Homeಮುಖಪುಟ3 ವರ್ಗಾವಣೆ, 2 ನಿವೃತ್ತಿಗಳಿಂದಾಗಿ ದೆಹಲಿ ಹೈಕೋರ್ಟ್‌ನ ಖಾಲಿ ಹುದ್ದೆಗಳು 40% ಕ್ಕೆ ಏರಿಕೆ

3 ವರ್ಗಾವಣೆ, 2 ನಿವೃತ್ತಿಗಳಿಂದಾಗಿ ದೆಹಲಿ ಹೈಕೋರ್ಟ್‌ನ ಖಾಲಿ ಹುದ್ದೆಗಳು 40% ಕ್ಕೆ ಏರಿಕೆ

- Advertisement -
- Advertisement -

ಈ ವರ್ಷದ ಮಾರ್ಚ್ ಮತ್ತು ಏಪ್ರಿಲ್‌ನಲ್ಲಿ ನಡೆದ ಮೂರು ವರ್ಗಾವಣೆಗಳು ಮತ್ತು ಎರಡು ನಿವೃತ್ತಿಗಳೊಂದಿಗೆ ದೆಹಲಿ ಹೈಕೋರ್ಟ್‌ನ ಕಾರ್ಯನಿರತ ನ್ಯಾಯಾಧೀಶರ ಸಂಖ್ಯೆ 36 ಕ್ಕೆ ಇಳಿದಿದ್ದು, ಶೇಕಡ 40 ರಷ್ಟು ಹುದ್ದೆಗಳು ಖಾಲಿಯಾಗಿವೆ ಎಂದು ಬಾರ್ ಆಂಡ್ ಬೆಂಚ್ ವರದಿ ಮಾಡಿದೆ. 3 ವರ್ಗಾವಣೆ

ಈ ವರ್ಷದ ಕೊನೆಯಲ್ಲಿ ಇನ್ನೂ ಇಬ್ಬರು ನ್ಯಾಯಾಧೀಶರು – ನ್ಯಾಯಮೂರ್ತಿಗಳಾದ ಧರ್ಮೇಶ್ ಶರ್ಮಾ ಮತ್ತು ಶಾಲಿಂದರ್ ಕೌರ್ – ನಿವೃತ್ತರಾಗಲಿದ್ದಾರೆ. ಆ ವೇಳೆ ಕೂಡಾ ಯಾವುದೇ ನೇಮಕಾತಿಗಳನ್ನು ಮಾಡದಿದ್ದರೆ, 60 ಜನರ ಅನುಮೋದಿತ ಬಲವನ್ನು ಹೊಂದಿರುವ ಹೈಕೋರ್ಟ್‌ನಲ್ಲಿ ಕೇವಲ 34 ನ್ಯಾಯಾಧೀಶರು ಮಾತ್ರ ಕಾರ್ಯನಿರ್ವಹಿಸಲಿದ್ದಾರೆ ಎಂದು ವರದಿ ಹೇಳಿದೆ.

ಮಾರ್ಚ್‌ನಲ್ಲಿ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರ ಮನೆಯಲ್ಲಿ ನೋಟುಗಳ ರಾಶಿ ಪತ್ತೆಯಾಗಿದೆ ಎಂಬ ಆರೋಪ ದೆಹಲಿ ಹೈಕೋರ್ಟ್ ಅನ್ನು ಬೆಚ್ಚಿಬೀಳಿಸಿತ್ತು. ಮಾರ್ಚ್ 24 ರಂದು, ಸುಪ್ರೀಂ ಕೋರ್ಟ್ ಕೊಲಿಜಿಯಂ ಅವರನ್ನು ಅವರ ಮಾತೃ ಕೋರ್ಟ್ ಆದ ಅಲಹಾಬಾದ್ ಹೈಕೋರ್ಟ್‌ಗೆ ವಾಪಸ್ ಕಳುಹಿಸಲು ಆದೇಶಿಸಿತು. ಸರ್ಕಾರ ಕೂಡಾ ದೆಹಲಿಯ ಹೈಕೋರ್ಟ್‌ನ ಮೂರನೇ ಹಿರಿಯ ನ್ಯಾಯಾಧೀಶರಾಗಿದ್ದ ಅವರ ವರ್ಗಾವಣೆಯನ್ನು ತಕ್ಷಣವೇ ಅನುಮೋದಿಸಿತ್ತು.

