Homeಸಿನಿಮಾಕ್ರೀಡೆಕರಾವಳಿ: ಕಂಬಳ ಓಟಕ್ಕೆ ಟ್ರೈನಿಂಗ್ - ಸಿದ್ದಿಗಳಿಗೆ ಪ್ಯಾರಿಸ್ ಒಲಿಂಪಿಕ್ಸ್‌ಗೆ ತರಬೇತಿ

ಕರಾವಳಿ: ಕಂಬಳ ಓಟಕ್ಕೆ ಟ್ರೈನಿಂಗ್ – ಸಿದ್ದಿಗಳಿಗೆ ಪ್ಯಾರಿಸ್ ಒಲಿಂಪಿಕ್ಸ್‌ಗೆ ತರಬೇತಿ

- Advertisement -
- Advertisement -

ಅವಿಭಜಿತ ದಕ್ಷಿಣ ಕನ್ನಡದ ಅಥ್ಲೀಟುಗಳನ್ನು ಕಂಬಳ ಓಟಗಾರರನ್ನಾಗಿ ತರಬೇತುಗೊಳಿಸಲು ಕರಾವಳಿಯ ಕಂಬಳ ಸಮಿತಿ ನಿರ್ಧರಿಸಿದೆ. ಜಿಲ್ಲಾಮಟ್ಟದ ಸ್ಪರ್ಧೆಗಳಲ್ಲಿ ವಿಜೇತರಾಗಿರುವ ಮತ್ತು ಆಸಕ್ತಿ ಇರುವ ಕ್ರೀಡಾಪಟುಗಳಿಗೆ ಕಂಬಳದ ಓಟಗಾರಿಕೆಯನ್ನು ಕಲಿಸಿಕೊಡುವುದು ಕಂಬಳ ಅಕಾಡಮಿಯ ಉದ್ದೇಶವಾಗಿದೆ.

ಈ ತರಬೇತಿ ವಾರಾಂತ್ಯದಲ್ಲಿ ನಡೆಯಲಿದ್ದು, ಮೂಡಬಿದಿರೆ, ಮಿಯಾರು, ಬೈಂದೂರು ಮತ್ತು ಪೈವಳಿಕೆಯಲ್ಲಿ ಶಿಬಿರಗಳು ನಡೆಯಲಿವೆ. ನಿವೃತ್ತ ಕಂಬಳ ಓಟಗಾರರನ್ನು ಕೋಚ್‌ಗಳಾಗಿ ಆರಿಸಲಾಗಿದೆ. ಕೇರಳದ ಆಸಕ್ತರಿಗೂ ತರಬೇತಿ ಕೊಡಲಾಗುತ್ತದೆ. ಅಕ್ಟೋಬರ್‌ನಿಂದ ನಿಯಮಿತವಾಗಿ ಶಿಬಿರಗಳು ನಡೆಯಲಿದ್ದು, ಕೋವಿಡ್ ನಿರ್ಭಂದಗಳಿರುವುದರಿಂದ ಸದ್ಯ ಮೂಡಬಿದುರೆಯಲ್ಲಿ ಮಾತ್ರ ವಾರಾಂತ್ಯದ ಶಿಬಿರ ಕೈಗೊಳ್ಳಲಾಗುತ್ತದೆಂದು ಜಿಲ್ಲಾ ಕಂಬಳ ಸಮಿತಿ ಅಧ್ಯಕ್ಷ ಪಿ.ಆರ್.ಶೆಟ್ಟಿ ತಿಳಿಸಿದ್ದಾರೆ.

ಕಂಬಳ ಸಮಿತಿ ಕೆಲವು ವರ್ಷಗಳ ಹಿಂದೆಯೆ ಇಂಥದೊಂದು ತರಬೇತಿಗೆ ಯೋಜನೆ ಹಾಕಿತ್ತು. ಆದರೆ ಗಾಯದ ಹೆದರಿಕೆಯಿಂದ ಅಥ್ಲೀಟ್‌ಗಳು ಮನಸ್ಸು ಮಾಡಿರಲಿಲ್ಲ. ಸಿಂಥೆಟಿಕ್ ಟ್ರಾಕ್‌ನಲ್ಲಿ ಓಡಿದಂತಲ್ಲ ಕಂಬಳದ ಕೆಸರು ಗದ್ದೆಯಲ್ಲಿ ಓಡುವುದು. ಕೆಸರು ಗದ್ದೆಯ ಓಟ ಕಠಿಣವಾದುದು.

ಮೂಡಬಿದಿರೆಯಲ್ಲಿ ಖ್ಯಾತ ಕಂಬಳ ಓಟಗಾರ ರವಿ ಅಳದಂಗಡಿಯವರ ಮಗ ಗಿರೀಶ್ ಅಥ್ಲೀಟ್‌ಗಳೂ ಸೇರಿದಂತೆ 40 ಮಂದಿಗೆ ಕಂಬಳ ಗದ್ದೆಯಲ್ಲಿ ಓಡುವ ತರಬೇತಿ ನೀಡುತ್ತಿದ್ದಾರೆ. ಈಚೆಗೆ ಕಂಬಳದ ಓಟಗಾರ ಶ್ರೀನಿವಾಸ ಗೌಡ ಮಾಡಿರುವ ಸಾಧನೆ ಮತ್ತು ಅವರನ್ನು ಜಗತ್ತಿನ ಅತಿ ವೇಗದ ಓಟಗಾರ ಉಸೇನ್ ಬೋಲ್ಟ್ ರೊಂದಿಗೆ ಹೋಲಿಸುತ್ತಿರುವುದು ತರುಣರನ್ನು ಕಂಬಳ ಓಟದತ್ತ ಆಕರ್ಷಿಸುತ್ತಿದೆ. ಹೀಗಾಗಿ ಅಥ್ಲೀಟ್‌ಗಳು ಸೇರಿದಂತೆ ಇತರ ಯುವಕರೂ ಕಂಬಳ ಗದ್ದೆಯಲ್ಲಿ ಸಾಧನೆ ಮಾಡುವ ಆಸಕ್ತಿ ತೋರಿಸುತ್ತಿದ್ದಾರೆ.

