Homeಕರ್ನಾಟಕಮಹಾಧರಣಿ: ಜನದ್ರೋಹಿ ಕೇಂದ್ರ ಸರ್ಕಾರ, ಜಗಮೊಂಡ ರಾಜ್ಯ ಸರ್ಕಾರ: ನೂರ್ ಶ್ರೀಧರ್

ಮಹಾಧರಣಿ: ಜನದ್ರೋಹಿ ಕೇಂದ್ರ ಸರ್ಕಾರ, ಜಗಮೊಂಡ ರಾಜ್ಯ ಸರ್ಕಾರ: ನೂರ್ ಶ್ರೀಧರ್

- Advertisement -
- Advertisement -

ಜನದ್ರೋಹಿ ಕೇಂದ್ರ ಸರ್ಕಾರ, ಜಗಮೊಂಡ ರಾಜ್ಯ ಸರ್ಕಾರಗಳಿವೆ. ಕೇಂದ್ರ ಸರ್ಕಾರ ಜನ ವಿರೋಧಿ ನೀತಿಗಳ ಮೂಲಕ ಜನರನ್ನು ಶೋಷಿಸುತ್ತಿದೆ. ಬಿಜೆಪಿಯನ್ನು ಮಣಿಸಿ ಜನರು ಅಧಿಕಾರಕ್ಕೆ ತಂದ ರಾಜ್ಯ ಸರ್ಕಾರ ಜನರ ಮಾತಿಗೆ ಕಿವಿಗೊಡದೆ ಮೊಂಡುತನ ಮೆರೆಯುತ್ತಿದೆ ಎಂದು ಕರ್ನಾಟಕ ಜನಶಕ್ತಿಯ ರಾಜ್ಯಾಧ್ಯಕ್ಷ ನೂರ್ ಶ್ರೀಧರ್ ಹೇಳಿದ್ದಾರೆ.

ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆಯುತ್ತಿರುವ ‘ದುಡಿಯುವ ಜನರ ಮಹಾಧರಣಿ’ಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌ ಭ್ರಷ್ಟಾಚಾರ ಮಾಡುತ್ತಿದೆ ಎಂದು ಮೋದಿಗೆ ಅಧಿಕಾರ ಕೊಟ್ಟೆವು. ಮೋದಿ ಸರ್ಕಾರ ಅಧಿಕಾರಕ್ಕೆ ಬಂದರೆ ಯುವಜನರಿಗೆ ಉದ್ಯೋಗ ಸಿಗುತ್ತದೆ, ಕೃಷಿಗೆ ಬೆಂಬಲ ಬೆಲೆ ಸಿಗುತ್ತದೆ ಎಂದು ಜನರಿಗೆ ಉತ್ತಮ ಜೀನನ ಸಿಗುತ್ತದೆ ಎಂದು ನಾವು ಅವರಿಗೆ ಮತ ಹಾಕಿದೆವು. ಅದರೆ, ಆಗಿದ್ದೇನು? ಜನರು ಮತ್ತಷ್ಟು ಬಡವರಾದರು. ಅಂಬಾನಿ-ಅದಾನಿಗಳು ಮತ್ತಷ್ಟು ಶ್ರೀಮಂತರಾದರು. ಕೊರೊನಾ ಸಂದರ್ಭದಲ್ಲೂ ಜನರನ್ನು ಶೋಷಿಸಲಾಯಿತು” ಎಂದು ತಿಳಿಸಿದರು.

