Homeಮುಖಪುಟವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

- Advertisement -
- Advertisement -

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ ತಿಳಿಸಿದೆ.

ಲೋಕಸಭೆಯು ಮಸೂದೆಯನ್ನು ಅಂಗೀಕರಿಸಿದ ಒಂದು ದಿನದ ನಂತರ, ಅಂದರೆ, 2026ರ ಮಾರ್ಚ್ 25ರಂದು ರಾಜ್ಯಸಭೆಯು ಮಸೂದೆಯನ್ನು ಅಂಗೀಕರಿಸಿತ್ತು. ಟ್ರಾನ್ಸ್‌ಜೆಂಡರ್‌ಗಳ ಘನತೆಯ ಮೇಲೆ ಪರಿಣಾಮ ಬೀರುವ ನಿಬಂಧನೆಗಳನ್ನು ಮಸೂದೆ ಹೊಂದಿರುವುದರಿಂದ, ಅದನ್ನು ಹೆಚ್ಚಿನ ಪರಿಶೀಲನೆಗಾಗಿ ಸದನದ ಆಯ್ಕೆ ಸಮಿತಿಗೆ ಕಳುಹಿಸಬೇಕೆಂದು ವಿರೋಧ ಪಕ್ಷಗಳು ಒತ್ತಾಯಿಸಿದ್ದವು.

ಮಸೂದೆಯ ವಿರುದ್ಧದ ವಿರೋಧ ಪಕ್ಷದ ಆರೋಪಗಳಿಗೆ ತಿರುಗೇಟು ನೀಡಿದ್ದ ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವ ವೀರೇಂದ್ರ ಕುಮಾರ್, “ಇದು ಸಮಾಜದ ಎಲ್ಲಾ ವರ್ಗಗಳನ್ನು ಒಟ್ಟಿಗೆ ಕೊಂಡೊಯ್ಯುವ ಪ್ರಯತ್ನ” ಎಂದು ಹೇಳಿದ್ದರು. ಜೈವಿಕ ಸಮಸ್ಯೆಗಳಿಂದಾಗಿ ತಾರತಮ್ಯವನ್ನು ಎದುರಿಸುವವರಿಗೆ ಈ ಮಸೂದೆ ರಕ್ಷಣೆ ನೀಡುತ್ತದೆ ಮತ್ತು ಟ್ರಾನ್ಸ್‌ಜೆಂಡರ್ ಜನರಿಗೆ ಕಾನೂನು ಮಾನ್ಯತೆ ಮತ್ತು ರಕ್ಷಣೆ ಮುಂದುವರಿಯುತ್ತದೆ ಎಂದು ಅವರು ಹೇಳಿದ್ದರು.

ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ ಕುರಿತು ಪ್ರಸ್ತುತ ಇರುವ ಅಸ್ಪಷ್ಟ ವ್ಯಾಖ್ಯಾನದಿಂದ ಕಾಯ್ದೆಯ ಪ್ರಯೋಜನಗಳು ತಲುಪಬೇಕಾದ ನಿಜವಾದ ತುಳಿತಕ್ಕೊಳಗಾದ ವ್ಯಕ್ತಿಗಳನ್ನು ಗುರುತಿಸುವುದು ಅಸಾಧ್ಯ ಎಂದು ಸರ್ಕಾರ ಹೇಳಿತ್ತು.

