Homeಮುಖಪುಟನಜತ್ ಓಝ್ಕಾಯಾನ ಆರು ಪದ್ಯಗಳು

ನಜತ್ ಓಝ್ಕಾಯಾನ ಆರು ಪದ್ಯಗಳು

- Advertisement -
- Advertisement -

1.ಪ್ರೇಮ ಹುಲಿಯ ಅವತಾರ

ಪ್ರೇಮ,
ಹುಲಿಯ ಅವತಾರ.
ಅಪರೂಪದ ಬೆಕ್ಕು, ಚೆಲುವಿನ ಬನಿ,
ಚರ್ಮದ ಕೆಳಗೆ ಹುರಿಗಟ್ಟಿರುವ
ಸ್ನಾಯುಗಳ ಮಾಯಗಾರ.
ಬದುಕು-ಸಾವಿನ ತಕ್ಕಡಿಯ
ತನ್ನ ನಿಷ್ಠುರ ದವಡೆಯಲ್ಲಿ ಸರಿದೂಗಿಸುವ
ಗಂಭೀರ ವ್ಯಾಪಾರಿ.

ಪ್ರೇಮ ಊಹಾತೀತ,
ಇನ್ನೇನು ಜಾಡು ಸಿಕ್ಕಿತು ಎನ್ನುವಾಗಲೇ
ಹೆಜ್ಜೆ ಅಳಿಸಿ ಹಾಕಿಬಿಡುವ ಚತುರ ಚೋರ
ಕಾಯುವ ನಾಟಕವಾಡುವ ವೇಷಧಾರಿ,
ಕೊಲ್ಲಲು ಹಾರುವ ತನಕ
ಸದ್ದು ಮಾಡದೇ ಸುಮ್ಮನಿದ್ದುಬಿಡುವ ತಂತ್ರಗಾರ,
ಎಂಥ ಕಾಡಿನ ಗರ್ಭದಲ್ಲೂ
ಬೇಟೆಯ ವಾಸನೆ
ಕ್ಷಣಮಾತ್ರದಲ್ಲಿ ಪತ್ತೆಹಚ್ಚಿಬಿಡುವ ಚಾಣಾಕ್ಷ ಗೂಢಚಾರ.

ಸ್ವರ್ಗ, ನರಕ ಎರಡರಲ್ಲೂ
ಪ್ರೇಮದ್ದೇ ಸರ್ಕಾರ.
ಬಿಸಿ ಉಸಿರಿನಿಂದ ಜೀವ ತುಂಬುತ್ತದೆಯಾದರೂ
ಗರ್ಜಿಸಿಯೇ ಅಸ್ತಿತ್ವ ಘೋಷಣೆ
ಹರಿತ ಉಗುರುಗಳ ನಡುವೆಯೇ ಲಲ್ಲೆವಾತು.

ಪ್ರೇಮ, ಭಯಂಕರ.
ಎಂಥ ಧೈರ್ಯಶಾಲಿಗಳೂ
ಒಂದರೆಘಳಿಗೆ ಬೆಚ್ಚಿ ಬೀಳುತ್ತಾರೆ.

ನನ್ನ ಮಾತು ಕೇಳಿ, ಈಗಲೇ ಮನೆಗೆ ಹೋಗಿ
ಆಯುಧಗಳನ್ನು ಹರಿತ ಮಾಡಿಟ್ಟುಕೊಳ್ಳಿ
ಇದು ಬೇಟೆಯಾಡಲೇ ಬೇಕಾದಂಥ ವ್ಯಾಘ್ರ.
(Love is a Tiger)

*****

2.ಹುಚ್ಚು ಹರಟೆ

ನನ್ನ ಪ್ರಾರ್ಥನೆ ಆಗಾಗ,
ತುಣುಕುಗಳಲ್ಲಿ, ದಿನವಿಡೀ,
ಅಂಥ ಮಹತ್ವದ್ದೇನಲ್ಲ, ಬಹುತೇಕ ಹರಟೆ.