ಕೊರೊನಾ ಸಂದರ್ಭದಲ್ಲೂ ಜಗ್ಗದೆ ಹೋರಾಟ ಮಾಡಿದವರು ರೈತರು. ಅವರ ಹೋರಾಟಕ್ಕೆ ಮೋದಿ ಸರ್ಕಾರ ಮಣಿಯಿತು. ರೈತ ವಿರೋಧಿ ಕೃಷಿ ನೀತಿಗಳನ್ನು ಹಿಂಪಡೆಯಿತು. ಆದರೆ, ಕಾರ್ಮಿಕರು ಅಂತದ್ದೊಂದು ಹೋರಾಟ ಮಾಡಲು ಸಾಧ್ಯವಿಲ್ಲ. ಅದರೂ, ಸರ್ಕಾರಕ್ಕೆ ತಕ್ಕ ಪಾಠ ಕಲಿಸಬಹುದು. ಹಾಗಾಗಿ, ರಾಜ್ಯದಲ್ಲಿ ಬಿಜೆಪಿಯನ್ನು ಸೋಲಿಸಿದೆವು. ಸಿದ್ದರಾಮಯ್ಯ ಸರ್ಕಾರ ಅಧಿಕಾರಕ್ಕೆ ಬಂದಿತು. ಆದರೆ, ಈ ಸರ್ಕಾರ ಏನು ಮಾಡುತ್ತಿದೆ? ರೈತರು, ಕಾರ್ಮಿಕರು, ದಲಿತರ ಜೊತೆ ಒಂದೇ ಒಂದು ಸಭೆಯನ್ನೂ ಮಾಡಲಿಲ್ಲ. ಯಾರ ಸಮಸ್ಯೆಗಳನ್ನೂ ಕೇಳಲಿಲ್ಲ. ಈ ಆಳುವವರಿಗೆ ಸರಿಯಾದ ಪಾಠ ಕಲಿಸಬೇಕಿದೆ. ನಾವು ಕೇಂದ್ರ ಸರ್ಕಾರದ ವಿರುದ್ಧ ಏನು ಮಾಡಬೇಕು. ರಾಜ್ಯ ಸರ್ಕಾರಕ್ಕೆ ಪಾಠ ಕಲಿಸಲು ಏನು ಮಾಡಬೇಕು ಎಂಬ ಬಗ್ಗೆ ನಿರ್ಧಾರ ಮಾಡಬೇಕಿದೆ” ಎಂದು ಹೇಳಿದರು.

ನಾವು ಯಾಕೆ ಇಲ್ಲಿ ಹೋರಾಟ ಮಾಡ್ತಿದ್ದೀವಿ? ರಾಜ್ಯದ ಮೂಲೆ ಮೂಲೆಯಿಂದ ಕೆಲಸ, ಕಾರ್ಯ ಬಿಟ್ಟು ಬೆಂಗಳೂರಿಗೆ ಬಂದು ಯಾಕೆ ಕೂತಿದ್ದೀವಿ? ಬಗರ್‌ಹುಕುಂ ಭೂಮಿಗಾಗಿ, ನಿವೇಶನಕ್ಕಾಗಿ, ವಸತಿಗಾಗಿ, ವೇತನ ಹೆಚ್ಚಳಕ್ಕಾಗಿ, ಕೃಷಿ ಉತ್ಪನ್ನಗಳಿಗೆ ಬೆಂಬಲ ಬೆಲೆಯಾಗಿ, ಮಹಿಳೆಯರ ರಕ್ಷಣೆಗಾಗಿ ಸೇರಿದಂತೆ ನಾನಾ ರೀತಿಯ ಸಮಸ್ಯೆಗಳನ್ನ ಹೊತ್ತು ಇಲ್ಲಿಗೆ ಬಂದಿದ್ದೇವೆ. ಈ ಸಮಸ್ಯೆಗಳು ಹೇಗೆ ಬಗೆಹರಿಯುತ್ತವೆ ಎಂದು ಪ್ರಶ್ನಿಸಿದರು.

