Homeಮುಖಪುಟವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

- Advertisement -
- Advertisement -

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ ತಿಳಿಸಿದೆ.

ಲೋಕಸಭೆಯು ಮಸೂದೆಯನ್ನು ಅಂಗೀಕರಿಸಿದ ಒಂದು ದಿನದ ನಂತರ, ಅಂದರೆ, 2026ರ ಮಾರ್ಚ್ 25ರಂದು ರಾಜ್ಯಸಭೆಯು ಮಸೂದೆಯನ್ನು ಅಂಗೀಕರಿಸಿತ್ತು. ಟ್ರಾನ್ಸ್‌ಜೆಂಡರ್‌ಗಳ ಘನತೆಯ ಮೇಲೆ ಪರಿಣಾಮ ಬೀರುವ ನಿಬಂಧನೆಗಳನ್ನು ಮಸೂದೆ ಹೊಂದಿರುವುದರಿಂದ, ಅದನ್ನು ಹೆಚ್ಚಿನ ಪರಿಶೀಲನೆಗಾಗಿ ಸದನದ ಆಯ್ಕೆ ಸಮಿತಿಗೆ ಕಳುಹಿಸಬೇಕೆಂದು ವಿರೋಧ ಪಕ್ಷಗಳು ಒತ್ತಾಯಿಸಿದ್ದವು.

ಮಸೂದೆಯ ವಿರುದ್ಧದ ವಿರೋಧ ಪಕ್ಷದ ಆರೋಪಗಳಿಗೆ ತಿರುಗೇಟು ನೀಡಿದ್ದ ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವ ವೀರೇಂದ್ರ ಕುಮಾರ್, “ಇದು ಸಮಾಜದ ಎಲ್ಲಾ ವರ್ಗಗಳನ್ನು ಒಟ್ಟಿಗೆ ಕೊಂಡೊಯ್ಯುವ ಪ್ರಯತ್ನ” ಎಂದು ಹೇಳಿದ್ದರು. ಜೈವಿಕ ಸಮಸ್ಯೆಗಳಿಂದಾಗಿ ತಾರತಮ್ಯವನ್ನು ಎದುರಿಸುವವರಿಗೆ ಈ ಮಸೂದೆ ರಕ್ಷಣೆ ನೀಡುತ್ತದೆ ಮತ್ತು ಟ್ರಾನ್ಸ್‌ಜೆಂಡರ್ ಜನರಿಗೆ ಕಾನೂನು ಮಾನ್ಯತೆ ಮತ್ತು ರಕ್ಷಣೆ ಮುಂದುವರಿಯುತ್ತದೆ ಎಂದು ಅವರು ಹೇಳಿದ್ದರು.

ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ ಕುರಿತು ಪ್ರಸ್ತುತ ಇರುವ ಅಸ್ಪಷ್ಟ ವ್ಯಾಖ್ಯಾನದಿಂದ ಕಾಯ್ದೆಯ ಪ್ರಯೋಜನಗಳು ತಲುಪಬೇಕಾದ ನಿಜವಾದ ತುಳಿತಕ್ಕೊಳಗಾದ ವ್ಯಕ್ತಿಗಳನ್ನು ಗುರುತಿಸುವುದು ಅಸಾಧ್ಯ ಎಂದು ಸರ್ಕಾರ ಹೇಳಿತ್ತು.

