Homeಮುಖಪುಟಕೇಂದ್ರದ ಸಲಹೆಯಂತೆ ಹೈಕೋರ್ಟ್ ನ್ಯಾಯಾಧೀಶರ ವರ್ಗಾವಣೆ : ನ್ಯಾಯಾಂಗದ ಸ್ವಾತಂತ್ರ್ಯಕ್ಕೆ ಧಕ್ಕೆ ಎಂದ ನ್ಯಾ. ಉಜ್ಜಲ್...

ಕೇಂದ್ರದ ಸಲಹೆಯಂತೆ ಹೈಕೋರ್ಟ್ ನ್ಯಾಯಾಧೀಶರ ವರ್ಗಾವಣೆ : ನ್ಯಾಯಾಂಗದ ಸ್ವಾತಂತ್ರ್ಯಕ್ಕೆ ಧಕ್ಕೆ ಎಂದ ನ್ಯಾ. ಉಜ್ಜಲ್ ಭುಯಾನ್

- Advertisement -
- Advertisement -

ಕೇಂದ್ರ ಸರ್ಕಾರದ ಕೋರಿಕೆಯ ಮೇರೆಗೆ ಹೈಕೋರ್ಟ್ ನ್ಯಾಯಾಧೀಶರನ್ನು ವರ್ಗಾವಣೆ ಮಾಡುವ ಪ್ರಸ್ತಾವನೆ ಮಾರ್ಪಡಿಸಿದ ಕೊಲಿಜಿಯಂನ ಇತ್ತೀಚಿನ ನಿರ್ಧಾರವನ್ನು ಸುಪ್ರೀಂ ಕೋರ್ಟ್ ನ್ಯಾಯಾಧೀಶ ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಪ್ರಶ್ನಿಸಿದ್ದು, “ನ್ಯಾಯಾಧೀಶರ ವರ್ಗಾವಣೆ ಮತ್ತು ನೇಮಕಾತಿ ವಿಷಯದಲ್ಲಿ ಕಾರ್ಯಾಂಗಕ್ಕೆ ಯಾವುದೇ ಪಾತ್ರವಿಲ್ಲ” ಎಂದು ಪ್ರತಿಪಾದಿಸಿದ್ದಾರೆ.

ಕೇಂದ್ರದ ಕೋರಿಕೆಯ ಮೇರೆಗೆ ವರ್ಗಾವಣೆ ಪ್ರಸ್ತಾವನೆ ಮಾರ್ಪಾಡು ಮಾಡಲಾಗಿದೆ ಎಂಬ ಕೊಲಿಜಿಯಂನ ದಾಖಲೆಯು “ಸಾಂವಿಧಾನಿಕವಾಗಿ ಸ್ವತಂತ್ರ ಎಂದು ಭಾವಿಸಲಾದ ಪ್ರಕ್ರಿಯೆಯ ಮೇಲೆ ಕಾರ್ಯಾಂಗ ಪ್ರಭಾವದ ಗಮನಾರ್ಹ ಹಸ್ತಕ್ಷೇಪವನ್ನು ಬಹಿರಂಗಪಡಿಸುತ್ತದೆ” ಎಂದು ನ್ಯಾಯಮೂರ್ತಿ ಭುಯಾನ್ ಹೇಳಿದ್ದಾರೆ.

ಕಳೆದ ವರ್ಷದ ಅಕ್ಟೋಬರ್‌ನಲ್ಲಿ, ಸುಪ್ರೀಂ ಕೋರ್ಟ್ ಕೊಲಿಜಿಯಂ ನ್ಯಾಯಮೂರ್ತಿ ಅತುಲ್ ಶ್ರೀಧರನ್ ಅವರನ್ನು ಮಧ್ಯಪ್ರದೇಶ ಹೈಕೋರ್ಟ್‌ನಿಂದ ಛತ್ತೀಸ್‌ಗಢ ಹೈಕೋರ್ಟ್‌ಗೆ ವರ್ಗಾಯಿಸುವ ತನ್ನ ಮೂಲ ಪ್ರಸ್ತಾವನೆಯನ್ನು ಮಾರ್ಪಡಿಸಿ, ಅವರನ್ನು ಅಲಹಾಬಾದ್ ಹೈಕೋರ್ಟ್‌ಗೆ ವರ್ಗಾಯಿಸಲು ಶಿಫಾರಸು ಮಾಡಿತ್ತು.

