Homeಕರ್ನಾಟಕವರ್ಗಾವಣೆ ಬೆದರಿಕೆ: ಲಿಖಿತ ಆದೇಶದಲ್ಲೂ ಜಸ್ಟೀಸ್‌ ಸಂದೇಶ್‌ ಉಲ್ಲೇಖ

ವರ್ಗಾವಣೆ ಬೆದರಿಕೆ: ಲಿಖಿತ ಆದೇಶದಲ್ಲೂ ಜಸ್ಟೀಸ್‌ ಸಂದೇಶ್‌ ಉಲ್ಲೇಖ

- Advertisement -
- Advertisement -

ರಾಜ್ಯ ಪೊಲೀಸ್‌ನ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ತನಿಖೆ ನಡೆಸುತ್ತಿರುವ ಭ್ರಷ್ಟಾಚಾರ ಪ್ರಕರಣದಲ್ಲಿ ಮಧ್ಯಪ್ರವೇಶಿಸಿದ ನಂತರ ತಮಗೆ ವರ್ಗಾವಣೆ ಬೆದರಿಕೆಗಳು ಬಂದಿವೆ ಎಂದು ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿ ಎಚ್.ಪಿ.ಸಂದೇಶ್‌ ಲಿಖಿತ ಆದೇಶದಲ್ಲೂ ಉಲ್ಲೇಖಿಸಿದ್ದಾರೆ.

ಜುಲೈ 4ರಂದು ನಡೆದ ವಿಚಾರಣೆ ವೇಳೆ ನ್ಯಾಯಮೂರ್ತಿ ಎಚ್.ಪಿ.ಸಂದೇಶ್, ಎಸಿಬಿ ವಿರುದ್ಧ ಹೇಳಿಕೆ ನೀಡಿದ ನಂತರ ನನಗೆ ಪರೋಕ್ಷವಾಗಿ ವರ್ಗಾವಣೆ ಬೆದರಿಕೆ ಹಾಕಲಾಗಿದೆ ಎಂದು ಮೌಖಿಕವಾಗಿ ಹೇಳಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಎಸಿಬಿಯ ಕಾರ್ಯನಿರ್ವಹಣಾ ಮುಖ್ಯಸ್ಥ ಹೆಚ್ಚುವರಿ ಡಿಜಿಪಿ (ಎಡಿಜಿಪಿ) ಕಳಂಕಿತ ಅಧಿಕಾರಿ ಎಂದೂ ಅವರು ತಿಳಿಸಿದ್ದರು.

“ನಿಮ್ಮ ಎಸಿಬಿ ಎಡಿಜಿಪಿ ಶಕ್ತಿಶಾಲಿ ವ್ಯಕ್ತಿ ಎಂದು ತೋರುತ್ತಿದೆ. ಇದನ್ನು ಯಾರೋ ನನ್ನ ಸಹೋದ್ಯೋಗಿಗೆ ಹೇಳಿದ್ದಾರೆ. ಆ ನ್ಯಾಯಾಧೀಶರು ಬಂದು ನನಗೆ ತಿಳಿಸಿದ್ದಾರೆ. ವರ್ಗಾವಣೆ ಬೆದರಿಕೆಯನ್ನು ಆದೇಶದಲ್ಲಿ ದಾಖಲಿಸಲಾಗುವುದು” ಎಂದು ನ್ಯಾಯಮೂರ್ತಿ ಸಂದೇಶ್ ತಿಳಿಸಿದ್ದರು.

ಸಿಜೆ ಆಗಿದ್ದ ರಿತುರಾಜ್‌ ಅವಸ್ಥಿ ಅವರ ಬೀಳ್ಕೊಡುಗೆ ಸಮಾರಂಭದಲ್ಲಿ ನ್ಯಾಯಮೂರ್ತಿಯೊಬ್ಬರು ಹೇಳಿದ ವಿಷಯವನ್ನು ಜಸ್ಟೀಸ್ ಸಂದೇಶ್ ಪ್ರಸ್ತಾಪಿಸಿದ್ದರು. ಜುಲೈ 4ರಂದು ನ್ಯಾಯಾಲಯದ ವಿಚಾರಣೆಯ ಸಂದರ್ಭದಲ್ಲಿ ತನಗೆ ಬಂದಿದ್ದ ಬೆದರಿಕೆಯನ್ನು ಉಲ್ಲೇಖಿಸಿದ್ದರು.

“ವ್ಯಕ್ತಿಯೊಬ್ಬರು ನನ್ನ ಬಗ್ಗೆ ವಿಚಾರಿಸಿದ್ದಾರೆ. ನಾನು ಯಾವುದೇ ಪಕ್ಷಕ್ಕೆ ಸೇರಿಲ್ಲ” ಎಂದು ನ್ಯಾಯಮೂರ್ತಿ ಸಂದೇಶ್ ಸ್ಪಷ್ಟಪಡಿಸಿದ್ದರು.

ಬೆಂಗಳೂರು ನಗರ ಜಿಲ್ಲಾಧಿಕಾರಿಗಳ ಕಚೇರಿಯ ಲಂಚ ಪ್ರಕರಣದ ಆರೋಪಿಯೊಬ್ಬರು ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆ ವೇಳೆ ನ್ಯಾಯಾಧೀಶರು ಈ ಹೇಳಿಕೆ ನೀಡಿದ್ದರು.

