Homeಸಿನಿಮಾಕ್ರೀಡೆಕರಾವಳಿ: ಕಂಬಳ ಓಟಕ್ಕೆ ಟ್ರೈನಿಂಗ್ - ಸಿದ್ದಿಗಳಿಗೆ ಪ್ಯಾರಿಸ್ ಒಲಿಂಪಿಕ್ಸ್‌ಗೆ ತರಬೇತಿ

ಕರಾವಳಿ: ಕಂಬಳ ಓಟಕ್ಕೆ ಟ್ರೈನಿಂಗ್ – ಸಿದ್ದಿಗಳಿಗೆ ಪ್ಯಾರಿಸ್ ಒಲಿಂಪಿಕ್ಸ್‌ಗೆ ತರಬೇತಿ

- Advertisement -
- Advertisement -

ಅವಿಭಜಿತ ದಕ್ಷಿಣ ಕನ್ನಡದ ಅಥ್ಲೀಟುಗಳನ್ನು ಕಂಬಳ ಓಟಗಾರರನ್ನಾಗಿ ತರಬೇತುಗೊಳಿಸಲು ಕರಾವಳಿಯ ಕಂಬಳ ಸಮಿತಿ ನಿರ್ಧರಿಸಿದೆ. ಜಿಲ್ಲಾಮಟ್ಟದ ಸ್ಪರ್ಧೆಗಳಲ್ಲಿ ವಿಜೇತರಾಗಿರುವ ಮತ್ತು ಆಸಕ್ತಿ ಇರುವ ಕ್ರೀಡಾಪಟುಗಳಿಗೆ ಕಂಬಳದ ಓಟಗಾರಿಕೆಯನ್ನು ಕಲಿಸಿಕೊಡುವುದು ಕಂಬಳ ಅಕಾಡಮಿಯ ಉದ್ದೇಶವಾಗಿದೆ.

ಈ ತರಬೇತಿ ವಾರಾಂತ್ಯದಲ್ಲಿ ನಡೆಯಲಿದ್ದು, ಮೂಡಬಿದಿರೆ, ಮಿಯಾರು, ಬೈಂದೂರು ಮತ್ತು ಪೈವಳಿಕೆಯಲ್ಲಿ ಶಿಬಿರಗಳು ನಡೆಯಲಿವೆ. ನಿವೃತ್ತ ಕಂಬಳ ಓಟಗಾರರನ್ನು ಕೋಚ್‌ಗಳಾಗಿ ಆರಿಸಲಾಗಿದೆ. ಕೇರಳದ ಆಸಕ್ತರಿಗೂ ತರಬೇತಿ ಕೊಡಲಾಗುತ್ತದೆ. ಅಕ್ಟೋಬರ್‌ನಿಂದ ನಿಯಮಿತವಾಗಿ ಶಿಬಿರಗಳು ನಡೆಯಲಿದ್ದು, ಕೋವಿಡ್ ನಿರ್ಭಂದಗಳಿರುವುದರಿಂದ ಸದ್ಯ ಮೂಡಬಿದುರೆಯಲ್ಲಿ ಮಾತ್ರ ವಾರಾಂತ್ಯದ ಶಿಬಿರ ಕೈಗೊಳ್ಳಲಾಗುತ್ತದೆಂದು ಜಿಲ್ಲಾ ಕಂಬಳ ಸಮಿತಿ ಅಧ್ಯಕ್ಷ ಪಿ.ಆರ್.ಶೆಟ್ಟಿ ತಿಳಿಸಿದ್ದಾರೆ.

ಕಂಬಳ ಸಮಿತಿ ಕೆಲವು ವರ್ಷಗಳ ಹಿಂದೆಯೆ ಇಂಥದೊಂದು ತರಬೇತಿಗೆ ಯೋಜನೆ ಹಾಕಿತ್ತು. ಆದರೆ ಗಾಯದ ಹೆದರಿಕೆಯಿಂದ ಅಥ್ಲೀಟ್‌ಗಳು ಮನಸ್ಸು ಮಾಡಿರಲಿಲ್ಲ. ಸಿಂಥೆಟಿಕ್ ಟ್ರಾಕ್‌ನಲ್ಲಿ ಓಡಿದಂತಲ್ಲ ಕಂಬಳದ ಕೆಸರು ಗದ್ದೆಯಲ್ಲಿ ಓಡುವುದು. ಕೆಸರು ಗದ್ದೆಯ ಓಟ ಕಠಿಣವಾದುದು.

ಮೂಡಬಿದಿರೆಯಲ್ಲಿ ಖ್ಯಾತ ಕಂಬಳ ಓಟಗಾರ ರವಿ ಅಳದಂಗಡಿಯವರ ಮಗ ಗಿರೀಶ್ ಅಥ್ಲೀಟ್‌ಗಳೂ ಸೇರಿದಂತೆ 40 ಮಂದಿಗೆ ಕಂಬಳ ಗದ್ದೆಯಲ್ಲಿ ಓಡುವ ತರಬೇತಿ ನೀಡುತ್ತಿದ್ದಾರೆ. ಈಚೆಗೆ ಕಂಬಳದ ಓಟಗಾರ ಶ್ರೀನಿವಾಸ ಗೌಡ ಮಾಡಿರುವ ಸಾಧನೆ ಮತ್ತು ಅವರನ್ನು ಜಗತ್ತಿನ ಅತಿ ವೇಗದ ಓಟಗಾರ ಉಸೇನ್ ಬೋಲ್ಟ್ ರೊಂದಿಗೆ ಹೋಲಿಸುತ್ತಿರುವುದು ತರುಣರನ್ನು ಕಂಬಳ ಓಟದತ್ತ ಆಕರ್ಷಿಸುತ್ತಿದೆ. ಹೀಗಾಗಿ ಅಥ್ಲೀಟ್‌ಗಳು ಸೇರಿದಂತೆ ಇತರ ಯುವಕರೂ ಕಂಬಳ ಗದ್ದೆಯಲ್ಲಿ ಸಾಧನೆ ಮಾಡುವ ಆಸಕ್ತಿ ತೋರಿಸುತ್ತಿದ್ದಾರೆ.

