Homeಮುಖಪುಟಟ್ರಾನ್ಸ್‌ಜೆಂಡರ್‌‌‌ಗಳು ವಿಶೇಷ ಮೀಸಲಾತಿಗೆ ಅರ್ಹರಾಗಿದ್ದಾರೆ: ಮದ್ರಾಸ್ ಹೈಕೋರ್ಟ್

ಟ್ರಾನ್ಸ್‌ಜೆಂಡರ್‌‌‌ಗಳು ವಿಶೇಷ ಮೀಸಲಾತಿಗೆ ಅರ್ಹರಾಗಿದ್ದಾರೆ: ಮದ್ರಾಸ್ ಹೈಕೋರ್ಟ್

- Advertisement -
- Advertisement -

ಪೋಸ್ಟ್‌ ಬೇಸಿಕ್‌(ನರ್ಸಿಂಗ್‌) ಮತ್ತು ಮನೋವೈದ್ಯಶಾಸ್ತ್ರದ ನರ್ಸಿಂಗ್ ಕೋರ್ಸ್‌ಗಳ ಪೋಸ್ಟ್‌ ಬೇಸಿಕ್ ಡಿಪ್ಲೊಮಾಗೆ ಟ್ರಾನ್ಸ್‌‌ಜೆಂಡರ್‌ಗಳು ಯಾವುದೆ ಸಂಕೋಚವಿಲ್ಲದೆ ‘ತೃತೀಯಲಿಂಗ ವಿಶೇಷ ಮೀಸಲಾತಿ’ಗೆ ಅರ್ಹರಾಗಿರುತ್ತಾರೆ ಎಂದು ಮದ್ರಾಸ್ ಹೈಕೋರ್ಟ್‌‌ ಹೇಳಿದೆ.

ಅರ್ಜಿದಾರರಾದ ಎಸ್. ತಮಿಳ್‌ ಸೆಲ್ವಿ ಅವರನ್ನು ತೃತೀಯಲಿಂಗಿ/ ಟ್ರಾನ್ಸ್‌ಜೆಂಡರ್‌‌ ಎಂದು ಪರಿಗಣಿಸಿ ಮತ್ತು ಅದರ ಪ್ರಕಾರ ಅವರನ್ನು ವಿಶೇಷ ವರ್ಗಕ್ಕೆ ಸೇರಿಸಬೇಕು ಎಂದು ನ್ಯಾಯಾಲಯವು ತಮಿಳುನಾಡು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕಾರ್ಯದರ್ಶಿ, ಚೆನ್ನೈನ ವೈದ್ಯಕೀಯ ಶಿಕ್ಷಣ ನಿರ್ದೇಶಕರು (DME), ಮತ್ತು ಆಯ್ಕೆ ಸಮಿತಿ ಕಾರ್ಯದರ್ಶಿ, DME ಅವರಿಗೆ ಆದೇಶಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

2022-23ರ ಶೈಕ್ಷಣಿಕ ವರ್ಷದ ಕೋರ್ಸ್‌ಗೆ ಪ್ರವೇಶಕ್ಕಾಗಿ ಮೆರಿಟ್ ಪಟ್ಟಿಯನ್ನು ಆಯ್ಕೆ ಸಮಿತಿಯ ಕಾರ್ಯದರ್ಶಿಯು ಮಹಿಳಾ ಮತ್ತು ಪುರುಷ ಅಭ್ಯರ್ಥಿಗಳಿಗೆ ಮಾತ್ರ ನೀಡಿತ್ತು. ಕೋರ್ಟ್ ಆದೇಶವು ವಿಶೇಷವರ್ಗವಾಗಿ ತೃತೀಯ ಲಿಂಗವನ್ನು ಸೇರಿಸಬೇಕು ಎಂದು ಹೇಳಿದೆ.

ಇದನ್ನೂ ಓದಿ: ಮೀಸಲಾತಿ ಹೆಚ್ಚಳ ವಿಚಾರದಲ್ಲಿ ಬಿಜೆಪಿ ಸರ್ಕಾರ ಎಸ್‌ಸಿ, ಎಸ್‌ಟಿ ಸಮುದಾಯವನ್ನು ತಪ್ಪುದಾರಿಗೆಳೆಯುತ್ತಿದೆ: ಸಿದ್ದರಾಮಯ್ಯ