ಮೂರು ದಿನಗಳ ನಂತರ, ಕೊಲಿಜಿಯಂ ನ್ಯಾಯಮೂರ್ತಿ ಡಿ.ಕೆ. ಶರ್ಮಾ ಅವರನ್ನು ಕಲ್ಕತ್ತಾಗೆ ವರ್ಗಾಯಿಸಲು ಆದೇಶಿಸಿತು. ಈ ವರ್ಗಾವಣೆಗೆ ಯಾವುದೇ ಕಾರಣವನ್ನು ನೀಡದಿದ್ದರೂ, ಕೋಲ್ಕತ್ತಾದ ವಕೀಲರ ಸಂಘಟನೆಗಳು ಈ ಶಿಫಾರಸನ್ನು ಆಕ್ಷೇಪಿಸಿದವು. ಆದಾಗ್ಯೂ, ನ್ಯಾಯಮೂರ್ತಿ ಶರ್ಮಾ ತಮ್ಮ ವಿದಾಯ ಭಾಷಣದಲ್ಲಿ ಈ ಆತಂಕಗಳನ್ನು ಹೋಗಲಾಡಿಸಲು ಪ್ರಯತ್ನಿಸಿದ್ದರು. ಈ ವೇಳೆ ಮಾತನಾಡಿದ್ದ ಅವರು, “ನನ್ನ ಸಾಮರ್ಥ್ಯ ಮತ್ತು ಉದ್ದೇಶಗಳಿಗೆ ತಕ್ಕಂತೆ ಸಂಸ್ಥೆಗೆ ಸೇವೆ ಸಲ್ಲಿಸುತ್ತೇನೆ” ಎಂದು ಹೇಳಿದ್ದರು.

ಮಾರ್ಚ್ 28 ರಂದು ಕೇಂದ್ರವು ನ್ಯಾಯಮೂರ್ತಿ ಚಂದ್ರ ಧಾರಿ ಸಿಂಗ್ ಅವರನ್ನು ಅಲಹಾಬಾದ್‌ಗೆ ವಾಪಸ್ ಕಳುಹಿಸಲು ಅನುಮತಿ ನೀಡಿದಾಗ ದೆಹಲಿ ಹೈಕೋರ್ಟ್‌ನಿಂದ ಮತ್ತೊಂದು ವರ್ಗಾವಣೆ ನಡೆಯಿತು. ಸುಪ್ರೀಂ ಕೋರ್ಟ್ ಕೊಲಿಜಿಯಂ ನವೆಂಬರ್‌ನಲ್ಲಿ ವರ್ಗಾವಣೆಯನ್ನು ಶಿಫಾರಸು ಮಾಡಿತ್ತು. ಆದಾಗ್ಯೂ, ಸರ್ಕಾರವು ತನ್ನ ನಿರ್ಧಾರ ತೆಗೆದುಕೊಳ್ಳಲು ನಾಲ್ಕು ತಿಂಗಳುಗಳನ್ನು ತೆಗೆದುಕೊಂಡಿತು.

ಮಾರ್ಚ್‌ನ ಆರಂಭದಲ್ಲಿ, ನ್ಯಾಯಮೂರ್ತಿಗಳಾದ ರೇಖಾ ಪಲ್ಲಿ ಮತ್ತು ಅನೂಪ್ ಕುಮಾರ್ ಮೆಂಡಿರಟ್ಟ ನಿವೃತ್ತರಾಗಿದ್ದರು.

