Homeಸಿನಿಮಾಕ್ರೀಡೆಕರಾವಳಿ: ಕಂಬಳ ಓಟಕ್ಕೆ ಟ್ರೈನಿಂಗ್ - ಸಿದ್ದಿಗಳಿಗೆ ಪ್ಯಾರಿಸ್ ಒಲಿಂಪಿಕ್ಸ್‌ಗೆ ತರಬೇತಿ

ಕರಾವಳಿ: ಕಂಬಳ ಓಟಕ್ಕೆ ಟ್ರೈನಿಂಗ್ – ಸಿದ್ದಿಗಳಿಗೆ ಪ್ಯಾರಿಸ್ ಒಲಿಂಪಿಕ್ಸ್‌ಗೆ ತರಬೇತಿ

- Advertisement -
- Advertisement -

ಅವಿಭಜಿತ ದಕ್ಷಿಣ ಕನ್ನಡದ ಅಥ್ಲೀಟುಗಳನ್ನು ಕಂಬಳ ಓಟಗಾರರನ್ನಾಗಿ ತರಬೇತುಗೊಳಿಸಲು ಕರಾವಳಿಯ ಕಂಬಳ ಸಮಿತಿ ನಿರ್ಧರಿಸಿದೆ. ಜಿಲ್ಲಾಮಟ್ಟದ ಸ್ಪರ್ಧೆಗಳಲ್ಲಿ ವಿಜೇತರಾಗಿರುವ ಮತ್ತು ಆಸಕ್ತಿ ಇರುವ ಕ್ರೀಡಾಪಟುಗಳಿಗೆ ಕಂಬಳದ ಓಟಗಾರಿಕೆಯನ್ನು ಕಲಿಸಿಕೊಡುವುದು ಕಂಬಳ ಅಕಾಡಮಿಯ ಉದ್ದೇಶವಾಗಿದೆ.

ಈ ತರಬೇತಿ ವಾರಾಂತ್ಯದಲ್ಲಿ ನಡೆಯಲಿದ್ದು, ಮೂಡಬಿದಿರೆ, ಮಿಯಾರು, ಬೈಂದೂರು ಮತ್ತು ಪೈವಳಿಕೆಯಲ್ಲಿ ಶಿಬಿರಗಳು ನಡೆಯಲಿವೆ. ನಿವೃತ್ತ ಕಂಬಳ ಓಟಗಾರರನ್ನು ಕೋಚ್‌ಗಳಾಗಿ ಆರಿಸಲಾಗಿದೆ. ಕೇರಳದ ಆಸಕ್ತರಿಗೂ ತರಬೇತಿ ಕೊಡಲಾಗುತ್ತದೆ. ಅಕ್ಟೋಬರ್‌ನಿಂದ ನಿಯಮಿತವಾಗಿ ಶಿಬಿರಗಳು ನಡೆಯಲಿದ್ದು, ಕೋವಿಡ್ ನಿರ್ಭಂದಗಳಿರುವುದರಿಂದ ಸದ್ಯ ಮೂಡಬಿದುರೆಯಲ್ಲಿ ಮಾತ್ರ ವಾರಾಂತ್ಯದ ಶಿಬಿರ ಕೈಗೊಳ್ಳಲಾಗುತ್ತದೆಂದು ಜಿಲ್ಲಾ ಕಂಬಳ ಸಮಿತಿ ಅಧ್ಯಕ್ಷ ಪಿ.ಆರ್.ಶೆಟ್ಟಿ ತಿಳಿಸಿದ್ದಾರೆ.

ಕಂಬಳ ಸಮಿತಿ ಕೆಲವು ವರ್ಷಗಳ ಹಿಂದೆಯೆ ಇಂಥದೊಂದು ತರಬೇತಿಗೆ ಯೋಜನೆ ಹಾಕಿತ್ತು. ಆದರೆ ಗಾಯದ ಹೆದರಿಕೆಯಿಂದ ಅಥ್ಲೀಟ್‌ಗಳು ಮನಸ್ಸು ಮಾಡಿರಲಿಲ್ಲ. ಸಿಂಥೆಟಿಕ್ ಟ್ರಾಕ್‌ನಲ್ಲಿ ಓಡಿದಂತಲ್ಲ ಕಂಬಳದ ಕೆಸರು ಗದ್ದೆಯಲ್ಲಿ ಓಡುವುದು. ಕೆಸರು ಗದ್ದೆಯ ಓಟ ಕಠಿಣವಾದುದು.

ಮೂಡಬಿದಿರೆಯಲ್ಲಿ ಖ್ಯಾತ ಕಂಬಳ ಓಟಗಾರ ರವಿ ಅಳದಂಗಡಿಯವರ ಮಗ ಗಿರೀಶ್ ಅಥ್ಲೀಟ್‌ಗಳೂ ಸೇರಿದಂತೆ 40 ಮಂದಿಗೆ ಕಂಬಳ ಗದ್ದೆಯಲ್ಲಿ ಓಡುವ ತರಬೇತಿ ನೀಡುತ್ತಿದ್ದಾರೆ. ಈಚೆಗೆ ಕಂಬಳದ ಓಟಗಾರ ಶ್ರೀನಿವಾಸ ಗೌಡ ಮಾಡಿರುವ ಸಾಧನೆ ಮತ್ತು ಅವರನ್ನು ಜಗತ್ತಿನ ಅತಿ ವೇಗದ ಓಟಗಾರ ಉಸೇನ್ ಬೋಲ್ಟ್ ರೊಂದಿಗೆ ಹೋಲಿಸುತ್ತಿರುವುದು ತರುಣರನ್ನು ಕಂಬಳ ಓಟದತ್ತ ಆಕರ್ಷಿಸುತ್ತಿದೆ. ಹೀಗಾಗಿ ಅಥ್ಲೀಟ್‌ಗಳು ಸೇರಿದಂತೆ ಇತರ ಯುವಕರೂ ಕಂಬಳ ಗದ್ದೆಯಲ್ಲಿ ಸಾಧನೆ ಮಾಡುವ ಆಸಕ್ತಿ ತೋರಿಸುತ್ತಿದ್ದಾರೆ.

