Homeಕರ್ನಾಟಕನಾರಾಯಣಗುರು ಪಠ್ಯ ಸಮಾಜ ವಿಜ್ಞಾನಕ್ಕೆ ಸೇರಿಸಿ: ಸಚಿವ ಸುನಿಲ್‌ಕುಮಾರ್‌

ನಾರಾಯಣಗುರು ಪಠ್ಯ ಸಮಾಜ ವಿಜ್ಞಾನಕ್ಕೆ ಸೇರಿಸಿ: ಸಚಿವ ಸುನಿಲ್‌ಕುಮಾರ್‌

- Advertisement -
- Advertisement -

“ಸಮಾಜ ಸುಧಾರಕ ನಾರಾಯಣಗುರು ಅವರ ಪಠ್ಯವನ್ನು ಸಮಾಜ ವಿಜ್ಞಾನ ವಿಷಯಕ್ಕೆ ವರ್ಗಾಯಿಸಿ” ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ವಿ.ಸುನಿಲ್‌ಕುಮಾರ್‌‌ ಪತ್ರ ಬರೆದಿದ್ದಾರೆ.

ಹತ್ತನೇ ತರಗತಿ ಸಮಾಜ ವಿಜ್ಞಾನ ಪಠ್ಯದಲ್ಲಿದ್ದ ನಾರಾಯಣಗುರುಗಳ ಪಾಠವನ್ನು ರೋಹಿತ್‌ ಚಕ್ರತೀರ್ಥ ನೇತೃತ್ವದ ಪಠ್ಯ ಪರಿಶೀಲನಾ ಸಮಿತಿ ತೆಗೆದಿದ್ದರಿಂದ ಕರಾವಳಿ ಭಾಗದಲ್ಲಿ ಬಿಲ್ಲವ ಸಮಾಜದಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರಿಗೆ ಸುನಿಲ್‌ಕುಮಾರ್‌‌ ಪತ್ರ ಬರೆದಿದ್ದಾರೆ.

ಬಿಲ್ಲವ ಸಮಾಜದ ನಿರಂತರ ಪ್ರತಿರೋಧದ ಹೊರತಾಗಿಯೂ ಈ ಕುರಿತು ಸರ್ಕಾರ ಮೌನ ವಹಿಸಿತ್ತು. ಕನ್ನಡ ಭಾಷಾ ವಿಷಯದಲ್ಲಿ ನಾರಾಯಣಗುರುಗಳ ಪಾಠವಿದೆ ಎಂದು ಸಬೂಬು ಹೇಳುತ್ತಿತ್ತು. ಆದರೆ ಸಮಾಜ ವಿಜ್ಞಾನದಲ್ಲಿ ಪಾಠವಿದ್ದರೆ ಎಲ್ಲ ವಿದ್ಯಾರ್ಥಿಗಳು ಓದಲು ಸಾಧ್ಯವಾಗುತ್ತದೆ ಎಂದು ಸಮುದಾಯದ ಮುಖಂಡರು ಹೇಳುತ್ತಲೇ ಬಂದಿದ್ದರು. ಹೆದ್ದಾರಿ ಬಂದ್ ಸೇರಿದಂತೆ ಪಾದಯಾತ್ರೆ ನಡೆಸುವ ಮೂಲಕ ಬೃಹತ್ ಹೋರಾಟ ನಡೆಸುವುದಾಗಿ ಬಿಲ್ಲವ ಸಮುದಾಯ ಹೇಳಿತ್ತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಈ ಹಿಂದೆ ಗಣರಾಜ್ಯೋತ್ಸವ ಟ್ಯಾಬ್ಲೋ ವಿಚಾರದಲ್ಲಿಯೂ ನಾರಾಯಣಗುರುಗಳಿಗೆ ಕೇಂದ್ರ ಸರ್ಕಾರ ಅವಮಾನ ಮಾಡಿತ್ತು. ಇದರ ನಡುವೆ ಪಠ್ಯ ಕೈಬಿಡಲಾಗಿತ್ತು. ಮಂಗಳೂರಿನ ವಿಮಾನ ನಿಲ್ದಾಣಕ್ಕೆ ಕೋಟಿ ಚನ್ನಯ್ಯನವರ ಹೆಸರಿಡಬೇಕು, ಬಿಲ್ಲವ ಅಭಿವೃದ್ದಿ ಮಂಡಳಿ ರಚಿಸಬೇಕು, ಬಿಲ್ಲವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಸೇರಿ ಹಲವು ಸೌಲಭ್ಯಗಳಿಗಾಗಿ ಬಿಲ್ಲವ ಸಮಾಜ ಹೋರಾಟ ಮಾಡುತ್ತಲೇ ಬಂದಿದೆ. ಆದರೆ ಇವೆಲ್ಲಕ್ಕೂ ಬಿಜೆಪಿ ಸರ್ಕಾರ ನಿರ್ಲಕ್ಷ್ಯ ತೋರುತ್ತಿರುವುದು ಬಿಲ್ಲವ ಮುಖಂಡರನ್ನು ಕೆರಳಿಸಿತ್ತು. ಹಾಗಾಗಿ ಬಿಲ್ಲವ ಸಂಘ ಸಂಸ್ಥೆಗಳು ರಿಲೇ ರೀತಿಯ ಪಾದಯಾತ್ರೆ, ಹೆದ್ದಾರಿ ಬಂದ್ ಸೇರಿದಂತೆ 50 ದಿನಗಳವರೆಗೆ ನಿರಂತರ ಪ್ರತಿಭಟನೆ ನಡೆಸಲು ತೀರ್ಮಾನಿಸಿದ್ದವು.

ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಕೋಶಾಧಿಕಾರಿ ಪದ್ಮರಾಜ್ ಆರ್, ಕಂಕನಾಡಿ ಗರಡಿ ಕ್ಷೇತ್ರದ ಆಡಳಿತ ಮೊಕ್ತೇಸರ ಚಿತ್ತರಂಜನ್ ಕೆ, ನಾರಾಯಣಗುರು ವಿಚಾರ ವೇದಿಕೆ ರಾಜ್ಯಾಧ್ಯಕ್ಷ ಸತ್ಯಜಿತ್ ಸುರತ್ಕಲ್, ಶ್ರೀಗುರು ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಶೈಲೇಂದ್ರ ಬೈ, ಬಿಲ್ಲವ ಸಂಘದ ಅಧ್ಯಕ್ಷ ಸತೀಶ್ ಸೇರಿದಂತೆ ನೂರಾರು ಹೋರಾಟಗಾರರು, ಮುಖಂಡರು ಸರ್ಕಾರದ ವಿರುದ್ಧ ಗುಡುಗಿದ್ದರು. ಈ ಹಿನ್ನೆಲೆಯಲ್ಲಿ ಸಚಿವರ ಪತ್ರ ಹೊರಬಿದ್ದಿದೆ.

ಸಚಿವರು ಹೇಳಿರುವುದೇನು?

“ಈ ಬಾರಿ, ಪಠ್ಯ ಪುಸ್ತಕದಲ್ಲಿ ಬ್ರಹ್ಮಶ್ರೀ ಗುರುನಾರಾಯಣ ಗುರುಗಳ ಕುರಿತಂತೆ ಅಳವಡಿಸಲಾಗಿದ್ದ ವಿಷಯಗಳ ಬಗ್ಗೆ, ಗೊಂದಲಗಳು ನಿರ್ಮಾಣವಾಗಿದ್ದು, ಈ ಕುರಿತು ಹಲವರು ನಮ್ಮ ಬಳಿ ಚರ್ಚೆಯನ್ನು ಮಾಡಿರುತ್ತಾರೆ. ಬ್ರಹ್ಮ ಶ್ರೀ ನಾರಾಯಣಗುರುಗಳ ವಿಷಯಗಳು ಈ ಹಿಂದೆ ಸಮಾಜ ವಿಜ್ಞಾನ ವಿಷಯದಲ್ಲಿ ಇದ್ದು, ಅದನ್ನು ವಿದ್ಯಾರ್ಥಿಗಳು ಅಭ್ಯಾಸ ಮಾಡುತ್ತಿದ್ದರು. ಈ ವರ್ಷದಿಂದ ಅದನ್ನು ಕನ್ನಡ ವಿಷಯಕ್ಕೆ ವರ್ಗಾಯಿಸಲಾಗಿದೆ. ಕನ್ನಡ ವಿಷಯದಲ್ಲಿ ಬ್ರಹ್ಮಶ್ರೀ ನಾರಾಯಣಗುರುಗಳ ಪಠ್ಯವನ್ನು ಸೇರಿಸಿರುವುದರ ಬಗ್ಗೆ ಹಲವು ಆಕ್ಷೇಪಣೆಗಳು ವ್ಯಕ್ತವಾಗುತ್ತಿವೆ” ಎಂದು ಸುನಿಲ್‌ಕುಮಾರ್‌ ಹೇಳಿದ್ದಾರೆ.

