Homeಕರ್ನಾಟಕನಾರಾಯಣಗುರು ಪಠ್ಯ ಸಮಾಜ ವಿಜ್ಞಾನಕ್ಕೆ ಸೇರಿಸಿ: ಸಚಿವ ಸುನಿಲ್‌ಕುಮಾರ್‌

ನಾರಾಯಣಗುರು ಪಠ್ಯ ಸಮಾಜ ವಿಜ್ಞಾನಕ್ಕೆ ಸೇರಿಸಿ: ಸಚಿವ ಸುನಿಲ್‌ಕುಮಾರ್‌

- Advertisement -
- Advertisement -

“ಸಮಾಜ ಸುಧಾರಕ ನಾರಾಯಣಗುರು ಅವರ ಪಠ್ಯವನ್ನು ಸಮಾಜ ವಿಜ್ಞಾನ ವಿಷಯಕ್ಕೆ ವರ್ಗಾಯಿಸಿ” ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ವಿ.ಸುನಿಲ್‌ಕುಮಾರ್‌‌ ಪತ್ರ ಬರೆದಿದ್ದಾರೆ.

ಹತ್ತನೇ ತರಗತಿ ಸಮಾಜ ವಿಜ್ಞಾನ ಪಠ್ಯದಲ್ಲಿದ್ದ ನಾರಾಯಣಗುರುಗಳ ಪಾಠವನ್ನು ರೋಹಿತ್‌ ಚಕ್ರತೀರ್ಥ ನೇತೃತ್ವದ ಪಠ್ಯ ಪರಿಶೀಲನಾ ಸಮಿತಿ ತೆಗೆದಿದ್ದರಿಂದ ಕರಾವಳಿ ಭಾಗದಲ್ಲಿ ಬಿಲ್ಲವ ಸಮಾಜದಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರಿಗೆ ಸುನಿಲ್‌ಕುಮಾರ್‌‌ ಪತ್ರ ಬರೆದಿದ್ದಾರೆ.

ಬಿಲ್ಲವ ಸಮಾಜದ ನಿರಂತರ ಪ್ರತಿರೋಧದ ಹೊರತಾಗಿಯೂ ಈ ಕುರಿತು ಸರ್ಕಾರ ಮೌನ ವಹಿಸಿತ್ತು. ಕನ್ನಡ ಭಾಷಾ ವಿಷಯದಲ್ಲಿ ನಾರಾಯಣಗುರುಗಳ ಪಾಠವಿದೆ ಎಂದು ಸಬೂಬು ಹೇಳುತ್ತಿತ್ತು. ಆದರೆ ಸಮಾಜ ವಿಜ್ಞಾನದಲ್ಲಿ ಪಾಠವಿದ್ದರೆ ಎಲ್ಲ ವಿದ್ಯಾರ್ಥಿಗಳು ಓದಲು ಸಾಧ್ಯವಾಗುತ್ತದೆ ಎಂದು ಸಮುದಾಯದ ಮುಖಂಡರು ಹೇಳುತ್ತಲೇ ಬಂದಿದ್ದರು. ಹೆದ್ದಾರಿ ಬಂದ್ ಸೇರಿದಂತೆ ಪಾದಯಾತ್ರೆ ನಡೆಸುವ ಮೂಲಕ ಬೃಹತ್ ಹೋರಾಟ ನಡೆಸುವುದಾಗಿ ಬಿಲ್ಲವ ಸಮುದಾಯ ಹೇಳಿತ್ತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಈ ಹಿಂದೆ ಗಣರಾಜ್ಯೋತ್ಸವ ಟ್ಯಾಬ್ಲೋ ವಿಚಾರದಲ್ಲಿಯೂ ನಾರಾಯಣಗುರುಗಳಿಗೆ ಕೇಂದ್ರ ಸರ್ಕಾರ ಅವಮಾನ ಮಾಡಿತ್ತು. ಇದರ ನಡುವೆ ಪಠ್ಯ ಕೈಬಿಡಲಾಗಿತ್ತು. ಮಂಗಳೂರಿನ ವಿಮಾನ ನಿಲ್ದಾಣಕ್ಕೆ ಕೋಟಿ ಚನ್ನಯ್ಯನವರ ಹೆಸರಿಡಬೇಕು, ಬಿಲ್ಲವ ಅಭಿವೃದ್ದಿ ಮಂಡಳಿ ರಚಿಸಬೇಕು, ಬಿಲ್ಲವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಸೇರಿ ಹಲವು ಸೌಲಭ್ಯಗಳಿಗಾಗಿ ಬಿಲ್ಲವ ಸಮಾಜ ಹೋರಾಟ ಮಾಡುತ್ತಲೇ ಬಂದಿದೆ. ಆದರೆ ಇವೆಲ್ಲಕ್ಕೂ ಬಿಜೆಪಿ ಸರ್ಕಾರ ನಿರ್ಲಕ್ಷ್ಯ ತೋರುತ್ತಿರುವುದು ಬಿಲ್ಲವ ಮುಖಂಡರನ್ನು ಕೆರಳಿಸಿತ್ತು. ಹಾಗಾಗಿ ಬಿಲ್ಲವ ಸಂಘ ಸಂಸ್ಥೆಗಳು ರಿಲೇ ರೀತಿಯ ಪಾದಯಾತ್ರೆ, ಹೆದ್ದಾರಿ ಬಂದ್ ಸೇರಿದಂತೆ 50 ದಿನಗಳವರೆಗೆ ನಿರಂತರ ಪ್ರತಿಭಟನೆ ನಡೆಸಲು ತೀರ್ಮಾನಿಸಿದ್ದವು.

ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಕೋಶಾಧಿಕಾರಿ ಪದ್ಮರಾಜ್ ಆರ್, ಕಂಕನಾಡಿ ಗರಡಿ ಕ್ಷೇತ್ರದ ಆಡಳಿತ ಮೊಕ್ತೇಸರ ಚಿತ್ತರಂಜನ್ ಕೆ, ನಾರಾಯಣಗುರು ವಿಚಾರ ವೇದಿಕೆ ರಾಜ್ಯಾಧ್ಯಕ್ಷ ಸತ್ಯಜಿತ್ ಸುರತ್ಕಲ್, ಶ್ರೀಗುರು ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಶೈಲೇಂದ್ರ ಬೈ, ಬಿಲ್ಲವ ಸಂಘದ ಅಧ್ಯಕ್ಷ ಸತೀಶ್ ಸೇರಿದಂತೆ ನೂರಾರು ಹೋರಾಟಗಾರರು, ಮುಖಂಡರು ಸರ್ಕಾರದ ವಿರುದ್ಧ ಗುಡುಗಿದ್ದರು. ಈ ಹಿನ್ನೆಲೆಯಲ್ಲಿ ಸಚಿವರ ಪತ್ರ ಹೊರಬಿದ್ದಿದೆ.

ಸಚಿವರು ಹೇಳಿರುವುದೇನು?