ಕಾನೂನು ಮತ್ತು ನ್ಯಾಯ ಸಚಿವಾಲಯವು ಏಪ್ರಿಲ್ 15 ರವರೆಗೆ ಒದಗಿಸಿದ ಮಾಹಿತಿಯ ಪ್ರಕಾರ, ದೆಹಲಿ ಹೈಕೋರ್ಟ್, 40% ಖಾಲಿ ಹುದ್ದೆಗಳನ್ನು ಹೊಂದಿದ್ದು, ಹೈಕೋರ್ಟ್‌ನ ಹುದ್ದೆಗಳ ಪರಿಸ್ಥಿತಿ ರಾಷ್ಟ್ರೀಯ ಸರಾಸರಿಗಿಂತ ಕೆಟ್ಟದಾಗಿದೆ. ಒಟ್ಟಾರೆ ದೇಶದ 25 ಹೈಕೋರ್ಟ್‌ಗಳಲ್ಲಿ 1,122 ನ್ಯಾಯಾಧೀಶರ ಹುದ್ದೆಗಳಿದ್ದು, ಅದರಲ್ಲಿ 357 (31.8%) ಖಾಲಿ ಇದ್ದವು.

ದೆಹಲಿ ಈ ಹೈಕೋರ್ಟ್‌ಗಳಲ್ಲಿ ನಾಲ್ಕನೇ ಕೆಟ್ಟ ಸ್ಥಾನದಲ್ಲಿದೆ. ಅಲಹಾಬಾದ್ ಹೈಕೋರ್ಟ್ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ. ಅಲ್ಲಿ ನ್ಯಾಯಾಧೀಶರ ಅರ್ಧದಷ್ಟು ಹುದ್ದೆಗಳು ಖಾಲಿ ಇವೆ. ಇದರ ನಂತರ ಜಮ್ಮು ಕಾಶ್ಮೀರ ಮತ್ತು ಲಡಾಖ್ ಹೈಕೋರ್ಟ್ ಮತ್ತು ಒರಿಸ್ಸಾ ಹೈಕೋರ್ಟ್ 44% ಮತ್ತು 42% ಹುದ್ದೆಗಳೊಂದಿಗೆ ಇವೆ. ರಾಷ್ಟ್ರ ರಾಜಧಾನಿ ದೆಹಲಿ, ಜಾರ್ಖಂಡ್ ಮತ್ತು ಮಣಿಪುರ ನಾಲ್ಕನೇ ಸ್ಥಾನವನ್ನು ಹಂಚಿಕೊಂಡಿದೆ.

ಹೈಕೋರ್ಟ್ ನ್ಯಾಯಾಧೀಶರನ್ನು ಹೇಗೆ ನೇಮಿಸಲಾಗುತ್ತದೆ?

ಹೈಕೋರ್ಟ್‌ಗಳ ನ್ಯಾಯಾಧೀಶರನ್ನು ಭಾರತದ ಸಂವಿಧಾನದ 217 ಮತ್ತು 224 ನೇ ವಿಧಿಗಳ ಅಡಿಯಲ್ಲಿ ಮತ್ತು 1998 ರಲ್ಲಿ ಸಿದ್ಧಪಡಿಸಲಾದ ಕಾರ್ಯವಿಧಾನದ ಜ್ಞಾಪಕ ಪತ್ರದಲ್ಲಿ (MoP) ನಿಗದಿಪಡಿಸಿದ ಕಾರ್ಯವಿಧಾನದ ಪ್ರಕಾರ ನೇಮಕ ಮಾಡಲಾಗುತ್ತದೆ. ಅಕ್ಟೋಬರ್ 6, 1993 ರ ಸುಪ್ರೀಂ ಕೋರ್ಟ್ ತೀರ್ಪು, ಎರಡನೇ ನ್ಯಾಯಾಧೀಶರ ಪ್ರಕರಣ ಮತ್ತು ಅಕ್ಟೋಬರ್ 28, 1998 ರ ಮೂರನೇ ನ್ಯಾಯಾಧೀಶರ ಪ್ರಕರಣದ ನಂತರ ಎಂಒಪಿಯನ್ನು ಸಿದ್ಧಪಡಿಸಲಾಗಿತ್ತು.

