Homeಕರ್ನಾಟಕಮಹಾಧರಣಿ: ಜನದ್ರೋಹಿ ಕೇಂದ್ರ ಸರ್ಕಾರ, ಜಗಮೊಂಡ ರಾಜ್ಯ ಸರ್ಕಾರ: ನೂರ್ ಶ್ರೀಧರ್

ಮಹಾಧರಣಿ: ಜನದ್ರೋಹಿ ಕೇಂದ್ರ ಸರ್ಕಾರ, ಜಗಮೊಂಡ ರಾಜ್ಯ ಸರ್ಕಾರ: ನೂರ್ ಶ್ರೀಧರ್

- Advertisement -
- Advertisement -

ಜನದ್ರೋಹಿ ಕೇಂದ್ರ ಸರ್ಕಾರ, ಜಗಮೊಂಡ ರಾಜ್ಯ ಸರ್ಕಾರಗಳಿವೆ. ಕೇಂದ್ರ ಸರ್ಕಾರ ಜನ ವಿರೋಧಿ ನೀತಿಗಳ ಮೂಲಕ ಜನರನ್ನು ಶೋಷಿಸುತ್ತಿದೆ. ಬಿಜೆಪಿಯನ್ನು ಮಣಿಸಿ ಜನರು ಅಧಿಕಾರಕ್ಕೆ ತಂದ ರಾಜ್ಯ ಸರ್ಕಾರ ಜನರ ಮಾತಿಗೆ ಕಿವಿಗೊಡದೆ ಮೊಂಡುತನ ಮೆರೆಯುತ್ತಿದೆ ಎಂದು ಕರ್ನಾಟಕ ಜನಶಕ್ತಿಯ ರಾಜ್ಯಾಧ್ಯಕ್ಷ ನೂರ್ ಶ್ರೀಧರ್ ಹೇಳಿದ್ದಾರೆ.

ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆಯುತ್ತಿರುವ ‘ದುಡಿಯುವ ಜನರ ಮಹಾಧರಣಿ’ಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌ ಭ್ರಷ್ಟಾಚಾರ ಮಾಡುತ್ತಿದೆ ಎಂದು ಮೋದಿಗೆ ಅಧಿಕಾರ ಕೊಟ್ಟೆವು. ಮೋದಿ ಸರ್ಕಾರ ಅಧಿಕಾರಕ್ಕೆ ಬಂದರೆ ಯುವಜನರಿಗೆ ಉದ್ಯೋಗ ಸಿಗುತ್ತದೆ, ಕೃಷಿಗೆ ಬೆಂಬಲ ಬೆಲೆ ಸಿಗುತ್ತದೆ ಎಂದು ಜನರಿಗೆ ಉತ್ತಮ ಜೀನನ ಸಿಗುತ್ತದೆ ಎಂದು ನಾವು ಅವರಿಗೆ ಮತ ಹಾಕಿದೆವು. ಅದರೆ, ಆಗಿದ್ದೇನು? ಜನರು ಮತ್ತಷ್ಟು ಬಡವರಾದರು. ಅಂಬಾನಿ-ಅದಾನಿಗಳು ಮತ್ತಷ್ಟು ಶ್ರೀಮಂತರಾದರು. ಕೊರೊನಾ ಸಂದರ್ಭದಲ್ಲೂ ಜನರನ್ನು ಶೋಷಿಸಲಾಯಿತು” ಎಂದು ತಿಳಿಸಿದರು.

ಕೊರೊನಾ ಸಂದರ್ಭದಲ್ಲೂ ಜಗ್ಗದೆ ಹೋರಾಟ ಮಾಡಿದವರು ರೈತರು. ಅವರ ಹೋರಾಟಕ್ಕೆ ಮೋದಿ ಸರ್ಕಾರ ಮಣಿಯಿತು. ರೈತ ವಿರೋಧಿ ಕೃಷಿ ನೀತಿಗಳನ್ನು ಹಿಂಪಡೆಯಿತು. ಆದರೆ, ಕಾರ್ಮಿಕರು ಅಂತದ್ದೊಂದು ಹೋರಾಟ ಮಾಡಲು ಸಾಧ್ಯವಿಲ್ಲ. ಅದರೂ, ಸರ್ಕಾರಕ್ಕೆ ತಕ್ಕ ಪಾಠ ಕಲಿಸಬಹುದು. ಹಾಗಾಗಿ, ರಾಜ್ಯದಲ್ಲಿ ಬಿಜೆಪಿಯನ್ನು ಸೋಲಿಸಿದೆವು. ಸಿದ್ದರಾಮಯ್ಯ ಸರ್ಕಾರ ಅಧಿಕಾರಕ್ಕೆ ಬಂದಿತು. ಆದರೆ, ಈ ಸರ್ಕಾರ ಏನು ಮಾಡುತ್ತಿದೆ? ರೈತರು, ಕಾರ್ಮಿಕರು, ದಲಿತರ ಜೊತೆ ಒಂದೇ ಒಂದು ಸಭೆಯನ್ನೂ ಮಾಡಲಿಲ್ಲ. ಯಾರ ಸಮಸ್ಯೆಗಳನ್ನೂ ಕೇಳಲಿಲ್ಲ. ಈ ಆಳುವವರಿಗೆ ಸರಿಯಾದ ಪಾಠ ಕಲಿಸಬೇಕಿದೆ. ನಾವು ಕೇಂದ್ರ ಸರ್ಕಾರದ ವಿರುದ್ಧ ಏನು ಮಾಡಬೇಕು. ರಾಜ್ಯ ಸರ್ಕಾರಕ್ಕೆ ಪಾಠ ಕಲಿಸಲು ಏನು ಮಾಡಬೇಕು ಎಂಬ ಬಗ್ಗೆ ನಿರ್ಧಾರ ಮಾಡಬೇಕಿದೆ” ಎಂದು ಹೇಳಿದರು.