“ಈ ಬಾರಿ, ಪಠ್ಯ ಪುಸ್ತಕದಲ್ಲಿ ಬ್ರಹ್ಮಶ್ರೀ ಗುರುನಾರಾಯಣ ಗುರುಗಳ ಕುರಿತಂತೆ ಅಳವಡಿಸಲಾಗಿದ್ದ ವಿಷಯಗಳ ಬಗ್ಗೆ, ಗೊಂದಲಗಳು ನಿರ್ಮಾಣವಾಗಿದ್ದು, ಈ ಕುರಿತು ಹಲವರು ನಮ್ಮ ಬಳಿ ಚರ್ಚೆಯನ್ನು ಮಾಡಿರುತ್ತಾರೆ. ಬ್ರಹ್ಮ ಶ್ರೀ ನಾರಾಯಣಗುರುಗಳ ವಿಷಯಗಳು ಈ ಹಿಂದೆ ಸಮಾಜ ವಿಜ್ಞಾನ ವಿಷಯದಲ್ಲಿ ಇದ್ದು, ಅದನ್ನು ವಿದ್ಯಾರ್ಥಿಗಳು ಅಭ್ಯಾಸ ಮಾಡುತ್ತಿದ್ದರು. ಈ ವರ್ಷದಿಂದ ಅದನ್ನು ಕನ್ನಡ ವಿಷಯಕ್ಕೆ ವರ್ಗಾಯಿಸಲಾಗಿದೆ. ಕನ್ನಡ ವಿಷಯದಲ್ಲಿ ಬ್ರಹ್ಮಶ್ರೀ ನಾರಾಯಣಗುರುಗಳ ಪಠ್ಯವನ್ನು ಸೇರಿಸಿರುವುದರ ಬಗ್ಗೆ ಹಲವು ಆಕ್ಷೇಪಣೆಗಳು ವ್ಯಕ್ತವಾಗುತ್ತಿವೆ” ಎಂದು ಸುನಿಲ್‌ಕುಮಾರ್‌ ಹೇಳಿದ್ದಾರೆ.

ಇದನ್ನೂ ಓದಿರಿ: ನಾರಾಯಣ ಗುರುಗಳ ಪಠ್ಯಕ್ಕೆ ಕತ್ತರಿ: ‘ನನಗೆ ಅದು ನೆನಪಾಗುತ್ತಿಲ್ಲ’ ಎಂದ ಪಠ್ಯ ಪುಸ್ತಕ ಸಮಿತಿ ಸದಸ್ಯ ಡಾ. ಅನಂತಕೃಷ್ಣ…

“ಕನ್ನಡದ ಬದಲು ಸಮಾಜ ವಿಜ್ಞಾನದಲ್ಲಿದ್ದರೆ ಎಲ್ಲಾ ವಿದ್ಯಾರ್ಥಿಗಳು ಅಭ್ಯಾಸ ಮಾಡುವುದಕ್ಕೆ ಸಾಧ್ಯವಾಗುತ್ತದೆ. ಮತ್ತು ಅದು ಸರ್ವ ಸಮ್ಮತವಾಗಿರುತ್ತದೆ ಎಂಬುದು ವಿವಿಧ ಸಂಘಟನೆಗಳ ಹಾಗೂ ರಾಜ್ಯದ ಗಣ್ಯರ ಅಭಿಪ್ರಾಯವಾಗಿದೆ. ಕನ್ನಡ ಭಾಷಾ ವಿಷಯವನ್ನು ಎಲ್ಲರೂ ಅಭ್ಯಾಸ ಮಾಡಲು ಸಾಧ್ಯವಿಲ್ಲ. ಇದರಿಂದಾಗಿ ಬೇರೆ ಭಾಷಾ ಮಾಧ್ಯಮದ ವಿದ್ಯಾರ್ಥಿಗಳು ಬ್ರಹ್ಮಶ್ರೀ ನಾರಾಯಣಗುರುಗಳ ಪಠ್ಯದಿಂದ ವಂಚಿತರಾಗಲಿದ್ದಾರೆ” ಎಂದು ತಿಳಿಸಿದ್ದಾರೆ.

