Homeಕರ್ನಾಟಕನಾರಾಯಣಗುರು ಪಠ್ಯ ಸಮಾಜ ವಿಜ್ಞಾನಕ್ಕೆ ಸೇರಿಸಿ: ಸಚಿವ ಸುನಿಲ್‌ಕುಮಾರ್‌

ನಾರಾಯಣಗುರು ಪಠ್ಯ ಸಮಾಜ ವಿಜ್ಞಾನಕ್ಕೆ ಸೇರಿಸಿ: ಸಚಿವ ಸುನಿಲ್‌ಕುಮಾರ್‌

- Advertisement -
- Advertisement -

“ಸಮಾಜ ಸುಧಾರಕ ನಾರಾಯಣಗುರು ಅವರ ಪಠ್ಯವನ್ನು ಸಮಾಜ ವಿಜ್ಞಾನ ವಿಷಯಕ್ಕೆ ವರ್ಗಾಯಿಸಿ” ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ವಿ.ಸುನಿಲ್‌ಕುಮಾರ್‌‌ ಪತ್ರ ಬರೆದಿದ್ದಾರೆ.

ಹತ್ತನೇ ತರಗತಿ ಸಮಾಜ ವಿಜ್ಞಾನ ಪಠ್ಯದಲ್ಲಿದ್ದ ನಾರಾಯಣಗುರುಗಳ ಪಾಠವನ್ನು ರೋಹಿತ್‌ ಚಕ್ರತೀರ್ಥ ನೇತೃತ್ವದ ಪಠ್ಯ ಪರಿಶೀಲನಾ ಸಮಿತಿ ತೆಗೆದಿದ್ದರಿಂದ ಕರಾವಳಿ ಭಾಗದಲ್ಲಿ ಬಿಲ್ಲವ ಸಮಾಜದಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರಿಗೆ ಸುನಿಲ್‌ಕುಮಾರ್‌‌ ಪತ್ರ ಬರೆದಿದ್ದಾರೆ.

ಬಿಲ್ಲವ ಸಮಾಜದ ನಿರಂತರ ಪ್ರತಿರೋಧದ ಹೊರತಾಗಿಯೂ ಈ ಕುರಿತು ಸರ್ಕಾರ ಮೌನ ವಹಿಸಿತ್ತು. ಕನ್ನಡ ಭಾಷಾ ವಿಷಯದಲ್ಲಿ ನಾರಾಯಣಗುರುಗಳ ಪಾಠವಿದೆ ಎಂದು ಸಬೂಬು ಹೇಳುತ್ತಿತ್ತು. ಆದರೆ ಸಮಾಜ ವಿಜ್ಞಾನದಲ್ಲಿ ಪಾಠವಿದ್ದರೆ ಎಲ್ಲ ವಿದ್ಯಾರ್ಥಿಗಳು ಓದಲು ಸಾಧ್ಯವಾಗುತ್ತದೆ ಎಂದು ಸಮುದಾಯದ ಮುಖಂಡರು ಹೇಳುತ್ತಲೇ ಬಂದಿದ್ದರು. ಹೆದ್ದಾರಿ ಬಂದ್ ಸೇರಿದಂತೆ ಪಾದಯಾತ್ರೆ ನಡೆಸುವ ಮೂಲಕ ಬೃಹತ್ ಹೋರಾಟ ನಡೆಸುವುದಾಗಿ ಬಿಲ್ಲವ ಸಮುದಾಯ ಹೇಳಿತ್ತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಈ ಹಿಂದೆ ಗಣರಾಜ್ಯೋತ್ಸವ ಟ್ಯಾಬ್ಲೋ ವಿಚಾರದಲ್ಲಿಯೂ ನಾರಾಯಣಗುರುಗಳಿಗೆ ಕೇಂದ್ರ ಸರ್ಕಾರ ಅವಮಾನ ಮಾಡಿತ್ತು. ಇದರ ನಡುವೆ ಪಠ್ಯ ಕೈಬಿಡಲಾಗಿತ್ತು. ಮಂಗಳೂರಿನ ವಿಮಾನ ನಿಲ್ದಾಣಕ್ಕೆ ಕೋಟಿ ಚನ್ನಯ್ಯನವರ ಹೆಸರಿಡಬೇಕು, ಬಿಲ್ಲವ ಅಭಿವೃದ್ದಿ ಮಂಡಳಿ ರಚಿಸಬೇಕು, ಬಿಲ್ಲವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಸೇರಿ ಹಲವು ಸೌಲಭ್ಯಗಳಿಗಾಗಿ ಬಿಲ್ಲವ ಸಮಾಜ ಹೋರಾಟ ಮಾಡುತ್ತಲೇ ಬಂದಿದೆ. ಆದರೆ ಇವೆಲ್ಲಕ್ಕೂ ಬಿಜೆಪಿ ಸರ್ಕಾರ ನಿರ್ಲಕ್ಷ್ಯ ತೋರುತ್ತಿರುವುದು ಬಿಲ್ಲವ ಮುಖಂಡರನ್ನು ಕೆರಳಿಸಿತ್ತು. ಹಾಗಾಗಿ ಬಿಲ್ಲವ ಸಂಘ ಸಂಸ್ಥೆಗಳು ರಿಲೇ ರೀತಿಯ ಪಾದಯಾತ್ರೆ, ಹೆದ್ದಾರಿ ಬಂದ್ ಸೇರಿದಂತೆ 50 ದಿನಗಳವರೆಗೆ ನಿರಂತರ ಪ್ರತಿಭಟನೆ ನಡೆಸಲು ತೀರ್ಮಾನಿಸಿದ್ದವು.

ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಕೋಶಾಧಿಕಾರಿ ಪದ್ಮರಾಜ್ ಆರ್, ಕಂಕನಾಡಿ ಗರಡಿ ಕ್ಷೇತ್ರದ ಆಡಳಿತ ಮೊಕ್ತೇಸರ ಚಿತ್ತರಂಜನ್ ಕೆ, ನಾರಾಯಣಗುರು ವಿಚಾರ ವೇದಿಕೆ ರಾಜ್ಯಾಧ್ಯಕ್ಷ ಸತ್ಯಜಿತ್ ಸುರತ್ಕಲ್, ಶ್ರೀಗುರು ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಶೈಲೇಂದ್ರ ಬೈ, ಬಿಲ್ಲವ ಸಂಘದ ಅಧ್ಯಕ್ಷ ಸತೀಶ್ ಸೇರಿದಂತೆ ನೂರಾರು ಹೋರಾಟಗಾರರು, ಮುಖಂಡರು ಸರ್ಕಾರದ ವಿರುದ್ಧ ಗುಡುಗಿದ್ದರು. ಈ ಹಿನ್ನೆಲೆಯಲ್ಲಿ ಸಚಿವರ ಪತ್ರ ಹೊರಬಿದ್ದಿದೆ.

ಸಚಿವರು ಹೇಳಿರುವುದೇನು?

“ಈ ಬಾರಿ, ಪಠ್ಯ ಪುಸ್ತಕದಲ್ಲಿ ಬ್ರಹ್ಮಶ್ರೀ ಗುರುನಾರಾಯಣ ಗುರುಗಳ ಕುರಿತಂತೆ ಅಳವಡಿಸಲಾಗಿದ್ದ ವಿಷಯಗಳ ಬಗ್ಗೆ, ಗೊಂದಲಗಳು ನಿರ್ಮಾಣವಾಗಿದ್ದು, ಈ ಕುರಿತು ಹಲವರು ನಮ್ಮ ಬಳಿ ಚರ್ಚೆಯನ್ನು ಮಾಡಿರುತ್ತಾರೆ. ಬ್ರಹ್ಮ ಶ್ರೀ ನಾರಾಯಣಗುರುಗಳ ವಿಷಯಗಳು ಈ ಹಿಂದೆ ಸಮಾಜ ವಿಜ್ಞಾನ ವಿಷಯದಲ್ಲಿ ಇದ್ದು, ಅದನ್ನು ವಿದ್ಯಾರ್ಥಿಗಳು ಅಭ್ಯಾಸ ಮಾಡುತ್ತಿದ್ದರು. ಈ ವರ್ಷದಿಂದ ಅದನ್ನು ಕನ್ನಡ ವಿಷಯಕ್ಕೆ ವರ್ಗಾಯಿಸಲಾಗಿದೆ. ಕನ್ನಡ ವಿಷಯದಲ್ಲಿ ಬ್ರಹ್ಮಶ್ರೀ ನಾರಾಯಣಗುರುಗಳ ಪಠ್ಯವನ್ನು ಸೇರಿಸಿರುವುದರ ಬಗ್ಗೆ ಹಲವು ಆಕ್ಷೇಪಣೆಗಳು ವ್ಯಕ್ತವಾಗುತ್ತಿವೆ” ಎಂದು ಸುನಿಲ್‌ಕುಮಾರ್‌ ಹೇಳಿದ್ದಾರೆ.

