Homeಸಿನಿಮಾಕ್ರೀಡೆಕರಾವಳಿ: ಕಂಬಳ ಓಟಕ್ಕೆ ಟ್ರೈನಿಂಗ್ - ಸಿದ್ದಿಗಳಿಗೆ ಪ್ಯಾರಿಸ್ ಒಲಿಂಪಿಕ್ಸ್‌ಗೆ ತರಬೇತಿ

ಕರಾವಳಿ: ಕಂಬಳ ಓಟಕ್ಕೆ ಟ್ರೈನಿಂಗ್ – ಸಿದ್ದಿಗಳಿಗೆ ಪ್ಯಾರಿಸ್ ಒಲಿಂಪಿಕ್ಸ್‌ಗೆ ತರಬೇತಿ

- Advertisement -
- Advertisement -

ಅವಿಭಜಿತ ದಕ್ಷಿಣ ಕನ್ನಡದ ಅಥ್ಲೀಟುಗಳನ್ನು ಕಂಬಳ ಓಟಗಾರರನ್ನಾಗಿ ತರಬೇತುಗೊಳಿಸಲು ಕರಾವಳಿಯ ಕಂಬಳ ಸಮಿತಿ ನಿರ್ಧರಿಸಿದೆ. ಜಿಲ್ಲಾಮಟ್ಟದ ಸ್ಪರ್ಧೆಗಳಲ್ಲಿ ವಿಜೇತರಾಗಿರುವ ಮತ್ತು ಆಸಕ್ತಿ ಇರುವ ಕ್ರೀಡಾಪಟುಗಳಿಗೆ ಕಂಬಳದ ಓಟಗಾರಿಕೆಯನ್ನು ಕಲಿಸಿಕೊಡುವುದು ಕಂಬಳ ಅಕಾಡಮಿಯ ಉದ್ದೇಶವಾಗಿದೆ.

ಈ ತರಬೇತಿ ವಾರಾಂತ್ಯದಲ್ಲಿ ನಡೆಯಲಿದ್ದು, ಮೂಡಬಿದಿರೆ, ಮಿಯಾರು, ಬೈಂದೂರು ಮತ್ತು ಪೈವಳಿಕೆಯಲ್ಲಿ ಶಿಬಿರಗಳು ನಡೆಯಲಿವೆ. ನಿವೃತ್ತ ಕಂಬಳ ಓಟಗಾರರನ್ನು ಕೋಚ್‌ಗಳಾಗಿ ಆರಿಸಲಾಗಿದೆ. ಕೇರಳದ ಆಸಕ್ತರಿಗೂ ತರಬೇತಿ ಕೊಡಲಾಗುತ್ತದೆ. ಅಕ್ಟೋಬರ್‌ನಿಂದ ನಿಯಮಿತವಾಗಿ ಶಿಬಿರಗಳು ನಡೆಯಲಿದ್ದು, ಕೋವಿಡ್ ನಿರ್ಭಂದಗಳಿರುವುದರಿಂದ ಸದ್ಯ ಮೂಡಬಿದುರೆಯಲ್ಲಿ ಮಾತ್ರ ವಾರಾಂತ್ಯದ ಶಿಬಿರ ಕೈಗೊಳ್ಳಲಾಗುತ್ತದೆಂದು ಜಿಲ್ಲಾ ಕಂಬಳ ಸಮಿತಿ ಅಧ್ಯಕ್ಷ ಪಿ.ಆರ್.ಶೆಟ್ಟಿ ತಿಳಿಸಿದ್ದಾರೆ.

ಕಂಬಳ ಸಮಿತಿ ಕೆಲವು ವರ್ಷಗಳ ಹಿಂದೆಯೆ ಇಂಥದೊಂದು ತರಬೇತಿಗೆ ಯೋಜನೆ ಹಾಕಿತ್ತು. ಆದರೆ ಗಾಯದ ಹೆದರಿಕೆಯಿಂದ ಅಥ್ಲೀಟ್‌ಗಳು ಮನಸ್ಸು ಮಾಡಿರಲಿಲ್ಲ. ಸಿಂಥೆಟಿಕ್ ಟ್ರಾಕ್‌ನಲ್ಲಿ ಓಡಿದಂತಲ್ಲ ಕಂಬಳದ ಕೆಸರು ಗದ್ದೆಯಲ್ಲಿ ಓಡುವುದು. ಕೆಸರು ಗದ್ದೆಯ ಓಟ ಕಠಿಣವಾದುದು.

ಮೂಡಬಿದಿರೆಯಲ್ಲಿ ಖ್ಯಾತ ಕಂಬಳ ಓಟಗಾರ ರವಿ ಅಳದಂಗಡಿಯವರ ಮಗ ಗಿರೀಶ್ ಅಥ್ಲೀಟ್‌ಗಳೂ ಸೇರಿದಂತೆ 40 ಮಂದಿಗೆ ಕಂಬಳ ಗದ್ದೆಯಲ್ಲಿ ಓಡುವ ತರಬೇತಿ ನೀಡುತ್ತಿದ್ದಾರೆ. ಈಚೆಗೆ ಕಂಬಳದ ಓಟಗಾರ ಶ್ರೀನಿವಾಸ ಗೌಡ ಮಾಡಿರುವ ಸಾಧನೆ ಮತ್ತು ಅವರನ್ನು ಜಗತ್ತಿನ ಅತಿ ವೇಗದ ಓಟಗಾರ ಉಸೇನ್ ಬೋಲ್ಟ್ ರೊಂದಿಗೆ ಹೋಲಿಸುತ್ತಿರುವುದು ತರುಣರನ್ನು ಕಂಬಳ ಓಟದತ್ತ ಆಕರ್ಷಿಸುತ್ತಿದೆ. ಹೀಗಾಗಿ ಅಥ್ಲೀಟ್‌ಗಳು ಸೇರಿದಂತೆ ಇತರ ಯುವಕರೂ ಕಂಬಳ ಗದ್ದೆಯಲ್ಲಿ ಸಾಧನೆ ಮಾಡುವ ಆಸಕ್ತಿ ತೋರಿಸುತ್ತಿದ್ದಾರೆ.