ಸಿದ್ದಿ ಕಲಿಗಳಿಗೆ ಒಲಿಂಪಿಕ್ಸ್ ಗುರಿ!!

ರಾಜ್ಯ ಕ್ರೀಡಾ ಇಲಾಖೆಯ ಕ್ರೀಡಾ ವಿಜ್ಞಾನ ಕೇಂದ್ರ ಉತ್ತರ ಕನ್ನಡದ ಅಂಕೋಲಾ, ಯಲ್ಲಾಪುರ, ಮುಂಡಗೋಡ ಮತ್ತು ಹಳಿಯಾಳ ತಾಲೂಕಿನ ಸಿದ್ದಿ ಜನಾಂಗದ 24 ಪ್ರತಿಭಾವಂತ ಕ್ರೀಡಾಪಟುಗಳನ್ನು ಅಂತರಾಷ್ಟ್ರೀಯ ಮಟ್ಟದ ತರಬೇತಿಗೆ ಆಯ್ಕೆ ಮಾಡಿದೆ.

ಕ್ರೀಡಾ ಸಾಧನೆಗೆ ಹೇಳಿ ಮಾಡಿಸಿದಂತ ದೈಹಿಕ ಸಾಮರ್ಥ್ಯದ ಆಫ್ರಿಕಾ ಮೂಲದ ಸಿದ್ದಿ ತರುಣ, ತರುಣಿಯರನ್ನು ಹಲವು ಬಾರಿ ಆಯ್ಕೆ ಮಾಡಿ ಬೆಂಗಳೂರಿನ ಕ್ರೀಡಾ ವಸತಿ ನಿಲಯಗಳಿಗೆ ಸೆರಿಸಲಾಗಿತ್ತಾದರೂ ಹೇಳಿಕೊಳ್ಳುವಂತ ಸಾಧನೆಯೇನೂ ಆಗಿಲ್ಲ. ಸರಿಯಾಗಿ ತರಬೇತಿ ಕೊಡದ ಮತ್ತು ಕ್ರೀಡಾಳುಗಳಿಗೆ ಸೌಲಭ್ಯ ಒದಗಿಸದ ಕೀಡಾ ಇಲಾಖೆಯ ವೈಫಲ್ಯವೇ ಇದಕ್ಕೆ ಕಾರಣವೆನ್ನಲಾಗಿದೆ.

ಈಚೆಗೆ ಕ್ರೀಡಾ ಇಲಾಖೆ ಉತ್ತರ ಕನ್ನಡದ 400 ವಿದ್ಯಾರ್ಥಿಗಳನ್ನು ಕ್ರೀಡಾ ಸಾಮರ್ಥ್ಯದ ಪರೀಕ್ಷೆಗೆ ಒಳಪಡಿಸಿತ್ತು. ಇದರಲ್ಲಿ ಸಿದ್ದಿ ಜನಾಂಗದ 24 ಮಂದಿಯಲ್ಲಿ ಕ್ರೀಡಾ ಪ್ರತಿಭೆಯಿರುವುದನ್ನು ಗುರುತಿಸಿದ ಕ್ರೀಡಾ ವಿಜ್ಞಾನ ಕೇಂದ್ರದ ತಂಡ ಅವರನ್ನು ವೈಜ್ಞಾನಿಕವಾಗಿ ಆಯ್ಕೆ ಮಾಡಿದೆ. ಇವರಿಗೆ ಬೇರೆ ಯಾವ ಪರೀಕ್ಷೆಗೂ ಒಳಪಡಿಸದೆ ಬೆಂಗಳೂರಿನ ವಿದ್ಯಾನಗರ ಮತ್ತಿತರೆಡೆ ಇರುವ ಕ್ರೀಡಾ ವಸತಿ ನಿಲಯಗಳಿಗೆ ಪ್ರವೇಶ ನೀಡಲಾಗಿದೆ. ಇವರಿಗೆ ಅಂತರಾಷ್ಟ್ರೀಯ ಮಟ್ಟದ ತರಬೇತಿ ಕೊಟ್ಟು 2024ರ ಪ್ಯಾರಿಸ್ ಒಲಿಂಪಿಕ್ಸ್‌ಗೆ ಸಿದ್ದಪಡಿಸುವ ಗುರಿ ಕ್ರೀಡಾ ಇಲಾಖೆಯದು.

ಈ ಕ್ರೀಡಾ ಪಟುಗಳೊಂದಿಗೆ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಕಳೆದ ಬುಧವಾರ ಸಂವಾದ ನಡೆಸಿದ ಕ್ರೀಡಾ ಮಂತ್ರಿ ಕೆ.ಸಿ ನಾರಾಯಣ ಗೌಡ ಉನ್ನತ ತರಬೇತಿಗೆ ಚಾಲನೆ ನಿಡಿದ್ದಾರೆ.


ಇದನ್ನೂ ಓದಿ: ಅಪ್ಪಂದಿರ ಹೊಲಗಳಲ್ಲಿನ ಪರಿಶ್ರಮ, ಒಲಿಂಪಿಕ್ಸ್‌ನಲ್ಲಿ ಮಕ್ಕಳ ಪ್ರತಿಫಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....