Homeಮುಖಪುಟರೈಲಿನ ಶೌಚಾಲಯದ ನೀರಿನಲ್ಲಿ ಚಹಾ ಪಾತ್ರೆ ತೊಳೆದ ಮಾರಾಟಗಾರ: ನೈರ್ಮಲ್ಯದ ಬಗ್ಗೆ ಆತಂಕ ವ್ಯಕ್ತಪಡಿಸಿದ ಜನರು

ರೈಲಿನ ಶೌಚಾಲಯದ ನೀರಿನಲ್ಲಿ ಚಹಾ ಪಾತ್ರೆ ತೊಳೆದ ಮಾರಾಟಗಾರ: ನೈರ್ಮಲ್ಯದ ಬಗ್ಗೆ ಆತಂಕ ವ್ಯಕ್ತಪಡಿಸಿದ ಜನರು

- Advertisement -
- Advertisement -

ರೈಲಿನ ಶೌಚಾಲಯದಲ್ಲಿ ವ್ಯಕ್ತಿಯೊಬ್ಬ ತನ್ನ ಟೀ ಪಾತ್ರೆಯನ್ನು ತೊಳೆಯುತ್ತಿರುವ ಅಸಹ್ಯಕಾರಿ ವಿಡಿಯೋವೊಂದು ಆನ್‌ಲೈನ್‌ನಲ್ಲಿ ವೈರಲ್ ಆಗಿದೆ. ವೈರಲ್‌ ವಿಡಿಯೊಗೆ ಹಲವಾರು ಜನರು ಪ್ರತಿಕ್ರಿಯಿಸಿದ್ದು, ರೈಲಿನಲ್ಲಿ ಮಾರಾಟ ಮಾಡುವ ಆಹಾರಗಳ ಬಗ್ಗೆ ಪ್ರಶ್ನೆಗಳನ್ನು ಎತ್ತಿದ್ದಾರೆ. ರೈಲಿನ ಶೌಚಾಲಯದ

ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ವೈರಲ್ ಆಗಿರುವ ಈ ವಿಡಿಯೋದಲ್ಲಿ, ಚಹಾ ಮಾರಾಟಗಾರನೊಬ್ಬ ರೈಲಿನ ಶೌಚಾಲಯದೊಳಗೆ ಜೆಟ್ ಸ್ಪ್ರೇ ಬಳಸಿ ತನ್ನ ಪಾತ್ರೆಯನ್ನು ಸ್ವಚ್ಛಗೊಳಿಸುತ್ತಿರುವುದನ್ನು ತೋರಿಸಲಾಗಿದೆ. ರೈಲಿನ ಶೌಚಾಲಯದ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಕಂಟೆಂಟ್ ಕ್ರಿಯೇಟರ್‌ ಒಬ್ಬರು ಈ ವಿಡಿಯೊವನ್ನು ಇನ್ಸ್‌ಟಾಗ್ರಾಮ್‌ನಲ್ಲಿ ‘ಟ್ರೈನ್‌ ಕಿ ಚಾಯ್(ರೈಲಿನ ಚಹಾ)’ ಎಂಬ ಶೀರ್ಷಿಕೆಯೊಂದಿಗೆ ಪೋಸ್ಟ್‌ ಮಾಡಿದ್ದಾರೆ. ಇದಕ್ಕೆ ಬಳಕೆದಾರರೊಬ್ಬರು “ರೈಲಿನ ಚಹಾವನ್ನು ಕುಡಿಯುತ್ತಾ, ಕುಡಿಯುತ್ತಾ ಇದನ್ನು ನೋಡುತ್ತಿದ್ದೇನೆ” ಎಂದು ಪ್ರತ್ಯುತ್ತರಿಸಿದ್ದಾರೆ. ಮತ್ತೊಬ್ಬ ಬಳಕೆದಾರರು “ಏಲಕ್ಕಿ ಸ್ವಾದದ ರಹತ್ಯ ಇದುವೆ ಆಗಿದೆ” ಎಂದು ಮತ್ತೊಬ್ಬರು ವ್ಯಂಗ್ಯವಾಗಿ ಬರೆದಿದ್ದಾರೆ.

