Homeಸಿನಿಮಾಕ್ರೀಡೆಕರಾವಳಿ: ಕಂಬಳ ಓಟಕ್ಕೆ ಟ್ರೈನಿಂಗ್ - ಸಿದ್ದಿಗಳಿಗೆ ಪ್ಯಾರಿಸ್ ಒಲಿಂಪಿಕ್ಸ್‌ಗೆ ತರಬೇತಿ

ಕರಾವಳಿ: ಕಂಬಳ ಓಟಕ್ಕೆ ಟ್ರೈನಿಂಗ್ – ಸಿದ್ದಿಗಳಿಗೆ ಪ್ಯಾರಿಸ್ ಒಲಿಂಪಿಕ್ಸ್‌ಗೆ ತರಬೇತಿ

- Advertisement -
- Advertisement -

ಅವಿಭಜಿತ ದಕ್ಷಿಣ ಕನ್ನಡದ ಅಥ್ಲೀಟುಗಳನ್ನು ಕಂಬಳ ಓಟಗಾರರನ್ನಾಗಿ ತರಬೇತುಗೊಳಿಸಲು ಕರಾವಳಿಯ ಕಂಬಳ ಸಮಿತಿ ನಿರ್ಧರಿಸಿದೆ. ಜಿಲ್ಲಾಮಟ್ಟದ ಸ್ಪರ್ಧೆಗಳಲ್ಲಿ ವಿಜೇತರಾಗಿರುವ ಮತ್ತು ಆಸಕ್ತಿ ಇರುವ ಕ್ರೀಡಾಪಟುಗಳಿಗೆ ಕಂಬಳದ ಓಟಗಾರಿಕೆಯನ್ನು ಕಲಿಸಿಕೊಡುವುದು ಕಂಬಳ ಅಕಾಡಮಿಯ ಉದ್ದೇಶವಾಗಿದೆ.

ಈ ತರಬೇತಿ ವಾರಾಂತ್ಯದಲ್ಲಿ ನಡೆಯಲಿದ್ದು, ಮೂಡಬಿದಿರೆ, ಮಿಯಾರು, ಬೈಂದೂರು ಮತ್ತು ಪೈವಳಿಕೆಯಲ್ಲಿ ಶಿಬಿರಗಳು ನಡೆಯಲಿವೆ. ನಿವೃತ್ತ ಕಂಬಳ ಓಟಗಾರರನ್ನು ಕೋಚ್‌ಗಳಾಗಿ ಆರಿಸಲಾಗಿದೆ. ಕೇರಳದ ಆಸಕ್ತರಿಗೂ ತರಬೇತಿ ಕೊಡಲಾಗುತ್ತದೆ. ಅಕ್ಟೋಬರ್‌ನಿಂದ ನಿಯಮಿತವಾಗಿ ಶಿಬಿರಗಳು ನಡೆಯಲಿದ್ದು, ಕೋವಿಡ್ ನಿರ್ಭಂದಗಳಿರುವುದರಿಂದ ಸದ್ಯ ಮೂಡಬಿದುರೆಯಲ್ಲಿ ಮಾತ್ರ ವಾರಾಂತ್ಯದ ಶಿಬಿರ ಕೈಗೊಳ್ಳಲಾಗುತ್ತದೆಂದು ಜಿಲ್ಲಾ ಕಂಬಳ ಸಮಿತಿ ಅಧ್ಯಕ್ಷ ಪಿ.ಆರ್.ಶೆಟ್ಟಿ ತಿಳಿಸಿದ್ದಾರೆ.

ಕಂಬಳ ಸಮಿತಿ ಕೆಲವು ವರ್ಷಗಳ ಹಿಂದೆಯೆ ಇಂಥದೊಂದು ತರಬೇತಿಗೆ ಯೋಜನೆ ಹಾಕಿತ್ತು. ಆದರೆ ಗಾಯದ ಹೆದರಿಕೆಯಿಂದ ಅಥ್ಲೀಟ್‌ಗಳು ಮನಸ್ಸು ಮಾಡಿರಲಿಲ್ಲ. ಸಿಂಥೆಟಿಕ್ ಟ್ರಾಕ್‌ನಲ್ಲಿ ಓಡಿದಂತಲ್ಲ ಕಂಬಳದ ಕೆಸರು ಗದ್ದೆಯಲ್ಲಿ ಓಡುವುದು. ಕೆಸರು ಗದ್ದೆಯ ಓಟ ಕಠಿಣವಾದುದು.

ಮೂಡಬಿದಿರೆಯಲ್ಲಿ ಖ್ಯಾತ ಕಂಬಳ ಓಟಗಾರ ರವಿ ಅಳದಂಗಡಿಯವರ ಮಗ ಗಿರೀಶ್ ಅಥ್ಲೀಟ್‌ಗಳೂ ಸೇರಿದಂತೆ 40 ಮಂದಿಗೆ ಕಂಬಳ ಗದ್ದೆಯಲ್ಲಿ ಓಡುವ ತರಬೇತಿ ನೀಡುತ್ತಿದ್ದಾರೆ. ಈಚೆಗೆ ಕಂಬಳದ ಓಟಗಾರ ಶ್ರೀನಿವಾಸ ಗೌಡ ಮಾಡಿರುವ ಸಾಧನೆ ಮತ್ತು ಅವರನ್ನು ಜಗತ್ತಿನ ಅತಿ ವೇಗದ ಓಟಗಾರ ಉಸೇನ್ ಬೋಲ್ಟ್ ರೊಂದಿಗೆ ಹೋಲಿಸುತ್ತಿರುವುದು ತರುಣರನ್ನು ಕಂಬಳ ಓಟದತ್ತ ಆಕರ್ಷಿಸುತ್ತಿದೆ. ಹೀಗಾಗಿ ಅಥ್ಲೀಟ್‌ಗಳು ಸೇರಿದಂತೆ ಇತರ ಯುವಕರೂ ಕಂಬಳ ಗದ್ದೆಯಲ್ಲಿ ಸಾಧನೆ ಮಾಡುವ ಆಸಕ್ತಿ ತೋರಿಸುತ್ತಿದ್ದಾರೆ.