2019ರ ಕಾಯ್ದೆಯ ಪ್ರಕಾರ, ಟ್ರಾನ್ಸ್‌ಜೆಂಡರ್ ಅಥವಾ ತೃತೀಯ ಲಿಂಗಿ ಎಂದರೆ, “ಯಾವ ವ್ಯಕ್ತಿಯ ಲಿಂಗವು ಹುಟ್ಟಿನ ಸಮಯದಲ್ಲಿ ಗುರುತಿಸಲಾದ ಲಿಂಗಕ್ಕೆ ಹೊಂದಿಕೆಯಾಗುವುದಿಲ್ಲವೋ ಅಂತಹ ವ್ಯಕ್ತಿ”. ಇದರಲ್ಲಿ ಟ್ರಾನ್ಸ್-ಮೆನ್ (trans-man) ಅಥವಾ ಟ್ರಾನ್ಸ್-ವುಮೆನ್ (trans-woman) ಸೇರಿರುತ್ತಾರೆ (ಅಂತಹ ವ್ಯಕ್ತಿಯು ಲಿಂಗ ಬದಲಾವಣೆ ಶಸ್ತ್ರಚಿಕಿತ್ಸೆ, ಹಾರ್ಮೋನ್ ಥೆರಪಿ, ಲೇಸರ್ ಥೆರಪಿ ಅಥವಾ ಇನ್ನಾವುದೇ ಚಿಕಿತ್ಸೆಗೆ ಒಳಗಾಗಿದ್ದರೂ ಅಥವಾ ಇಲ್ಲದಿದ್ದರೂ ಸಹ). ಇದರೊಂದಿಗೆ ಅಂತರಲಿಂಗ ವ್ಯತ್ಯಾಸವಿರುವ ವ್ಯಕ್ತಿಗಳು (intersex variations), ಜೆಂಡರ್ ಕ್ವೀರ್ (genderqueer) ಮತ್ತು ಕಿನ್ನರ್, ಹಿಜ್ರಾ, ಅರವಾನಿ ಹಾಗೂ ಜೋಗ್ತಾದಂತಹ ಸಾಮಾಜಿಕ-ಸಾಂಸ್ಕೃತಿಕ ಗುರುತುಗಳನ್ನು ಹೊಂದಿರುವ ವ್ಯಕ್ತಿಗಳೂ ಈ ವ್ಯಾಪ್ತಿಗೆ ಬರುತ್ತಾರೆ.

ಹೊಸ ವ್ಯಾಖ್ಯಾನದ ಪ್ರಕಾರ, ಟ್ರಾನ್ಸ್‌ಜೆಂಡರ್ ಅಥವಾ ತೃತೀಯ ಲಿಂಗಿ ಎಂದರೆ, “ಕಿನ್ನರ್, ಹಿಜ್ರಾ, ಅರವಾನಿ, ಜೋಗ್ತಾ ಅಥವಾ ನಪುಂಸಕರಂತಹ (eunuch) ಸಾಮಾಜಿಕ-ಸಾಂಸ್ಕೃತಿಕ ಗುರುತುಗಳನ್ನು ಹೊಂದಿರುವ ವ್ಯಕ್ತಿಗಳು”. ಇದರಲ್ಲಿ ಅಂತರಲಿಂಗ ವ್ಯತ್ಯಾಸವಿರುವ (intersex variations) ವ್ಯಕ್ತಿಗಳು ಹಾಗೂ ತಮ್ಮ ಪ್ರಾಥಮಿಕ ಲೈಂಗಿಕ ಲಕ್ಷಣಗಳು, ಬಾಹ್ಯ ಜನನಾಂಗಗಳು, ಕ್ರೋಮೋಸೋಮ್ ಮಾದರಿಗಳು, ಗೊನಾಡಲ್ ಬೆಳವಣಿಗೆ, ಎಂಡೋಜೆನಸ್ ಹಾರ್ಮೋನ್ ಉತ್ಪಾದನೆ ಅಥವಾ ಪ್ರತಿಕ್ರಿಯೆ ಅಥವಾ ಅಂತಹ ಇತರ ವೈದ್ಯಕೀಯ ಸ್ಥಿತಿಗಳಲ್ಲಿ “ಪುರುಷ ಅಥವಾ ಸ್ತ್ರೀ ಬೆಳವಣಿಗೆಗೆ” ಹೋಲಿಸಿದರೆ “ಜನ್ಮಜಾತ ವ್ಯತ್ಯಾಸಗಳನ್ನು” (congenital variations) ಹೊಂದಿರುವ ವ್ಯಕ್ತಿಗಳು ಸೇರುತ್ತಾರೆ.