ಸಂಘಟನೆಗಳು ಕರೆದಿವೆ, ಬಂದಿದ್ದೇವೆ, ಮುಗಿಸಿಕೊಂಡು ಹೋಗುತ್ತೇವೆ ಎಂದು ಹೋರಾಟಕ್ಕೆ ಬಂದಿದ್ದೇವೆ ಎನ್ನಬಾರದು. ನಮ್ಮ ಹಕ್ಕುಗಳನ್ನು ಪಡೆದೇ ಹೋಗಬೇಕು. ನಮ್ಮೆಲ್ಲೆ ಸಮಸ್ಯೆಗಳಿಗೂ ಮೂಲ ಕಾರಣ ನಮ್ಮನ್ನಾಳುತ್ತಿರುವ ಸರ್ಕಾರಗಳು. ಬಲಾಢ್ಯರು ಜನರನ್ನು ದೋಚುತ್ತಿದ್ದಾರೆ. ಅವರಿಗೆ ಸರ್ಕಾರಗಳು ದಳ್ಳಾಳಿಗಳಂತೆ ಕೆಲಸ ಮಾಡುತ್ತಿವೆ. ಸರ್ಕಾರಗಳು ಬಲಾಢ್ಯರನ್ನು ನಿಯಂತ್ರಿಸಿ ಜನರನ್ನು ರಕ್ಷಿಸಬೇಕು. ಆದರೆ, ಆ ಕೆಲಸವನ್ನು ಯಾವ ಸರ್ಕಾರಗಳೂ ಮಾಡುತ್ತಿಲ್ಲ. ಬದಲಾಗಿ, ಬಲಾಢ್ಯರಿಂದ ಹಣ ಪಡೆದು, ಜನರನ್ನು ಶೋಷಿಸುತ್ತಿವೆ” ಎಂದರು.

ಇದನ್ನೂ ಓದಿ : ಮಹಾಧರಣಿ | ಮೋದಿ ಸರ್ಕಾರದಲ್ಲಿ ಮಹಿಳೆಯರು ಹೆಚ್ಚು ಸಂಕಷ್ಟಕ್ಕೆ ಸಿಲುಕಿದ್ದಾರೆ: ಮೀನಾಕ್ಷಿ ಬಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ಮುಸ್ಲಿಂ ಯುವಕನನ್ನು ಥಳಿಸಿ ದರೋಡೆ ಮಾಡಿದ ಗುಂಪು; ಹಿಂದೂ ಶ್ಲೋಕ ಪಠಿಸುವಂತೆ ಒತ್ತಾಯ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯಲ್ಲಿ ಹಿಂದುತ್ವವಾದಿ ಗುಂಪೊಂದು ಮುಸ್ಲಿಂ ಯುವಕನನ್ನು ನಿರ್ದಯವಾಗಿ ಥಳಿಸಿ, ಅವಮಾನಿಸಿ, ಹಿಂದುತ್ವ ಶ್ಲೋಕಗಳನ್ನು ಪಠಿಸುವಂತೆ ಒತ್ತಾಯಿಸಿದೆ ಎಂದು ಪೊಲೀಸರನ್ನು ಉಲ್ಲೇಖಿಸಿ 'ಕ್ಲಾರಿಯನ್ ಇಂಡಿಯಾ' ವರದಿ ಮಾಡಿದೆ. ಮಾರ್ಚ್ 28...

‘ಇರಾನ್‌ಗೆ ಅಮೆರಿಕನ್ನರ ವಿರುದ್ಧ ಯಾವುದೇ ದ್ವೇಷವಿಲ್ಲ’: ಅಮೆರಿಕದ ಸಾರ್ವಜನಿಕರಿಗೆ ‘ಮುಕ್ತ ಪತ್ರ’ ಬರೆದ ಇರಾನ್ ಅಧ್ಯಕ್ಷ ಪೆಜೆಶ್ಕಿಯಾನ್

ಪಶ್ಚಿಮ ಏಷ್ಯಾ ಸಂಘರ್ಷ ತೀವ್ರವಾಗುತ್ತಿರುವಾಗಲೇ ಅಮೆರಿಕ ಸಾರ್ವಜನಿಕರನ್ನು ಉದ್ದೇಶಿಸಿ ದೀರ್ಘ ಪತ್ರ ಬರೆದಿರುವ ಇರಾನ್ ಅಧ್ಯಕ್ಷ ಮಸೌದ್ ಪಜೆಶ್ಕಿಯಾನ್, ಅಮೆರಿಕನ್ನರ ವಿರುದ್ಧ ಇರಾನ್ ಯಾವುದೇ ದ್ವೇಷವನ್ನು ಹೊಂದಿಲ್ಲ ಎಂದು ಹೇಳಿದ್ದಾರೆ. ಆದರೆ  ಜಾಗತಿಕ ನಿರೂಪಣೆಗಳಲ್ಲಿ...

