Homeಮುಖಪುಟವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

- Advertisement -
- Advertisement -

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ ತಿಳಿಸಿದೆ.

ಲೋಕಸಭೆಯು ಮಸೂದೆಯನ್ನು ಅಂಗೀಕರಿಸಿದ ಒಂದು ದಿನದ ನಂತರ, ಅಂದರೆ, 2026ರ ಮಾರ್ಚ್ 25ರಂದು ರಾಜ್ಯಸಭೆಯು ಮಸೂದೆಯನ್ನು ಅಂಗೀಕರಿಸಿತ್ತು. ಟ್ರಾನ್ಸ್‌ಜೆಂಡರ್‌ಗಳ ಘನತೆಯ ಮೇಲೆ ಪರಿಣಾಮ ಬೀರುವ ನಿಬಂಧನೆಗಳನ್ನು ಮಸೂದೆ ಹೊಂದಿರುವುದರಿಂದ, ಅದನ್ನು ಹೆಚ್ಚಿನ ಪರಿಶೀಲನೆಗಾಗಿ ಸದನದ ಆಯ್ಕೆ ಸಮಿತಿಗೆ ಕಳುಹಿಸಬೇಕೆಂದು ವಿರೋಧ ಪಕ್ಷಗಳು ಒತ್ತಾಯಿಸಿದ್ದವು.

ಮಸೂದೆಯ ವಿರುದ್ಧದ ವಿರೋಧ ಪಕ್ಷದ ಆರೋಪಗಳಿಗೆ ತಿರುಗೇಟು ನೀಡಿದ್ದ ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವ ವೀರೇಂದ್ರ ಕುಮಾರ್, “ಇದು ಸಮಾಜದ ಎಲ್ಲಾ ವರ್ಗಗಳನ್ನು ಒಟ್ಟಿಗೆ ಕೊಂಡೊಯ್ಯುವ ಪ್ರಯತ್ನ” ಎಂದು ಹೇಳಿದ್ದರು. ಜೈವಿಕ ಸಮಸ್ಯೆಗಳಿಂದಾಗಿ ತಾರತಮ್ಯವನ್ನು ಎದುರಿಸುವವರಿಗೆ ಈ ಮಸೂದೆ ರಕ್ಷಣೆ ನೀಡುತ್ತದೆ ಮತ್ತು ಟ್ರಾನ್ಸ್‌ಜೆಂಡರ್ ಜನರಿಗೆ ಕಾನೂನು ಮಾನ್ಯತೆ ಮತ್ತು ರಕ್ಷಣೆ ಮುಂದುವರಿಯುತ್ತದೆ ಎಂದು ಅವರು ಹೇಳಿದ್ದರು.

ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ ಕುರಿತು ಪ್ರಸ್ತುತ ಇರುವ ಅಸ್ಪಷ್ಟ ವ್ಯಾಖ್ಯಾನದಿಂದ ಕಾಯ್ದೆಯ ಪ್ರಯೋಜನಗಳು ತಲುಪಬೇಕಾದ ನಿಜವಾದ ತುಳಿತಕ್ಕೊಳಗಾದ ವ್ಯಕ್ತಿಗಳನ್ನು ಗುರುತಿಸುವುದು ಅಸಾಧ್ಯ ಎಂದು ಸರ್ಕಾರ ಹೇಳಿತ್ತು.