ಭಗವಂತನಿಗಾಗಿ
ನಾನು ಹಾಡುವ ಹಾಡುಗಳು
ನೂರಕ್ಕೆ ನೂರು ಸಿಲ್ಲಿ,
ಪ್ರಾರ್ಥನೆ, ಅಪ್ಪಟ ಗಾಸಿಪ್
ಹಾಸಿಗೆಯೊಳಗಿನ ಗುಸುಗುಸು.

ಗಂಭೀರವಾಗಿರಲೇಬೇಕೆ?
ಭಗವಂತನೊಡನೆಯ ನನ್ನ ವ್ಯವಹಾರ
ತಲೆಹಿಡುಕತನಕ್ಕಿಂತ ಕೀಳೆ?

ಪ್ರಾರ್ಥನೆ
ಗೆಳೆಯರ ನಡುವಿನ ಕಾಡು ಹರಟೆ
ಭಗವಂತನನ್ನು
ಬೋರು ಹೊಡೆಸುವುದಕ್ಕಿಂತ
ಸಿಟ್ಟಿಗೇಳಿಸುವುದೇ ಒಳ್ಳೆಯ ಚೌಕಾಸಿ.
(Silly chatter)

********

3. ಪ್ರೇಮದಲ್ಲಿ ಮುಳುಗಿರುವ ಮನುಷ್ಯ

ಪ್ರೇಮದಲ್ಲಿ ಮುಳುಗಿರುವ ಮನುಷ್ಯ
ತನ್ನ ಪ್ರೇಮವನ್ನು ಜಾಹೀರು ಮಾಡುವುದು
ಎರಡು ರೀತಿಯಲ್ಲಿ

ಹಾಡಿ ಹಾಡಿ ಹೇಳುತ್ತಾನೆ
ಮನೆಯ ಮಾಳಿಗೆ ಮೇಲೆ ನಿಂತು
ಊರಿಗೆಊರೇ ಹುಚ್ಚೆದ್ದು ಕುಣಿಯುವಂತೆ,
ಇಲ್ಲಾ
ಯಾರಿಗೂ ಕಾಣದಂತೆ
ಕದ್ದ ಒಡವೆಯ ಕಣ್ಣಿಗೊತ್ತಿಕೊಂಡು ಮುಚ್ಚಿಡುವಂತೆ ಕಳ್ಳ
ಬಚ್ಚಿಟ್ಟುಕೊಳ್ಳುತ್ತಾನೆ ಎದೆಯಲ್ಲಿ

ನಾನು ಹಾಗೆಲ್ಲ
ಮಾಳಿಗೆ ಏರಿ ಹಾಡುವುದಿಲ್ಲ
ಅದು ಜೈಲಿನ ಹಾದಿ, ಗೊತ್ತು ನನಗೆ
ಬದಲಾಗಿ
ಗಲ್ಲ ಉಬ್ಬಿಸಿ ಓಡಾಡುತ್ತೇನೆ
ಊರ ತುಂಬ
ಬಾಯಲ್ಲಿ ಉಂಡಿ ತುಂಬಿಕೊಂಡ
ತುಂಟ ಹುಡುಗನಂತೆ

ಸಿಕ್ಕಿಹಾಕಿಕೊಂಡರೆ ಮಾತ್ರ
ಉಸುರುತ್ತೇನೆ ಅವರ ಕಿವಿಯಲ್ಲಿ
ಕುಣಿದಾಡುತ್ತ, ಕಣ್ಣು ಮಿಟುಕಿಸುತ್ತ
ನನ್ನ ಪ್ರೇಮ.
(When a person falls in love)

******

4 ಭಗವಂತನ ಪರಿಪೂರ್ಣತೆ

ಇವತ್ತು
ಒಬ್ಬ ಮನುಷ್ಯ ಸಿಕ್ಕಿದ್ದ
ಭಗವಂತನ ಪರಿಪೂರ್ಣತೆಯ ಬಗ್ಗೆ
ಮಾತನಾಡುತ್ತಲೇ ಹೋದ.

ಹೇಗೆ ಆತ
ಅಪಾರ, ನಿರ್ವಿಕಾರ, ನಿರಾಕಾರ, ನಿರ್ಗುಣ
ಮುಂತಾಗಿ.
ಅವನ ಮಾತುಗಳಿಗೆ ಕಾವ್ಯದ ಸ್ಪರ್ಶವಿತ್ತು,
ಕೈಗೆ ನಿಲುಕಲಾರದ, ಕಲ್ಪನಾತೀತ ಭಾವವೊಂದನ್ನು
ವಿವರಿಸುವ ಉನ್ಮಾದವಿತ್ತು.

