Homeಕರ್ನಾಟಕಬಿಬಿಎಂಪಿ ಆಯುಕ್ತ ಸೇರಿದಂತೆ 17 ಐಎಎಸ್ ಅಧಿಕಾರಿಗಳ ವರ್ಗಾವಣೆ!

ಬಿಬಿಎಂಪಿ ಆಯುಕ್ತ ಸೇರಿದಂತೆ 17 ಐಎಎಸ್ ಅಧಿಕಾರಿಗಳ ವರ್ಗಾವಣೆ!

- Advertisement -
- Advertisement -

ಹೊಸದಾಗಿ ಸೃಷ್ಟಿಸಿರುವ ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮುಖ್ಯ ಆಯುಕ್ತರ ಹುದ್ದೆಗೆ ಗೌರವ್ ಗುಪ್ತಾ ಅವರನ್ನು ನೇಮಿಸಲಾಗಿದ್ದು, ಇವರ ಈ ಮೊದಲು ಬಿಬಿಎಂಪಿಯ ಆಡಳಿತಾಧಿಕಾರಿಯಾಗಿದ್ದರು. ಈಗ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಹುದ್ದೆಯನ್ನೂ ಗುಪ್ತಾ ಅವರಿಗೆ ಹೆಚ್ಚುವರಿಯಾಗಿ ನೀಡಲಾಗಿದೆ. ಇವರೂ ಸೇರಿದಂತೆ 17 ಐಎಎಸ್‌ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ.

ಗೌರವ್ ಗುಪ್ತಾ ನೇಮಕದಿಂದ ತೆರವಾಗಿರುವ ಆಡಳಿತಾಧಿಕಾರಿ ಹುದ್ದೆಗೆ ಹಿರಿಯ ಐಎಎಸ್‌ ಅಧಿಕಾರಿ ರಾಕೇಶ್ ಸಿಂಗ್‌ ಅವರನ್ನು ವರ್ಗಾವಣೆ ಮಾಡಲಾಗಿದೆ. ರಾಕೇಶ್‌ ಸಿಂಗ್‌ ಅವರಿಗೆ ಜಲ ಸಂಪನ್ಮೂಲ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಹುದ್ದೆಯ ಜತೆಗೆ ಹೆಚ್ಚುವರಿಯಾಗಿ ಬಿಬಿಎಂಪಿ ಆಡಳಿತಾಧಿಕಾರಿ ಹುದ್ದೆ ನೀಡಲಾಗಿದೆ.

ಬೆಂಗಳೂರಿನ ಆಡಳಿತದಲ್ಲಿ ಭಾರಿ ಬದಲಾವಣೆ ಮಾಡಿರುವ ರಾಜ್ಯ ಸರ್ಕಾರ, ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ಸೇರಿದಂತೆ 17 ಐಎಎಸ್​ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದೆ.

ಬಿಬಿಎಂಪಿ ಆಯುಕ್ತರಾಗಿದ್ದ ಎನ್‌. ಮಂಜುನಾಥ್‌ ಪ್ರಸಾದ್‌ ಅವರನ್ನು ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ. ಈ ಹಿಂದೆ ಅವರು ಇದೇ ಹುದ್ದೆಯಲ್ಲಿದ್ದರು. ಈಗ ಅವರನ್ನು ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಿದೆ.

ಇಷ್ಟೆ ಇದಲ್ಲದೆ, ಹೆಚ್. ಎನ್ ಗೋಪಾಲಕೃಷ್ಣ ಅವರನ್ನು ಐಟಿಬಿಟಿ ನಿರ್ದೇಶಕರನ್ನಾಗಿ, ಎಸ್. ಹೊನ್ನಾಂಬ ಅವರನ್ನು ಗಣಿ ಮತ್ತು ಭೂ ವಿಜ್ಞಾನ ನಿರ್ದೇಶಕಿಯನ್ನಾಗಿ, ಸಿಂಧು ಬಿ ರೂಪೇಶ್ ಅವರನ್ನು ಪ್ರವಾಸೋದ್ಯಮ‌‌ ಇಲಾಖೆ ನಿರ್ದೇಶಕಿಯನ್ನಾಗಿ ನೇಮಕ ಮಾಡಲಾಗಿದೆ.

