Homeಸಿನಿಮಾಕ್ರೀಡೆಕರಾವಳಿ: ಕಂಬಳ ಓಟಕ್ಕೆ ಟ್ರೈನಿಂಗ್ - ಸಿದ್ದಿಗಳಿಗೆ ಪ್ಯಾರಿಸ್ ಒಲಿಂಪಿಕ್ಸ್‌ಗೆ ತರಬೇತಿ

ಕರಾವಳಿ: ಕಂಬಳ ಓಟಕ್ಕೆ ಟ್ರೈನಿಂಗ್ – ಸಿದ್ದಿಗಳಿಗೆ ಪ್ಯಾರಿಸ್ ಒಲಿಂಪಿಕ್ಸ್‌ಗೆ ತರಬೇತಿ

- Advertisement -
- Advertisement -

ಅವಿಭಜಿತ ದಕ್ಷಿಣ ಕನ್ನಡದ ಅಥ್ಲೀಟುಗಳನ್ನು ಕಂಬಳ ಓಟಗಾರರನ್ನಾಗಿ ತರಬೇತುಗೊಳಿಸಲು ಕರಾವಳಿಯ ಕಂಬಳ ಸಮಿತಿ ನಿರ್ಧರಿಸಿದೆ. ಜಿಲ್ಲಾಮಟ್ಟದ ಸ್ಪರ್ಧೆಗಳಲ್ಲಿ ವಿಜೇತರಾಗಿರುವ ಮತ್ತು ಆಸಕ್ತಿ ಇರುವ ಕ್ರೀಡಾಪಟುಗಳಿಗೆ ಕಂಬಳದ ಓಟಗಾರಿಕೆಯನ್ನು ಕಲಿಸಿಕೊಡುವುದು ಕಂಬಳ ಅಕಾಡಮಿಯ ಉದ್ದೇಶವಾಗಿದೆ.

ಈ ತರಬೇತಿ ವಾರಾಂತ್ಯದಲ್ಲಿ ನಡೆಯಲಿದ್ದು, ಮೂಡಬಿದಿರೆ, ಮಿಯಾರು, ಬೈಂದೂರು ಮತ್ತು ಪೈವಳಿಕೆಯಲ್ಲಿ ಶಿಬಿರಗಳು ನಡೆಯಲಿವೆ. ನಿವೃತ್ತ ಕಂಬಳ ಓಟಗಾರರನ್ನು ಕೋಚ್‌ಗಳಾಗಿ ಆರಿಸಲಾಗಿದೆ. ಕೇರಳದ ಆಸಕ್ತರಿಗೂ ತರಬೇತಿ ಕೊಡಲಾಗುತ್ತದೆ. ಅಕ್ಟೋಬರ್‌ನಿಂದ ನಿಯಮಿತವಾಗಿ ಶಿಬಿರಗಳು ನಡೆಯಲಿದ್ದು, ಕೋವಿಡ್ ನಿರ್ಭಂದಗಳಿರುವುದರಿಂದ ಸದ್ಯ ಮೂಡಬಿದುರೆಯಲ್ಲಿ ಮಾತ್ರ ವಾರಾಂತ್ಯದ ಶಿಬಿರ ಕೈಗೊಳ್ಳಲಾಗುತ್ತದೆಂದು ಜಿಲ್ಲಾ ಕಂಬಳ ಸಮಿತಿ ಅಧ್ಯಕ್ಷ ಪಿ.ಆರ್.ಶೆಟ್ಟಿ ತಿಳಿಸಿದ್ದಾರೆ.

ಕಂಬಳ ಸಮಿತಿ ಕೆಲವು ವರ್ಷಗಳ ಹಿಂದೆಯೆ ಇಂಥದೊಂದು ತರಬೇತಿಗೆ ಯೋಜನೆ ಹಾಕಿತ್ತು. ಆದರೆ ಗಾಯದ ಹೆದರಿಕೆಯಿಂದ ಅಥ್ಲೀಟ್‌ಗಳು ಮನಸ್ಸು ಮಾಡಿರಲಿಲ್ಲ. ಸಿಂಥೆಟಿಕ್ ಟ್ರಾಕ್‌ನಲ್ಲಿ ಓಡಿದಂತಲ್ಲ ಕಂಬಳದ ಕೆಸರು ಗದ್ದೆಯಲ್ಲಿ ಓಡುವುದು. ಕೆಸರು ಗದ್ದೆಯ ಓಟ ಕಠಿಣವಾದುದು.

ಮೂಡಬಿದಿರೆಯಲ್ಲಿ ಖ್ಯಾತ ಕಂಬಳ ಓಟಗಾರ ರವಿ ಅಳದಂಗಡಿಯವರ ಮಗ ಗಿರೀಶ್ ಅಥ್ಲೀಟ್‌ಗಳೂ ಸೇರಿದಂತೆ 40 ಮಂದಿಗೆ ಕಂಬಳ ಗದ್ದೆಯಲ್ಲಿ ಓಡುವ ತರಬೇತಿ ನೀಡುತ್ತಿದ್ದಾರೆ. ಈಚೆಗೆ ಕಂಬಳದ ಓಟಗಾರ ಶ್ರೀನಿವಾಸ ಗೌಡ ಮಾಡಿರುವ ಸಾಧನೆ ಮತ್ತು ಅವರನ್ನು ಜಗತ್ತಿನ ಅತಿ ವೇಗದ ಓಟಗಾರ ಉಸೇನ್ ಬೋಲ್ಟ್ ರೊಂದಿಗೆ ಹೋಲಿಸುತ್ತಿರುವುದು ತರುಣರನ್ನು ಕಂಬಳ ಓಟದತ್ತ ಆಕರ್ಷಿಸುತ್ತಿದೆ. ಹೀಗಾಗಿ ಅಥ್ಲೀಟ್‌ಗಳು ಸೇರಿದಂತೆ ಇತರ ಯುವಕರೂ ಕಂಬಳ ಗದ್ದೆಯಲ್ಲಿ ಸಾಧನೆ ಮಾಡುವ ಆಸಕ್ತಿ ತೋರಿಸುತ್ತಿದ್ದಾರೆ.