ಇದನ್ನೂ ಓದಿರಿ: ನಾರಾಯಣ ಗುರುಗಳ ಪಠ್ಯಕ್ಕೆ ಕತ್ತರಿ: ‘ನನಗೆ ಅದು ನೆನಪಾಗುತ್ತಿಲ್ಲ’ ಎಂದ ಪಠ್ಯ ಪುಸ್ತಕ ಸಮಿತಿ ಸದಸ್ಯ ಡಾ. ಅನಂತಕೃಷ್ಣ…

“ಕನ್ನಡದ ಬದಲು ಸಮಾಜ ವಿಜ್ಞಾನದಲ್ಲಿದ್ದರೆ ಎಲ್ಲಾ ವಿದ್ಯಾರ್ಥಿಗಳು ಅಭ್ಯಾಸ ಮಾಡುವುದಕ್ಕೆ ಸಾಧ್ಯವಾಗುತ್ತದೆ. ಮತ್ತು ಅದು ಸರ್ವ ಸಮ್ಮತವಾಗಿರುತ್ತದೆ ಎಂಬುದು ವಿವಿಧ ಸಂಘಟನೆಗಳ ಹಾಗೂ ರಾಜ್ಯದ ಗಣ್ಯರ ಅಭಿಪ್ರಾಯವಾಗಿದೆ. ಕನ್ನಡ ಭಾಷಾ ವಿಷಯವನ್ನು ಎಲ್ಲರೂ ಅಭ್ಯಾಸ ಮಾಡಲು ಸಾಧ್ಯವಿಲ್ಲ. ಇದರಿಂದಾಗಿ ಬೇರೆ ಭಾಷಾ ಮಾಧ್ಯಮದ ವಿದ್ಯಾರ್ಥಿಗಳು ಬ್ರಹ್ಮಶ್ರೀ ನಾರಾಯಣಗುರುಗಳ ಪಠ್ಯದಿಂದ ವಂಚಿತರಾಗಲಿದ್ದಾರೆ” ಎಂದು ತಿಳಿಸಿದ್ದಾರೆ.

“ಈ ಹಿನ್ನೆಲೆಯಲ್ಲಿ ಎಲ್ಲಾ ಭಾಷಾ ಮಾಧ್ಯಮದ ವಿದ್ಯಾರ್ಥಿಗಳಿಗೆ ನಾರಾಯಣಗುರುಗಳ ತನ್ನ ಆದರ್ಶಗಳು ತಿಳಿಯಬೇಕೆಂದಾದಲ್ಲಿ ಸಮಾಜ ವಿಜ್ಞಾನ ವಿಷಯಕ್ಕೆ ಸೇರಿಸುವುದು ಸೂಕ್ತವೆಂಬುದು ನಾಡಿನ ಅನೇಕ ಶೈಕ್ಷಣಿಕ ತಜ್ಞರ ಹಾಗೂ ಹಿರಿಯರ ಒತ್ತಾಸೆಯಾಗಿದೆ. ಆದುದರಿಂದ, ಬ್ರಹ್ಮಶ್ರೀ ನಾರಾಯಣಗುರುಗಳ ಪಠ್ಯವನ್ನು ಸಮಾಜ ವಿಜ್ಞಾನ ವಿಷಯಕ್ಕೆ ವರ್ಗಾಯಿಸಲು ಅದಷ್ಟು ಶೀಘ್ರವಾಗಿ ಕ್ರಮ ಕೈಗೊಳ್ಳಬೇಕು” ಎಂದು ವಿನಂತಿ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...