ತಮಿಳ್‌ ಸೆಲ್ವಿ ಅವರನ್ನು ಹೊರತುಪಡಿಸಿ, ಯಾವುದೇ ಇತರ ಟ್ರಾನ್ಸ್‌‌ಜೆಂಡರ್‌‌ ಅಭ್ಯರ್ಥಿಗಳು ಈ ಕೋರ್ಸ್‌ಗೆ ಅರ್ಜಿ ಸಲ್ಲಿಸಿದರೆ, ಕೇವಲ ಟ್ರಾನ್ಸ್‌ಜೆಂಡರ್‌ ಅಭ್ಯರ್ಥಿಗಳನ್ನು ಒಳಗೊಂಡಿರುವ ಮತ್ತು ಟ್ರಾನ್ಸ್‌ಜೆಂಡರ್ ಅಭ್ಯರ್ಥಿಗಳ ನಡುವಿನ ಇಂಟರ್‌ ಮೆರಿಟ್ ಸೆ ಆಧರಿಸಿ ಪ್ರತ್ಯೇಕ ವರ್ಗದ ಮೆರಿಟ್ ಪಟ್ಟಿಯನ್ನು ಸಿದ್ಧಪಡಿಸಬೇಕು ಎಂದು ನ್ಯಾಯಮೂರ್ತಿ ಆರ್ ಸುರೇಶ್ ಕುಮಾರ್ ಹೇಳಿದ್ದಾರೆ.

2022-2023ರ ಶೈಕ್ಷಣಿಕ ವರ್ಷದ ಪೋಸ್ಟ್ ಬೇಸಿಕ್ (ನರ್ಸಿಂಗ್) ಕೋರ್ಸ್ ಮತ್ತು ಪೋಸ್ಟ್ ಬೇಸಿಕ್ ಡಿಪ್ಲೊಮಾ ಇನ್ ಸೈಕಿಯಾಟ್ರಿ ನರ್ಸಿಂಗ್ ಕೋರ್ಸ್‌ಗೆ ನೀಡಲಾದ ಪ್ರಾಸ್ಪೆಕ್ಟಸ್ ಅನ್ನು ವಿಶೇಷ ವರ್ಗದ ಅಡಿಯಲ್ಲಿ ಟ್ರಾನ್ಸ್‌ಜೆಂಡರ್‌ಗಳನ್ನು ವರ್ಗೀಕರಿಸದಿರುವುದು ಕಾನೂನುಬಾಹಿರ ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡುವಂತೆ ತಮಿಳ್‌ ಸೆಲ್ವಿ ಮದ್ರಾಸ್ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

2022-2023ರ ಶೈಕ್ಷಣಿಕ ವರ್ಷದ ಪೋಸ್ಟ್ ಬೇಸಿಕ್ B.Sc.(ನರ್ಸಿಂಗ್) ಕೋರ್ಸ್‌ಗೆ ಟ್ರಾನ್ಸ್‌ಜೆಂಡರ್ ಎಂಬ ವಿಶೇಷ ವರ್ಗದ ಅಡಿಯಲ್ಲಿ ತನ್ನನ್ನು ಸೇರಿಸಿಕೊಳ್ಳಲು ಆಯ್ಕೆ ಸಮಿತಿಯ ಕಾರ್ಯದರ್ಶಿಗೆ ನಿರ್ದೇಶನ ನೀಡುವಂತೆ ತಮಿಳ್‌ ಸೆಲ್ವಿ ಕೋರಿದ್ದರು.

ಇದನ್ನೂ ಓದಿ: ಜಮ್ಮು ಕಾಶ್ಮೀರ: ಪಹಾರಿ ಭಾಷಾ ಸಮುದಾಯಕ್ಕೆ ಮೀಸಲಾತಿ ಭರವಸೆ ನೀಡಿದ ಅಮಿತ್ ಶಾ

ಈ ಕೋರ್ಸ್‌ಗಳಿಗೆ ಕೋಮು ಮೀಸಲಾತಿಯನ್ನು ಒದಗಿಸಲಾಗಿದ್ದರೂ, ತೃತೀಯಲಿಂಗಿ/ಟ್ರಾನ್ಸ್‌‌ಜೆಂಡರ್‌ಗಳಿಗೆ ಯಾವುದೇ ಪ್ರತ್ಯೇಕ ಮೀಸಲಾತಿಗಳನ್ನು ಒದಗಿಸಲಾಗಿಲ್ಲ. ಹೀಗಾಗಿ ಅವರು ನ್ಯಾಯಾಲಯದ ಮೊರೆ ಹೋಗಿದ್ದಾರೆ ಎಂದು ತಮಿಳ್ ಸೆಲ್ವಿ ಅವರ ವಕೀಲೆ ರೇಶ್ಮಿ ಕ್ರಿಸ್ಟಿ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...