ಬಿಜು ಪಟ್ನಾಯಕ್ ವಿರುದ್ಧ ಹೇಳಿಕೆ : ಬೇಷರತ್ ಕ್ಷಮೆಯಾಚಿಸಿದ ಬಿಜೆಪಿ ಸಂಸದ ನಿಶಿಕಾಂತ್ ದುಬೆ

ಒಡಿಶಾದ ಮಾಜಿ ಮುಖ್ಯಮಂತ್ರಿ ಬಿಜು ಪಟ್ನಾಯಕ್ ಅವರ ಕುರಿತು ನೀಡಿದ ಹೇಳಿಕೆ ವಿರುದ್ದ ದೇಶದಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾದ ಹಿನ್ನೆಲೆ, ಬಿಜೆಪಿ ಸಂಸದ ನಿಶಿಕಾಂತ್ ದುಬೆ ಬುಧವಾರ (ಏ.1) ಬೇಷರತ್ ಕ್ಷಮೆಯಾಚಿಸಿದ್ದಾರೆ. "ಬಿಜು ಬಾಬು...

ಮಹಾರಾಷ್ಟ್ರ: ‘ನಿನ್ನ ಮಗಳನ್ನು ನನ್ನ ಬಳಿ ಕಳುಹಿಸು’; ಬಂಧಿತ ಮಹಿಳಾ ಆರೋಪಿಗೆ ಲೈಂಗಿಕ ಕಿರುಕುಳ ನೀಡಿದ್ದ ಪೊಲೀಸ್ ಅಮಾನತು 

ಮಹಾರಾಷ್ಟ್ರ: ಅಕೋಲಾದಲ್ಲಿ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಕಸ್ಟಡಿಯಲ್ಲಿರುವ ಮಹಿಳೆಯೊಬ್ಬರಿಂದ ಲೈಂಗಿಕ ಕಿರುಕುಳಕ್ಕೆ ಬೇಡಿಕೆ ಇಟ್ಟಿದ್ದ ಮತ್ತು ಆಕೆಯ ಮಗಳನ್ನು ತನ್ನ ಬಳಿಗೆ ಕಳುಹಿಸುವಂತೆ ಕೇಳಿದ್ದಕ್ಕಾಗಿ ಸಹಾಯಕ ಪೊಲೀಸ್ ಸಬ್-ಇನ್ಸ್‌ಪೆಕ್ಟರ್ (ಎಎಸ್‌ಐ) ಒಬ್ಬರನ್ನು ಅಮಾನತುಗೊಳಿಸಲಾಗಿದೆ.  80...

ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತ : 8 ಮಹಿಳಾ ಕಾರ್ಮಿಕರು ಸಾವು

ವೇಗವಾಗಿ ಬಂದ ಟ್ರಕ್ ಟೆಂಪೋಗೆ ಡಿಕ್ಕಿ ಹೊಡೆದ ಪರಿಣಾಮ ಎಂಟು ಮಹಿಳಾ ಕಾರ್ಮಿಕರು ಸಾವನ್ನಪ್ಪಿ, ಮೂವರು ಗಾಯಗೊಂಡ ಘಟನೆ ಮಹಾರಾಷ್ಟ್ರದ ಜಲ್ನಾ ಜಿಲ್ಲೆಯ ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಬುಧವಾರ (ಏ.1) ಸಂಜೆ ನಡೆದಿದೆ. ಎಕ್ಸ್‌ಪ್ರೆಸ್‌ವೇಯ...

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...