HomeಮುಖಪುಟIPS ಅಧಿಕಾರಿಗಳ ವರ್ಗಾವಣೆ: ಮಮತಾ ಬ್ಯಾನರ್ಜಿ ಬೆನ್ನಿಗೆ ನಿಂತ ಕೇಜ್ರೀವಾಲ್

IPS ಅಧಿಕಾರಿಗಳ ವರ್ಗಾವಣೆ: ಮಮತಾ ಬ್ಯಾನರ್ಜಿ ಬೆನ್ನಿಗೆ ನಿಂತ ಕೇಜ್ರೀವಾಲ್

’ಕೇಂದ್ರ ಸರ್ಕಾರ ರಾಜ್ಯಗಳ ಹಕ್ಕುಗಳನ್ನು ಅತಿಕ್ರಮಿಸಿ, ಒಕ್ಕೂಟ ವ್ಯವಸ್ಥೆ ಮೇಲೆ ಆಕ್ರಮಣ ಮಾಡಿ ಅಸ್ಥಿರಗೊಳಿಸುವ ಪ್ರಯತ್ನ ಮಾಡುತ್ತಿದೆ’- ಅರವಿಂದ್ ಕೇಜ್ರಿವಾಲ್

- Advertisement -
- Advertisement -

‌ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಬೆಂಗಾವಲು ವಾಹನದ ಮೇಲೆ ನಡೆದ ದಾಳಿಯ ಹಿನ್ನಲೆಯಲ್ಲಿ ಐಪಿಎಸ್ ಅಧಿಕಾರಿಗಳನ್ನು ವಿಚಾರಣೆಗೆ ಕಳುಹಿಸದ ಪಶ್ಚಿಮ ಬಂಗಾಳ ಸರ್ಕಾರದ ಕ್ರಮಕ್ಕೆ ಕೇಂದ್ರ ಗೃಹ ಸಚಿವಾಲಯ ಮೂವರು ಅಧಿಕಾರಿಗಳನ್ನು ವರ್ಗಾವಣೆ ಮಾಡಿದೆ.

ಈ ವರ್ಗಾವಣೆಯನ್ನು ಕೇಂದ್ರದ ನಿರ್ದಯ ಹಸ್ತಕ್ಷೇಪ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಖಂಡಿಸಿದ್ದರು. ಈಗ ಮಮತಾ ಬ್ಯಾನರ್ಜಿ ಬೆಂಬಲಕ್ಕೆ ನಿಂತಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಕೇಂದ್ರದ ಕ್ರಮವನ್ನು ಟೀಕಿಸಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ನೇಮಕಗೊಂಡ ಮೂವರು ಐಪಿಎಸ್ ಅಧಿಕಾರಿಗಳನ್ನು ವಾಪಸ್ ಕರೆಸಿಕೊಳ್ಳುವ ಕೇಂದ್ರ ಸರ್ಕಾರದ ನಿರ್ಧಾರವನ್ನು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್, ಬಂಗಾಳದಲ್ಲಿ ಕೇಂದ್ರದ ನಿರ್ದಯ ಹಸ್ತಕ್ಷೇಪವನ್ನು ಖಂಡಿಸುತ್ತೇನೆ ಎಂದಿದ್ದಾರೆ.

ಇದನ್ನೂ ಓದಿ: ನಡ್ಡಾ ಕಾರಿಗೆ ಕಲ್ಲು ಪ್ರಕರಣ: 3 ಐಪಿಎಸ್ ಅಧಿಕಾರಿಗಳನ್ನು ಡೆಪ್ಯೂಟೇಷನ್ ಮಾಡಿದ ಕೇಂದ್ರ

 

“ಪಶ್ಚಿಮ ಬಂಗಾಳದ ಆಡಳಿತದಲ್ಲಿ ಕೇಂದ್ರದ ನಿರ್ದಯ ಹಸ್ತಕ್ಷೇಪವನ್ನು ನಾನು ಖಂಡಿಸುತ್ತೇನೆ. ಚುನಾವಣೆ ಹತ್ತಿರುವಿರುವಾಗ ಹಿರಿಯ ಪೊಲೀಸ್ ಅಧಿಕಾರಿಗಳನ್ನು ಕೇಂದ್ರಕ್ಕೆ ವರ್ಗಾಯಿಸಲು ಪ್ರಯತ್ನಿಸುವ ಮೂಲಕ ರಾಜ್ಯಗಳ ಹಕ್ಕುಗಳನ್ನು ಅತಿಕ್ರಮಿಸುತ್ತಿದೆ. ಈ ಮೂಲಕ ಒಕ್ಕೂಟ ವ್ಯವಸ್ಥೆ ಮೇಲೆ ಆಕ್ರಮಣ ಮಾಡಿ ಅಸ್ಥಿರಗೊಳಿಸುವ ಪ್ರಯತ್ನ ಮಾಡುತ್ತಿದೆ” ಎಂದು ಟ್ವೀಟ್‌ನಲ್ಲಿ ಆಕ್ರೋಶ ಹೊರಹಾಕಿದ್ದಾರೆ.

