Homeಮುಖಪುಟಶಾಸಕರಿಗೆ ತರಬೇತಿ: ಪೂರ್ವಗ್ರಹ ಪೀಡಿತ ಚರ್ಚೆ ಸರಿಯಲ್ಲವೆಂದ ಸ್ಪೀಕರ್ ಯು.ಟಿ ಖಾದರ್

ಶಾಸಕರಿಗೆ ತರಬೇತಿ: ಪೂರ್ವಗ್ರಹ ಪೀಡಿತ ಚರ್ಚೆ ಸರಿಯಲ್ಲವೆಂದ ಸ್ಪೀಕರ್ ಯು.ಟಿ ಖಾದರ್

- Advertisement -
- Advertisement -

ವಿಧಾನಸಭೆಗೆ ಹೊಸದಾಗಿ ಆಯ್ಕೆಯಾಗಿರುವ ನೂತನ ಶಾಸಕರಿಗೆ ಹಮ್ಮಿಕೊಂಡಿರುವ ತರಬೇತಿ ಶಿಬಿರದ ಸಂಪನ್ಮೂಲ ವ್ಯಕ್ತಿಗಳ ಬಗ್ಗೆ ತೀವ್ರ ವಿರೋಧ ವ್ಯಕ್ತವಾಗುತ್ತಿರುವುದಕ್ಕೆ ಪ್ರತಿಕ್ರಿಯಿಸಿರುವ ವಿಧಾನಸಭೆಯ ಸಭಾಧ್ಯಕ್ಷ ಯು ಟಿ ಖಾದರ್, ‘ಪೂರ್ವಗ್ರಹ ಪೀಡಿತ ಚರ್ಚೆ ಸರಿಯಲ್ಲ’ ಎಂದಿದ್ದಾರೆ.

ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಯಾವುದೇ ವಿಚಾರದ ಬಗ್ಗೆ ಈಗಲೇ ಪೂರ್ವಗ್ರಹ ಪೀಡಿತ ಚರ್ಚೆ ಸರಿಯಲ್ಲ. ಶಿಬಿರದ ಬಗ್ಗೆ ಆಕ್ಷೇಪಿಸುವವರು ಶಿಬಿರ ನಡೆದ ಬಳಿಕ ಅಭಿಪ್ರಾಯ ಹೇಳಲಿ. ವಿವಿಧ ವಿಷಯಗಳನ್ನು ಮುಂದಿಟ್ಟುಕೊಂಡು ಈ ತರಬೇತಿ ಶಿಬಿರ ಆಯೋಜಿಸುತ್ತಿದ್ದೇವೆ” ಎಂದು ತಿಳಿಸಿದ್ದಾರೆ.

ಶಿಬಿರದಲ್ಲಿ ಎಚ್.ಕೆ.ಪಾಟೀಲ್, ಕೃಷ್ಣ ಭೈರೇಗೌಡ, ಟಿ.ಬಿ.ಜಯಚಂದ್ರ, ಸುರೇಶ್ ಕುಮಾರ್ ಸೇರಿ ಸಂಸದೀಯ ಪಟುಗಳು ತರಬೇತಿ ನೀಡಲಿದ್ದಾರೆ. ಮಾಜಿ ಸ್ಪೀಕರ್‌ಗಳು, ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ, ಎಚ್.ಡಿ.ಕುಮಾರಸ್ವಾಮಿ ಕೂಡ ನೂತನ ಶಾಸಕರೊಂದಿಗೆ ಸಂವಾದ ನಡೆಸಲಿದ್ದಾರೆ. ಅದರ ಜೊತೆಗೆ ಒತ್ತಡರಹಿತ ಕೆಲಸ ನಿರ್ವಹಣೆ ಬಗ್ಗೆ ತಿಳಿಸಲು ಕೆಲ ಆಧ್ಯಾತ್ಮಿಕ ವ್ಯಕ್ತಿಗಳನ್ನು ಕೂಡ ಕರೆದಿದ್ದೇವೆ ಎಂದು ತಮ್ಮ ನಡೆಯನ್ನು ಸಮರ್ಥಿಸಿಕೊಂಡಿದ್ದಾರೆ.

