವಿಪಿ ಕಾರ್ಯಕರ್ತರ ದಬ್ಬಾಳಿಕೆ,...

ಐಐಟಿ ಬಾಂಬೆ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಪ್ರಕರಣ: ಜಾತಿ ನಿಂದನೆ, ಬೆದರಿಕೆ ಆರೋಪ: ಪ್ರಾಧ್ಯಾಪಕರ ವಿರುದ್ಧವೂ ಎಫ್‌ಐಆರ್

ಮುಂಬೈ: ಐಐಟಿ ಬಾಂಬೆ ಕ್ಯಾಂಪಸ್‌ನಲ್ಲಿ ಎರಡನೇ ವರ್ಷದ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಇದೀಗ ಗಂಭೀರ ತಿರುವು ಪಡೆದುಕೊಂಡಿದ್ದು, ವಿದ್ಯಾರ್ಥಿಯ ಕುಟುಂಬ ಮಾಡಿರುವ ಜಾತಿ ಆಧಾರಿತ ನಿಂದನೆ, ಕಿರುಕುಳ ಮತ್ತು...

SIR : ಕೇಜ್ರಿವಾಲ್, ಧನಕರ್, ಅಡ್ವಾಣಿಗೂ ಬಂತು ಚುನಾವಣಾ ಆಯೋಗದ ನೋಟಿಸ್

ದೇಶದ ರಾಜಧಾನಿ ದೆಹಲಿಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಭಾರೀ ವಿವಾದಕ್ಕೆ ಹಾಗೂ ಸಾರ್ವಜನಿಕ ಆತಂಕಕ್ಕೆ ಕಾರಣವಾಗಿದೆ. ದೆಹಲಿಯ ಒಟ್ಟು ಮತದಾರರ ಪೈಕಿ ಬರೋಬ್ಬರಿ ಶೇಕಡಾ 50ರಷ್ಟು...

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...