“ಈ ಹಿನ್ನೆಲೆಯಲ್ಲಿ ಎಲ್ಲಾ ಭಾಷಾ ಮಾಧ್ಯಮದ ವಿದ್ಯಾರ್ಥಿಗಳಿಗೆ ನಾರಾಯಣಗುರುಗಳ ತನ್ನ ಆದರ್ಶಗಳು ತಿಳಿಯಬೇಕೆಂದಾದಲ್ಲಿ ಸಮಾಜ ವಿಜ್ಞಾನ ವಿಷಯಕ್ಕೆ ಸೇರಿಸುವುದು ಸೂಕ್ತವೆಂಬುದು ನಾಡಿನ ಅನೇಕ ಶೈಕ್ಷಣಿಕ ತಜ್ಞರ ಹಾಗೂ ಹಿರಿಯರ ಒತ್ತಾಸೆಯಾಗಿದೆ. ಆದುದರಿಂದ, ಬ್ರಹ್ಮಶ್ರೀ ನಾರಾಯಣಗುರುಗಳ ಪಠ್ಯವನ್ನು ಸಮಾಜ ವಿಜ್ಞಾನ ವಿಷಯಕ್ಕೆ ವರ್ಗಾಯಿಸಲು ಅದಷ್ಟು ಶೀಘ್ರವಾಗಿ ಕ್ರಮ ಕೈಗೊಳ್ಳಬೇಕು” ಎಂದು ವಿನಂತಿ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ. ಬಂಗಾಳ ಎಸ್‌ಐಆರ್ | ಮೇಲ್ಮನವಿ ನ್ಯಾಯಮಂಡಳಿಗಳಿಗೆ ಕಾಲಮಿತಿ ನಿಗದಿಪಡಿಸಲು ಸಾಧ್ಯವಿಲ್ಲ ಎಂದ ಸುಪ್ರೀಂ ಕೋರ್ಟ್

ಪಶ್ಚಿಮ ಬಂಗಾಳದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಮೇಲ್ಮನವಿಗಳ ವಿಚಾರಣೆ ನಡೆಸುತ್ತಿರುವ ಮೇಲ್ಮನವಿ ನ್ಯಾಯಾಧಿಕರಣಗಳ ನಿರ್ಧಾರಗಳಿಗೆ ಯಾವುದೇ ನಿರ್ದಿಷ್ಟ ಸಮಯದ ಮಿತಿಯನ್ನು ನಿಗದಿಪಡಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್...

‘ಎಸ್‌ಐಆರ್‌’ನಿಂದ ಹೆಸರು ಡಿಲೀಟ್‌ ಆದವರಿಗೆ ‘ಹೊಸ ಮತದಾರರ ನೋಂದಣಿ’ ಯಾಕೆ?

ಅಂತಿಮ ಮತದಾರರ ಪಟ್ಟಿಯಲ್ಲಿ ಹೆಸರು ಕಾಣೆಯಾಗಿದ್ದರೆ ನಮೂನೆ ಸಂಖ್ಯೆ 6 ಅನ್ನು (Form No. 6) ಸಲ್ಲಿಸಿ ಎಂದು ಜುಲೈ 22 ರಂದು ಮಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ರಾಜ್ಯ ಮುಖ್ಯ ಚುನಾವಣಾ...

ನೀಟ್ ವಿರುದ್ಧ ನಿರ್ಣಯ ಅಂಗೀಕರಿಸಿದ ತಮಿಳುನಾಡು ವಿಧಾನಸಭೆ : ಸಭಾತ್ಯಾಗ ಮಾಡಿದ ಬಿಜೆಪಿಯ ಏಕೈಕ ಶಾಸಕ

ತಮಿಳುನಾಡು ವಿಧಾನಸಭೆಯು ಮಂಗಳವಾರ (ಆ.11) ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆಸಲಾಗುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯನ್ನು (ನೀಟ್) ರದ್ದುಗೊಳಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸುವ ನಿರ್ಣಯವನ್ನು ಸರ್ವಾನುಮತದಿಂದ ಅಂಗೀಕರಿಸಿದೆ. ಪರೀಕ್ಷೆಗಳನ್ನು ನಡೆಸುವಲ್ಲಿ ಪದೇ ಪದೇ...