ಇದನ್ನೂ ಓದಿರಿ: ನಾರಾಯಣ ಗುರುಗಳ ಪಠ್ಯಕ್ಕೆ ಕತ್ತರಿ: ‘ನನಗೆ ಅದು ನೆನಪಾಗುತ್ತಿಲ್ಲ’ ಎಂದ ಪಠ್ಯ ಪುಸ್ತಕ ಸಮಿತಿ ಸದಸ್ಯ ಡಾ. ಅನಂತಕೃಷ್ಣ…

“ಕನ್ನಡದ ಬದಲು ಸಮಾಜ ವಿಜ್ಞಾನದಲ್ಲಿದ್ದರೆ ಎಲ್ಲಾ ವಿದ್ಯಾರ್ಥಿಗಳು ಅಭ್ಯಾಸ ಮಾಡುವುದಕ್ಕೆ ಸಾಧ್ಯವಾಗುತ್ತದೆ. ಮತ್ತು ಅದು ಸರ್ವ ಸಮ್ಮತವಾಗಿರುತ್ತದೆ ಎಂಬುದು ವಿವಿಧ ಸಂಘಟನೆಗಳ ಹಾಗೂ ರಾಜ್ಯದ ಗಣ್ಯರ ಅಭಿಪ್ರಾಯವಾಗಿದೆ. ಕನ್ನಡ ಭಾಷಾ ವಿಷಯವನ್ನು ಎಲ್ಲರೂ ಅಭ್ಯಾಸ ಮಾಡಲು ಸಾಧ್ಯವಿಲ್ಲ. ಇದರಿಂದಾಗಿ ಬೇರೆ ಭಾಷಾ ಮಾಧ್ಯಮದ ವಿದ್ಯಾರ್ಥಿಗಳು ಬ್ರಹ್ಮಶ್ರೀ ನಾರಾಯಣಗುರುಗಳ ಪಠ್ಯದಿಂದ ವಂಚಿತರಾಗಲಿದ್ದಾರೆ” ಎಂದು ತಿಳಿಸಿದ್ದಾರೆ.

“ಈ ಹಿನ್ನೆಲೆಯಲ್ಲಿ ಎಲ್ಲಾ ಭಾಷಾ ಮಾಧ್ಯಮದ ವಿದ್ಯಾರ್ಥಿಗಳಿಗೆ ನಾರಾಯಣಗುರುಗಳ ತನ್ನ ಆದರ್ಶಗಳು ತಿಳಿಯಬೇಕೆಂದಾದಲ್ಲಿ ಸಮಾಜ ವಿಜ್ಞಾನ ವಿಷಯಕ್ಕೆ ಸೇರಿಸುವುದು ಸೂಕ್ತವೆಂಬುದು ನಾಡಿನ ಅನೇಕ ಶೈಕ್ಷಣಿಕ ತಜ್ಞರ ಹಾಗೂ ಹಿರಿಯರ ಒತ್ತಾಸೆಯಾಗಿದೆ. ಆದುದರಿಂದ, ಬ್ರಹ್ಮಶ್ರೀ ನಾರಾಯಣಗುರುಗಳ ಪಠ್ಯವನ್ನು ಸಮಾಜ ವಿಜ್ಞಾನ ವಿಷಯಕ್ಕೆ ವರ್ಗಾಯಿಸಲು ಅದಷ್ಟು ಶೀಘ್ರವಾಗಿ ಕ್ರಮ ಕೈಗೊಳ್ಳಬೇಕು” ಎಂದು ವಿನಂತಿ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಮಿಳುನಾಡು: ಕ್ಷೇತ್ರ ಪುನರ್ವಿಂಗಡೆ ವಿರುದ್ಧ ರಾಜ್ಯಾದ್ಯಂತ ಬೃಹತ್ ಪ್ರತಿಭಟನೆ: ಕೇಂದ್ರ ಸರ್ಕಾರಕ್ಕೆ ಎಂ.ಕೆ. ಸ್ಟಾಲಿನ್ ಎಚ್ಚರಿಕೆ