ಸಿದ್ದಿ ಕಲಿಗಳಿಗೆ ಒಲಿಂಪಿಕ್ಸ್ ಗುರಿ!!

ರಾಜ್ಯ ಕ್ರೀಡಾ ಇಲಾಖೆಯ ಕ್ರೀಡಾ ವಿಜ್ಞಾನ ಕೇಂದ್ರ ಉತ್ತರ ಕನ್ನಡದ ಅಂಕೋಲಾ, ಯಲ್ಲಾಪುರ, ಮುಂಡಗೋಡ ಮತ್ತು ಹಳಿಯಾಳ ತಾಲೂಕಿನ ಸಿದ್ದಿ ಜನಾಂಗದ 24 ಪ್ರತಿಭಾವಂತ ಕ್ರೀಡಾಪಟುಗಳನ್ನು ಅಂತರಾಷ್ಟ್ರೀಯ ಮಟ್ಟದ ತರಬೇತಿಗೆ ಆಯ್ಕೆ ಮಾಡಿದೆ.

ಕ್ರೀಡಾ ಸಾಧನೆಗೆ ಹೇಳಿ ಮಾಡಿಸಿದಂತ ದೈಹಿಕ ಸಾಮರ್ಥ್ಯದ ಆಫ್ರಿಕಾ ಮೂಲದ ಸಿದ್ದಿ ತರುಣ, ತರುಣಿಯರನ್ನು ಹಲವು ಬಾರಿ ಆಯ್ಕೆ ಮಾಡಿ ಬೆಂಗಳೂರಿನ ಕ್ರೀಡಾ ವಸತಿ ನಿಲಯಗಳಿಗೆ ಸೆರಿಸಲಾಗಿತ್ತಾದರೂ ಹೇಳಿಕೊಳ್ಳುವಂತ ಸಾಧನೆಯೇನೂ ಆಗಿಲ್ಲ. ಸರಿಯಾಗಿ ತರಬೇತಿ ಕೊಡದ ಮತ್ತು ಕ್ರೀಡಾಳುಗಳಿಗೆ ಸೌಲಭ್ಯ ಒದಗಿಸದ ಕೀಡಾ ಇಲಾಖೆಯ ವೈಫಲ್ಯವೇ ಇದಕ್ಕೆ ಕಾರಣವೆನ್ನಲಾಗಿದೆ.

ಈಚೆಗೆ ಕ್ರೀಡಾ ಇಲಾಖೆ ಉತ್ತರ ಕನ್ನಡದ 400 ವಿದ್ಯಾರ್ಥಿಗಳನ್ನು ಕ್ರೀಡಾ ಸಾಮರ್ಥ್ಯದ ಪರೀಕ್ಷೆಗೆ ಒಳಪಡಿಸಿತ್ತು. ಇದರಲ್ಲಿ ಸಿದ್ದಿ ಜನಾಂಗದ 24 ಮಂದಿಯಲ್ಲಿ ಕ್ರೀಡಾ ಪ್ರತಿಭೆಯಿರುವುದನ್ನು ಗುರುತಿಸಿದ ಕ್ರೀಡಾ ವಿಜ್ಞಾನ ಕೇಂದ್ರದ ತಂಡ ಅವರನ್ನು ವೈಜ್ಞಾನಿಕವಾಗಿ ಆಯ್ಕೆ ಮಾಡಿದೆ. ಇವರಿಗೆ ಬೇರೆ ಯಾವ ಪರೀಕ್ಷೆಗೂ ಒಳಪಡಿಸದೆ ಬೆಂಗಳೂರಿನ ವಿದ್ಯಾನಗರ ಮತ್ತಿತರೆಡೆ ಇರುವ ಕ್ರೀಡಾ ವಸತಿ ನಿಲಯಗಳಿಗೆ ಪ್ರವೇಶ ನೀಡಲಾಗಿದೆ. ಇವರಿಗೆ ಅಂತರಾಷ್ಟ್ರೀಯ ಮಟ್ಟದ ತರಬೇತಿ ಕೊಟ್ಟು 2024ರ ಪ್ಯಾರಿಸ್ ಒಲಿಂಪಿಕ್ಸ್‌ಗೆ ಸಿದ್ದಪಡಿಸುವ ಗುರಿ ಕ್ರೀಡಾ ಇಲಾಖೆಯದು.

ಈ ಕ್ರೀಡಾ ಪಟುಗಳೊಂದಿಗೆ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಕಳೆದ ಬುಧವಾರ ಸಂವಾದ ನಡೆಸಿದ ಕ್ರೀಡಾ ಮಂತ್ರಿ ಕೆ.ಸಿ ನಾರಾಯಣ ಗೌಡ ಉನ್ನತ ತರಬೇತಿಗೆ ಚಾಲನೆ ನಿಡಿದ್ದಾರೆ.


ಇದನ್ನೂ ಓದಿ: ಅಪ್ಪಂದಿರ ಹೊಲಗಳಲ್ಲಿನ ಪರಿಶ್ರಮ, ಒಲಿಂಪಿಕ್ಸ್‌ನಲ್ಲಿ ಮಕ್ಕಳ ಪ್ರತಿಫಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...