ಸಿದ್ದಿ ಕಲಿಗಳಿಗೆ ಒಲಿಂಪಿಕ್ಸ್ ಗುರಿ!!

ರಾಜ್ಯ ಕ್ರೀಡಾ ಇಲಾಖೆಯ ಕ್ರೀಡಾ ವಿಜ್ಞಾನ ಕೇಂದ್ರ ಉತ್ತರ ಕನ್ನಡದ ಅಂಕೋಲಾ, ಯಲ್ಲಾಪುರ, ಮುಂಡಗೋಡ ಮತ್ತು ಹಳಿಯಾಳ ತಾಲೂಕಿನ ಸಿದ್ದಿ ಜನಾಂಗದ 24 ಪ್ರತಿಭಾವಂತ ಕ್ರೀಡಾಪಟುಗಳನ್ನು ಅಂತರಾಷ್ಟ್ರೀಯ ಮಟ್ಟದ ತರಬೇತಿಗೆ ಆಯ್ಕೆ ಮಾಡಿದೆ.

ಕ್ರೀಡಾ ಸಾಧನೆಗೆ ಹೇಳಿ ಮಾಡಿಸಿದಂತ ದೈಹಿಕ ಸಾಮರ್ಥ್ಯದ ಆಫ್ರಿಕಾ ಮೂಲದ ಸಿದ್ದಿ ತರುಣ, ತರುಣಿಯರನ್ನು ಹಲವು ಬಾರಿ ಆಯ್ಕೆ ಮಾಡಿ ಬೆಂಗಳೂರಿನ ಕ್ರೀಡಾ ವಸತಿ ನಿಲಯಗಳಿಗೆ ಸೆರಿಸಲಾಗಿತ್ತಾದರೂ ಹೇಳಿಕೊಳ್ಳುವಂತ ಸಾಧನೆಯೇನೂ ಆಗಿಲ್ಲ. ಸರಿಯಾಗಿ ತರಬೇತಿ ಕೊಡದ ಮತ್ತು ಕ್ರೀಡಾಳುಗಳಿಗೆ ಸೌಲಭ್ಯ ಒದಗಿಸದ ಕೀಡಾ ಇಲಾಖೆಯ ವೈಫಲ್ಯವೇ ಇದಕ್ಕೆ ಕಾರಣವೆನ್ನಲಾಗಿದೆ.

ಈಚೆಗೆ ಕ್ರೀಡಾ ಇಲಾಖೆ ಉತ್ತರ ಕನ್ನಡದ 400 ವಿದ್ಯಾರ್ಥಿಗಳನ್ನು ಕ್ರೀಡಾ ಸಾಮರ್ಥ್ಯದ ಪರೀಕ್ಷೆಗೆ ಒಳಪಡಿಸಿತ್ತು. ಇದರಲ್ಲಿ ಸಿದ್ದಿ ಜನಾಂಗದ 24 ಮಂದಿಯಲ್ಲಿ ಕ್ರೀಡಾ ಪ್ರತಿಭೆಯಿರುವುದನ್ನು ಗುರುತಿಸಿದ ಕ್ರೀಡಾ ವಿಜ್ಞಾನ ಕೇಂದ್ರದ ತಂಡ ಅವರನ್ನು ವೈಜ್ಞಾನಿಕವಾಗಿ ಆಯ್ಕೆ ಮಾಡಿದೆ. ಇವರಿಗೆ ಬೇರೆ ಯಾವ ಪರೀಕ್ಷೆಗೂ ಒಳಪಡಿಸದೆ ಬೆಂಗಳೂರಿನ ವಿದ್ಯಾನಗರ ಮತ್ತಿತರೆಡೆ ಇರುವ ಕ್ರೀಡಾ ವಸತಿ ನಿಲಯಗಳಿಗೆ ಪ್ರವೇಶ ನೀಡಲಾಗಿದೆ. ಇವರಿಗೆ ಅಂತರಾಷ್ಟ್ರೀಯ ಮಟ್ಟದ ತರಬೇತಿ ಕೊಟ್ಟು 2024ರ ಪ್ಯಾರಿಸ್ ಒಲಿಂಪಿಕ್ಸ್‌ಗೆ ಸಿದ್ದಪಡಿಸುವ ಗುರಿ ಕ್ರೀಡಾ ಇಲಾಖೆಯದು.

ಈ ಕ್ರೀಡಾ ಪಟುಗಳೊಂದಿಗೆ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಕಳೆದ ಬುಧವಾರ ಸಂವಾದ ನಡೆಸಿದ ಕ್ರೀಡಾ ಮಂತ್ರಿ ಕೆ.ಸಿ ನಾರಾಯಣ ಗೌಡ ಉನ್ನತ ತರಬೇತಿಗೆ ಚಾಲನೆ ನಿಡಿದ್ದಾರೆ.


ಇದನ್ನೂ ಓದಿ: ಅಪ್ಪಂದಿರ ಹೊಲಗಳಲ್ಲಿನ ಪರಿಶ್ರಮ, ಒಲಿಂಪಿಕ್ಸ್‌ನಲ್ಲಿ ಮಕ್ಕಳ ಪ್ರತಿಫಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...