Homeಮುಖಪುಟಕೇಂದ್ರದ ಸಲಹೆಯಂತೆ ಹೈಕೋರ್ಟ್ ನ್ಯಾಯಾಧೀಶರ ವರ್ಗಾವಣೆ : ನ್ಯಾಯಾಂಗದ ಸ್ವಾತಂತ್ರ್ಯಕ್ಕೆ ಧಕ್ಕೆ ಎಂದ ನ್ಯಾ. ಉಜ್ಜಲ್...

ಕೇಂದ್ರದ ಸಲಹೆಯಂತೆ ಹೈಕೋರ್ಟ್ ನ್ಯಾಯಾಧೀಶರ ವರ್ಗಾವಣೆ : ನ್ಯಾಯಾಂಗದ ಸ್ವಾತಂತ್ರ್ಯಕ್ಕೆ ಧಕ್ಕೆ ಎಂದ ನ್ಯಾ. ಉಜ್ಜಲ್ ಭುಯಾನ್

- Advertisement -
- Advertisement -

ಕೇಂದ್ರ ಸರ್ಕಾರದ ಕೋರಿಕೆಯ ಮೇರೆಗೆ ಹೈಕೋರ್ಟ್ ನ್ಯಾಯಾಧೀಶರನ್ನು ವರ್ಗಾವಣೆ ಮಾಡುವ ಪ್ರಸ್ತಾವನೆ ಮಾರ್ಪಡಿಸಿದ ಕೊಲಿಜಿಯಂನ ಇತ್ತೀಚಿನ ನಿರ್ಧಾರವನ್ನು ಸುಪ್ರೀಂ ಕೋರ್ಟ್ ನ್ಯಾಯಾಧೀಶ ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಪ್ರಶ್ನಿಸಿದ್ದು, “ನ್ಯಾಯಾಧೀಶರ ವರ್ಗಾವಣೆ ಮತ್ತು ನೇಮಕಾತಿ ವಿಷಯದಲ್ಲಿ ಕಾರ್ಯಾಂಗಕ್ಕೆ ಯಾವುದೇ ಪಾತ್ರವಿಲ್ಲ” ಎಂದು ಪ್ರತಿಪಾದಿಸಿದ್ದಾರೆ.

ಕೇಂದ್ರದ ಕೋರಿಕೆಯ ಮೇರೆಗೆ ವರ್ಗಾವಣೆ ಪ್ರಸ್ತಾವನೆ ಮಾರ್ಪಾಡು ಮಾಡಲಾಗಿದೆ ಎಂಬ ಕೊಲಿಜಿಯಂನ ದಾಖಲೆಯು “ಸಾಂವಿಧಾನಿಕವಾಗಿ ಸ್ವತಂತ್ರ ಎಂದು ಭಾವಿಸಲಾದ ಪ್ರಕ್ರಿಯೆಯ ಮೇಲೆ ಕಾರ್ಯಾಂಗ ಪ್ರಭಾವದ ಗಮನಾರ್ಹ ಹಸ್ತಕ್ಷೇಪವನ್ನು ಬಹಿರಂಗಪಡಿಸುತ್ತದೆ” ಎಂದು ನ್ಯಾಯಮೂರ್ತಿ ಭುಯಾನ್ ಹೇಳಿದ್ದಾರೆ.

ಕಳೆದ ವರ್ಷದ ಅಕ್ಟೋಬರ್‌ನಲ್ಲಿ, ಸುಪ್ರೀಂ ಕೋರ್ಟ್ ಕೊಲಿಜಿಯಂ ನ್ಯಾಯಮೂರ್ತಿ ಅತುಲ್ ಶ್ರೀಧರನ್ ಅವರನ್ನು ಮಧ್ಯಪ್ರದೇಶ ಹೈಕೋರ್ಟ್‌ನಿಂದ ಛತ್ತೀಸ್‌ಗಢ ಹೈಕೋರ್ಟ್‌ಗೆ ವರ್ಗಾಯಿಸುವ ತನ್ನ ಮೂಲ ಪ್ರಸ್ತಾವನೆಯನ್ನು ಮಾರ್ಪಡಿಸಿ, ಅವರನ್ನು ಅಲಹಾಬಾದ್ ಹೈಕೋರ್ಟ್‌ಗೆ ವರ್ಗಾಯಿಸಲು ಶಿಫಾರಸು ಮಾಡಿತ್ತು.