“ಸರ್ಕಾರದ ಮರುಪರಿಶೀಲನೆ ಕೋರಿಗೆ ಮೇರೆಗೆ” ಪ್ರಸ್ತಾವನೆಯನ್ನು ಮಾರ್ಪಡಿಸಲಾಗಿದೆ ಎಂದು ಕೊಲಿಜಿಯಂ ಹೇಳಿಕೆಯೇ ಸ್ಪಷ್ಟವಾಗಿ ದಾಖಲಿಸಿರುವುದರಿಂದ ಈ ನಡೆ ಹುಬ್ಬೇರಿಸಿದೆ. ಛತ್ತೀಸ್‌ಗಢ ಹೈಕೋರ್ಟ್‌ನಲ್ಲಿ, ನ್ಯಾಯಮೂರ್ತಿ ಶ್ರೀಧರನ್ ಅವರು ಹೈಕೋರ್ಟ್ ಕೊಲಿಜಿಯಂ ಸದಸ್ಯರಾಗುತ್ತಿದ್ದರು. ಆದರೆ, ಅಲಹಾಬಾದ್ ಹೈಕೋರ್ಟ್‌ನಲ್ಲಿ ಅವರ ಸೇವಾ ಹಿರಿತನವು ತುಂಬಾ ಕಡಿಮೆ ಇದೆ.

ನ್ಯಾಯಮೂರ್ತಿ ಅತುಲ್ ಶ್ರೀಧರನ್ ಅವರು ಸ್ವತಂತ್ರ ನ್ಯಾಯಾಧೀಶರು ಎಂಬ ಖ್ಯಾತಿ ಹೊಂದಿದವರು. ಇತ್ತೀಚೆಗೆ ಕರ್ನಲ್ ಸೋಫಿಯಾ ಕುರೇಶಿ ವಿರುದ್ದ ಅವಮಾನಕರ ಮತ್ತು ನಿಂದನೀಯ ಹೇಳಿಕೆ ನೀಡಿದ್ದ ಮಧ್ಯಪ್ರದೇಶದ ಬಿಜೆಪಿ ಸರ್ಕಾರದ ಸಚಿವ ಕುನ್ವರ್ ವಿಜಯ್ ಶಾ ವಿರುದ್ದ ಅವರು ಸ್ವಯಂಪ್ರೇರಿತ (ಸುಮೋಟೋ) ವಿಚಾರಣೆ ಕೈಗೆತ್ತಿಕೊಂಡಿದ್ದರು. ಈ ನಡೆಯಿಂದ ಅವರು ‘ನಿಷ್ಪಕ್ಷಪಾತಿ’ ಎಂದು ಎನಿಸಿಕೊಂಡಿದ್ದರು. ಅಂತಹ ನ್ಯಾಯಾಧೀಶರ ವಿಚಾರದಲ್ಲಿ ಕೇಂದ್ರ ಹಸ್ತಕ್ಷೇಪ ಮಾಡಿರುವುದು ಅನುಮಾನವನ್ನು ಹುಟ್ಟುಹಾಕಿದೆ.

ಪುಣೆಯ ಐಎಲ್‌ಎಸ್ ಕಾನೂನು ಕಾಲೇಜಿನಲ್ಲಿ “ಸಾಂವಿಧಾನಿಕ ನೈತಿಕತೆ ಮತ್ತು ಪ್ರಜಾಪ್ರಭುತ್ವ ಆಡಳಿತ” ಕುರಿತು ಪ್ರಾಂಶುಪಾಲ ಜಿ.ವಿ. ಪಂಡಿತ್ ಸ್ಮಾರಕ ಉಪನ್ಯಾಸ ನೀಡುತ್ತಾ, ನ್ಯಾಯಾಧೀಶರ ವರ್ಗಾವಣೆ ಮತ್ತು ನಿಯೋಜನೆಯು ನ್ಯಾಯಾಂಗದ ವ್ಯಾಪ್ತಿಗೆ ಮಾತ್ರ ಬರುತ್ತದೆ. ಈ ವಿಚಾರದಲ್ಲಿ ಕೇಂದ್ರ ಸರ್ಕಾರದಿಂದ ಪ್ರಭಾವಿತವಾಗಲು ಸಾಧ್ಯವಿಲ್ಲ ಎಂದು ನ್ಯಾಯಮೂರ್ತಿ ಭುಯಾನ್ ಹೇಳಿದ್ದಾರೆ.