ಇನ್‌ಸ್ಟಾಗ್ರಾಮ್ ಬಳಕೆದಾರರೊಬ್ಬರು “ಭಾರತವನ್ನು ಶಾಶ್ವತವಾಗಿ ಬಿಡಲು ಇವು ಒಂದು ಕಾರಣ!! ನಾನು ಹೇಳುತ್ತೇನೆ, ನೀವು ಮಾರಾಟಗಾರರಿಂದ ಚಹಾವನ್ನು ನಂಬಲು ಮತ್ತು ಕುಡಿಯಲು ಸಹ ಸಾಧ್ಯವಿಲ್ಲ” ಎಂದು ಬರೆದಿದ್ದಾರೆ. ಮತ್ತೊಬ್ಬರು “ಶುಭ್ರ ಮತ್ತು ಸ್ವಚ್ಛ. ಶುದ್ಧ ಆರೋಗ್ಯಕರ ಗಿಡಮೂಲಿಕೆ ರೈಲಿನ ಚಹಾ” ಎಂದು ವ್ಯಂಗ್ಯವಾಗಿ ಹೇಳಿದ್ದಾರೆ.

ಮತ್ತೊಬ್ಬರು, “ಇದು ತಮಾಷೆಯೇ?????” ಎಂಬ ಹೇಳಿದ್ದು, ಮತ್ತೊಬ್ಬರು, ನನ್ನ ಜೀವನದ ಮತ್ತೊಂದು ನಂಬಿಕೆಯ ಸಮಸ್ಯೆ ಎಂದು ಬರೆದು ಭಾರತೀಯ ರೈಲ್ವೆಗೆ ಟ್ಯಾಗ್ ಮಾಡಿದ್ದಾರೆ. ಜೊತೆಗೆ ಎಕ್ಸ್‌ನಲ್ಲಿ ಈ ವಿಡಿಯೊ ಹಂಚಿಕೆಯಾಗಿದ್ದು, ಈ ಬಗ್ಗೆ ಕ್ರಮಕೈಗೊಳ್ಳುವಂತೆ ರೈಲ್ವೆ ಸಚಿವ ಅಶ್ವಿನ್ ವೈಷ್ಣವ್ ಅವರನ್ನು ವಿನಂತಿಸಿದ್ದಾರೆ.

ಎಕ್ಸ್‌ನ ಮತ್ತೊಬ್ಬ ಬಳಕೆದಾರರು, ” ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವ ಶಕ್ತಿ, ಅದಕ್ಕಾಗಿಯೇ ಭಾರತದಲ್ಲಿ ಕೋವಿಡ್ ಯಶಸ್ವಿಯಾಗಲಿಲ್ಲ” ಎಂದು ವ್ಯಂಗ್ಯವಾಡಿದ್ದಾರೆ. ಮತ್ತೊಬ್ಬರು, “ಅದಕ್ಕಾಗಿಯೇ ನಾನು ಪಾನಿಪುರಿ ತಿನ್ನುವುದನ್ನು ನಿಲ್ಲಿಸಿ 8-9 ವರ್ಷಗಳಾಗಿವೆ” ಎಂದು ಹೇಳಿದ್ದಾರೆ.

ದಿ ಹಿಂದೂ 2018ರಲ್ಲಿ ಮಾಡಿದ್ದ ವರದಿಯೊಂದರ ಪ್ರಕಾರ, ಚಹಾ ಮತ್ತು ಕಾಫಿ ತಯಾರಿಸಲು ರೈಲು ಶೌಚಾಲಯಗಳಿಂದ ನೀರನ್ನು ಬಳಸಿದ್ದಕ್ಕಾಗಿ ಚಹಾ ಮಾರಾಟಗಾರನಿಗೆ 1 ಲಕ್ಷ ರೂ. ದಂಡ ವಿಧಿಸಲಾಗಿತ್ತು ಎಂದು ದಕ್ಷಿಣ-ಮಧ್ಯ ರೈಲ್ವೆ ತಿಳಿಸಿದೆ. ಘಟನೆಯ ವೀಡಿಯೊ ಆಗ ಸಾಮಾಜಿಕ ಮಾಧ್ಯಮದಲ್ಲಿ ಕಾಣಿಸಿಕೊಂಡಿತು, ನಂತರ ತನಿಖೆ ನಡೆಸಲಾಯಿತು ಮತ್ತು ಅದಕ್ಕೆ ಅನುಗುಣವಾಗಿ ಕ್ರಮ ಕೈಗೊಳ್ಳಲಾಯಿತು.

