Homeಮುಖಪುಟಶಾಸಕರಿಗೆ ತರಬೇತಿ: ಪೂರ್ವಗ್ರಹ ಪೀಡಿತ ಚರ್ಚೆ ಸರಿಯಲ್ಲವೆಂದ ಸ್ಪೀಕರ್ ಯು.ಟಿ ಖಾದರ್

ಶಾಸಕರಿಗೆ ತರಬೇತಿ: ಪೂರ್ವಗ್ರಹ ಪೀಡಿತ ಚರ್ಚೆ ಸರಿಯಲ್ಲವೆಂದ ಸ್ಪೀಕರ್ ಯು.ಟಿ ಖಾದರ್

- Advertisement -
- Advertisement -

ವಿಧಾನಸಭೆಗೆ ಹೊಸದಾಗಿ ಆಯ್ಕೆಯಾಗಿರುವ ನೂತನ ಶಾಸಕರಿಗೆ ಹಮ್ಮಿಕೊಂಡಿರುವ ತರಬೇತಿ ಶಿಬಿರದ ಸಂಪನ್ಮೂಲ ವ್ಯಕ್ತಿಗಳ ಬಗ್ಗೆ ತೀವ್ರ ವಿರೋಧ ವ್ಯಕ್ತವಾಗುತ್ತಿರುವುದಕ್ಕೆ ಪ್ರತಿಕ್ರಿಯಿಸಿರುವ ವಿಧಾನಸಭೆಯ ಸಭಾಧ್ಯಕ್ಷ ಯು ಟಿ ಖಾದರ್, ‘ಪೂರ್ವಗ್ರಹ ಪೀಡಿತ ಚರ್ಚೆ ಸರಿಯಲ್ಲ’ ಎಂದಿದ್ದಾರೆ.

ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಯಾವುದೇ ವಿಚಾರದ ಬಗ್ಗೆ ಈಗಲೇ ಪೂರ್ವಗ್ರಹ ಪೀಡಿತ ಚರ್ಚೆ ಸರಿಯಲ್ಲ. ಶಿಬಿರದ ಬಗ್ಗೆ ಆಕ್ಷೇಪಿಸುವವರು ಶಿಬಿರ ನಡೆದ ಬಳಿಕ ಅಭಿಪ್ರಾಯ ಹೇಳಲಿ. ವಿವಿಧ ವಿಷಯಗಳನ್ನು ಮುಂದಿಟ್ಟುಕೊಂಡು ಈ ತರಬೇತಿ ಶಿಬಿರ ಆಯೋಜಿಸುತ್ತಿದ್ದೇವೆ” ಎಂದು ತಿಳಿಸಿದ್ದಾರೆ.

ಶಿಬಿರದಲ್ಲಿ ಎಚ್.ಕೆ.ಪಾಟೀಲ್, ಕೃಷ್ಣ ಭೈರೇಗೌಡ, ಟಿ.ಬಿ.ಜಯಚಂದ್ರ, ಸುರೇಶ್ ಕುಮಾರ್ ಸೇರಿ ಸಂಸದೀಯ ಪಟುಗಳು ತರಬೇತಿ ನೀಡಲಿದ್ದಾರೆ. ಮಾಜಿ ಸ್ಪೀಕರ್‌ಗಳು, ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ, ಎಚ್.ಡಿ.ಕುಮಾರಸ್ವಾಮಿ ಕೂಡ ನೂತನ ಶಾಸಕರೊಂದಿಗೆ ಸಂವಾದ ನಡೆಸಲಿದ್ದಾರೆ. ಅದರ ಜೊತೆಗೆ ಒತ್ತಡರಹಿತ ಕೆಲಸ ನಿರ್ವಹಣೆ ಬಗ್ಗೆ ತಿಳಿಸಲು ಕೆಲ ಆಧ್ಯಾತ್ಮಿಕ ವ್ಯಕ್ತಿಗಳನ್ನು ಕೂಡ ಕರೆದಿದ್ದೇವೆ ಎಂದು ತಮ್ಮ ನಡೆಯನ್ನು ಸಮರ್ಥಿಸಿಕೊಂಡಿದ್ದಾರೆ.

ಧಾರ್ಮಿಕ ಮತ್ತು ವಿವಾದಾತ್ಮಕ ವ್ಯಕ್ತಿಗಳನ್ನು ಆಹ್ವಾನಿಸಿರುವುದಕ್ಕೆ ತೀವ್ರ ವಿರೋಧ ವ್ಯಕ್ತವಾಗಿತ್ತು. ಕಾಂಗ್ರೆಸ್ ಪಕ್ಷದ ವಕ್ತಾರರು ಮತ್ತು ಮಾಜಿ ಪರಿಷತ್ ಸದಸ್ಯರಾದ ರಮೇಶ್‌ಬಾಬುರವರು ಯು.ಟಿ ಖಾದರ್‌ರವರಿಗೆ ಪತ್ರ ಬರೆದು ಅಸಮಾಧಾನ ವ್ಯಕ್ತಪಡಿಸಿದ್ದರು. ಈ ಕುರಿತು ಪ್ರತಿಕ್ರಿಯಿಸಿರುವ ಖಾದರ್ “ಸಾಮಾಜಿಕ ತಾಣಗಳಲ್ಲಿ ಸ್ಪಷ್ಟನೆ ಇಲ್ಲದೇ ಬರೆಯುತ್ತಿರುವುದು ಅವರ ವ್ಯಕ್ತಿತ್ವಕ್ಕೆ ಬಿಟ್ಟ ವಿಚಾರ” ಎಂದಿದ್ದಾರೆ.

