Homeಸಿನಿಮಾಕ್ರೀಡೆಕರಾವಳಿ: ಕಂಬಳ ಓಟಕ್ಕೆ ಟ್ರೈನಿಂಗ್ - ಸಿದ್ದಿಗಳಿಗೆ ಪ್ಯಾರಿಸ್ ಒಲಿಂಪಿಕ್ಸ್‌ಗೆ ತರಬೇತಿ

ಕರಾವಳಿ: ಕಂಬಳ ಓಟಕ್ಕೆ ಟ್ರೈನಿಂಗ್ – ಸಿದ್ದಿಗಳಿಗೆ ಪ್ಯಾರಿಸ್ ಒಲಿಂಪಿಕ್ಸ್‌ಗೆ ತರಬೇತಿ

- Advertisement -
- Advertisement -

ಅವಿಭಜಿತ ದಕ್ಷಿಣ ಕನ್ನಡದ ಅಥ್ಲೀಟುಗಳನ್ನು ಕಂಬಳ ಓಟಗಾರರನ್ನಾಗಿ ತರಬೇತುಗೊಳಿಸಲು ಕರಾವಳಿಯ ಕಂಬಳ ಸಮಿತಿ ನಿರ್ಧರಿಸಿದೆ. ಜಿಲ್ಲಾಮಟ್ಟದ ಸ್ಪರ್ಧೆಗಳಲ್ಲಿ ವಿಜೇತರಾಗಿರುವ ಮತ್ತು ಆಸಕ್ತಿ ಇರುವ ಕ್ರೀಡಾಪಟುಗಳಿಗೆ ಕಂಬಳದ ಓಟಗಾರಿಕೆಯನ್ನು ಕಲಿಸಿಕೊಡುವುದು ಕಂಬಳ ಅಕಾಡಮಿಯ ಉದ್ದೇಶವಾಗಿದೆ.

ಈ ತರಬೇತಿ ವಾರಾಂತ್ಯದಲ್ಲಿ ನಡೆಯಲಿದ್ದು, ಮೂಡಬಿದಿರೆ, ಮಿಯಾರು, ಬೈಂದೂರು ಮತ್ತು ಪೈವಳಿಕೆಯಲ್ಲಿ ಶಿಬಿರಗಳು ನಡೆಯಲಿವೆ. ನಿವೃತ್ತ ಕಂಬಳ ಓಟಗಾರರನ್ನು ಕೋಚ್‌ಗಳಾಗಿ ಆರಿಸಲಾಗಿದೆ. ಕೇರಳದ ಆಸಕ್ತರಿಗೂ ತರಬೇತಿ ಕೊಡಲಾಗುತ್ತದೆ. ಅಕ್ಟೋಬರ್‌ನಿಂದ ನಿಯಮಿತವಾಗಿ ಶಿಬಿರಗಳು ನಡೆಯಲಿದ್ದು, ಕೋವಿಡ್ ನಿರ್ಭಂದಗಳಿರುವುದರಿಂದ ಸದ್ಯ ಮೂಡಬಿದುರೆಯಲ್ಲಿ ಮಾತ್ರ ವಾರಾಂತ್ಯದ ಶಿಬಿರ ಕೈಗೊಳ್ಳಲಾಗುತ್ತದೆಂದು ಜಿಲ್ಲಾ ಕಂಬಳ ಸಮಿತಿ ಅಧ್ಯಕ್ಷ ಪಿ.ಆರ್.ಶೆಟ್ಟಿ ತಿಳಿಸಿದ್ದಾರೆ.

ಕಂಬಳ ಸಮಿತಿ ಕೆಲವು ವರ್ಷಗಳ ಹಿಂದೆಯೆ ಇಂಥದೊಂದು ತರಬೇತಿಗೆ ಯೋಜನೆ ಹಾಕಿತ್ತು. ಆದರೆ ಗಾಯದ ಹೆದರಿಕೆಯಿಂದ ಅಥ್ಲೀಟ್‌ಗಳು ಮನಸ್ಸು ಮಾಡಿರಲಿಲ್ಲ. ಸಿಂಥೆಟಿಕ್ ಟ್ರಾಕ್‌ನಲ್ಲಿ ಓಡಿದಂತಲ್ಲ ಕಂಬಳದ ಕೆಸರು ಗದ್ದೆಯಲ್ಲಿ ಓಡುವುದು. ಕೆಸರು ಗದ್ದೆಯ ಓಟ ಕಠಿಣವಾದುದು.

ಮೂಡಬಿದಿರೆಯಲ್ಲಿ ಖ್ಯಾತ ಕಂಬಳ ಓಟಗಾರ ರವಿ ಅಳದಂಗಡಿಯವರ ಮಗ ಗಿರೀಶ್ ಅಥ್ಲೀಟ್‌ಗಳೂ ಸೇರಿದಂತೆ 40 ಮಂದಿಗೆ ಕಂಬಳ ಗದ್ದೆಯಲ್ಲಿ ಓಡುವ ತರಬೇತಿ ನೀಡುತ್ತಿದ್ದಾರೆ. ಈಚೆಗೆ ಕಂಬಳದ ಓಟಗಾರ ಶ್ರೀನಿವಾಸ ಗೌಡ ಮಾಡಿರುವ ಸಾಧನೆ ಮತ್ತು ಅವರನ್ನು ಜಗತ್ತಿನ ಅತಿ ವೇಗದ ಓಟಗಾರ ಉಸೇನ್ ಬೋಲ್ಟ್ ರೊಂದಿಗೆ ಹೋಲಿಸುತ್ತಿರುವುದು ತರುಣರನ್ನು ಕಂಬಳ ಓಟದತ್ತ ಆಕರ್ಷಿಸುತ್ತಿದೆ. ಹೀಗಾಗಿ ಅಥ್ಲೀಟ್‌ಗಳು ಸೇರಿದಂತೆ ಇತರ ಯುವಕರೂ ಕಂಬಳ ಗದ್ದೆಯಲ್ಲಿ ಸಾಧನೆ ಮಾಡುವ ಆಸಕ್ತಿ ತೋರಿಸುತ್ತಿದ್ದಾರೆ.