2019ರ ಕಾಯ್ದೆಯ ಪ್ರಕಾರ, ಟ್ರಾನ್ಸ್‌ಜೆಂಡರ್ ಅಥವಾ ತೃತೀಯ ಲಿಂಗಿ ಎಂದರೆ, “ಯಾವ ವ್ಯಕ್ತಿಯ ಲಿಂಗವು ಹುಟ್ಟಿನ ಸಮಯದಲ್ಲಿ ಗುರುತಿಸಲಾದ ಲಿಂಗಕ್ಕೆ ಹೊಂದಿಕೆಯಾಗುವುದಿಲ್ಲವೋ ಅಂತಹ ವ್ಯಕ್ತಿ”. ಇದರಲ್ಲಿ ಟ್ರಾನ್ಸ್-ಮೆನ್ (trans-man) ಅಥವಾ ಟ್ರಾನ್ಸ್-ವುಮೆನ್ (trans-woman) ಸೇರಿರುತ್ತಾರೆ (ಅಂತಹ ವ್ಯಕ್ತಿಯು ಲಿಂಗ ಬದಲಾವಣೆ ಶಸ್ತ್ರಚಿಕಿತ್ಸೆ, ಹಾರ್ಮೋನ್ ಥೆರಪಿ, ಲೇಸರ್ ಥೆರಪಿ ಅಥವಾ ಇನ್ನಾವುದೇ ಚಿಕಿತ್ಸೆಗೆ ಒಳಗಾಗಿದ್ದರೂ ಅಥವಾ ಇಲ್ಲದಿದ್ದರೂ ಸಹ). ಇದರೊಂದಿಗೆ ಅಂತರಲಿಂಗ ವ್ಯತ್ಯಾಸವಿರುವ ವ್ಯಕ್ತಿಗಳು (intersex variations), ಜೆಂಡರ್ ಕ್ವೀರ್ (genderqueer) ಮತ್ತು ಕಿನ್ನರ್, ಹಿಜ್ರಾ, ಅರವಾನಿ ಹಾಗೂ ಜೋಗ್ತಾದಂತಹ ಸಾಮಾಜಿಕ-ಸಾಂಸ್ಕೃತಿಕ ಗುರುತುಗಳನ್ನು ಹೊಂದಿರುವ ವ್ಯಕ್ತಿಗಳೂ ಈ ವ್ಯಾಪ್ತಿಗೆ ಬರುತ್ತಾರೆ.

ಹೊಸ ವ್ಯಾಖ್ಯಾನದ ಪ್ರಕಾರ, ಟ್ರಾನ್ಸ್‌ಜೆಂಡರ್ ಅಥವಾ ತೃತೀಯ ಲಿಂಗಿ ಎಂದರೆ, “ಕಿನ್ನರ್, ಹಿಜ್ರಾ, ಅರವಾನಿ, ಜೋಗ್ತಾ ಅಥವಾ ನಪುಂಸಕರಂತಹ (eunuch) ಸಾಮಾಜಿಕ-ಸಾಂಸ್ಕೃತಿಕ ಗುರುತುಗಳನ್ನು ಹೊಂದಿರುವ ವ್ಯಕ್ತಿಗಳು”. ಇದರಲ್ಲಿ ಅಂತರಲಿಂಗ ವ್ಯತ್ಯಾಸವಿರುವ (intersex variations) ವ್ಯಕ್ತಿಗಳು ಹಾಗೂ ತಮ್ಮ ಪ್ರಾಥಮಿಕ ಲೈಂಗಿಕ ಲಕ್ಷಣಗಳು, ಬಾಹ್ಯ ಜನನಾಂಗಗಳು, ಕ್ರೋಮೋಸೋಮ್ ಮಾದರಿಗಳು, ಗೊನಾಡಲ್ ಬೆಳವಣಿಗೆ, ಎಂಡೋಜೆನಸ್ ಹಾರ್ಮೋನ್ ಉತ್ಪಾದನೆ ಅಥವಾ ಪ್ರತಿಕ್ರಿಯೆ ಅಥವಾ ಅಂತಹ ಇತರ ವೈದ್ಯಕೀಯ ಸ್ಥಿತಿಗಳಲ್ಲಿ “ಪುರುಷ ಅಥವಾ ಸ್ತ್ರೀ ಬೆಳವಣಿಗೆಗೆ” ಹೋಲಿಸಿದರೆ “ಜನ್ಮಜಾತ ವ್ಯತ್ಯಾಸಗಳನ್ನು” (congenital variations) ಹೊಂದಿರುವ ವ್ಯಕ್ತಿಗಳು ಸೇರುತ್ತಾರೆ.

