Homeಮುಖಪುಟಇನ್ನು ಮುಂದೆ ಜೈಲಿನ ಅಂಕಿಅಂಶಗಳಲ್ಲಿ ಲೈಂಗಿಕ ಅಲ್ಪಸಂಖ್ಯಾತರಿಗೆ ಪ್ರತ್ಯೇಕ ವರ್ಗ

ಇನ್ನು ಮುಂದೆ ಜೈಲಿನ ಅಂಕಿಅಂಶಗಳಲ್ಲಿ ಲೈಂಗಿಕ ಅಲ್ಪಸಂಖ್ಯಾತರಿಗೆ ಪ್ರತ್ಯೇಕ ವರ್ಗ

ಎನ್‌ಸಿಆರ್‌ಬಿ ಪ್ರಕಟಿಸಿದ ವರದಿಯಲ್ಲಿ ಇಲ್ಲಿಯವರೆಗೆ ಕೇವಲ ಗಂಡು ಮತ್ತು ಹೆಣ್ಣು ಎಂಬ ಎರಡೇ ಲಿಂಗವನ್ನು ಪರಿಗಣಿಸಿದ್ದು,ತೃತೀಯ ಲಿಂಗವನ್ನು ಸಂಪೂರ್ಣವಾಗಿ ಹೊರಗಿಡಲಾಗಿದೆ ಎಂದು ಅರ್ಜಿಯಲ್ಲಿ ತಿಳಿಸಲಾಗಿತ್ತು.

- Advertisement -
- Advertisement -

2020 ರ ಜೈಲು ಅಂಕಿಅಂಶಗಳ ವಾರ್ಷಿಕ ಪ್ರಕಟಣೆಯಲ್ಲಿ ಕೈದಿಗಳ ಲಿಂಗ ವರ್ಗೀಕರಣದಲ್ಲಿ ಲೈಂಗಿಕ ಅಲ್ಪಸಂಖ್ಯಾತರನ್ನು ಪ್ರತ್ಯೇಕ ವರ್ಗವಾಗಿ ಸೇರಿಸಲು ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (ಎನ್‌ಸಿಆರ್‌ಬಿ) ಒಪ್ಪಿಕೊಂಡಿದೆ.

ಜೈಲು ಅಂಕಿಅಂಶಗಳ ವರದಿಯಲ್ಲಿ ಲೈಂಗಿಕ ಅಲ್ಪಸಂಖ್ಯಾತರನ್ನು ಪ್ರತ್ಯೇಕ ಲಿಂಗ ವರ್ಗವಾಗಿ ಸೇರಿಸಲಾಗುವುದು ಎಂದು ಕೇಂದ್ರ ಸರ್ಕಾರ ಸೋಮವಾರ ದೆಹಲಿ ಹೈಕೋರ್ಟ್‌ಗೆ ತಿಳಿಸಿದೆ.

ಜೈಲು ಅಂಕಿಅಂಶಗಳ ವಾರ್ಷಿಕ ಪ್ರಕಟಣೆಯಲ್ಲಿ ಲೈಂಗಿಕ ಅಲ್ಪಸಂಖ್ಯಾತರನ್ನು ಪ್ರತ್ಯೇಕ ಮೂರನೇ ಲಿಂಗವೆಂದು ಗುರುತಿಸಲು ಮತ್ತು ವರ್ಗೀಕರಿಸಲು ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (ಎನ್‌ಸಿಆರ್‌ಬಿ) ಗೆ ನಿರ್ದೇಶನ ಕೋರಿ ದೆಹಲಿ ಹೈಕೋರ್ಟ್‌ನಲ್ಲಿ ಸಾರ್ವಜನಿಕ ಮೊಕದ್ದಮೆ ಹೂಡಿದ ನಂತರ ಈ ನಿರ್ಧಾರ ಹೊರಬಿದ್ದಿದೆ.

ಇದನ್ನೂ ಓದಿ: ‘ಅದಾನಿ-ಅಂಬಾನಿ ಕೃಷಿ ಕಾನೂನುಗಳನ್ನು’ ಹಿಂತೆಗೆದುಕೊಳ್ಳಿ: ರಾಹುಲ್ ಗಾಂಧಿ

 

ಈಗಾಗಲೇ ನಡೆಯುತ್ತಿರುವ ಎನ್‌ಸಿಆರ್‌ಬಿಯ 2020 ರ ಜೈಲು ಅಂಕಿಅಂಶ ವರದಿಯ ದತ್ತಾಂಶ ಸಂಗ್ರಹಣೆಯ ಪ್ರಕ್ರಿಯೆಯಾಗಿ ಕಾನೂನು ಪದವೀಧರ ಕರಣ್ ತ್ರಿಪಾಠಿ ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ನಂತರ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ.