“ಸರ್ಕಾರದ ಮರುಪರಿಶೀಲನೆ ಕೋರಿಗೆ ಮೇರೆಗೆ” ಪ್ರಸ್ತಾವನೆಯನ್ನು ಮಾರ್ಪಡಿಸಲಾಗಿದೆ ಎಂದು ಕೊಲಿಜಿಯಂ ಹೇಳಿಕೆಯೇ ಸ್ಪಷ್ಟವಾಗಿ ದಾಖಲಿಸಿರುವುದರಿಂದ ಈ ನಡೆ ಹುಬ್ಬೇರಿಸಿದೆ. ಛತ್ತೀಸ್‌ಗಢ ಹೈಕೋರ್ಟ್‌ನಲ್ಲಿ, ನ್ಯಾಯಮೂರ್ತಿ ಶ್ರೀಧರನ್ ಅವರು ಹೈಕೋರ್ಟ್ ಕೊಲಿಜಿಯಂ ಸದಸ್ಯರಾಗುತ್ತಿದ್ದರು. ಆದರೆ, ಅಲಹಾಬಾದ್ ಹೈಕೋರ್ಟ್‌ನಲ್ಲಿ ಅವರ ಸೇವಾ ಹಿರಿತನವು ತುಂಬಾ ಕಡಿಮೆ ಇದೆ.

ನ್ಯಾಯಮೂರ್ತಿ ಅತುಲ್ ಶ್ರೀಧರನ್ ಅವರು ಸ್ವತಂತ್ರ ನ್ಯಾಯಾಧೀಶರು ಎಂಬ ಖ್ಯಾತಿ ಹೊಂದಿದವರು. ಇತ್ತೀಚೆಗೆ ಕರ್ನಲ್ ಸೋಫಿಯಾ ಕುರೇಶಿ ವಿರುದ್ದ ಅವಮಾನಕರ ಮತ್ತು ನಿಂದನೀಯ ಹೇಳಿಕೆ ನೀಡಿದ್ದ ಮಧ್ಯಪ್ರದೇಶದ ಬಿಜೆಪಿ ಸರ್ಕಾರದ ಸಚಿವ ಕುನ್ವರ್ ವಿಜಯ್ ಶಾ ವಿರುದ್ದ ಅವರು ಸ್ವಯಂಪ್ರೇರಿತ (ಸುಮೋಟೋ) ವಿಚಾರಣೆ ಕೈಗೆತ್ತಿಕೊಂಡಿದ್ದರು. ಈ ನಡೆಯಿಂದ ಅವರು ‘ನಿಷ್ಪಕ್ಷಪಾತಿ’ ಎಂದು ಎನಿಸಿಕೊಂಡಿದ್ದರು. ಅಂತಹ ನ್ಯಾಯಾಧೀಶರ ವಿಚಾರದಲ್ಲಿ ಕೇಂದ್ರ ಹಸ್ತಕ್ಷೇಪ ಮಾಡಿರುವುದು ಅನುಮಾನವನ್ನು ಹುಟ್ಟುಹಾಕಿದೆ.

ಪುಣೆಯ ಐಎಲ್‌ಎಸ್ ಕಾನೂನು ಕಾಲೇಜಿನಲ್ಲಿ “ಸಾಂವಿಧಾನಿಕ ನೈತಿಕತೆ ಮತ್ತು ಪ್ರಜಾಪ್ರಭುತ್ವ ಆಡಳಿತ” ಕುರಿತು ಪ್ರಾಂಶುಪಾಲ ಜಿ.ವಿ. ಪಂಡಿತ್ ಸ್ಮಾರಕ ಉಪನ್ಯಾಸ ನೀಡುತ್ತಾ, ನ್ಯಾಯಾಧೀಶರ ವರ್ಗಾವಣೆ ಮತ್ತು ನಿಯೋಜನೆಯು ನ್ಯಾಯಾಂಗದ ವ್ಯಾಪ್ತಿಗೆ ಮಾತ್ರ ಬರುತ್ತದೆ. ಈ ವಿಚಾರದಲ್ಲಿ ಕೇಂದ್ರ ಸರ್ಕಾರದಿಂದ ಪ್ರಭಾವಿತವಾಗಲು ಸಾಧ್ಯವಿಲ್ಲ ಎಂದು ನ್ಯಾಯಮೂರ್ತಿ ಭುಯಾನ್ ಹೇಳಿದ್ದಾರೆ.