“ಸರ್ಕಾರದ ವಿರುದ್ಧ ಕೆಲವು ಆದೇಶಗಳನ್ನು ಹೊರಡಿಸಿದ್ದಾರೆ ಎಂಬ ಕಾರಣಕ್ಕಾಗಿ ನ್ಯಾಯಾಧೀಶರನ್ನು ಒಂದು ಹೈಕೋರ್ಟ್‌ನಿಂದ ಮತ್ತೊಂದು ಹೈಕೋರ್ಟ್‌ಗೆ ಏಕೆ ವರ್ಗಾಯಿಸಬೇಕು? ಇದು ನ್ಯಾಯಾಂಗದ ಸ್ವಾತಂತ್ರ್ಯದ ಮೇಲೆ ಪರಿಣಾಮ ಬೀರುವುದಿಲ್ಲವೇ?” ಎಂದು ನ್ಯಾ. ಭುಯಾನ್ ಅವರು ಪ್ರಶ್ನಿಸಿದ್ದು, ಇಂತಹ ಕ್ರಮಗಳು ಸಂವಿಧಾನದ ಮೂಲ ಆಶಯವಾಗಿರುವ ನ್ಯಾಯಾಂಗದ ಸ್ವಾತಂತ್ರ್ಯವನ್ನು ನೇರವಾಗಿ ಹಾಳುಮಾಡುತ್ತವೆ” ಎಂದು ಎಚ್ಚರಿಸಿದ್ದಾರೆ. ಆದರೆ, ನ್ಯಾ. ಭುಯಾನ್ ಅವರು ತಮ್ಮ ಭಾಷಣದಲ್ಲಿ ನ್ಯಾ. ಶ್ರೀಧರನ್ ಅವರ ಹೆಸರನ್ನು ನೇರವಾಗಿ ಉಲ್ಲೇಖಿಸಿಲ್ಲ.

“ವಿಷಯಗಳ ಸ್ವಭಾವದಿಂದ, ಕೇಂದ್ರ ಸರ್ಕಾರವು ಹೈಕೋರ್ಟ್ ನ್ಯಾಯಾಧೀಶರ ವರ್ಗಾವಣೆ ಮತ್ತು ನಿಯೋಜನೆಯ ವಿಷಯದಲ್ಲಿ ಯಾವುದೇ ಪಾತ್ರವನ್ನು ಹೊಂದಲು ಸಾಧ್ಯವಿಲ್ಲ. ಇಂತಹ ನ್ಯಾಯಾಧೀಶರನ್ನು ವರ್ಗಾಯಿಸಬಾರದು ಅಥವಾ ವರ್ಗಾಯಿಸಬೇಕು ಎಂದು ಹೇಳಲು ಸಾಧ್ಯವಿಲ್ಲ. ಅದು ನ್ಯಾಯಾಂಗದ ವಿಶೇಷ ವ್ಯಾಪ್ತಿಯಲ್ಲಿ ಬರುತ್ತದೆ” ಎಂದು ನ್ಯಾ. ಭುಯಾನ್ ಪ್ರತಿಪಾದಿಸಿದ್ದಾರೆ.

ನ್ಯಾಯಾಂಗದ ಉತ್ತಮ ಆಡಳಿತಕ್ಕಾಗಿ ವರ್ಗಾವಣೆಗಳು ಆಗಬೇಕೇ ಹೊರತು, ಸರ್ಕಾರದ ವಿರುದ್ದ ನಿರ್ಣಯಗಳನ್ನು ತೆಗೆದುಕೊಂಡ ನ್ಯಾಯಾಧೀಶರನ್ನು ದಂಡಿಸುವ ಸಾಧನವಾಗಿ ವರ್ಗಾವಣೆಯನ್ನು ಬಳಸಬಾರದು ಎಂದು ನ್ಯಾ.ಭುಯಾನ್ ಅವರು ಒತ್ತಿ ಹೇಳಿದ್ದಾರೆ. ಕೇಂದ್ರದ ಕೋರಿಕೆಯ ಮೇರೆಗೆ ನ್ಯಾಯಾಧೀಶರನ್ನು ವರ್ಗಾವಣೆ ಮಾಡುವ ನಿರ್ಧಾರದ ಮಾರ್ಪಾಡು “ಕಾರ್ಯಾಂಗವು ಕೊಲಿಜಿಯಂ ನಿರ್ಧಾರಗಳ ಮೇಲೆ ಪ್ರಭಾವ ಬೀರುತ್ತದೆ ಎಂಬುವುದನ್ನು ಸ್ಪಷ್ಟವಾಗಿ ಪ್ರತಿಬಿಂಬಿಸುತ್ತದೆ” ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...