ಸಿದ್ದಿ ಕಲಿಗಳಿಗೆ ಒಲಿಂಪಿಕ್ಸ್ ಗುರಿ!!

ರಾಜ್ಯ ಕ್ರೀಡಾ ಇಲಾಖೆಯ ಕ್ರೀಡಾ ವಿಜ್ಞಾನ ಕೇಂದ್ರ ಉತ್ತರ ಕನ್ನಡದ ಅಂಕೋಲಾ, ಯಲ್ಲಾಪುರ, ಮುಂಡಗೋಡ ಮತ್ತು ಹಳಿಯಾಳ ತಾಲೂಕಿನ ಸಿದ್ದಿ ಜನಾಂಗದ 24 ಪ್ರತಿಭಾವಂತ ಕ್ರೀಡಾಪಟುಗಳನ್ನು ಅಂತರಾಷ್ಟ್ರೀಯ ಮಟ್ಟದ ತರಬೇತಿಗೆ ಆಯ್ಕೆ ಮಾಡಿದೆ.

ಕ್ರೀಡಾ ಸಾಧನೆಗೆ ಹೇಳಿ ಮಾಡಿಸಿದಂತ ದೈಹಿಕ ಸಾಮರ್ಥ್ಯದ ಆಫ್ರಿಕಾ ಮೂಲದ ಸಿದ್ದಿ ತರುಣ, ತರುಣಿಯರನ್ನು ಹಲವು ಬಾರಿ ಆಯ್ಕೆ ಮಾಡಿ ಬೆಂಗಳೂರಿನ ಕ್ರೀಡಾ ವಸತಿ ನಿಲಯಗಳಿಗೆ ಸೆರಿಸಲಾಗಿತ್ತಾದರೂ ಹೇಳಿಕೊಳ್ಳುವಂತ ಸಾಧನೆಯೇನೂ ಆಗಿಲ್ಲ. ಸರಿಯಾಗಿ ತರಬೇತಿ ಕೊಡದ ಮತ್ತು ಕ್ರೀಡಾಳುಗಳಿಗೆ ಸೌಲಭ್ಯ ಒದಗಿಸದ ಕೀಡಾ ಇಲಾಖೆಯ ವೈಫಲ್ಯವೇ ಇದಕ್ಕೆ ಕಾರಣವೆನ್ನಲಾಗಿದೆ.

ಈಚೆಗೆ ಕ್ರೀಡಾ ಇಲಾಖೆ ಉತ್ತರ ಕನ್ನಡದ 400 ವಿದ್ಯಾರ್ಥಿಗಳನ್ನು ಕ್ರೀಡಾ ಸಾಮರ್ಥ್ಯದ ಪರೀಕ್ಷೆಗೆ ಒಳಪಡಿಸಿತ್ತು. ಇದರಲ್ಲಿ ಸಿದ್ದಿ ಜನಾಂಗದ 24 ಮಂದಿಯಲ್ಲಿ ಕ್ರೀಡಾ ಪ್ರತಿಭೆಯಿರುವುದನ್ನು ಗುರುತಿಸಿದ ಕ್ರೀಡಾ ವಿಜ್ಞಾನ ಕೇಂದ್ರದ ತಂಡ ಅವರನ್ನು ವೈಜ್ಞಾನಿಕವಾಗಿ ಆಯ್ಕೆ ಮಾಡಿದೆ. ಇವರಿಗೆ ಬೇರೆ ಯಾವ ಪರೀಕ್ಷೆಗೂ ಒಳಪಡಿಸದೆ ಬೆಂಗಳೂರಿನ ವಿದ್ಯಾನಗರ ಮತ್ತಿತರೆಡೆ ಇರುವ ಕ್ರೀಡಾ ವಸತಿ ನಿಲಯಗಳಿಗೆ ಪ್ರವೇಶ ನೀಡಲಾಗಿದೆ. ಇವರಿಗೆ ಅಂತರಾಷ್ಟ್ರೀಯ ಮಟ್ಟದ ತರಬೇತಿ ಕೊಟ್ಟು 2024ರ ಪ್ಯಾರಿಸ್ ಒಲಿಂಪಿಕ್ಸ್‌ಗೆ ಸಿದ್ದಪಡಿಸುವ ಗುರಿ ಕ್ರೀಡಾ ಇಲಾಖೆಯದು.

ಈ ಕ್ರೀಡಾ ಪಟುಗಳೊಂದಿಗೆ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಕಳೆದ ಬುಧವಾರ ಸಂವಾದ ನಡೆಸಿದ ಕ್ರೀಡಾ ಮಂತ್ರಿ ಕೆ.ಸಿ ನಾರಾಯಣ ಗೌಡ ಉನ್ನತ ತರಬೇತಿಗೆ ಚಾಲನೆ ನಿಡಿದ್ದಾರೆ.


ಇದನ್ನೂ ಓದಿ: ಅಪ್ಪಂದಿರ ಹೊಲಗಳಲ್ಲಿನ ಪರಿಶ್ರಮ, ಒಲಿಂಪಿಕ್ಸ್‌ನಲ್ಲಿ ಮಕ್ಕಳ ಪ್ರತಿಫಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...