ಶಿಬಿರದಲ್ಲಿ ಕರೆದಿರುವ ಅತಿಥಿಗಳಲ್ಲಿ ಕೆಲವರು ಆಗಮಿಸುವ ಬಗ್ಗೆ ಇನ್ನೂ ದೃಢಪಟ್ಟಿಲ್ಲ. ರವಿಶಂಕರ್ ಗುರೂಜಿಯವರು ಊರಲ್ಲೇ ಇಲ್ಲ, ಅವರು ಅಮೆರಿಕದಲ್ಲಿದ್ದಾರೆ ಎಂದು ಸ್ಪೀಕರ್ ಮಾಹಿತಿ ನೀಡಿದರು.

ಈ ಶಿಬಿರದ ಬಗ್ಗೆ ಯಾವುದೇ ವಿಚಾರ ಇದ್ದರೂ ಈಗಲೇ ಹೇಳೋದು ಪ್ರಬುದ್ಧತೆ ಅನಿಸಿಕೊಳ್ಳುವುದಿಲ್ಲ. ತರಬೇತಿ ಶಿಬಿರ ನೋಡಿದ ಬಳಿಕ ಅದರ ಅಭಿಪ್ರಾಯ ಹೇಳಲಿ ಎಂದು ಯು ಟಿ ಖಾದರ್ ತಿಳಿಸಿದರು.

ಇನ್ನೊಂದೆಡೆ ಶಾಸಕರ ತರಬೇತಿ ಶಿಬಿರದ ಕಲಾಪಗಳಿಂದ ಧಾರ್ಮಿಕ ಪ್ರತಿನಿಧಿಗಳ ಪ್ರವಚನವನ್ನು ಕೈ ಬಿಡಬೇಕೆಂದು ನಮ್ಮ ಒಕ್ಕೊರಲ ಆಗ್ರಹವಾಗಿದೆ ಎಂದು ಡಾ.ಕೆ.ಮರುಳಸಿದ್ದಪ್ಪ ಡಾ.ಜಿ.ರಾಮಕೃಷ್ಣ, ಡಾ.ವಿಜಯಾ, ಪ್ರೊ.ಎಸ್.ಜಿ.ಸಿದ್ದರಾಮಯ್ಯ, ಪ್ರೊ.ರಾಜೇಂದ್ರ ಚೆನ್ನಿ, ಕೆ.ಎಸ್.ವಿಮಲಾ, ಬಿ.ಶ್ರೀಪಾದ ಭಟ್, ಟಿ.ಸುರೇಂದ್ರ ರಾವ್, ಡಾ.ಬಂಜಗೆರೆ ಜಯಪ್ರಕಾಶ್, ಡಾ.ನಿರಂಜನಾರಾಧ್ಯ, ಡಾ.ಮೀನಾಕ್ಷಿ ಬಾಳಿ, ಡಾ.ಎನ್.ಗಾಯತ್ರಿ, ಡಾ.ವಸುಂಧರಾ ಭೂಪತಿ, ರುದ್ರಪ್ಪ ಹುನಗವಾಡಿ ಅವರು ವಿಧಾನ ಸಭಾಧ್ಯಕ್ಷ ಯು.ಟಿ.ಖಾದರ್‌ ಅವರಿಗೆ ಪತ್ರ ಬರೆದಿದ್ದಾರೆ.

ಇದನ್ನೂ ಓದಿ: ಧಾರ್ಮಿಕ ಪ್ರತಿನಿಧಿಗಳಿಂದ ನೂತನ ಶಾಸಕರಿಗೆ ತರಬೇತಿ ಶಿಬಿರ ಕೈಬಿಡಿ: ಸ್ಪೀಕರ್ ಖಾದರ್‌ಗೆ ‘ಜಾಗೃತ ನಾಗರಿಕರ ಒಕ್ಕೂಟ’ದ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇಂಡಿಯಾ ಮೈತ್ರಿಕೂಟದ ಸಭೆ: ಎಸ್‌ಐಆರ್, ಬೆಲೆ ಏರಿಕೆ, ನಿರುದ್ಯೋಗದ ಕುರಿತು ಖರ್ಗೆ ಕಳವಳ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ರಾಜಕೀಯ, ಆರ್ಥಿಕ, ಸಾಮಾಜಿಕ ಮತ್ತು ವಿದೇಶಾಂಗ ನೀತಿ ರಂಗಗಳಲ್ಲಿ ಮೋದಿ ಸರ್ಕಾರದ ವೈಫಲ್ಯಗಳನ್ನು ಎದುರಿಸಲು ತನ್ನ ಒಗ್ಗಟ್ಟನ್ನು ಬಲಪಡಿಸಿಕೊಳ್ಳುವಂತೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸೋಮವಾರ (ಜೂ.8) ಇಂಡಿಯಾ ಮೈತ್ರಿಕೂಟಕ್ಕೆ ಕರೆ...

