Homeಮುಖಪುಟಕೇಂದ್ರದ ಸಲಹೆಯಂತೆ ಹೈಕೋರ್ಟ್ ನ್ಯಾಯಾಧೀಶರ ವರ್ಗಾವಣೆ : ನ್ಯಾಯಾಂಗದ ಸ್ವಾತಂತ್ರ್ಯಕ್ಕೆ ಧಕ್ಕೆ ಎಂದ ನ್ಯಾ. ಉಜ್ಜಲ್...

ಕೇಂದ್ರದ ಸಲಹೆಯಂತೆ ಹೈಕೋರ್ಟ್ ನ್ಯಾಯಾಧೀಶರ ವರ್ಗಾವಣೆ : ನ್ಯಾಯಾಂಗದ ಸ್ವಾತಂತ್ರ್ಯಕ್ಕೆ ಧಕ್ಕೆ ಎಂದ ನ್ಯಾ. ಉಜ್ಜಲ್ ಭುಯಾನ್

- Advertisement -
- Advertisement -

ಕೇಂದ್ರ ಸರ್ಕಾರದ ಕೋರಿಕೆಯ ಮೇರೆಗೆ ಹೈಕೋರ್ಟ್ ನ್ಯಾಯಾಧೀಶರನ್ನು ವರ್ಗಾವಣೆ ಮಾಡುವ ಪ್ರಸ್ತಾವನೆ ಮಾರ್ಪಡಿಸಿದ ಕೊಲಿಜಿಯಂನ ಇತ್ತೀಚಿನ ನಿರ್ಧಾರವನ್ನು ಸುಪ್ರೀಂ ಕೋರ್ಟ್ ನ್ಯಾಯಾಧೀಶ ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಪ್ರಶ್ನಿಸಿದ್ದು, “ನ್ಯಾಯಾಧೀಶರ ವರ್ಗಾವಣೆ ಮತ್ತು ನೇಮಕಾತಿ ವಿಷಯದಲ್ಲಿ ಕಾರ್ಯಾಂಗಕ್ಕೆ ಯಾವುದೇ ಪಾತ್ರವಿಲ್ಲ” ಎಂದು ಪ್ರತಿಪಾದಿಸಿದ್ದಾರೆ.

ಕೇಂದ್ರದ ಕೋರಿಕೆಯ ಮೇರೆಗೆ ವರ್ಗಾವಣೆ ಪ್ರಸ್ತಾವನೆ ಮಾರ್ಪಾಡು ಮಾಡಲಾಗಿದೆ ಎಂಬ ಕೊಲಿಜಿಯಂನ ದಾಖಲೆಯು “ಸಾಂವಿಧಾನಿಕವಾಗಿ ಸ್ವತಂತ್ರ ಎಂದು ಭಾವಿಸಲಾದ ಪ್ರಕ್ರಿಯೆಯ ಮೇಲೆ ಕಾರ್ಯಾಂಗ ಪ್ರಭಾವದ ಗಮನಾರ್ಹ ಹಸ್ತಕ್ಷೇಪವನ್ನು ಬಹಿರಂಗಪಡಿಸುತ್ತದೆ” ಎಂದು ನ್ಯಾಯಮೂರ್ತಿ ಭುಯಾನ್ ಹೇಳಿದ್ದಾರೆ.

ಕಳೆದ ವರ್ಷದ ಅಕ್ಟೋಬರ್‌ನಲ್ಲಿ, ಸುಪ್ರೀಂ ಕೋರ್ಟ್ ಕೊಲಿಜಿಯಂ ನ್ಯಾಯಮೂರ್ತಿ ಅತುಲ್ ಶ್ರೀಧರನ್ ಅವರನ್ನು ಮಧ್ಯಪ್ರದೇಶ ಹೈಕೋರ್ಟ್‌ನಿಂದ ಛತ್ತೀಸ್‌ಗಢ ಹೈಕೋರ್ಟ್‌ಗೆ ವರ್ಗಾಯಿಸುವ ತನ್ನ ಮೂಲ ಪ್ರಸ್ತಾವನೆಯನ್ನು ಮಾರ್ಪಡಿಸಿ, ಅವರನ್ನು ಅಲಹಾಬಾದ್ ಹೈಕೋರ್ಟ್‌ಗೆ ವರ್ಗಾಯಿಸಲು ಶಿಫಾರಸು ಮಾಡಿತ್ತು.