ಸಿದ್ದಿ ಕಲಿಗಳಿಗೆ ಒಲಿಂಪಿಕ್ಸ್ ಗುರಿ!!

ರಾಜ್ಯ ಕ್ರೀಡಾ ಇಲಾಖೆಯ ಕ್ರೀಡಾ ವಿಜ್ಞಾನ ಕೇಂದ್ರ ಉತ್ತರ ಕನ್ನಡದ ಅಂಕೋಲಾ, ಯಲ್ಲಾಪುರ, ಮುಂಡಗೋಡ ಮತ್ತು ಹಳಿಯಾಳ ತಾಲೂಕಿನ ಸಿದ್ದಿ ಜನಾಂಗದ 24 ಪ್ರತಿಭಾವಂತ ಕ್ರೀಡಾಪಟುಗಳನ್ನು ಅಂತರಾಷ್ಟ್ರೀಯ ಮಟ್ಟದ ತರಬೇತಿಗೆ ಆಯ್ಕೆ ಮಾಡಿದೆ.

ಕ್ರೀಡಾ ಸಾಧನೆಗೆ ಹೇಳಿ ಮಾಡಿಸಿದಂತ ದೈಹಿಕ ಸಾಮರ್ಥ್ಯದ ಆಫ್ರಿಕಾ ಮೂಲದ ಸಿದ್ದಿ ತರುಣ, ತರುಣಿಯರನ್ನು ಹಲವು ಬಾರಿ ಆಯ್ಕೆ ಮಾಡಿ ಬೆಂಗಳೂರಿನ ಕ್ರೀಡಾ ವಸತಿ ನಿಲಯಗಳಿಗೆ ಸೆರಿಸಲಾಗಿತ್ತಾದರೂ ಹೇಳಿಕೊಳ್ಳುವಂತ ಸಾಧನೆಯೇನೂ ಆಗಿಲ್ಲ. ಸರಿಯಾಗಿ ತರಬೇತಿ ಕೊಡದ ಮತ್ತು ಕ್ರೀಡಾಳುಗಳಿಗೆ ಸೌಲಭ್ಯ ಒದಗಿಸದ ಕೀಡಾ ಇಲಾಖೆಯ ವೈಫಲ್ಯವೇ ಇದಕ್ಕೆ ಕಾರಣವೆನ್ನಲಾಗಿದೆ.

ಈಚೆಗೆ ಕ್ರೀಡಾ ಇಲಾಖೆ ಉತ್ತರ ಕನ್ನಡದ 400 ವಿದ್ಯಾರ್ಥಿಗಳನ್ನು ಕ್ರೀಡಾ ಸಾಮರ್ಥ್ಯದ ಪರೀಕ್ಷೆಗೆ ಒಳಪಡಿಸಿತ್ತು. ಇದರಲ್ಲಿ ಸಿದ್ದಿ ಜನಾಂಗದ 24 ಮಂದಿಯಲ್ಲಿ ಕ್ರೀಡಾ ಪ್ರತಿಭೆಯಿರುವುದನ್ನು ಗುರುತಿಸಿದ ಕ್ರೀಡಾ ವಿಜ್ಞಾನ ಕೇಂದ್ರದ ತಂಡ ಅವರನ್ನು ವೈಜ್ಞಾನಿಕವಾಗಿ ಆಯ್ಕೆ ಮಾಡಿದೆ. ಇವರಿಗೆ ಬೇರೆ ಯಾವ ಪರೀಕ್ಷೆಗೂ ಒಳಪಡಿಸದೆ ಬೆಂಗಳೂರಿನ ವಿದ್ಯಾನಗರ ಮತ್ತಿತರೆಡೆ ಇರುವ ಕ್ರೀಡಾ ವಸತಿ ನಿಲಯಗಳಿಗೆ ಪ್ರವೇಶ ನೀಡಲಾಗಿದೆ. ಇವರಿಗೆ ಅಂತರಾಷ್ಟ್ರೀಯ ಮಟ್ಟದ ತರಬೇತಿ ಕೊಟ್ಟು 2024ರ ಪ್ಯಾರಿಸ್ ಒಲಿಂಪಿಕ್ಸ್‌ಗೆ ಸಿದ್ದಪಡಿಸುವ ಗುರಿ ಕ್ರೀಡಾ ಇಲಾಖೆಯದು.

ಈ ಕ್ರೀಡಾ ಪಟುಗಳೊಂದಿಗೆ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಕಳೆದ ಬುಧವಾರ ಸಂವಾದ ನಡೆಸಿದ ಕ್ರೀಡಾ ಮಂತ್ರಿ ಕೆ.ಸಿ ನಾರಾಯಣ ಗೌಡ ಉನ್ನತ ತರಬೇತಿಗೆ ಚಾಲನೆ ನಿಡಿದ್ದಾರೆ.


ಇದನ್ನೂ ಓದಿ: ಅಪ್ಪಂದಿರ ಹೊಲಗಳಲ್ಲಿನ ಪರಿಶ್ರಮ, ಒಲಿಂಪಿಕ್ಸ್‌ನಲ್ಲಿ ಮಕ್ಕಳ ಪ್ರತಿಫಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...