ಟೆಹ್ರಾನ್ ಮೇಲಿನ ದಾಳಿಗೆ ಪ್ರತೀಕಾರ: ಇಸ್ರೇಲ್ ಮೇಲೆ ಕ್ಷಿಪಣಿ ಹಾರಿಸಿದ ಇರಾನ್

ಟೆಹ್ರಾನ್, ತಬ್ರಿಜ್ ಮತ್ತು ಇಸ್ಫಹಾನ್‌ ಮೇಲಿನ ದಾಲಿಗಳಿಗೆ ಪ್ರತೀಕಾರವಾಗಿ, ಇರಾನ್ ಸೇನೆಯು ಇಸ್ರೇಲ್‌ ಮೇಲೆ ಎರಡನೇ ತರಂಗದ ಕ್ಷಿಪಣಿಗಳನ್ನು ಹಾರಿಸಿದೆ. ದೇಶಾದ್ಯಂತ ಸೈರನ್‌ಗಳು ಮೊಳಗುತ್ತಿವೆ ಎಂದು ಇಸ್ರೇಲ್ ಮಿಲಿಟರಿ ಹೇಳಿದೆ ಎಂದು ಅಂತರಾಷ್ಟ್ರೀಯ...

ಭಾರತದಲ್ಲಿ ಬೆಂಕಿ ದುರಂತ ‘ದಿನವೊಂದಕ್ಕೆ ಬಲಿಯಾಗುತ್ತಿವೆ 16 ಜೀವಗಳು’ NCRB ವರದಿ

ಇತ್ತೀಚೆಗೆ ದೆಹಲಿಯ ಮಾಳವೀಯ ನಗರದ ಹೋಟೆಲ್‌ ಒಂದರಲ್ಲಿ ನಡೆದ ಭೀಕರ ಬೆಂಕಿ ದುರಂತ (ಇದರಲ್ಲಿ 22 ಜನರು ಸಜೀವ ದಹನವಾಗಿದ್ದರು) ಇಡೀ ದೇಶವನ್ನೇ ನಡುಗಿಸಿದೆ. ಈ ದುರಂತದ ಬೆನ್ನಲ್ಲೇ ಕರ್ನಾಟಕದಲ್ಲೂ ವಾಣಿಜ್ಯ ಮತ್ತು...

ಈದ್ ಹಬ್ಬದ ವೇಳೆ ಮುಸ್ಲೀಮರನ್ನು ಗುರಿಯಾಗಿಸಿ 46 ದ್ವೇಷ ಅಪರಾಧಗಳು, ಮೂವರ ಹತ್ಯೆ: APCR ಆತಂಕಕಾರಿ ವರದಿ

ಇತ್ತೀಚಿನ ಬಕ್ರೀದ್ (ಈದ್ ಉಲ್-ಅಧಾ) ಹಬ್ಬದ ಆಚರಣೆಯ ಸಂದರ್ಭದಲ್ಲಿ ದೇಶದ ವಿವಿಧೆಡೆ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ನಡೆದ ಕೋಮು ಕಿರುಕುಳ, ದ್ವೇಷ ಭಾಷಣ ಹಾಗೂ ಹಿಂಸಾಚಾರದ ಘಟನೆಗಳ ಕುರಿತು 'ನಾಗರಿಕ ಹಕ್ಕುಗಳ ರಕ್ಷಣಾ ಸಂಘ'...

ಗ್ರೇಟ್ ನಿಕೋಬಾರ್ : ಕಾರ್ಪೊರೇಟ್ ಹಿತಾಸಕ್ತಿಗೆ ಬಲಿಯಾಗುತ್ತಿರುವ ಪರಿಸರ, ಆದಿವಾಸಿಗಳ ಅಸ್ತಿತ್ವ

ಬಂಗಾಳಕೊಲ್ಲಿಯಲ್ಲಿರುವ ಭಾರತದ ದಕ್ಷಿಣ ತುದಿಯ ದ್ವೀಪದ ಸಮಗ್ರ ಅಭಿವೃದ್ಧಿಯ ಹೆಸರಿನಲ್ಲಿ ಕೇಂದ್ರ ಸರ್ಕಾರ ಬರೋಬ್ಬರಿ 72 ಸಾವಿರದಿಂದ 81 ಸಾವಿರ ಕೋಟಿ ರೂಪಾಯಿ ವೆಚ್ಚದ ’ಗ್ರೇಟ್ ನಿಕೋಬಾರ್ ದ್ವೀಪ ಅಭಿವೃದ್ಧಿ ಯೋಜನೆ’ಯನ್ನು ರೂಪಿಸಿದೆ.ಈ...

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...