ಜಮೀನು ವಿವಾದದಲ್ಲಿ ಅನುಕೂಲಕರ ಆದೇಶಕ್ಕೆ ಬದಲಾಗಿ 5 ಲಕ್ಷ ರೂಪಾಯಿ ಲಂಚ ಪಡೆದಿದ್ದಕ್ಕಾಗಿ ಕಚೇರಿಯ ಇಬ್ಬರು ಸಿಬ್ಬಂದಿಯನ್ನು ಬಂಧಿಸಲಾಗಿದೆ.

ಇದನ್ನೂ ಓದಿರಿ: ಯುಪಿ ಸಿಎಂ ಅಲಹಾಬಾದ್ ಹೈಕೋರ್ಟ್ ಸಿಜೆ ರೀತಿ ವರ್ತಿಸುತ್ತಿದ್ದಾರೆ: ಓವೈಸಿ

ಪ್ರಕರಣದಲ್ಲಿ ಹಿರಿಯ ಅಧಿಕಾರಿಗಳನ್ನು ರಕ್ಷಿಸಲಾಗುತ್ತಿದೆ, ಕಿರಿಯ ಸಿಬ್ಬಂದಿಯನ್ನು ಮಾತ್ರ ವಿಚಾರಣೆಗೆ ಒಳಪಡಿಸಲಾಗುತ್ತಿದೆ ಎಂದು ಹೈಕೋರ್ಟ್ ಆಕ್ಷೇಪಣೆ ಎತ್ತಿದೆ.

ಎಸಿಬಿ ಪ್ರಕರಣದ ತನಿಖೆಯನ್ನು ಸರಿಯಾದ ರೀತಿಯಲ್ಲಿ ನಡೆಸುತ್ತಿಲ್ಲ ಮತ್ತು ಸಂಸ್ಥೆಯು ಲಂಚದ ಸಂಗ್ರಹ ಕೇಂದ್ರವಾಗಿ ಮಾರ್ಪಟ್ಟಿದೆ ಎಂದು ನ್ಯಾಯಮೂರ್ತಿ ಸಂದೇಶ್ ಅಭಿಪ್ರಾಯಪಟ್ಟಿದ್ದಾರೆ.

“ಎಸಿಬಿಗೆ ಕಳಂಕಿತ ಅಧಿಕಾರಿಗಳನ್ನು ನಿಯೋಜನೆ ಮಾಡಬೇಡಿ. ಎಸಿಬಿಗೆ ಅಧಿಕಾರಿಗಳನ್ನು ನಿಯೋಜಿಸುವ ಮೊದಲು ಸಾರ್ವಜನಿಕ ಹಿತಾಸಕ್ತಿಯನ್ನು ಗಮನಿಸಬೇಕು. ರಾಜ್ಯದಲ್ಲಿನ ಭ್ರಷ್ಟಾಚಾರವನ್ನು ತಡೆಗಟ್ಟಲೆಂದೇ ಎಸಿಬಿ ರಚಿಸಲಾಗಿದೆ. ಎಸಿಬಿಗೆ ಅಧಿಕಾರಿಯಾಗುವವರಿಗೆ ವಿಶ್ವಾಸಾರ್ಹತೆ ಬಹುಮುಖ್ಯವಾಗಿರುತ್ತದೆ. ಎಸಿಬಿ ಘನತೆಯನ್ನು ಕಾಪಾಡುವ, ಉನ್ನತ ಸ್ಥಾನಕ್ಕೆ ಒಯ್ಯುವ ಕ್ಷಮತೆ ಇರಬೇಕು. ಸರ್ವೀಸ್‌ ರೆಕಾರ್ಡ್, ಅಧಿಕಾರಿಯ ಸಮಗ್ರತೆಯನ್ನು ಪರಿಗಣಿಸಬೇಕು” ಎಂದು ನ್ಯಾಯಪೀಠವು ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ನಿರ್ದೇಶನ ನೀಡಿದೆ.

“ಎಸಿಬಿಗೆ ಅಧಿಕಾರಿಗಳನ್ನು ನೇಮಿಸುವಾಗ ಆಂತರಿಕ, ಬಾಹ್ಯ ಪ್ರಭಾವಕ್ಕೆ ಒಳಗಾಗದೆ ನೇಮಕ ಮಾಡಬೇಕು. ಇಂತಹ ಅಧಿಕಾರಿಗಳ ಹಾಗೂ ಅವರ ಕುಟುಂಬದವರ ವಿರುದ್ಧವೂ ಎಸಿಬಿ, ಲೋಕಾಯುಕ್ತ ತನಿಖೆ ನಡೆಯುತ್ತಿರಬಾರದು” ಎಂದು ತಿಳಿಸಿದೆ.

ನ್ಯಾಯಮೂರ್ತಿ ಸಂದೇಶ್ ನೀಡಿದ ಲಿಖಿತ ಆದೇಶವನ್ನು ಪ್ರಶ್ನಿಸಿ ಕರ್ನಾಟಕ ಎಸಿಬಿ, ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ. ಜುಲೈ 12 ರಂದು ಪ್ರಕರಣದ ವಿಚಾರಣೆ ನಡೆಯಲಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...