“ಸರ್ಕಾರದ ಮರುಪರಿಶೀಲನೆ ಕೋರಿಗೆ ಮೇರೆಗೆ” ಪ್ರಸ್ತಾವನೆಯನ್ನು ಮಾರ್ಪಡಿಸಲಾಗಿದೆ ಎಂದು ಕೊಲಿಜಿಯಂ ಹೇಳಿಕೆಯೇ ಸ್ಪಷ್ಟವಾಗಿ ದಾಖಲಿಸಿರುವುದರಿಂದ ಈ ನಡೆ ಹುಬ್ಬೇರಿಸಿದೆ. ಛತ್ತೀಸ್‌ಗಢ ಹೈಕೋರ್ಟ್‌ನಲ್ಲಿ, ನ್ಯಾಯಮೂರ್ತಿ ಶ್ರೀಧರನ್ ಅವರು ಹೈಕೋರ್ಟ್ ಕೊಲಿಜಿಯಂ ಸದಸ್ಯರಾಗುತ್ತಿದ್ದರು. ಆದರೆ, ಅಲಹಾಬಾದ್ ಹೈಕೋರ್ಟ್‌ನಲ್ಲಿ ಅವರ ಸೇವಾ ಹಿರಿತನವು ತುಂಬಾ ಕಡಿಮೆ ಇದೆ.

ನ್ಯಾಯಮೂರ್ತಿ ಅತುಲ್ ಶ್ರೀಧರನ್ ಅವರು ಸ್ವತಂತ್ರ ನ್ಯಾಯಾಧೀಶರು ಎಂಬ ಖ್ಯಾತಿ ಹೊಂದಿದವರು. ಇತ್ತೀಚೆಗೆ ಕರ್ನಲ್ ಸೋಫಿಯಾ ಕುರೇಶಿ ವಿರುದ್ದ ಅವಮಾನಕರ ಮತ್ತು ನಿಂದನೀಯ ಹೇಳಿಕೆ ನೀಡಿದ್ದ ಮಧ್ಯಪ್ರದೇಶದ ಬಿಜೆಪಿ ಸರ್ಕಾರದ ಸಚಿವ ಕುನ್ವರ್ ವಿಜಯ್ ಶಾ ವಿರುದ್ದ ಅವರು ಸ್ವಯಂಪ್ರೇರಿತ (ಸುಮೋಟೋ) ವಿಚಾರಣೆ ಕೈಗೆತ್ತಿಕೊಂಡಿದ್ದರು. ಈ ನಡೆಯಿಂದ ಅವರು ‘ನಿಷ್ಪಕ್ಷಪಾತಿ’ ಎಂದು ಎನಿಸಿಕೊಂಡಿದ್ದರು. ಅಂತಹ ನ್ಯಾಯಾಧೀಶರ ವಿಚಾರದಲ್ಲಿ ಕೇಂದ್ರ ಹಸ್ತಕ್ಷೇಪ ಮಾಡಿರುವುದು ಅನುಮಾನವನ್ನು ಹುಟ್ಟುಹಾಕಿದೆ.

ಪುಣೆಯ ಐಎಲ್‌ಎಸ್ ಕಾನೂನು ಕಾಲೇಜಿನಲ್ಲಿ “ಸಾಂವಿಧಾನಿಕ ನೈತಿಕತೆ ಮತ್ತು ಪ್ರಜಾಪ್ರಭುತ್ವ ಆಡಳಿತ” ಕುರಿತು ಪ್ರಾಂಶುಪಾಲ ಜಿ.ವಿ. ಪಂಡಿತ್ ಸ್ಮಾರಕ ಉಪನ್ಯಾಸ ನೀಡುತ್ತಾ, ನ್ಯಾಯಾಧೀಶರ ವರ್ಗಾವಣೆ ಮತ್ತು ನಿಯೋಜನೆಯು ನ್ಯಾಯಾಂಗದ ವ್ಯಾಪ್ತಿಗೆ ಮಾತ್ರ ಬರುತ್ತದೆ. ಈ ವಿಚಾರದಲ್ಲಿ ಕೇಂದ್ರ ಸರ್ಕಾರದಿಂದ ಪ್ರಭಾವಿತವಾಗಲು ಸಾಧ್ಯವಿಲ್ಲ ಎಂದು ನ್ಯಾಯಮೂರ್ತಿ ಭುಯಾನ್ ಹೇಳಿದ್ದಾರೆ.