ವರ್ಗಾವಣೆಯಾದ ಅಧಿಕಾರಿಗಳು

  1. ಉಮೇಶ್ ಕುಮಾರ್-ಎಡಿಜಿಪಿ, ಸಿಐಡಿ, ಆರ್ಥಿಕ ಅಪರಾಧ
  2. ರೂಪಾ ಡಿ – ಕಾರ್ಯದರ್ಶಿ (ಪಿಸಿಎಎಸ್) ಗೃಹ ಇಲಾಖೆ
  3. ಎನ್. ಶಶಿಕುಮಾರ್- ಎಸ್​​ಪಿ, ವೈರ್​​ಲೆಸ್, ಬೆಂಗಳೂರು
  4. ಡಾ. ರೋಹಿಣಿ ಕಟೋಚ್- ಎಸ್​​ಪಿ, ಸಿಐಡಿ
  5. ಎಂ.ಎನ್. ಅನುಚೇತ್- ಡಿಸಿಪಿ, ಕೇಂದ್ರ ವಿಭಾಗ, ಬೆಂಗಳೂರು ನಗರ
  6. ಬಿ. ರಮೇಶ್- ಎಸ್​​ಪಿ, ಸಿಐಡಿ
  7. ಈಡಾ ಮಾರ್ಟಿನ್ ಮಾರ್ಬನ್ಯಾಂಗ್ – ಎಸ್​​​ಪಿ, ಎಎನ್ಎಫ್, ಕಾರ್ಕಳ
  8. ನಿಕ್ಕಂ ಪ್ರಕಾಶ್ ಅಮೃತ್- ಎಸ್​​ಪಿ, ರಾಯಚೂರು
  9. ಇಲಕ್ಕಿಯಾ ಕರುಣಾಗರನ್ – ಎಸ್​​ಪಿ, ಕೆಜಿಎಫ್
  10. ಧರ್ಮೇಂದರ್ ಕುಮಾರ್ ಮೀನಾ- ಡಿಸಿಪಿ, ಉತ್ತರ ವಿಭಾಗ, ಬೆಂಗಳೂರು ನಗರ
  11. ಡಾ. ಸುಮನ್ ಪೆನ್ನೇಕರ್- ಉಪ ನಿರ್ದೇಶಕಿ, ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು
  12. ಹರೀಶ್ ಪಾಂಡೆ- ಡಿಸಿಪಿ, ದಕ್ಷಿಣ ವಿಭಾಗ ಬೆಂಗಳೂರು ನಗರ
  13. ಮೊಹಮ್ಮದ್ ಸುಜೀತ- ಡಿಸಿಪಿ, ಸಿಎಆರ್ ಬೆಂಗಳೂರು
  14. ಸಿಮಿ ಮರಿಯಂ ಜಾರ್ಜ್- ಎಸ್​​ಪಿ, ಕಲ್ಬುರ್ಗಿ
  15. ಡಾ. ಸಿ.ಬಿ. ವೇದಮೂರ್ತಿ- ಎಸ್​​ಪಿ, ಗುಪ್ತಚರ, ಬೆಂಗಳೂರು
  16. ಡಿ. ದೇವರಾಜ- ಡಿಸಿಪಿ, ವೈಟ್ ಫೀಲ್ಡ್, ಬೆಂಗಳೂರು
  17. ಸಂಜೀವ್ ಎಂ. ಪಾಟೀಲ್- ಡಿಸಿಪಿ, ಪಶ್ಚಿಮ ವಿಭಾಗ, ಬೆಂಗಳೂರು ನಗರ

ಇದನ್ನೂ ಓದಿ: ರಾಜ್ಯಪಾಲರಿಗೆ ದೂರು: ಈಶ್ವರಪ್ಪ ವಿರುದ್ದ ಮುಗಿಬಿದ್ದ ಬಿಜೆಪಿ ಶಾಸಕರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...