ಇದನ್ನೂಓದಿ:  ದಬ್ಬಾಳಿಕೆ ಸಹಿಸುವುದಿಲ್ಲ, ಕಠಿಣ ಕ್ರಮ ಕೈಗೊಳ್ಳುತ್ತೇನೆ : ಮೈಕ್ರೋ ಫೈನಾನ್ಸ್ ಕಂಪನಿಗಳಿಗೆ ಸಿಎಂ ಎಚ್ಚರಿಕೆ

ದಬ್ಬಾಳಿಕೆ ಸಹಿಸುವುದಿಲ್ಲ, ಕಠಿಣ ಕ್ರಮ ಕೈಗೊಳ್ಳುತ್ತೇನೆ : ಮೈಕ್ರೋ ಫೈನಾನ್ಸ್ ಕಂಪನಿಗಳಿಗೆ ಸಿಎಂ ಎಚ್ಚರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಎಸ್‌ಐಆರ್ ಬಳಿಕ ಮತದಾರರ ಪಟ್ಟಿಯಿಂದ ಸುಮಾರು 91 ಲಕ್ಷ ಹೆಸರುಗಳು ಡಿಲೀಟ್

ಚುನಾವಣಾ ಆಯೋಗ ಬಿಡುಗಡೆ ಮಾಡಿದ ಮಾಹಿತಿಯ ಪ್ರಕಾರ, ರಾಜ್ಯದಲ್ಲಿ ವಿಶೇಷ ತೀವ್ರ ಪರಿಷ್ಕರಣೆ ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಸುಮಾರು 91 ಲಕ್ಷ ಮತದಾರರನ್ನು ಮತದಾರರ ಪಟ್ಟಿಯಿಂದ ಅಳಿಸಲಾಗಿದೆ. ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯ ನಂತರ...

ಇರಾನ್ ನೂತನ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ ‘ಪ್ರಜ್ಞಾಹೀನ’, ಕೋಮ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ: ವರದಿ

ಇರಾನ್‌ನ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ ಅವರು ಕೋಮ್‌ನಲ್ಲಿ ವೈದ್ಯಕೀಯ ಚಿಕಿತ್ಸೆ ಪಡೆಯುತ್ತಿದ್ದಾರೆ ಮತ್ತು ಪ್ರಜ್ಞಾಹೀನರಾಗಿದ್ದಾರೆ ಎಂದು ನಂಬಲಾಗಿದೆ ಎಂದು ಗುಪ್ತಚರ ಆಧಾರಿತ ರಾಜತಾಂತ್ರಿಕ ಜ್ಞಾಪಕ ಪತ್ರವನ್ನು ಉಲ್ಲೇಖಿಸಿ ದಿ ಟೈಮ್ಸ್ ವರದಿ...

ಪ. ಬಂಗಾಳ : ಎಸ್‌ಐಆರ್‌ನಲ್ಲಿ ಮತದಾರರ ಪಟ್ಟಿಯಿಂದ ಕೈ ಬಿಟ್ಟಿದ್ದ ಮತ್ತೊಬ್ಬ ಕಾಂಗ್ರೆಸ್ ಅಭ್ಯರ್ಥಿಯ ಹೆಸರು ಮರು ಸೇರ್ಪಡೆ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ ವೇಳೆ (ಎಸ್‌ಐಆರ್‌) ತೆಗೆದು ಹಾಕಿದ್ದ ಮತ್ತೊಬ್ಬ ಕಾಂಗ್ರೆಸ್ ಅಭ್ಯರ್ಥಿಯ ಹೆಸರನ್ನು ಮತದಾರರ ಪಟ್ಟಿಗೆ ಮರು ಸೇರ್ಪಡೆಗೊಳಿಸುವಂತೆ ಮೇಲ್ಮನವಿ ನ್ಯಾಯಮಂಡಳಿ ಸೋಮವಾರ (ಏ.6) ಆದೇಶಿಸಿರುವುದಾಗಿ ವರದಿಯಾಗಿದೆ. ರತುವಾ...