ನನಗೆ ಗೊತ್ತಿಲ್ಲ ಈ ಮನುಷ್ಯ
ಯಾರ ಪ್ರೇಮದಲ್ಲಿ ಹೀಗೆ ಮಗ್ನನಾಗಿದ್ದಾನೆಂದು,
ಆದರೆ ಒಂದಂತೂ ನಿಜ
ಅದು ಖಂಡಿತ ಭಗವಂತನಂತೂ ಆಗಿರಲಾರ.

ನನಗೆ ಗೊತ್ತಿರುವ ಭಗವಂತ
ನೆಲದಿಂದ ಒಂದು ಹೆಜ್ಜೆಯನ್ನೂ ಮೇಲಿಟ್ಟವನಲ್ಲ,
ಅವ ಪ್ರತಿದಿನ ನಾನು ರಸ್ತೆಯಲ್ಲಿ ಒದೆಯುತ್ತ ಓಡಾಡುವ
ಮಣ್ಣಿನ ಗುಪ್ಪೆಗಳ ನಡುವೆ ಹಾಸು ಹೊಕ್ಕಾದವನು.
ನನ್ನ ಭಗವಂತ ಪರಿಪೂರ್ಣನಲ್ಲ,
ಜಗ ಮೊಂಡ, ಅಸಾಧ್ಯ ಹುಂಬ,
ಒಂದು ಮಾತಿಗೆ ಹತ್ತು ಮಾತನಾಡುವವ,
ಮಗ್ಗಲ ಮುಳ್ಳು.

ಪ್ರಾರ್ಥನೆಗಾಗಿ ಬಾಗಿದಾಗ
ನನ್ನ ಕತ್ತಿಗೆ ಮುತ್ತಿಡುವ ಭಗವಂತ
ನಿಲುಕಲಾರದವನೆನಲ್ಲ,
ತೋಳಿಗೆ ಸಿಕ್ಕರೆ ಮುರಿದು ಮುದ್ದೆ ಮಾಡುವುದಾಗಿ
ಹೆದರಿಸುವ ಭಯಂಕರ ಪೋಲಿ ಆಸಾಮಿ.
ನಿರ್ವಿಕಾರ? ಹಾಗೆಂದರೇನು?
ಬಹುಶಃ ಭಾವನೆಗಳಿಲ್ಲದವನು.

ಆದರೆ ನಮ್ಮ ಪ್ರೇಮ ಎಂಥದೆಂದರೆ

ನಾನು ಪಶ್ಚಿಮಕ್ಕೆ ಮುಖ ಮಾಡಿ
ತಲೆ ಬಾಗಿಸುವುದಷ್ಟೇ ತಡ
ಎಲ್ಲಿ ಈ ಭಗವಂತ ತನ್ನ ತುಟಿಗಳಿಂದ
ಕಚಗುಳಿ ಇಡಲು ಶುರು ಮಾಡುತ್ತಾನೋ
ಎಂದು ಹೆದರಿ
ಅವನನ್ನು ದೂರ ತಳ್ಳುತ್ತೇನೆ.
ನನ್ನ ಮಾತು ಕೇಳಿ.
ಇನ್ನೆಂದೂ ನನ್ನ ಮುಂದೆ
ಭಗವಂತನ ಪರಿಪೂರ್ಣತೆಯ ಬಗ್ಗೆ ಮಾತಾಡಬೇಡಿ,
ಭಗವಂತನ ಬಗ್ಗೆ ತಿಳಿದುಕೊಳ್ಳಲೇಬೇಕು ಎನಿಸಿದರೆ
ಎಚ್ಚರವಿದ್ದಾಗ ಅವನು ಸೃಷ್ಟಿಮಾಡುವ
ಫಜೀತಿಗಳಿಗೂ ತಯಾರಾಗಿ.
(The perfection of Allah)