ಚೆನ್ನೈ: ಏಪ್ರಿಲ್ 16 ರಂದು ಸಂಸತ್ತಿನ ವಿಶೇಷ ಅಧಿವೇಶನ ಕರೆಯಲಾಗಿರುವ ಪ್ರಸ್ತಾವಿತ ಕ್ಷೇತ್ರ ಪುನರ್ವಿಂಗಡಣೆ ಪ್ರಕ್ರಿಯೆಯ ವಿರುದ್ಧ ರಾಜ್ಯಾದ್ಯಂತ ಬೃಹತ್ ಪ್ರತಿಭಟನೆಗಳ ಬಗ್ಗೆ ತಮಿಳುನಾಡು ಮುಖ್ಯಮಂತ್ರಿ ಮತ್ತು ಡಿಎಂಕೆ ಅಧ್ಯಕ್ಷರು ಮಂಗಳವಾರ ಬಿಜೆಪಿ...

ಪಶ್ಚಿಮ ಏಷ್ಯಾ ಸಂಘರ್ಷವು 25 ಲಕ್ಷ ಭಾರತೀಯರನ್ನು ಬಡತನಕ್ಕೆ ತಳ್ಳುವ ಅಪಾಯವಿದೆ : ವಿಶ್ವಸಂಸ್ಥೆ ವರದಿ

ಪಶ್ಚಿಮ ಏಷ್ಯಾ ಸಂಘರ್ಷವು 25 ಲಕ್ಷ ಭಾರತೀಯರನ್ನು ಬಡತನದ ಕೂಪಕ್ಕೆ ತಳ್ಳಬಹುದು ಮತ್ತು ದೇಶದ ಮಾನವ ಅಭಿವೃದ್ಧಿ ಪ್ರಗತಿಯಲ್ಲಿ ಸ್ವಲ್ಪ ಮಟ್ಟಿನ ಹಿನ್ನಡೆಯನ್ನುಂಟು ಮಾಡಬಹುದು ಎಂದು ವಿಶ್ವಸಂಸ್ಥೆಯ ಅಭಿವೃದ್ಧಿ ಕಾರ್ಯಕ್ರಮದ (ಯುಎನ್‌ಡಿಪಿ) ಹೊಸ...

ಗೋ-ರಕ್ಷಕರ ದಾಳಿಯ ನಂತರ ವ್ಯಕ್ತಿ ನಾಪತ್ತೆ: ಜಮ್ಮುವಿನ ರಾಂಬನ್‌ನಲ್ಲಿ ತೀವ್ರ ಪ್ರತಿಭಟನೆ; ಸಾಮಾಜಿಕ ಮಾಧ್ಯಮಗಳಲ್ಲೂ ಆಕ್ರೋಶ

ಗೋರಕ್ಷಕರ ದಾಳಿಗೆ ಸಂಬಂಧಿಸಿ ಸ್ಥಳೀಯ ನಿವಾಸಿ ತನ್ವೀರ್ ಅಹ್ಮದ್ ಚೋಪನ್ ನಾಪತ್ತೆಯಾದ ನಂತರ ಸೋಮವಾರ ರಾಂಬನ್ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 44 ರಲ್ಲಿ ಸಾವಿರಾರು ಜನರು ಸಂಚಾರ ತಡೆದು ಪ್ರತಿಭಟಿಸಿದ್ದಾರೆ. ಪೊಲೀಸರ ಪ್ರಕಾರ,...