ಹೈದರಾಬಾದ್| ಐಪಿಎಲ್ ಪಂದ್ಯದಿಂದ ಭಾರೀ ಸಂಚಾರ ದಟ್ಟಣೆ; ಆಂಬ್ಯುಲೆನ್ಸ್‌ನಲ್ಲಿದ್ದ ಮಹಿಳೆ ಸಾವು

ಏಪ್ರಿಲ್ 5 ರ ಭಾನುವಾರ ಉಪ್ಪಳದಲ್ಲಿ ಉಂಟಾದ ಭಾರೀ ಸಂಚಾರ ದಟ್ಟಣೆಯಿಂದಾಗಿ ಒಂದು ಗಂಟೆಗೂ ಹೆಚ್ಚು ಕಾಲ ಆಂಬ್ಯುಲೆನ್ಸ್‌ನಲ್ಲಿ ಸಿಲುಕಿಕೊಂಡಿದ್ದ ಬಿಷ್ಣಾ ಎಂಬ 30 ವರ್ಷದ ಮಹಿಳೆ ಸಾವನ್ನಪ್ಪಿದ ದುರಂತ ಘಟನೆ ನಡೆದಿದೆ. ಉಪ್ಪಳದ...

ಪಶ್ಚಿಮ ಬಂಗಾಳ: ನಂದಿಗ್ರಾಮದಲ್ಲಿ ಎಸ್‌ಐಆರ್ ಪೂರಕ ಪಟ್ಟಿಯಿಂದ 95% ಮುಸ್ಲಿಂ ಮತದಾರರ ಹೆಸರು ತೆಗೆದುಹಾಕಲಾಗಿದೆ: ವರದಿ 

ಸುವೇಂದು ಅಧಿಕಾರಿ ಪ್ರತಿನಿಧಿಸುವ ಪೂರ್ವ ಮಿಡ್ನಾಪುರ ವಿಧಾನಸಭಾ ಕ್ಷೇತ್ರವಾದ ನಂದಿಗ್ರಾಮದಲ್ಲಿ ಒಂದು ಅಧ್ಯಯನವು ಆತಂಕಕಾರಿ ಅಸಮಾನತೆಯನ್ನು ಎತ್ತಿ ತೋರಿಸಿದೆ, ಅಲ್ಲಿ ಮತದಾರರಲ್ಲಿ ಕಡಿಮೆ ಪಾಲು ಇದ್ದರೂ ಎಸ್‌ಐಆರ್ ಪೂರಕ ಪಟ್ಟಿಯಿಂದ ಅಳಿಸಲಾದ ಮತದಾರರಲ್ಲಿ...

ಟೋಲ್ ಪ್ಲಾಜಾಗಳಲ್ಲಿನ ಅಶುಚಿತ್ವ ಶೌಚಾಲಯಗಳ ಬಗ್ಗೆ ವರದಿ ಮಾಡಿದರೆ ಬಹುಮಾನ: ಕೇಂದ್ರ ಸರ್ಕಾರ

ರಾಷ್ಟ್ರೀಯ ಹೆದ್ದಾರಿಗಳಲ್ಲಿನ ನೈರ್ಮಲ್ಯದ ಬಗ್ಗೆ ದೀರ್ಘಕಾಲದ ಕಳವಳಗಳನ್ನು ಪರಿಹರಿಸುವ ಪ್ರಯತ್ನದಲ್ಲಿ, ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ (MoRTH) ಟೋಲ್ ಪ್ಲಾಜಾಗಳಲ್ಲಿ ಅಶುಚಿಯಾದ ಶೌಚಾಲಯ ಸೌಲಭ್ಯಗಳ ಬಗ್ಗೆ ವರದಿ ಮಾಡಲು ಪ್ರಯಾಣಿಕರನ್ನು ಪ್ರೋತ್ಸಾಹಿಸುವ...