2019ರ ಕಾಯ್ದೆಯ ಪ್ರಕಾರ, ಟ್ರಾನ್ಸ್‌ಜೆಂಡರ್ ಅಥವಾ ತೃತೀಯ ಲಿಂಗಿ ಎಂದರೆ, “ಯಾವ ವ್ಯಕ್ತಿಯ ಲಿಂಗವು ಹುಟ್ಟಿನ ಸಮಯದಲ್ಲಿ ಗುರುತಿಸಲಾದ ಲಿಂಗಕ್ಕೆ ಹೊಂದಿಕೆಯಾಗುವುದಿಲ್ಲವೋ ಅಂತಹ ವ್ಯಕ್ತಿ”. ಇದರಲ್ಲಿ ಟ್ರಾನ್ಸ್-ಮೆನ್ (trans-man) ಅಥವಾ ಟ್ರಾನ್ಸ್-ವುಮೆನ್ (trans-woman) ಸೇರಿರುತ್ತಾರೆ (ಅಂತಹ ವ್ಯಕ್ತಿಯು ಲಿಂಗ ಬದಲಾವಣೆ ಶಸ್ತ್ರಚಿಕಿತ್ಸೆ, ಹಾರ್ಮೋನ್ ಥೆರಪಿ, ಲೇಸರ್ ಥೆರಪಿ ಅಥವಾ ಇನ್ನಾವುದೇ ಚಿಕಿತ್ಸೆಗೆ ಒಳಗಾಗಿದ್ದರೂ ಅಥವಾ ಇಲ್ಲದಿದ್ದರೂ ಸಹ). ಇದರೊಂದಿಗೆ ಅಂತರಲಿಂಗ ವ್ಯತ್ಯಾಸವಿರುವ ವ್ಯಕ್ತಿಗಳು (intersex variations), ಜೆಂಡರ್ ಕ್ವೀರ್ (genderqueer) ಮತ್ತು ಕಿನ್ನರ್, ಹಿಜ್ರಾ, ಅರವಾನಿ ಹಾಗೂ ಜೋಗ್ತಾದಂತಹ ಸಾಮಾಜಿಕ-ಸಾಂಸ್ಕೃತಿಕ ಗುರುತುಗಳನ್ನು ಹೊಂದಿರುವ ವ್ಯಕ್ತಿಗಳೂ ಈ ವ್ಯಾಪ್ತಿಗೆ ಬರುತ್ತಾರೆ.

ಹೊಸ ವ್ಯಾಖ್ಯಾನದ ಪ್ರಕಾರ, ಟ್ರಾನ್ಸ್‌ಜೆಂಡರ್ ಅಥವಾ ತೃತೀಯ ಲಿಂಗಿ ಎಂದರೆ, “ಕಿನ್ನರ್, ಹಿಜ್ರಾ, ಅರವಾನಿ, ಜೋಗ್ತಾ ಅಥವಾ ನಪುಂಸಕರಂತಹ (eunuch) ಸಾಮಾಜಿಕ-ಸಾಂಸ್ಕೃತಿಕ ಗುರುತುಗಳನ್ನು ಹೊಂದಿರುವ ವ್ಯಕ್ತಿಗಳು”. ಇದರಲ್ಲಿ ಅಂತರಲಿಂಗ ವ್ಯತ್ಯಾಸವಿರುವ (intersex variations) ವ್ಯಕ್ತಿಗಳು ಹಾಗೂ ತಮ್ಮ ಪ್ರಾಥಮಿಕ ಲೈಂಗಿಕ ಲಕ್ಷಣಗಳು, ಬಾಹ್ಯ ಜನನಾಂಗಗಳು, ಕ್ರೋಮೋಸೋಮ್ ಮಾದರಿಗಳು, ಗೊನಾಡಲ್ ಬೆಳವಣಿಗೆ, ಎಂಡೋಜೆನಸ್ ಹಾರ್ಮೋನ್ ಉತ್ಪಾದನೆ ಅಥವಾ ಪ್ರತಿಕ್ರಿಯೆ ಅಥವಾ ಅಂತಹ ಇತರ ವೈದ್ಯಕೀಯ ಸ್ಥಿತಿಗಳಲ್ಲಿ “ಪುರುಷ ಅಥವಾ ಸ್ತ್ರೀ ಬೆಳವಣಿಗೆಗೆ” ಹೋಲಿಸಿದರೆ “ಜನ್ಮಜಾತ ವ್ಯತ್ಯಾಸಗಳನ್ನು” (congenital variations) ಹೊಂದಿರುವ ವ್ಯಕ್ತಿಗಳು ಸೇರುತ್ತಾರೆ.