ನಿತೀಶ್ ಕುಮಾರ್ ರಾಜೀನಾಮೆ : ಬಿಹಾರದ ಹೊಸ ಸಿಎಂ ಆಗಿ ಬಿಜೆಪಿಯ ಸಾಮ್ರಾಟ್ ಚೌಧರಿ ಆಯ್ಕೆ

ಬಿಹಾರದ ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ ನೀಡಿದ್ದು, ಹೊಸ ಮುಖ್ಯಮಂತ್ರಿಯಾಗಿ ಬಿಜೆಪಿಯ ಸಾಮ್ರಾಟ್ ಚೌಧರಿ ಅವರನ್ನು ಆಯ್ಕೆ ಮಾಡಲಾಗಿದೆ. ಪಾಟ್ನಾದ ಲೋಕ ಭವನದಲ್ಲಿ ಮಂಗಳವಾರ (ಏ.14) ರಾಜ್ಯಪಾಲ ಲೆಫ್ಟಿನೆಂಟ್ ಜನರಲ್ (ನಿವೃತ್ತ)...

ಮುಂಬೈ ಸಂಗೀತ ಕಾರ್ಯಕ್ರಮದಲ್ಲಿ ಮಾದಕ ದ್ರವ್ಯ ಸೇವನೆಯಿಂದ ಇಬ್ಬರು ವಿದ್ಯಾರ್ಥಿಗಳು ಸಾವು, ಐವರ ಬಂಧನ; ತನಿಖೆ

ಮಂಗಳವಾರ ಮುಂಬೈನಲ್ಲಿ ನಡೆದ ಸಂಗೀತ ಕಾರ್ಯಕ್ರಮವೊಂದರಲ್ಲಿ ಮಾದಕ ದ್ರವ್ಯ ಸೇವಿಸಿದ ಆರೋಪದ ಮೇಲೆ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, ಮತ್ತೊಬ್ಬರ ಸ್ಥಿತಿ ಗಂಭೀರವಾಗಿದೆ. ದಕ್ಷಿಣ ಮುಂಬೈನ ಪ್ರತಿಷ್ಠಿತ ಸಂಸ್ಥೆಯ ವಿದ್ಯಾರ್ಥಿಗಳು ಎಂಬಿಎ ಓದುತ್ತಿದ್ದರು ಎಂದು...

ನಸೀರ್ ಅಹ್ಮದ್‌ರನ್ನು ವಜಾಗೊಳಿಸಿದ್ದೇಕೆ… ಡಿಕೆಶಿ ಹೇಳಿದ್ದೇನು?  

ಮುಖ್ಯಮಂತ್ರಿಗಳು ತಮ್ಮದೇ ಆದ ವಿವಿಧ ಮೂಲಗಳಿಂದ ಮಾಹಿತಿ ಪಡೆದು, ಪಕ್ಷದ ಹಿತದೃಷ್ಟಿಯಿಂದ ನಸೀರ್ ಅಹ್ಮದ್ ವಿಚಾರದಲ್ಲಿ ತೀರ್ಮಾನ ತೆಗೆದುಕೊಂಡಿದ್ದಾರೆ ಎಂದು ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಮಂಗಳವಾರ (ಏ.14)...

ಆಟೋ ಪರ್ಮಿಟ್‌ಗಳಿಗೆ ಮರಾಠಿ ಭಾಷೆ ಕಡ್ಡಾಯ ನಿಯಮ; ಆರ್‌ಟಿಒ ಅಧಿಕಾರಿಗೆ ಬಿಷ್ಣೋಯ್ ಗ್ಯಾಂಗ್‌ನಿಂದ ಬೆದರಿಕೆ