“ಸರ್ಕಾರದ ವಿರುದ್ಧ ಕೆಲವು ಆದೇಶಗಳನ್ನು ಹೊರಡಿಸಿದ್ದಾರೆ ಎಂಬ ಕಾರಣಕ್ಕಾಗಿ ನ್ಯಾಯಾಧೀಶರನ್ನು ಒಂದು ಹೈಕೋರ್ಟ್‌ನಿಂದ ಮತ್ತೊಂದು ಹೈಕೋರ್ಟ್‌ಗೆ ಏಕೆ ವರ್ಗಾಯಿಸಬೇಕು? ಇದು ನ್ಯಾಯಾಂಗದ ಸ್ವಾತಂತ್ರ್ಯದ ಮೇಲೆ ಪರಿಣಾಮ ಬೀರುವುದಿಲ್ಲವೇ?” ಎಂದು ನ್ಯಾ. ಭುಯಾನ್ ಅವರು ಪ್ರಶ್ನಿಸಿದ್ದು, ಇಂತಹ ಕ್ರಮಗಳು ಸಂವಿಧಾನದ ಮೂಲ ಆಶಯವಾಗಿರುವ ನ್ಯಾಯಾಂಗದ ಸ್ವಾತಂತ್ರ್ಯವನ್ನು ನೇರವಾಗಿ ಹಾಳುಮಾಡುತ್ತವೆ” ಎಂದು ಎಚ್ಚರಿಸಿದ್ದಾರೆ. ಆದರೆ, ನ್ಯಾ. ಭುಯಾನ್ ಅವರು ತಮ್ಮ ಭಾಷಣದಲ್ಲಿ ನ್ಯಾ. ಶ್ರೀಧರನ್ ಅವರ ಹೆಸರನ್ನು ನೇರವಾಗಿ ಉಲ್ಲೇಖಿಸಿಲ್ಲ.

“ವಿಷಯಗಳ ಸ್ವಭಾವದಿಂದ, ಕೇಂದ್ರ ಸರ್ಕಾರವು ಹೈಕೋರ್ಟ್ ನ್ಯಾಯಾಧೀಶರ ವರ್ಗಾವಣೆ ಮತ್ತು ನಿಯೋಜನೆಯ ವಿಷಯದಲ್ಲಿ ಯಾವುದೇ ಪಾತ್ರವನ್ನು ಹೊಂದಲು ಸಾಧ್ಯವಿಲ್ಲ. ಇಂತಹ ನ್ಯಾಯಾಧೀಶರನ್ನು ವರ್ಗಾಯಿಸಬಾರದು ಅಥವಾ ವರ್ಗಾಯಿಸಬೇಕು ಎಂದು ಹೇಳಲು ಸಾಧ್ಯವಿಲ್ಲ. ಅದು ನ್ಯಾಯಾಂಗದ ವಿಶೇಷ ವ್ಯಾಪ್ತಿಯಲ್ಲಿ ಬರುತ್ತದೆ” ಎಂದು ನ್ಯಾ. ಭುಯಾನ್ ಪ್ರತಿಪಾದಿಸಿದ್ದಾರೆ.

ನ್ಯಾಯಾಂಗದ ಉತ್ತಮ ಆಡಳಿತಕ್ಕಾಗಿ ವರ್ಗಾವಣೆಗಳು ಆಗಬೇಕೇ ಹೊರತು, ಸರ್ಕಾರದ ವಿರುದ್ದ ನಿರ್ಣಯಗಳನ್ನು ತೆಗೆದುಕೊಂಡ ನ್ಯಾಯಾಧೀಶರನ್ನು ದಂಡಿಸುವ ಸಾಧನವಾಗಿ ವರ್ಗಾವಣೆಯನ್ನು ಬಳಸಬಾರದು ಎಂದು ನ್ಯಾ.ಭುಯಾನ್ ಅವರು ಒತ್ತಿ ಹೇಳಿದ್ದಾರೆ. ಕೇಂದ್ರದ ಕೋರಿಕೆಯ ಮೇರೆಗೆ ನ್ಯಾಯಾಧೀಶರನ್ನು ವರ್ಗಾವಣೆ ಮಾಡುವ ನಿರ್ಧಾರದ ಮಾರ್ಪಾಡು “ಕಾರ್ಯಾಂಗವು ಕೊಲಿಜಿಯಂ ನಿರ್ಧಾರಗಳ ಮೇಲೆ ಪ್ರಭಾವ ಬೀರುತ್ತದೆ ಎಂಬುವುದನ್ನು ಸ್ಪಷ್ಟವಾಗಿ ಪ್ರತಿಬಿಂಬಿಸುತ್ತದೆ” ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...