ಮಣಿಪುರ: ಬಾಂಬ್ ದಾಳಿಗೆ ಇಬ್ಬರು ಮಕ್ಕಳು ಬಲಿ; ಕುಕಿ ದಂಗೆಕೋರರಿಂದ ದಾಳಿ ಆರೋಪ; ಇದು ಅನಾಗರಿಕ ಕೃತ್ಯ ಎಂದ ಸಿಎಂ 

ಗುವಾಹಟಿ: ಮಣಿಪುರದ ಮೈತೇಯಿ ಪ್ರಾಬಲ್ಯದ ಬಿಷ್ಣುಪುರ ಜಿಲ್ಲೆಯಲ್ಲಿ ಮಂಗಳವಾರ ಮನೆಯೊಂದರ ಮೇಲೆ ಬಾಂಬ್ ದಾಳಿ ನಡೆದಿದ್ದು, ಘಟನೆಯಲ್ಲಿ ಐದು ತಿಂಗಳ ಗಂಡು ಮಗು ಸೇರಿದಂತೆ ಇಬ್ಬರು ಅಪ್ರಾಪ್ತ ವಯಸ್ಕರು ಸಾವನ್ನಪ್ಪಿರುವ ಘಟನೆ ನಡೆದಿದೆ.  ಮೊಯಿರಾಂಗ್...

ಮುಖ್ಯ ಚುನಾವಣಾ ಆಯುಕ್ತರ ಪದಚ್ಯುತಿಗೆ ವಿಪಕ್ಷಗಳಿಂದ ನೋಟಿಸ್‌ : ಕಾರಣ ನೀಡದೆ ತಿರಸ್ಕರಿಸಿದ ಸಂಸತ್ತಿನ ಉಭಯ ಸದನಗಳ ಮುಖ್ಯಸ್ಥರು-ವರದಿ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸಲು ವಿಪಕ್ಷ ಸಂಸದರು ಸಲ್ಲಿಸಿದ್ದ ನಿಲುವಳಿ ನೋಟಿಸ್ ಅನ್ನು ರಾಜ್ಯಸಭಾ ಅಧ್ಯಕ್ಷ ಸಿ.ಪಿ. ರಾಧಾಕೃಷ್ಣನ್ ಮತ್ತು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ತಿರಸ್ಕರಿಸಿದ್ದಾರೆ. ಉಭಯ...

ಎನ್‌ಸಿಪಿ ನಾಯಕನ ಕೊಲೆ ಪ್ರಕರಣ : ಛತ್ತೀಸ್‌ಗಢ ಮಾಜಿ ಸಿಎಂ ಅಜಿತ್ ಜೋಗಿ ಮಗ ಅಮಿತ್ ಜೋಗಿಗೆ ಜೀವಾವಧಿ ಶಿಕ್ಷೆ

2003ರ ಕೊಲೆ ಪ್ರಕರಣದಲ್ಲಿ ಛತ್ತೀಸ್‌ಗಢ ಹೈಕೋರ್ಟ್ ಮಾಜಿ ಮುಖ್ಯಮಂತ್ರಿ ಅಜಿತ್ ಜೋಗಿ ಅವರ ಪುತ್ರ ಅಮಿತ್ ಜೋಗಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ ಎಂದು ದಿ ಹಿಂದೂ ಸೋಮವಾರ (ಏ.6) ವರದಿ ಮಾಡಿದೆ. ರಾಷ್ಟ್ರೀಯವಾದಿ ಕಾಂಗ್ರೆಸ್...

ಪ. ಬಂಗಾಳ | ಮತದಾರರ ಪಟ್ಟಿಯಿಂದ ಕೈಬಿಟ್ಟಿದ್ದಕ್ಕೆ ಸೂಕ್ತ ಕಾರಣ ನೀಡದ ಚುನಾವಣಾ ಆಯೋಗ : ಕಾಂಗ್ರೆಸ್ ಅಭ್ಯರ್ಥಿ ಹೆಸರು ಮರು ಸೇರ್ಪಡೆ

ಪಶ್ಚಿಮ ಬಂಗಾಳದ ಮತದಾರರ ಪಟ್ಟಿಯಿಂದ ಹೆಸರು ಕೈಬಿಡಲ್ಪಟ್ಟವರ ಅರ್ಜಿಗಳ ವಿಚಾರಣೆಗಾಗಿ ಕೋಲ್ಕತ್ತಾದಲ್ಲಿ ಸ್ಥಾಪಿಸಲಾದ ಮೇಲ್ಮನವಿ ನ್ಯಾಯಮಂಡಳಿಯು, ಮುಂಬರುವ ವಿಧಾನಸಭಾ ಚುನಾವಣೆಯ ಫರಕ್ಕಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮೊತಾಬ್ ಶೇಖ್ ಅವರ ಹೆಸರನ್ನು ಭಾನುವಾರ...