*******

5. ಹೆಣ

ಇಂದು ಮುಂಜಾನೆ
ಶಹರದಲ್ಲಿ ಏನೋ ಕೋಲಾಹಲ.
ಗೇಟ್ ಹತ್ತಿರ ಒಂದು ಶವ ಪತ್ತೆಯಾಗಿದೆ.
ಹೆಣದ ತಪಾಸಣೆ ಮಾಡುತ್ತಿದ್ದಾನೆ
ಕಾವಲುಗಾರ.
ಅಳುಕಿನಿಂದಲೇ ಸೇರಿಕೊಳ್ಳುತ್ತೇನೆ
ಶವದ ಸುತ್ತ ನೆರೆದಿರುವ ಗುಂಪನ್ನು.

ದಿಗಿಲಾಯಿತು,
ಹೃದಯವೇ ಬಾಯಿಗೆ ಬಂದ ಹಾಗಾಯಿತು
ನನಗೆ ಗೊತ್ತು – ಇದು ಯಾರೆಂದು.

ಬಹುಶಃ
ಪೂರ್ವದ ತಣ್ಣನೆಯ ಗಾಳಿ
ಆವರಿಸಿಕೊಂಡು ಮೈ ಮರಗಟ್ಟುವ ಮುನ್ನ
ಒಳಗೆ ಸೇರಿಕೊಂಡು ಬಿಡಬೇಕೆಂದು
ಅವಸರದಿಂದ ಮುನ್ನುಗ್ಗುವಾಗ ಸತ್ತಿರಬಹುದು ಅಥವಾ

ಯಾರಿಗೂ ಹೇಳದೇ ಬಚ್ಚಿಟ್ಟುಕೊಂಡ
ಅಪಾರ ಪ್ರೇಮದ ಒತ್ತಡ ತಾಳಲಾರದೆ
ಎದೆಯೊಡೆದುಕೊಂಡು.

ಹೆಣದ ಹತ್ತಿರ ಹೋಗಲಿಲ್ಲ ನಾನು
ಹೆದರಿಕೆ, ಈ ಅಪರಾಧದಲ್ಲಿ
ನಾನೂ ಭಾಗಿಯಾಗಿರಬಹುದೆಂಬ
ಅನುಮಾನ.

ಯಾರ ಹೆಣ ಎಂದು ಗುರುತಿಸಲು
ಮುಖ ನೋಡುವ ಅಗತ್ಯ ನನಗಿಲ್ಲ,
ಅದು
ದೇವರ ಹೆಣ.

ನಾನೂ ಅವನ ಹಾಗೆಯೇ ಸೆಟೆದ
ತಣ್ಣನೆಯ ಶರೀರವಾಗಿಬಿಡುತ್ತಿದ್ದೆ
ಹಾಗೆಂದು ಹೇಳಿದ್ದರೆ
ಕೂಗಿ.
(The Corpse)

******

6. ಪ್ರೇಮಿಗಳ ಸಾವು

ಒಂದು ದಿನ
ಪುರಾತನ ಅರಮನೆಯ
ಪಾಳುಬಿದ್ದ ಅವಶೇಷಗಳ ನಡುವೆ
ಓಡಾಡುತ್ತ ದಣಿದು
ಖರ್ಜೂರದ ಮರವೊಂದರ ಕೆಳಗೆ
ಸ್ವಲ್ಪ ಹೊತ್ತು ಕಾಲು ಚಾಚಿದೆ ಹಾಯಾಗಿ

ಮನೆಯಿಂದ ಕಟ್ಟಿಕೊಂಡು ಬಂದಿದ್ದ
ಬುತ್ತಿ ಗಂಟು ಬಿಚ್ಚಿ, ಊಟ ಮುಗಿಸಿ
ಬೀಸುತ್ತಿದ್ದ ತಂಗಾಳಿಗೆ ಮೈಯೊಡ್ಡಿ
ಕಣ್ಣು ಮುಚ್ಚಿಕೊಳ್ಳುತ್ತಿದ್ದಂತೆಯೇ
ನನ್ನ ಕೈಗಳನ್ನು ನೆಕ್ಕತೊಡಗಿತು
ಜಿಂಕೆಯೊಂದು