‘ಬಹುಸಂಖ್ಯಾತ ಭಾವನೆಯು ಸಾಂವಿಧಾನಿಕ ಹಕ್ಕುಗಳನ್ನು ಮರೆಮಾಡಲು ಸಾಧ್ಯವಿಲ್ಲ’: ಇಸ್ಲಾಂ ಧರ್ಮ ಸ್ವೀಕರಿಸಿದ್ದ ಸಹೋದರಿಯರ ಅಕ್ರಮ ಬಂಧನಕ್ಕೆ ಅಲಹಾಬಾದ್ ಹೈಕೋರ್ಟ್ ತೀವ್ರ ತರಾಟೆ

ಹಿಂದೂ ಧರ್ಮದಿಂದ ಸ್ವಯಂಪ್ರೇರಿತವಾಗಿ ಇಸ್ಲಾಂ ಧರ್ಮಕ್ಕೆ ಮತಾಂತರಗೊಂಡ ನಂತರ, ಸ್ವಂತ ತಂದೆ ಹಾಗೂ ಉತ್ತರ ಪ್ರದೇಶ ರಾಜ್ಯ ಸರ್ಕಾರದ ಅಕ್ರಮ ಹಸ್ತಕ್ಷೇಪದಿಂದಾಗಿ ವರ್ಷಗಳ ಕಾಲ ತಮ್ಮ ಮೂಲಭೂತ ಸ್ವಾತಂತ್ರ್ಯವನ್ನು ಕಳೆದುಕೊಂಡಿದ್ದ ಇಬ್ಬರು ವಯಸ್ಕ...

ಸಂವಿಧಾನಬದ್ಧ ದಾಖಲೆಗಳಿದ್ದರೂ ಪಶ್ಚಿಮ ಬಂಗಾಳದ ಮುಸ್ಲಿಂ ಮಹಿಳೆ ‘ಒಳನುಸುಳುಕೋರ’ರೆಂದು ಬಾಂಗ್ಲಾಕ್ಕೆ ಗಡೀಪಾರು: ಭಾರತದಲ್ಲೇ ಉಳಿದ ಪತಿ, ಇಬ್ಬರು ಮಕ್ಕಳು

ಭಾರತೀಯ ಪೌರತ್ವವನ್ನು ಸ್ಪಷ್ಟವಾಗಿ ಸಾಬೀತುಪಡಿಸುವ ಜನನ ಪ್ರಮಾಣಪತ್ರ, ಮತದಾರರ ಗುರುತಿನ ಚೀಟಿ, ಪ್ಯಾನ್ ಕಾರ್ಡ್ ಮತ್ತು ಸ್ವಂತ ಭೂಮಿಯ ದಾಖಲೆಗಳು ಕೈಯಲ್ಲಿದ್ದರೂ, ಪಶ್ಚಿಮ ಬಂಗಾಳದ 40 ವರ್ಷದ ಮುಸ್ಲಿಂ ಮಹಿಳೆಯೊಬ್ಬರನ್ನು 'ಒಳನುಸುಳುಕೋರ' ಎಂಬ...

SIR ನಂತರ ಮತದಾರರ ಪಟ್ಟಿಯಿಂದ ನನ್ನ ಹೆಸರು ಡಿಲೀಟ್ ಆಗಿದೆ : ನಟ ಪ್ರಕಾಶ್ ರಾಜ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ನಂತರ ಬೆಂಗಳೂರಿನಲ್ಲಿ ಮತದಾರರ ಪಟ್ಟಿಯಿಂದ ನನ್ನ ಹೆಸರು ಡಿಲೀಟ್ ಆಗಿದೆ ಎಂದು ನಟ, ಸಾಮಾಜಿಕ ಹೋರಾಟಗಾರ ಪ್ರಕಾಶ್ ರಾಜ್ ಆರೋಪಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹಂಚಿಕೊಂಡಿರುವ...