ಮುಂದುವರಿದು, ಈ ವ್ಯಾಖ್ಯಾನವು “ಯಾವುದೇ ವ್ಯಕ್ತಿ ಅಥವಾ ಮಗುವನ್ನು ಅಂಗಚ್ಛೇದನ, ನಪುಂಸಕೀಕರಣ (emasculation), ವೃಷಣಗಳನ್ನು ತೆಗೆಯುವುದು (castration), ಕಾಲು ಅಥವಾ ಕೈಗಳ ಕತ್ತರಿಸುವಿಕೆ (amputation), ಅಥವಾ ಯಾವುದೇ ಶಸ್ತ್ರಚಿಕಿತ್ಸೆ, ರಾಸಾಯನಿಕ ಅಥವಾ ಹಾರ್ಮೋನ್ ಪ್ರಕ್ರಿಯೆ ಅಥವಾ ಇನ್ನಾವುದೇ ವಿಧಾನದ ಮೂಲಕ ತೃತೀಯಲಿಂಗಿ ಗುರುತನ್ನು ಅಳವಡಿಸಿಕೊಳ್ಳಲು ಅಥವಾ ಹೊರಜಗತ್ತಿಗೆ ಪ್ರದರ್ಶಿಸಲು ಒತ್ತಾಯಿಸಲ್ಪಟ್ಟಿದ್ದರೆ”, ಅಂತಹವರನ್ನೂ ಒಳಗೊಳ್ಳುತ್ತದೆ ಎಂದು ಹೇಳುತ್ತದೆ. ಆದರೆ, “ವಿಭಿನ್ನ ಲೈಂಗಿಕ ದೃಷ್ಟಿಕೋನ (sexual orientation) ಮತ್ತು ಸ್ವಯಂ-ಗ್ರಹಿಸಿದ ಲೈಂಗಿಕ ಗುರುತುಗಳನ್ನು (self-perceived sexual identities) ಹೊಂದಿರುವ ವ್ಯಕ್ತಿಗಳನ್ನು” ಈ ವ್ಯಾಖ್ಯಾನವು ಒಳಗೊಳ್ಳುವುದಿಲ್ಲ ಎಂದು ಇದು ಸ್ಪಷ್ಟಪಡಿಸುತ್ತದೆ.

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ಸಂರಕ್ಷಣೆ) ತಿದ್ದುಪಡಿ ಮಸೂದೆ 2026’ಕ್ಕೆ ಅಂಕಿತ ಹಾಕಿರುವುದು ದುರದೃಷ್ಟಕರ ಸಂಗತಿಯಾಗಿದೆ. ಇದು ಭಾರತದಲ್ಲಿ ಟ್ರಾನ್ಸ್‌ಜೆಂಡರ್ ಹಕ್ಕುಗಳ ಹೋರಾಟಕ್ಕೆ ದೊಡ್ಡ ಹಿನ್ನಡೆಯಾಗಿದೆ ಎಂದು ಸಾಮಾಜಿಕ ಕಾರ್ಯಕರ್ತರು ಮತ್ತು ಕಾನೂನು ತಜ್ಞರು ಆತಂಕ ವ್ಯಕ್ತಪಡಿಸಿದ್ದಾರೆ. ಈ ಹೊಸ ಕಾನೂನು ಸ್ವಯಂ-ಘೋಷಿತ ಲಿಂಗ ಗುರುತಿನ ಹಕ್ಕನ್ನು ತೆಗೆದುಹಾಕಿರುವುದು, ವೈದ್ಯಕೀಯ ಮಂಡಳಿಯ ತಪಾಸಣೆಯನ್ನು ಕಡ್ಡಾಯಗೊಳಿಸಿರುವುದು ಮತ್ತು ಟ್ರಾನ್ಸ್‌ಜೆಂಡರ್ ಎಂಬ ವ್ಯಾಖ್ಯಾನವನ್ನು ಸಂಕುಚಿತಗೊಳಿಸಿರುವುದು ವ್ಯಾಪಕ ಟೀಕೆಗೆ ಗುರಿಯಾಗಿದೆ. ಸರ್ಕಾರದ ಈ ಕ್ರಮವು ಸಂವಿಧಾನದ ಮೂಲಭೂತ ಹಕ್ಕುಗಳ ಉಲ್ಲಂಘನೆಯಾಗಿದೆ ಎಂದು ಅನೇಕರು ದೂರಿದ್ದಾರೆ.


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...