Homeಮುಖಪುಟಇನ್ನು ಮುಂದೆ ಜೈಲಿನ ಅಂಕಿಅಂಶಗಳಲ್ಲಿ ಲೈಂಗಿಕ ಅಲ್ಪಸಂಖ್ಯಾತರಿಗೆ ಪ್ರತ್ಯೇಕ ವರ್ಗ

ಇನ್ನು ಮುಂದೆ ಜೈಲಿನ ಅಂಕಿಅಂಶಗಳಲ್ಲಿ ಲೈಂಗಿಕ ಅಲ್ಪಸಂಖ್ಯಾತರಿಗೆ ಪ್ರತ್ಯೇಕ ವರ್ಗ

ಎನ್‌ಸಿಆರ್‌ಬಿ ಪ್ರಕಟಿಸಿದ ವರದಿಯಲ್ಲಿ ಇಲ್ಲಿಯವರೆಗೆ ಕೇವಲ ಗಂಡು ಮತ್ತು ಹೆಣ್ಣು ಎಂಬ ಎರಡೇ ಲಿಂಗವನ್ನು ಪರಿಗಣಿಸಿದ್ದು,ತೃತೀಯ ಲಿಂಗವನ್ನು ಸಂಪೂರ್ಣವಾಗಿ ಹೊರಗಿಡಲಾಗಿದೆ ಎಂದು ಅರ್ಜಿಯಲ್ಲಿ ತಿಳಿಸಲಾಗಿತ್ತು.

- Advertisement -
- Advertisement -

2020 ರ ಜೈಲು ಅಂಕಿಅಂಶಗಳ ವಾರ್ಷಿಕ ಪ್ರಕಟಣೆಯಲ್ಲಿ ಕೈದಿಗಳ ಲಿಂಗ ವರ್ಗೀಕರಣದಲ್ಲಿ ಲೈಂಗಿಕ ಅಲ್ಪಸಂಖ್ಯಾತರನ್ನು ಪ್ರತ್ಯೇಕ ವರ್ಗವಾಗಿ ಸೇರಿಸಲು ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (ಎನ್‌ಸಿಆರ್‌ಬಿ) ಒಪ್ಪಿಕೊಂಡಿದೆ.

ಜೈಲು ಅಂಕಿಅಂಶಗಳ ವರದಿಯಲ್ಲಿ ಲೈಂಗಿಕ ಅಲ್ಪಸಂಖ್ಯಾತರನ್ನು ಪ್ರತ್ಯೇಕ ಲಿಂಗ ವರ್ಗವಾಗಿ ಸೇರಿಸಲಾಗುವುದು ಎಂದು ಕೇಂದ್ರ ಸರ್ಕಾರ ಸೋಮವಾರ ದೆಹಲಿ ಹೈಕೋರ್ಟ್‌ಗೆ ತಿಳಿಸಿದೆ.

ಜೈಲು ಅಂಕಿಅಂಶಗಳ ವಾರ್ಷಿಕ ಪ್ರಕಟಣೆಯಲ್ಲಿ ಲೈಂಗಿಕ ಅಲ್ಪಸಂಖ್ಯಾತರನ್ನು ಪ್ರತ್ಯೇಕ ಮೂರನೇ ಲಿಂಗವೆಂದು ಗುರುತಿಸಲು ಮತ್ತು ವರ್ಗೀಕರಿಸಲು ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (ಎನ್‌ಸಿಆರ್‌ಬಿ) ಗೆ ನಿರ್ದೇಶನ ಕೋರಿ ದೆಹಲಿ ಹೈಕೋರ್ಟ್‌ನಲ್ಲಿ ಸಾರ್ವಜನಿಕ ಮೊಕದ್ದಮೆ ಹೂಡಿದ ನಂತರ ಈ ನಿರ್ಧಾರ ಹೊರಬಿದ್ದಿದೆ.

ಇದನ್ನೂ ಓದಿ: ‘ಅದಾನಿ-ಅಂಬಾನಿ ಕೃಷಿ ಕಾನೂನುಗಳನ್ನು’ ಹಿಂತೆಗೆದುಕೊಳ್ಳಿ: ರಾಹುಲ್ ಗಾಂಧಿ

 

ಈಗಾಗಲೇ ನಡೆಯುತ್ತಿರುವ ಎನ್‌ಸಿಆರ್‌ಬಿಯ 2020 ರ ಜೈಲು ಅಂಕಿಅಂಶ ವರದಿಯ ದತ್ತಾಂಶ ಸಂಗ್ರಹಣೆಯ ಪ್ರಕ್ರಿಯೆಯಾಗಿ ಕಾನೂನು ಪದವೀಧರ ಕರಣ್ ತ್ರಿಪಾಠಿ ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ನಂತರ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ.