ಸರ್ಕಾರಿ ಶಾಲೆಗಳ ಸುಧಾರಣೆಗೆ ದೇಶಾದ್ಯಂತ ಅಭಿಯಾನ ಘೋಷಿಸಿದ ಅಭಿಜೀತ್ ದೀಪ್ಕೆ

ಗ್ರಾಮೀಣ ಪ್ರದೇಶಗಳಲ್ಲಿನ ಸರ್ಕಾರಿ ಶಾಲೆಗಳನ್ನು ಸುಧಾರಿಸಲು ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ರಾಷ್ಟ್ರವ್ಯಾಪಿ ಅಭಿಯಾನ ಘೋಷಿಸಿದ್ದಾರೆ. "ಪೋಷಕರು ಶಾಲೆಗಳ ಮೂಲಭೂತ ಸೌಲಭ್ಯಗಳ ಸಾಮಾಜಿಕ ಲೆಕ್ಕಪರಿಶೋಧನೆ ನಡೆಸಬೇಕು, ಶಾಲೆಗಳನ್ನು ಸುಧಾರಿಸುವ...

ಕರ್ನಾಟಕದ ASDDO ಸಂಖ್ಯೆ 3 ಲಕ್ಷದಷ್ಟು ಇಳಿಕೆ : SIR ಪ್ರಕ್ರಿಯೆ ಬಗ್ಗೆಯೇ ಪ್ರಶ್ನೆಗಳನ್ನು ಹುಟ್ಟುಹಾಕಿದ ವರದಿ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಲ್ಲಿ ಇದುವರೆಗಿನ ಅತಿ ದೊಡ್ಡ ತಿದ್ದುಪಡಿ ಕರ್ನಾಟಕದಲ್ಲಿ ಆಗಿದ್ದು, ಮತದಾನದ ಹಕ್ಕನ್ನು ಕಳೆದುಕೊಳ್ಳುವ ಹಂತದಲ್ಲಿದ್ದ ಸುಮಾರು 3 ಲಕ್ಷ ಜನರನ್ನು ಮತ್ತೆ ಮತದಾರರ ಪಟ್ಟಿಗೆ...

ವಸತಿಗೃಹದಲ್ಲಿ ಹೋಮ-ಪೂಜೆ ಆಯೋಜನೆ; ಬಾಗಲಕೋಟೆ ತೋಟಗಾರಿಕೆ ವಿವಿ ಕುಲಪತಿಗಳಿಂದ ಅಧಿಕಾರ ದುರುಪಯೋಗ

ಬಾಗಲಕೋಟೆಯಲ್ಲಿರುವ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ವಸತಿಗೃಹದಲ್ಲಿ ಧಾರ್ಮಿಕ ಪೂಜಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಈ ಕಾರ್ಯಕ್ರಮಕ್ಕೆ ವಿಶ್ವವಿದ್ಯಾಲಯದ ಅಧಿಕೃತ‌ ಲೆಟರ್‌ಹೆಡ್‌ ಮೂಲಕ ಆಹ್ವಾನವನ್ನೂ ಹೊರಡಿಸುವ ಮೂಲಕ ಕುಲಪತಿ ಡಾ. ವಿಷ್ಣುವರ್ಧನ ಅವರು ಅಧಿಕಾರ ದುರುಪಯೋಗ...

ಕಪ್ಪು ಕುರ್ತಾ-ಪೈಜಾಮ ಧರಿಸಿದ್ದ ಕಲಾವಿದನಿಗೆ ಥಳಿಸಿದ ಹಿಂದುತ್ವ ಗುಂಪು: ಮುಸ್ಲಿಂ ಎಂದು ಶಂಕಿಸಿ ಅಮಾನವೀಯ ಹಲ್ಲೆ

ರಂಗಭೂಮಿ ಕಲಾವಿದರೊಬ್ಬರು ಕಪ್ಪು ಕುರ್ತಾ-ಪೈಜಾಮ ಧರಿಸಿದ್ದಕ್ಕಾಗಿ ಮುಸ್ಲಿಂ ಎಂದು ಶಂಕಿಸಿ ಹಿಂದುತ್ವ ಯುವಕರ ಗುಂಪೊಂದು ಅವರನ್ನು ಕ್ರೂರವಾಗಿ ಥಳಿಸಿರುವ ಘಟನೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯಲ್ಲಿ ನಡೆದಿದೆ. ಶುಭಂಕರ್ ದಾಸ್ ಶರ್ಮಾ...