ಬಿಳಚಿಕೊಂಡಿತ್ತು ಅದರ ಮೂಗು ಮುಖ
ಏನೋ ಒಂದು ಬಿಗಿತ ಕತ್ತಿನ ಚಲನೆಯಲ್ಲಿ

ಕಣ್ಣು ಬಿಟ್ಟರೆ ಜಿಂಕೆ ಅಂಜಬಹುದೆಂದು
ಎಲ್ಲ ಗಮನಿಸುತ್ತಿದ್ದೆ

ಹಾಗೆ ಅಲ್ಲಾಡದೇ ಕಿರುಗಣ್ಣಿನಲ್ಲಿಯೇ
ನನ್ನ ದೇಹವನ್ನೊಮ್ಮೆ ಮೂಸಿ ನೋಡಿ
ಮೊಣಕಾಲ ಮೇಲೆ ಬಗ್ಗಿ
ತನ್ನ ತಲೆಯನ್ನ ನನ್ನ ತೊಡೆಗಳ ಮೇಲಿಟ್ಟು
ಒರಗಿಕೊಂಡಿತು ಜಿಂಕೆ

ಒಂದು ಜೊತೆ ಕಪ್ಪುಕಣ್ಣುಗಳು
ನನ್ನ ಕಣ್ಣುಗಳೊಡನೆ ಮಾತಿಗಿಳಿದವು,
ನಿಧಾನವಾಗಿ ಆ ಕಣ್ಣೊಳಗಿನ ಬೆಳಕು ಮಾಯವಾಗುತ್ತ, ತೀರಿಯೇ ಹೋದಳು
ಆ ಕಪ್ಪು ಕಣ್ಣಿನ ಒಡತಿ.

ಒಂದಿಷ್ಟು ಅದ್ಭುತ ದಿನಗಳ ಪ್ರೇಮದ ನಂತರ
ಪ್ರೇಮಿಗಳು ಸಾಯಲು ಬಯಸೋದು ಹೀಗೆ,
ಪ್ರೇಮಿಯ ಕೈ
ತನ್ನ ಗಲ್ಲ ನೇವರಿಸುತ್ತಿರುವಾಗ
ಕಣ್ಣೊಳಗಿನ ಬೆಳಕು ನಿಧಾನವಾಗಿ
ಆರಿ ಹೋಗುವಂತೆ.
ನಜತ್ ಹೇಳುತ್ತಾನೆ….

ಆದರೆ ನೀವು ಹಾಗೆ
ಪ್ರೇಮಿಯ ತೊಡೆಯ ಮೇಲೆ ತಲೆಯಿಟ್ಟು
ಕಣ್ಣು ಮುಚ್ಚಿಕೊಳ್ಳಲು ಕಾಯಬೇಕಿಲ್ಲ
ಸಾವು ಬರುವ ತನಕ.
(How lovers long to die)

*********

ನಜತ್ ಓಝ್ಕಾಯಾ 14 ನೇ ಶತಮಾನದ ಸೂಫಿ ಕವಿ. ಜಲಾಲುದ್ದೀನ್ ರೂಮಿಯ ಊರು ಕೋನ್ಯಾದಲ್ಲಿಯೇ ಇದ್ದವನು. ಜಾನ್ ಮಾರ್ಬಿ ಎನ್ನುವ ಇಂಗ್ಲೀಷ್ ಕವಿ, ಅನುವಾದಕ ನಜತ್‌ನ ಕವಿತೆಗಳನ್ನ Salvation of the true rock ಎನ್ನುವ ಅಂಥಾಲಜಿಯಲ್ಲಿ ಸಂಗ್ರಹಿಸಿದ್ದಾನೆ.

(ಕನ್ನಡಕ್ಕೆ): ಚಿದಂಬರ ನರೇಂದ್ರ

ಚಿದಂಬರ ನರೇಂದ್ರ

ಚಿದಂಬರ ನರೇಂದ್ರ
ಕವಿ, ಅನುವಾದಕ. ’ಚಿಕ್ಕಿ ತೋರಿಸ್ತಾವ ಚಾಚಿ ಬೆರಳ’, ’ಹೂಬಾಣ’, ’ಗಾಳೀ ಕೆನೆ’ ಪ್ರಕಟಿತ ಕವನ ಸಂಕಲನಗಳು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...