ಎನ್‌ಸಿಆರ್‌ಬಿ ಪ್ರಕಟಿಸಿದ ಪ್ರಿಸನ್ ಸ್ಟ್ಯಾಟಿಸ್ಟಿಕ್ಸ್ ಇಂಡಿಯಾ ವರದಿಯಲ್ಲಿ ಇಲ್ಲಿಯವರೆಗೆ ಕೇವಲ ಎರಡು ಲಿಂಗ ವರ್ಗಗಳು ಮಾತ್ರ ಕಾಣಿಸಿಕೊಂಡಿವೆ ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ. ಗಂಡು ಮತ್ತು ಹೆಣ್ಣು ಎಂಬ ಎರಡೇ ಲಿಂಗವನ್ನು ಪರಿಗಣಿಸಿದ್ದು, ತೃತೀಯ ಲಿಂಗವನ್ನು ಸಂಪೂರ್ಣವಾಗಿ ಹೊರಗಿಡಲಾಗಿದೆ ಎಂದು ಹೇಳಲಾಗಿತ್ತು.

“ಲೈಂಗಿಕ ಅಲ್ಪಸಂಖ್ಯಾತ ಸಮುದಾಯದ ಕಲ್ಯಾಣದ ಬಗ್ಗೆ ನಿರ್ಲಕ್ಷ್ಯ ಹೆಚ್ಚುತ್ತಿದೆ. ವಿಶೇಷವಾಗಿ ಕೊರೊನಾ ಸಂದರ್ಭದಲ್ಲಿ ಈ ಸಮುದಾಯಕ್ಕೆ ಮೂಲಭೂತ ಅವಶ್ಯಕತೆಗಳನ್ನು ನಿರಾಕರಿಸಲಾಗುತ್ತಿದೆ. ಇಂತಹ ಸ್ಥಿತಿಯಲ್ಲಿ ಲೈಂಗಿಕ ಅಲ್ಪಸಂಖ್ಯಾತ ಕೈದಿಗಳು ಜೈಲುಗಳಲ್ಲಿರುವ ಸ್ಥಿತಿಯನ್ನು ಊಹಿಸಿಕೊಳ್ಳುವುದು ಕಷ್ಟ. ಕಾಗದದ ಮೇಲೂ ಕೂಡ ಮೂರನೇ ಲಿಂಗವೆಂದು ಗುರುತಿಸಲ್ಪಟ್ಟಿಲ್ಲ ಎಂದು ಅರ್ಜಿಯಲ್ಲಿ ಕರಣ್ ತ್ರಿಪಾಠಿ ವಿವರಿಸಿದ್ದರು.

ಅರ್ಜಿ ವಿಚಾರಣೆ ನಡೆಸಿದ್ದ ನ್ಯಾಯಾಲಯ ಜೈಲಿನ ಅಂಕಿಅಂಶಗಳ ಕುರಿತ ತನ್ನ ವಾರ್ಷಿಕ ವರದಿಯಲ್ಲಿ ಲೈಂಗಿಕ ಅಲ್ಪಸಂಖ್ಯಾತ ವ್ಯಕ್ತಿಗಳನ್ನು ಪ್ರತ್ಯೇಕ ತೃತೀಯ ಲಿಂಗವಾಗಿ ಸೇರಿಸಬೇಕೆಂಬ ಬೇಡಿಕೆಯ ಬಗೆಗಿನ ಯಾವುದೇ ನಿರ್ಧಾರವನ್ನು ತಿಳಿಸುವಂತೆ ಕಳೆದ ವಾರ ದೆಹಲಿ ಹೈಕೋರ್ಟ್ ಎನ್‌ಸಿಆರ್‌ಬಿಗೆ ಸೂಚಿಸಿತ್ತು.


ಇದನ್ನೂ ಓದಿ: ರೈತರನ್ನು ಬೆಂಬಲಿಸಿದ್ದಕ್ಕೆ ದೆಹಲಿ ಸಿಎಂ ಕೇಜ್ರಿವಾಲ್‌ರನ್ನೆ ಗೃಹ ಬಂಧನದಲ್ಲಿಟ್ಟ ಪೊಲೀಸರು: ಆಪ್ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...