ಎಂಒಪಿ ಪ್ರಕಾರ, ಹೈಕೋರ್ಟ್ ನ್ಯಾಯಾಧೀಶರ ನೇಮಕಾತಿಗೆ ಪ್ರಸ್ತಾವನೆಯನ್ನು ಪ್ರಾರಂಭಿಸುವುದು ಸಂಬಂಧಪಟ್ಟ ಹೈಕೋರ್ಟ್‌ನ ಮುಖ್ಯ ನ್ಯಾಯಾಧೀಶರ ಬಳಿ ಇರುತ್ತದೆ. ಹೈಕೋರ್ಟ್ ನ್ಯಾಯಾಧೀಶರ ಹುದ್ದೆ ಖಾಲಿಯಾಗುವ ಆರು ತಿಂಗಳ ಮೊದಲು ಭರ್ತಿ ಮಾಡುವ ಪ್ರಸ್ತಾವನೆಯನ್ನು ಹೈಕೋರ್ಟ್‌ನ ಮುಖ್ಯ ನ್ಯಾಯಾಧೀಶರು ಪ್ರಾರಂಭಿಸಬೇಕಾಗುತ್ತದೆ.

ಆದಾಗ್ಯೂ, ಈ ಕಾಲಮಿತಿಯನ್ನು ಹೈಕೋರ್ಟ್‌ಗಳು ಹೆಚ್ಚಾಗಿ ಪಾಲಿಸುವುದಿಲ್ಲ ಎಂದು ಕಾನೂನು ಮತ್ತು ನ್ಯಾಯ ಸಚಿವಾಲಯ ಹೇಳುತ್ತದೆ.

ಹೈಕೋರ್ಟ್ ಕೊಲಿಜಿಯಂ ಶಿಫಾರಸು ಮಾಡಿದ ಎಲ್ಲಾ ಹೆಸರುಗಳನ್ನು ಸರ್ಕಾರದ ಅಭಿಪ್ರಾಯಗಳೊಂದಿಗೆ ಸುಪ್ರೀಂ ಕೋರ್ಟ್ ಕೊಲಿಜಿಯಂಗೆ ಸಲಹೆಗಾಗಿ ಕಳುಹಿಸಲಾಗುತ್ತದೆ. ಸುಪ್ರೀಂ ಕೋರ್ಟ್ ಕೊಲಿಜಿಯಂ ಹೆಸರುಗಳ ಬಗ್ಗೆ ಚರ್ಚಿಸುತ್ತದೆ ಮತ್ತು ಸುಪ್ರೀಂ ಕೋರ್ಟ್‌ನ ಕೊಲಿಜಿಯಂ ಶಿಫಾರಸು ಮಾಡಿದ ವ್ಯಕ್ತಿಗಳನ್ನು ಮಾತ್ರ ನ್ಯಾಯಾಧೀಶರನ್ನಾಗಿ ನೇಮಿಸಲಾಗುತ್ತದೆ. 3 ವರ್ಗಾವಣೆ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಒಂದು ದೇವಸ್ಥಾನ, ಒಂದು ಬಾವಿ ಹಾಗೂ ಒಂದೇ ಸ್ಮಶಾನ ಬಳಸುವಂತೆ ಹಿಂದೂಗಳಿಗೆ ಭಾಗವತ್ ಕರೆ