ಇದನ್ನೂ ಓದಿ: ಬಿಜೆಪಿ ಕಳ್ಳರ ಪಕ್ಷ, ಅವರಿಗಿಂತ ದೊಡ್ಡ ಕಳ್ಳರು ಎಲ್ಲೂ ಇಲ್ಲ- ಮಮತಾ ಬ್ಯಾನರ್ಜಿ ವಾಗ್ದಾಳಿ

ಟ್ವೀಟ್ ಜೊತೆಗೆ ಮಮತಾ ಬ್ಯಾನರ್ಜಿಯವರು ನಿನ್ನೆ ಕೇಂದ್ರದ ಕ್ರಮವನ್ನು ಟೀಕಿಸಿ ಮಾಡಿದ್ದ ಟ್ವೀಟ್ ಅನ್ನು ಟ್ಯಾಗ್ ಮಾಡಿದ್ದಾರೆ. ಈ ಮೂಲಕ ಮಮತಾ ಬ್ಯಾನರ್ಜಿ ಮತ್ತು ಕೇಂದ್ರ ಸರ್ಕಾರದ ನಡುವೆ ನಡೆಯುತ್ತಿರುವ ಗುದ್ದಾಟದಲ್ಲಿ ಮಮತಾ ಬ್ಯಾನರ್ಜಿ ಪರ ನಿಂತಿದ್ದಾರೆ.

ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಬೆಂಗಾವಲು ವಾಹನದ ಮೇಲೆ ನಡೆದ ದಾಳಿಯ ಹಿನ್ನಲೆಯಲ್ಲಿ, ಪೊಲೀಸ್ ಮಹಾ ನಿರ್ದೇಶಕ ಸೇರಿದಂತೆ ಹಿರಿಯ ಅಧಿಕಾರಿಗಳಿಗೆ ಕೇಂದ್ರ ಗೃಹ ಸಚಿವಾಲಯ ವಿಚಾರಣೆಗೆ ಹಾಜರಾಗಬೇಕು ಎಂದು 2 ಬಾರಿ ನೋಟಿಸ್ ನೀಡಿತ್ತು. ಆದರೆ ಪಶ್ಚಿಮ ಬಂಗಾಳ ಸರ್ಕಾರ ಯಾರನ್ನೂ ವಿಚಾರಣೆಗಾಗಿ ಕಳುಹಿಸಿರಲಿಲ್ಲ. ನಾವು ಈಗಾಗಲೇ ಕೇಂದ್ರ ಸರ್ಕಾರಕ್ಕೆ ಘಟನೆ ಕುರಿತು ವಿವರಣೆ ನೀಡಿದ್ದೇವೆ ಎಂದು ಹೇಳಿ ಸುಮ್ಮನಾಗಿತ್ತು. ಈ ಹಿನ್ನೆಲೆ ಕೇಂದ್ರ ಗೃಹ ಸಚಿವಾಲಯ ಈಗ ಮೂವರು ಐಪಿಎಸ್ ಅಧಿಕಾರಿಗಳಿಗೆ ವರ್ಗಾವಣೆ ಮಾಡಿ ಆದೇಶಿಸಿದೆ.

ಮುಂದಿನ ವರ್ಷ ನಡೆಯಲಿರುವ ಪಶ್ಚಿಮ ಬಂಗಾಳ ಚುನಾವಣೆ ಮೇಲೆ ಕಣ್ಣಿಟ್ಟಿರುವ ಬಿಜೆಪಿ ಸರ್ಕಾರ, ಕಳೆದ ಕೆಲವು ತಿಂಗಳಿನಿಂದ ಹಲವು ರ್‍ಯಾಲಿಗಳನ್ನು ಆಯೋಜಿಸುತ್ತಿದೆ. ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ, ಗೃಹ ಸಚಿವ ಅಮಿತ್ ಶಾ, ಸಂಸದ ತೇಜಸ್ವಿ ಸೂರ್ಯ ಅನೇಕ ಸಾರ್ವಜನಿಕ ಸಭೆ, ರ್‍ಯಾಲಿಗಳನ್ನು ಆಯೋಜಿಸಿ, ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ ವಿರುದ್ಧ ಆರೋಪಗಳನ್ನು ಮಾಡುತ್ತಿದ್ದಾರೆ. ಜೊತೆಗೆ ಟಿಎಂಸಿಯ ಮುಖಂಡರನ್ನು ತಮ್ಮ ಪಕ್ಷದತ್ತ ಸೆಳೆಯುತ್ತಾ ಆಪರೇಷನ್ ಕಮಲ ಶುರು ಮಾಡಿದೆ.


ಇದನ್ನೂ ಓದಿ: ಬಿಜೆಪಿ ನನ್ನ ಜೈಲಿಗೆ ಹಾಕಿದರೂ, ಅಲ್ಲಿಂದಲೇ ಪಕ್ಷವನ್ನು ಗೆಲ್ಲಿಸುವೆ-ಮಮತಾ ಬ್ಯಾನರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...