ಸಿದ್ದಿ ಕಲಿಗಳಿಗೆ ಒಲಿಂಪಿಕ್ಸ್ ಗುರಿ!!

ರಾಜ್ಯ ಕ್ರೀಡಾ ಇಲಾಖೆಯ ಕ್ರೀಡಾ ವಿಜ್ಞಾನ ಕೇಂದ್ರ ಉತ್ತರ ಕನ್ನಡದ ಅಂಕೋಲಾ, ಯಲ್ಲಾಪುರ, ಮುಂಡಗೋಡ ಮತ್ತು ಹಳಿಯಾಳ ತಾಲೂಕಿನ ಸಿದ್ದಿ ಜನಾಂಗದ 24 ಪ್ರತಿಭಾವಂತ ಕ್ರೀಡಾಪಟುಗಳನ್ನು ಅಂತರಾಷ್ಟ್ರೀಯ ಮಟ್ಟದ ತರಬೇತಿಗೆ ಆಯ್ಕೆ ಮಾಡಿದೆ.

ಕ್ರೀಡಾ ಸಾಧನೆಗೆ ಹೇಳಿ ಮಾಡಿಸಿದಂತ ದೈಹಿಕ ಸಾಮರ್ಥ್ಯದ ಆಫ್ರಿಕಾ ಮೂಲದ ಸಿದ್ದಿ ತರುಣ, ತರುಣಿಯರನ್ನು ಹಲವು ಬಾರಿ ಆಯ್ಕೆ ಮಾಡಿ ಬೆಂಗಳೂರಿನ ಕ್ರೀಡಾ ವಸತಿ ನಿಲಯಗಳಿಗೆ ಸೆರಿಸಲಾಗಿತ್ತಾದರೂ ಹೇಳಿಕೊಳ್ಳುವಂತ ಸಾಧನೆಯೇನೂ ಆಗಿಲ್ಲ. ಸರಿಯಾಗಿ ತರಬೇತಿ ಕೊಡದ ಮತ್ತು ಕ್ರೀಡಾಳುಗಳಿಗೆ ಸೌಲಭ್ಯ ಒದಗಿಸದ ಕೀಡಾ ಇಲಾಖೆಯ ವೈಫಲ್ಯವೇ ಇದಕ್ಕೆ ಕಾರಣವೆನ್ನಲಾಗಿದೆ.

ಈಚೆಗೆ ಕ್ರೀಡಾ ಇಲಾಖೆ ಉತ್ತರ ಕನ್ನಡದ 400 ವಿದ್ಯಾರ್ಥಿಗಳನ್ನು ಕ್ರೀಡಾ ಸಾಮರ್ಥ್ಯದ ಪರೀಕ್ಷೆಗೆ ಒಳಪಡಿಸಿತ್ತು. ಇದರಲ್ಲಿ ಸಿದ್ದಿ ಜನಾಂಗದ 24 ಮಂದಿಯಲ್ಲಿ ಕ್ರೀಡಾ ಪ್ರತಿಭೆಯಿರುವುದನ್ನು ಗುರುತಿಸಿದ ಕ್ರೀಡಾ ವಿಜ್ಞಾನ ಕೇಂದ್ರದ ತಂಡ ಅವರನ್ನು ವೈಜ್ಞಾನಿಕವಾಗಿ ಆಯ್ಕೆ ಮಾಡಿದೆ. ಇವರಿಗೆ ಬೇರೆ ಯಾವ ಪರೀಕ್ಷೆಗೂ ಒಳಪಡಿಸದೆ ಬೆಂಗಳೂರಿನ ವಿದ್ಯಾನಗರ ಮತ್ತಿತರೆಡೆ ಇರುವ ಕ್ರೀಡಾ ವಸತಿ ನಿಲಯಗಳಿಗೆ ಪ್ರವೇಶ ನೀಡಲಾಗಿದೆ. ಇವರಿಗೆ ಅಂತರಾಷ್ಟ್ರೀಯ ಮಟ್ಟದ ತರಬೇತಿ ಕೊಟ್ಟು 2024ರ ಪ್ಯಾರಿಸ್ ಒಲಿಂಪಿಕ್ಸ್‌ಗೆ ಸಿದ್ದಪಡಿಸುವ ಗುರಿ ಕ್ರೀಡಾ ಇಲಾಖೆಯದು.

ಈ ಕ್ರೀಡಾ ಪಟುಗಳೊಂದಿಗೆ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಕಳೆದ ಬುಧವಾರ ಸಂವಾದ ನಡೆಸಿದ ಕ್ರೀಡಾ ಮಂತ್ರಿ ಕೆ.ಸಿ ನಾರಾಯಣ ಗೌಡ ಉನ್ನತ ತರಬೇತಿಗೆ ಚಾಲನೆ ನಿಡಿದ್ದಾರೆ.


ಇದನ್ನೂ ಓದಿ: ಅಪ್ಪಂದಿರ ಹೊಲಗಳಲ್ಲಿನ ಪರಿಶ್ರಮ, ಒಲಿಂಪಿಕ್ಸ್‌ನಲ್ಲಿ ಮಕ್ಕಳ ಪ್ರತಿಫಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...