ಕಳವಳಕಾರಿ ಬೆಳವಣಿಗೆಯಲ್ಲಿ, ಆಟೋ-ರಿಕ್ಷಾ ಪರ್ಮಿಟ್ ಪರಿಶೀಲನೆಗೆ ಮರಾಠಿ ಜ್ಞಾನವನ್ನು ಕಡ್ಡಾಯಗೊಳಿಸುವ ರಾಜ್ಯ ಸರ್ಕಾರದ ಆದೇಶಕ್ಕೆ ವಿರೋಧ ವ್ಯಕ್ತವಾಗಿದ್ದು, ಇದರಲ್ಲಿ ಬಿಷ್ಣೋಯ್ ಗ್ಯಾಂಗ್ ಭಾಗಿಯಾಗಿದೆ ಎಂದು ಆರೋಪಿಸಲಾಗಿದೆ. ಪ್ರಾದೇಶಿಕ ಸಾರಿಗೆ ಕಚೇರಿ (ಆರ್‌ಟಿಒ) ಅಧಿಕಾರಿ...

‘ನಾನು ಪ್ರೀತಿಯಲ್ಲಿ ನಂಬಿಕೆ ಇಡುತ್ತೇನೆ, ಬುಲ್ಡೋಜರ್‌ ರಾಜಕೀಯದಲ್ಲಿ ಅಲ್ಲ’: ಯುಪಿ ಮಾದರಿ ವಿವಾದದ ನಡುವೆ ಯೋಗಿ ವಿರುದ್ಧ ಮಮತಾ ದಾಳಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ ದಾಳಿ ನಡೆಸಿದ್ದಾರೆ. ಅವರು ಬುಲ್ಡೋಜರ್ ರಾಜಕೀಯದಲ್ಲಿ ನಂಬಿಕೆ ಇಡುವುದಿಲ್ಲ ಎಂದು ಹೇಳಿದ್ದಾರೆ ಮತ್ತು ಉತ್ತರ ಪ್ರದೇಶದಲ್ಲಿ...

ಬಿಹಾರ| ಸಿಎಂ ಹುದ್ದೆಗೆ ರಾಜೀನಾಮೆ ನೀಡಲು ಅಣಿಯಾದ ನಿತೀಶ್ ಕುಮಾರ್ : ಸಂಪುಟ ವಿಸರ್ಜನೆಗೆ ಶಿಫಾರಸು

ಬಿಹಾರದಲ್ಲಿ ಹೊಸ ಸರ್ಕಾರ ರಚನೆ ಕಸರತ್ತು ತೀವ್ರಗೊಂಡಿದೆ. ಮುಖ್ಯಮಂತ್ರಿ ನಿತೀಶ್ ಕುಮಾರ್ ರಾಜ್ಯಪಾಲರನ್ನು ಭೇಟಿಯಾಗಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲು ಅಣಿಯಾಗಿದ್ದು, ಅದಕ್ಕೂ ಮೊದಲು ಸಚಿವ ಸಂಪುಟ ವಿಸರ್ಜಿಸಲು ಅವರು ಶಿಫಾರಸು ಮಾಡಿದ್ದಾರೆ....

‘ರಾತ್ರೋರಾತ್ರಿ ಒಪ್ಪಂದ ಸಾಧ್ಯವಿಲ್ಲ’: ಪಶ್ಚಿಮ ಏಷ್ಯಾ ಯುದ್ಧದ ಕುರಿತು ನಿರಂತರ ಮಾತುಕತೆಗೆ ವಿಶ್ವಸಂಸ್ಥೆ ಒತ್ತಾಯ

ವಿಶ್ವಸಂಸ್ಥೆಯ ಮುಖ್ಯಸ್ಥ ಆಂಟೋನಿಯೊ ಗುಟೆರೆಸ್ ಅವರು ಅಮೆರಿಕ ಮತ್ತು ಇರಾನ್ ನಡುವೆ ನಿರಂತರ ರಾಜತಾಂತ್ರಿಕ ಮಾತುಕತೆಗೆ ಕರೆ ನೀಡಿದ್ದಾರೆ. "ಒಂದು ಒಪ್ಪಂದವನ್ನು ರಾತ್ರೋರಾತ್ರಿ ತಲುಪಲು ಸಾಧ್ಯವಿಲ್ಲ" ಎಂದು ಒತ್ತಿ ಹೇಳಿದ ಅವರು ಪಶ್ಚಿಮ...