ಒಂದು ದೇವಸ್ಥಾನ, ಒಂದು ಬಾವಿ ಹಾಗೂ ಒಂದೇ ಸ್ಮಶಾನ ಬಳಸುವಂತೆ ಹಿಂದೂಗಳಿಗೆ ಭಾಗವತ್ ಕರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳ | ಆದಿವಾಸಿ ಯುವಕ ಮಧು ಗುಂಪು ಹತ್ಯೆ ಪ್ರಕರಣ : 12 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಹೈಕೋರ್ಟ್

ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಕೇರಳದ ಆದಿವಾಸಿ ಯುವಕ ಮಧು ಗುಂಪು ಹಲ್ಲೆ ಮತ್ತು ಹತ್ಯೆ ಪ್ರಕರಣದ 12 ಜನ ಅಪರಾಧಿಗಳಿಗೆ ಹೈಕೋರ್ಟ್ ಸೋಮವಾರ (ಮೇ.25) ಜೀವಾವಧಿ ಶಿಕ್ಷೆ ಮತ್ತು ತಲಾ 2...

“ನನ್ನ ಅನುಮತಿ ಇಲ್ಲದೆ ನನ್ನ ಮಗುವನ್ನು ಸುಡಲಾಗಿದೆ”: ಕೊಲೆಯಾದ ಕೊಯಮತ್ತೂರು ಬಾಲಕಿಯ ತಾಯಿ ಅಳಲು

ಕೊಯಮತ್ತೂರು ಬಳಿ ಲೈಂಗಿಕ ದೌರ್ಜನ್ಯಕ್ಕೊಳಗಾಗಿ ಕೊಲೆಯಾದ 10 ವರ್ಷದ ಬಾಲಕಿಯ ತಾಯಿ, ತನ್ನ ಮಗಳ ಮೃತದೇಹದ ಅಂತ್ಯಸಂಸ್ಕಾರಕ್ಕೆ ತಾನು ಅನುಮತಿ ನೀಡಿರಲಿಲ್ಲ ಎಂದು ಹೇಳಿದ್ದಾರೆ. ಮಗುವಿನ ಮರಣೋತ್ತರ ಪರೀಕ್ಷೆಯ ನಂತರ, ತನ್ನ ಪತಿ...

ಅಷ್ಟೊಂದು ‘ಸೆಂಟಿಮೆಂಟ್’ ಬೇಡ: ‘ಕಾಕ್ರೋಚ್ ಅಭಿಯಾನ’ದ ವಿರುದ್ಧದ ಅರ್ಜಿಗೆ ಸಿಜೆಐ ಪ್ರತಿಕ್ರಿಯೆ

"ವ್ಯವಸ್ಥೆಯ ಮೇಲೆ ದಾಳಿ ಮಾಡುವವರ" ಕುರಿತು ತಾವು ನೀಡಿದ್ದ ಹೇಳಿಕೆಗೆ ವ್ಯಂಗ್ಯದ ರೂಪದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸೃಷ್ಟಿಯಾಗಿರುವ ‘ಕಾಕ್ರೋಚ್ ಜನತಾ ಪಾರ್ಟಿ’  ವಿವಾದವನ್ನು ಅಷ್ಟೊಂದು "ಭಾವನಾತ್ಮಕವಾಗಿ ತೆಗೆದುಕೊಳ್ಳಬೇಡಿ" ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ...

ನಾಳೆ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ ‘ಕರ್ನಾಟಕದ ಗೌರವಾರ್ಪಣೆ’

ಸ್ವಾತಂತ್ರ್ಯ ಸೇನಾನಿ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ 'ಕರ್ನಾಟಕದ ಗೌರವಾರ್ಪಣೆ' ಕಾರ್ಯಕ್ರಮವನ್ನು ನಾಳೆ, ಅಂದರೆ 2026 ಮೇ 26 ರಂದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಎಚ್.ಎಸ್‌ ದೊರೆಸ್ವಾಮಿ ಸ್ಮಾರಕ ಪ್ರತಿಷ್ಠಾನ,...

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...