ಮುಂದುವರಿದು, ಈ ವ್ಯಾಖ್ಯಾನವು “ಯಾವುದೇ ವ್ಯಕ್ತಿ ಅಥವಾ ಮಗುವನ್ನು ಅಂಗಚ್ಛೇದನ, ನಪುಂಸಕೀಕರಣ (emasculation), ವೃಷಣಗಳನ್ನು ತೆಗೆಯುವುದು (castration), ಕಾಲು ಅಥವಾ ಕೈಗಳ ಕತ್ತರಿಸುವಿಕೆ (amputation), ಅಥವಾ ಯಾವುದೇ ಶಸ್ತ್ರಚಿಕಿತ್ಸೆ, ರಾಸಾಯನಿಕ ಅಥವಾ ಹಾರ್ಮೋನ್ ಪ್ರಕ್ರಿಯೆ ಅಥವಾ ಇನ್ನಾವುದೇ ವಿಧಾನದ ಮೂಲಕ ತೃತೀಯಲಿಂಗಿ ಗುರುತನ್ನು ಅಳವಡಿಸಿಕೊಳ್ಳಲು ಅಥವಾ ಹೊರಜಗತ್ತಿಗೆ ಪ್ರದರ್ಶಿಸಲು ಒತ್ತಾಯಿಸಲ್ಪಟ್ಟಿದ್ದರೆ”, ಅಂತಹವರನ್ನೂ ಒಳಗೊಳ್ಳುತ್ತದೆ ಎಂದು ಹೇಳುತ್ತದೆ. ಆದರೆ, “ವಿಭಿನ್ನ ಲೈಂಗಿಕ ದೃಷ್ಟಿಕೋನ (sexual orientation) ಮತ್ತು ಸ್ವಯಂ-ಗ್ರಹಿಸಿದ ಲೈಂಗಿಕ ಗುರುತುಗಳನ್ನು (self-perceived sexual identities) ಹೊಂದಿರುವ ವ್ಯಕ್ತಿಗಳನ್ನು” ಈ ವ್ಯಾಖ್ಯಾನವು ಒಳಗೊಳ್ಳುವುದಿಲ್ಲ ಎಂದು ಇದು ಸ್ಪಷ್ಟಪಡಿಸುತ್ತದೆ.

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ಸಂರಕ್ಷಣೆ) ತಿದ್ದುಪಡಿ ಮಸೂದೆ 2026’ಕ್ಕೆ ಅಂಕಿತ ಹಾಕಿರುವುದು ದುರದೃಷ್ಟಕರ ಸಂಗತಿಯಾಗಿದೆ. ಇದು ಭಾರತದಲ್ಲಿ ಟ್ರಾನ್ಸ್‌ಜೆಂಡರ್ ಹಕ್ಕುಗಳ ಹೋರಾಟಕ್ಕೆ ದೊಡ್ಡ ಹಿನ್ನಡೆಯಾಗಿದೆ ಎಂದು ಸಾಮಾಜಿಕ ಕಾರ್ಯಕರ್ತರು ಮತ್ತು ಕಾನೂನು ತಜ್ಞರು ಆತಂಕ ವ್ಯಕ್ತಪಡಿಸಿದ್ದಾರೆ. ಈ ಹೊಸ ಕಾನೂನು ಸ್ವಯಂ-ಘೋಷಿತ ಲಿಂಗ ಗುರುತಿನ ಹಕ್ಕನ್ನು ತೆಗೆದುಹಾಕಿರುವುದು, ವೈದ್ಯಕೀಯ ಮಂಡಳಿಯ ತಪಾಸಣೆಯನ್ನು ಕಡ್ಡಾಯಗೊಳಿಸಿರುವುದು ಮತ್ತು ಟ್ರಾನ್ಸ್‌ಜೆಂಡರ್ ಎಂಬ ವ್ಯಾಖ್ಯಾನವನ್ನು ಸಂಕುಚಿತಗೊಳಿಸಿರುವುದು ವ್ಯಾಪಕ ಟೀಕೆಗೆ ಗುರಿಯಾಗಿದೆ. ಸರ್ಕಾರದ ಈ ಕ್ರಮವು ಸಂವಿಧಾನದ ಮೂಲಭೂತ ಹಕ್ಕುಗಳ ಉಲ್ಲಂಘನೆಯಾಗಿದೆ ಎಂದು ಅನೇಕರು ದೂರಿದ್ದಾರೆ.


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...