ಮುಂದುವರಿದು, ಈ ವ್ಯಾಖ್ಯಾನವು “ಯಾವುದೇ ವ್ಯಕ್ತಿ ಅಥವಾ ಮಗುವನ್ನು ಅಂಗಚ್ಛೇದನ, ನಪುಂಸಕೀಕರಣ (emasculation), ವೃಷಣಗಳನ್ನು ತೆಗೆಯುವುದು (castration), ಕಾಲು ಅಥವಾ ಕೈಗಳ ಕತ್ತರಿಸುವಿಕೆ (amputation), ಅಥವಾ ಯಾವುದೇ ಶಸ್ತ್ರಚಿಕಿತ್ಸೆ, ರಾಸಾಯನಿಕ ಅಥವಾ ಹಾರ್ಮೋನ್ ಪ್ರಕ್ರಿಯೆ ಅಥವಾ ಇನ್ನಾವುದೇ ವಿಧಾನದ ಮೂಲಕ ತೃತೀಯಲಿಂಗಿ ಗುರುತನ್ನು ಅಳವಡಿಸಿಕೊಳ್ಳಲು ಅಥವಾ ಹೊರಜಗತ್ತಿಗೆ ಪ್ರದರ್ಶಿಸಲು ಒತ್ತಾಯಿಸಲ್ಪಟ್ಟಿದ್ದರೆ”, ಅಂತಹವರನ್ನೂ ಒಳಗೊಳ್ಳುತ್ತದೆ ಎಂದು ಹೇಳುತ್ತದೆ. ಆದರೆ, “ವಿಭಿನ್ನ ಲೈಂಗಿಕ ದೃಷ್ಟಿಕೋನ (sexual orientation) ಮತ್ತು ಸ್ವಯಂ-ಗ್ರಹಿಸಿದ ಲೈಂಗಿಕ ಗುರುತುಗಳನ್ನು (self-perceived sexual identities) ಹೊಂದಿರುವ ವ್ಯಕ್ತಿಗಳನ್ನು” ಈ ವ್ಯಾಖ್ಯಾನವು ಒಳಗೊಳ್ಳುವುದಿಲ್ಲ ಎಂದು ಇದು ಸ್ಪಷ್ಟಪಡಿಸುತ್ತದೆ.

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ಸಂರಕ್ಷಣೆ) ತಿದ್ದುಪಡಿ ಮಸೂದೆ 2026’ಕ್ಕೆ ಅಂಕಿತ ಹಾಕಿರುವುದು ದುರದೃಷ್ಟಕರ ಸಂಗತಿಯಾಗಿದೆ. ಇದು ಭಾರತದಲ್ಲಿ ಟ್ರಾನ್ಸ್‌ಜೆಂಡರ್ ಹಕ್ಕುಗಳ ಹೋರಾಟಕ್ಕೆ ದೊಡ್ಡ ಹಿನ್ನಡೆಯಾಗಿದೆ ಎಂದು ಸಾಮಾಜಿಕ ಕಾರ್ಯಕರ್ತರು ಮತ್ತು ಕಾನೂನು ತಜ್ಞರು ಆತಂಕ ವ್ಯಕ್ತಪಡಿಸಿದ್ದಾರೆ. ಈ ಹೊಸ ಕಾನೂನು ಸ್ವಯಂ-ಘೋಷಿತ ಲಿಂಗ ಗುರುತಿನ ಹಕ್ಕನ್ನು ತೆಗೆದುಹಾಕಿರುವುದು, ವೈದ್ಯಕೀಯ ಮಂಡಳಿಯ ತಪಾಸಣೆಯನ್ನು ಕಡ್ಡಾಯಗೊಳಿಸಿರುವುದು ಮತ್ತು ಟ್ರಾನ್ಸ್‌ಜೆಂಡರ್ ಎಂಬ ವ್ಯಾಖ್ಯಾನವನ್ನು ಸಂಕುಚಿತಗೊಳಿಸಿರುವುದು ವ್ಯಾಪಕ ಟೀಕೆಗೆ ಗುರಿಯಾಗಿದೆ. ಸರ್ಕಾರದ ಈ ಕ್ರಮವು ಸಂವಿಧಾನದ ಮೂಲಭೂತ ಹಕ್ಕುಗಳ ಉಲ್ಲಂಘನೆಯಾಗಿದೆ ಎಂದು ಅನೇಕರು ದೂರಿದ್ದಾರೆ.


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...

ಪೋಕ್ಸೋ ಕೇಸ್ : ವಚನಾನಂದ ಸ್ವಾಮಿಯ ನಿರೀಕ್ಷಣಾ ಜಾಮೀನು ರದ್ದು

ಪೋಕ್ಸೋ ಪ್ರಕರಣದಲ್ಲಿ ವಚನಾನಂದ ಸ್ವಾಮಿಗೆ ಸೆಷನ್ಸ್ ಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನನ್ನು ಹೈಕೋರ್ಟ್ ಗುರುವಾರ (ಜೂನ್ 25) ರದ್ದುಗೊಳಿಸಿದೆ. ಅಲ್ಲದೆ, ಸೆಷನ್ಸ್ ಕೋರ್ಟ್ ಜಾಮೀನು ನೀಡಿದ ರೀತಿಯ ಬಗ್ಗೆ ತೀವ್ರ ಕಳವಳ ಮತ್ತು...

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...