“ಸರ್ಕಾರದ ವಿರುದ್ಧ ಕೆಲವು ಆದೇಶಗಳನ್ನು ಹೊರಡಿಸಿದ್ದಾರೆ ಎಂಬ ಕಾರಣಕ್ಕಾಗಿ ನ್ಯಾಯಾಧೀಶರನ್ನು ಒಂದು ಹೈಕೋರ್ಟ್‌ನಿಂದ ಮತ್ತೊಂದು ಹೈಕೋರ್ಟ್‌ಗೆ ಏಕೆ ವರ್ಗಾಯಿಸಬೇಕು? ಇದು ನ್ಯಾಯಾಂಗದ ಸ್ವಾತಂತ್ರ್ಯದ ಮೇಲೆ ಪರಿಣಾಮ ಬೀರುವುದಿಲ್ಲವೇ?” ಎಂದು ನ್ಯಾ. ಭುಯಾನ್ ಅವರು ಪ್ರಶ್ನಿಸಿದ್ದು, ಇಂತಹ ಕ್ರಮಗಳು ಸಂವಿಧಾನದ ಮೂಲ ಆಶಯವಾಗಿರುವ ನ್ಯಾಯಾಂಗದ ಸ್ವಾತಂತ್ರ್ಯವನ್ನು ನೇರವಾಗಿ ಹಾಳುಮಾಡುತ್ತವೆ” ಎಂದು ಎಚ್ಚರಿಸಿದ್ದಾರೆ. ಆದರೆ, ನ್ಯಾ. ಭುಯಾನ್ ಅವರು ತಮ್ಮ ಭಾಷಣದಲ್ಲಿ ನ್ಯಾ. ಶ್ರೀಧರನ್ ಅವರ ಹೆಸರನ್ನು ನೇರವಾಗಿ ಉಲ್ಲೇಖಿಸಿಲ್ಲ.

“ವಿಷಯಗಳ ಸ್ವಭಾವದಿಂದ, ಕೇಂದ್ರ ಸರ್ಕಾರವು ಹೈಕೋರ್ಟ್ ನ್ಯಾಯಾಧೀಶರ ವರ್ಗಾವಣೆ ಮತ್ತು ನಿಯೋಜನೆಯ ವಿಷಯದಲ್ಲಿ ಯಾವುದೇ ಪಾತ್ರವನ್ನು ಹೊಂದಲು ಸಾಧ್ಯವಿಲ್ಲ. ಇಂತಹ ನ್ಯಾಯಾಧೀಶರನ್ನು ವರ್ಗಾಯಿಸಬಾರದು ಅಥವಾ ವರ್ಗಾಯಿಸಬೇಕು ಎಂದು ಹೇಳಲು ಸಾಧ್ಯವಿಲ್ಲ. ಅದು ನ್ಯಾಯಾಂಗದ ವಿಶೇಷ ವ್ಯಾಪ್ತಿಯಲ್ಲಿ ಬರುತ್ತದೆ” ಎಂದು ನ್ಯಾ. ಭುಯಾನ್ ಪ್ರತಿಪಾದಿಸಿದ್ದಾರೆ.

ನ್ಯಾಯಾಂಗದ ಉತ್ತಮ ಆಡಳಿತಕ್ಕಾಗಿ ವರ್ಗಾವಣೆಗಳು ಆಗಬೇಕೇ ಹೊರತು, ಸರ್ಕಾರದ ವಿರುದ್ದ ನಿರ್ಣಯಗಳನ್ನು ತೆಗೆದುಕೊಂಡ ನ್ಯಾಯಾಧೀಶರನ್ನು ದಂಡಿಸುವ ಸಾಧನವಾಗಿ ವರ್ಗಾವಣೆಯನ್ನು ಬಳಸಬಾರದು ಎಂದು ನ್ಯಾ.ಭುಯಾನ್ ಅವರು ಒತ್ತಿ ಹೇಳಿದ್ದಾರೆ. ಕೇಂದ್ರದ ಕೋರಿಕೆಯ ಮೇರೆಗೆ ನ್ಯಾಯಾಧೀಶರನ್ನು ವರ್ಗಾವಣೆ ಮಾಡುವ ನಿರ್ಧಾರದ ಮಾರ್ಪಾಡು “ಕಾರ್ಯಾಂಗವು ಕೊಲಿಜಿಯಂ ನಿರ್ಧಾರಗಳ ಮೇಲೆ ಪ್ರಭಾವ ಬೀರುತ್ತದೆ ಎಂಬುವುದನ್ನು ಸ್ಪಷ್ಟವಾಗಿ ಪ್ರತಿಬಿಂಬಿಸುತ್ತದೆ” ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಾಯಿಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...