ಧಾರ್ಮಿಕ ಮತ್ತು ವಿವಾದಾತ್ಮಕ ವ್ಯಕ್ತಿಗಳನ್ನು ಆಹ್ವಾನಿಸಿರುವುದಕ್ಕೆ ತೀವ್ರ ವಿರೋಧ ವ್ಯಕ್ತವಾಗಿತ್ತು. ಕಾಂಗ್ರೆಸ್ ಪಕ್ಷದ ವಕ್ತಾರರು ಮತ್ತು ಮಾಜಿ ಪರಿಷತ್ ಸದಸ್ಯರಾದ ರಮೇಶ್‌ಬಾಬುರವರು ಯು.ಟಿ ಖಾದರ್‌ರವರಿಗೆ ಪತ್ರ ಬರೆದು ಅಸಮಾಧಾನ ವ್ಯಕ್ತಪಡಿಸಿದ್ದರು. ಈ ಕುರಿತು ಪ್ರತಿಕ್ರಿಯಿಸಿರುವ ಖಾದರ್ “ಸಾಮಾಜಿಕ ತಾಣಗಳಲ್ಲಿ ಸ್ಪಷ್ಟನೆ ಇಲ್ಲದೇ ಬರೆಯುತ್ತಿರುವುದು ಅವರ ವ್ಯಕ್ತಿತ್ವಕ್ಕೆ ಬಿಟ್ಟ ವಿಚಾರ” ಎಂದಿದ್ದಾರೆ.

ಶಿಬಿರದಲ್ಲಿ ಕರೆದಿರುವ ಅತಿಥಿಗಳಲ್ಲಿ ಕೆಲವರು ಆಗಮಿಸುವ ಬಗ್ಗೆ ಇನ್ನೂ ದೃಢಪಟ್ಟಿಲ್ಲ. ರವಿಶಂಕರ್ ಗುರೂಜಿಯವರು ಊರಲ್ಲೇ ಇಲ್ಲ, ಅವರು ಅಮೆರಿಕದಲ್ಲಿದ್ದಾರೆ ಎಂದು ಸ್ಪೀಕರ್ ಮಾಹಿತಿ ನೀಡಿದರು.

ಈ ಶಿಬಿರದ ಬಗ್ಗೆ ಯಾವುದೇ ವಿಚಾರ ಇದ್ದರೂ ಈಗಲೇ ಹೇಳೋದು ಪ್ರಬುದ್ಧತೆ ಅನಿಸಿಕೊಳ್ಳುವುದಿಲ್ಲ. ತರಬೇತಿ ಶಿಬಿರ ನೋಡಿದ ಬಳಿಕ ಅದರ ಅಭಿಪ್ರಾಯ ಹೇಳಲಿ ಎಂದು ಯು ಟಿ ಖಾದರ್ ತಿಳಿಸಿದರು.

ಇನ್ನೊಂದೆಡೆ ಶಾಸಕರ ತರಬೇತಿ ಶಿಬಿರದ ಕಲಾಪಗಳಿಂದ ಧಾರ್ಮಿಕ ಪ್ರತಿನಿಧಿಗಳ ಪ್ರವಚನವನ್ನು ಕೈ ಬಿಡಬೇಕೆಂದು ನಮ್ಮ ಒಕ್ಕೊರಲ ಆಗ್ರಹವಾಗಿದೆ ಎಂದು ಡಾ.ಕೆ.ಮರುಳಸಿದ್ದಪ್ಪ ಡಾ.ಜಿ.ರಾಮಕೃಷ್ಣ, ಡಾ.ವಿಜಯಾ, ಪ್ರೊ.ಎಸ್.ಜಿ.ಸಿದ್ದರಾಮಯ್ಯ, ಪ್ರೊ.ರಾಜೇಂದ್ರ ಚೆನ್ನಿ, ಕೆ.ಎಸ್.ವಿಮಲಾ, ಬಿ.ಶ್ರೀಪಾದ ಭಟ್, ಟಿ.ಸುರೇಂದ್ರ ರಾವ್, ಡಾ.ಬಂಜಗೆರೆ ಜಯಪ್ರಕಾಶ್, ಡಾ.ನಿರಂಜನಾರಾಧ್ಯ, ಡಾ.ಮೀನಾಕ್ಷಿ ಬಾಳಿ, ಡಾ.ಎನ್.ಗಾಯತ್ರಿ, ಡಾ.ವಸುಂಧರಾ ಭೂಪತಿ, ರುದ್ರಪ್ಪ ಹುನಗವಾಡಿ ಅವರು ವಿಧಾನ ಸಭಾಧ್ಯಕ್ಷ ಯು.ಟಿ.ಖಾದರ್‌ ಅವರಿಗೆ ಪತ್ರ ಬರೆದಿದ್ದಾರೆ.

ಇದನ್ನೂ ಓದಿ: ಧಾರ್ಮಿಕ ಪ್ರತಿನಿಧಿಗಳಿಂದ ನೂತನ ಶಾಸಕರಿಗೆ ತರಬೇತಿ ಶಿಬಿರ ಕೈಬಿಡಿ: ಸ್ಪೀಕರ್ ಖಾದರ್‌ಗೆ ‘ಜಾಗೃತ ನಾಗರಿಕರ ಒಕ್ಕೂಟ’ದ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...