ಸಿದ್ದಿ ಕಲಿಗಳಿಗೆ ಒಲಿಂಪಿಕ್ಸ್ ಗುರಿ!!

ರಾಜ್ಯ ಕ್ರೀಡಾ ಇಲಾಖೆಯ ಕ್ರೀಡಾ ವಿಜ್ಞಾನ ಕೇಂದ್ರ ಉತ್ತರ ಕನ್ನಡದ ಅಂಕೋಲಾ, ಯಲ್ಲಾಪುರ, ಮುಂಡಗೋಡ ಮತ್ತು ಹಳಿಯಾಳ ತಾಲೂಕಿನ ಸಿದ್ದಿ ಜನಾಂಗದ 24 ಪ್ರತಿಭಾವಂತ ಕ್ರೀಡಾಪಟುಗಳನ್ನು ಅಂತರಾಷ್ಟ್ರೀಯ ಮಟ್ಟದ ತರಬೇತಿಗೆ ಆಯ್ಕೆ ಮಾಡಿದೆ.

ಕ್ರೀಡಾ ಸಾಧನೆಗೆ ಹೇಳಿ ಮಾಡಿಸಿದಂತ ದೈಹಿಕ ಸಾಮರ್ಥ್ಯದ ಆಫ್ರಿಕಾ ಮೂಲದ ಸಿದ್ದಿ ತರುಣ, ತರುಣಿಯರನ್ನು ಹಲವು ಬಾರಿ ಆಯ್ಕೆ ಮಾಡಿ ಬೆಂಗಳೂರಿನ ಕ್ರೀಡಾ ವಸತಿ ನಿಲಯಗಳಿಗೆ ಸೆರಿಸಲಾಗಿತ್ತಾದರೂ ಹೇಳಿಕೊಳ್ಳುವಂತ ಸಾಧನೆಯೇನೂ ಆಗಿಲ್ಲ. ಸರಿಯಾಗಿ ತರಬೇತಿ ಕೊಡದ ಮತ್ತು ಕ್ರೀಡಾಳುಗಳಿಗೆ ಸೌಲಭ್ಯ ಒದಗಿಸದ ಕೀಡಾ ಇಲಾಖೆಯ ವೈಫಲ್ಯವೇ ಇದಕ್ಕೆ ಕಾರಣವೆನ್ನಲಾಗಿದೆ.

ಈಚೆಗೆ ಕ್ರೀಡಾ ಇಲಾಖೆ ಉತ್ತರ ಕನ್ನಡದ 400 ವಿದ್ಯಾರ್ಥಿಗಳನ್ನು ಕ್ರೀಡಾ ಸಾಮರ್ಥ್ಯದ ಪರೀಕ್ಷೆಗೆ ಒಳಪಡಿಸಿತ್ತು. ಇದರಲ್ಲಿ ಸಿದ್ದಿ ಜನಾಂಗದ 24 ಮಂದಿಯಲ್ಲಿ ಕ್ರೀಡಾ ಪ್ರತಿಭೆಯಿರುವುದನ್ನು ಗುರುತಿಸಿದ ಕ್ರೀಡಾ ವಿಜ್ಞಾನ ಕೇಂದ್ರದ ತಂಡ ಅವರನ್ನು ವೈಜ್ಞಾನಿಕವಾಗಿ ಆಯ್ಕೆ ಮಾಡಿದೆ. ಇವರಿಗೆ ಬೇರೆ ಯಾವ ಪರೀಕ್ಷೆಗೂ ಒಳಪಡಿಸದೆ ಬೆಂಗಳೂರಿನ ವಿದ್ಯಾನಗರ ಮತ್ತಿತರೆಡೆ ಇರುವ ಕ್ರೀಡಾ ವಸತಿ ನಿಲಯಗಳಿಗೆ ಪ್ರವೇಶ ನೀಡಲಾಗಿದೆ. ಇವರಿಗೆ ಅಂತರಾಷ್ಟ್ರೀಯ ಮಟ್ಟದ ತರಬೇತಿ ಕೊಟ್ಟು 2024ರ ಪ್ಯಾರಿಸ್ ಒಲಿಂಪಿಕ್ಸ್‌ಗೆ ಸಿದ್ದಪಡಿಸುವ ಗುರಿ ಕ್ರೀಡಾ ಇಲಾಖೆಯದು.

ಈ ಕ್ರೀಡಾ ಪಟುಗಳೊಂದಿಗೆ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಕಳೆದ ಬುಧವಾರ ಸಂವಾದ ನಡೆಸಿದ ಕ್ರೀಡಾ ಮಂತ್ರಿ ಕೆ.ಸಿ ನಾರಾಯಣ ಗೌಡ ಉನ್ನತ ತರಬೇತಿಗೆ ಚಾಲನೆ ನಿಡಿದ್ದಾರೆ.


ಇದನ್ನೂ ಓದಿ: ಅಪ್ಪಂದಿರ ಹೊಲಗಳಲ್ಲಿನ ಪರಿಶ್ರಮ, ಒಲಿಂಪಿಕ್ಸ್‌ನಲ್ಲಿ ಮಕ್ಕಳ ಪ್ರತಿಫಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...