ನಾವು ಯಾಕೆ ಇಲ್ಲಿ ಹೋರಾಟ ಮಾಡ್ತಿದ್ದೀವಿ? ರಾಜ್ಯದ ಮೂಲೆ ಮೂಲೆಯಿಂದ ಕೆಲಸ, ಕಾರ್ಯ ಬಿಟ್ಟು ಬೆಂಗಳೂರಿಗೆ ಬಂದು ಯಾಕೆ ಕೂತಿದ್ದೀವಿ? ಬಗರ್‌ಹುಕುಂ ಭೂಮಿಗಾಗಿ, ನಿವೇಶನಕ್ಕಾಗಿ, ವಸತಿಗಾಗಿ, ವೇತನ ಹೆಚ್ಚಳಕ್ಕಾಗಿ, ಕೃಷಿ ಉತ್ಪನ್ನಗಳಿಗೆ ಬೆಂಬಲ ಬೆಲೆಯಾಗಿ, ಮಹಿಳೆಯರ ರಕ್ಷಣೆಗಾಗಿ ಸೇರಿದಂತೆ ನಾನಾ ರೀತಿಯ ಸಮಸ್ಯೆಗಳನ್ನ ಹೊತ್ತು ಇಲ್ಲಿಗೆ ಬಂದಿದ್ದೇವೆ. ಈ ಸಮಸ್ಯೆಗಳು ಹೇಗೆ ಬಗೆಹರಿಯುತ್ತವೆ ಎಂದು ಪ್ರಶ್ನಿಸಿದರು.

ಸಂಘಟನೆಗಳು ಕರೆದಿವೆ, ಬಂದಿದ್ದೇವೆ, ಮುಗಿಸಿಕೊಂಡು ಹೋಗುತ್ತೇವೆ ಎಂದು ಹೋರಾಟಕ್ಕೆ ಬಂದಿದ್ದೇವೆ ಎನ್ನಬಾರದು. ನಮ್ಮ ಹಕ್ಕುಗಳನ್ನು ಪಡೆದೇ ಹೋಗಬೇಕು. ನಮ್ಮೆಲ್ಲೆ ಸಮಸ್ಯೆಗಳಿಗೂ ಮೂಲ ಕಾರಣ ನಮ್ಮನ್ನಾಳುತ್ತಿರುವ ಸರ್ಕಾರಗಳು. ಬಲಾಢ್ಯರು ಜನರನ್ನು ದೋಚುತ್ತಿದ್ದಾರೆ. ಅವರಿಗೆ ಸರ್ಕಾರಗಳು ದಳ್ಳಾಳಿಗಳಂತೆ ಕೆಲಸ ಮಾಡುತ್ತಿವೆ. ಸರ್ಕಾರಗಳು ಬಲಾಢ್ಯರನ್ನು ನಿಯಂತ್ರಿಸಿ ಜನರನ್ನು ರಕ್ಷಿಸಬೇಕು. ಆದರೆ, ಆ ಕೆಲಸವನ್ನು ಯಾವ ಸರ್ಕಾರಗಳೂ ಮಾಡುತ್ತಿಲ್ಲ. ಬದಲಾಗಿ, ಬಲಾಢ್ಯರಿಂದ ಹಣ ಪಡೆದು, ಜನರನ್ನು ಶೋಷಿಸುತ್ತಿವೆ” ಎಂದರು.

ಇದನ್ನೂ ಓದಿ : ಮಹಾಧರಣಿ | ಮೋದಿ ಸರ್ಕಾರದಲ್ಲಿ ಮಹಿಳೆಯರು ಹೆಚ್ಚು ಸಂಕಷ್ಟಕ್ಕೆ ಸಿಲುಕಿದ್ದಾರೆ: ಮೀನಾಕ್ಷಿ ಬಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...