ಎನ್‌ಸಿಆರ್‌ಬಿ ಪ್ರಕಟಿಸಿದ ಪ್ರಿಸನ್ ಸ್ಟ್ಯಾಟಿಸ್ಟಿಕ್ಸ್ ಇಂಡಿಯಾ ವರದಿಯಲ್ಲಿ ಇಲ್ಲಿಯವರೆಗೆ ಕೇವಲ ಎರಡು ಲಿಂಗ ವರ್ಗಗಳು ಮಾತ್ರ ಕಾಣಿಸಿಕೊಂಡಿವೆ ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ. ಗಂಡು ಮತ್ತು ಹೆಣ್ಣು ಎಂಬ ಎರಡೇ ಲಿಂಗವನ್ನು ಪರಿಗಣಿಸಿದ್ದು, ತೃತೀಯ ಲಿಂಗವನ್ನು ಸಂಪೂರ್ಣವಾಗಿ ಹೊರಗಿಡಲಾಗಿದೆ ಎಂದು ಹೇಳಲಾಗಿತ್ತು.

“ಲೈಂಗಿಕ ಅಲ್ಪಸಂಖ್ಯಾತ ಸಮುದಾಯದ ಕಲ್ಯಾಣದ ಬಗ್ಗೆ ನಿರ್ಲಕ್ಷ್ಯ ಹೆಚ್ಚುತ್ತಿದೆ. ವಿಶೇಷವಾಗಿ ಕೊರೊನಾ ಸಂದರ್ಭದಲ್ಲಿ ಈ ಸಮುದಾಯಕ್ಕೆ ಮೂಲಭೂತ ಅವಶ್ಯಕತೆಗಳನ್ನು ನಿರಾಕರಿಸಲಾಗುತ್ತಿದೆ. ಇಂತಹ ಸ್ಥಿತಿಯಲ್ಲಿ ಲೈಂಗಿಕ ಅಲ್ಪಸಂಖ್ಯಾತ ಕೈದಿಗಳು ಜೈಲುಗಳಲ್ಲಿರುವ ಸ್ಥಿತಿಯನ್ನು ಊಹಿಸಿಕೊಳ್ಳುವುದು ಕಷ್ಟ. ಕಾಗದದ ಮೇಲೂ ಕೂಡ ಮೂರನೇ ಲಿಂಗವೆಂದು ಗುರುತಿಸಲ್ಪಟ್ಟಿಲ್ಲ ಎಂದು ಅರ್ಜಿಯಲ್ಲಿ ಕರಣ್ ತ್ರಿಪಾಠಿ ವಿವರಿಸಿದ್ದರು.

ಅರ್ಜಿ ವಿಚಾರಣೆ ನಡೆಸಿದ್ದ ನ್ಯಾಯಾಲಯ ಜೈಲಿನ ಅಂಕಿಅಂಶಗಳ ಕುರಿತ ತನ್ನ ವಾರ್ಷಿಕ ವರದಿಯಲ್ಲಿ ಲೈಂಗಿಕ ಅಲ್ಪಸಂಖ್ಯಾತ ವ್ಯಕ್ತಿಗಳನ್ನು ಪ್ರತ್ಯೇಕ ತೃತೀಯ ಲಿಂಗವಾಗಿ ಸೇರಿಸಬೇಕೆಂಬ ಬೇಡಿಕೆಯ ಬಗೆಗಿನ ಯಾವುದೇ ನಿರ್ಧಾರವನ್ನು ತಿಳಿಸುವಂತೆ ಕಳೆದ ವಾರ ದೆಹಲಿ ಹೈಕೋರ್ಟ್ ಎನ್‌ಸಿಆರ್‌ಬಿಗೆ ಸೂಚಿಸಿತ್ತು.


ಇದನ್ನೂ ಓದಿ: ರೈತರನ್ನು ಬೆಂಬಲಿಸಿದ್ದಕ್ಕೆ ದೆಹಲಿ ಸಿಎಂ ಕೇಜ್ರಿವಾಲ್‌ರನ್ನೆ ಗೃಹ ಬಂಧನದಲ್ಲಿಟ್ಟ ಪೊಲೀಸರು: ಆಪ್ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...