Homeಕವನಅನುವಾದಿತ ಕವನ; ನಿನ್ನ ಹಸಿವೆಯಿಂದ ಭಯಗೊಂಡಿದ್ದೇನೆ

ಅನುವಾದಿತ ಕವನ; ನಿನ್ನ ಹಸಿವೆಯಿಂದ ಭಯಗೊಂಡಿದ್ದೇನೆ

- Advertisement -
- Advertisement -

ನಾ ನಿನ್ನ ಊರಿನಿಂದ
ಮತ್ತು ನಿನ್ನ ಲೋಕದಿಂದ
ಪೂರಾ ಸೋತುಹೋಗಿದ್ದೇನೆ
ಅನಿಷ್ಟದ ನಗುವನ್ನು
ಕಿರೀಟದಂತೆ ಮುಡಿಸಿಕೊಂಡ
ನಿಮ್ಮ ಆತ್ಮದ ರೀತಿ ರಿವಾಜುಗಳು ಹೊಲಸು ನಾರುತ್ತಿವೆ
ಇನ್ನು ಸಹಿಸಲಾಗದು!

ನಿಮ್ಮ ತಕ್ಕಡಿಯಲ್ಲಿ ನಮ್ಮ ಬದುಕನ್ನಿಟ್ಟು
ಬರುಹೋಗುವ ಉಸಿರನ್ನು ನೋಡುವುದಕ್ಕೂ
ನಾಚಿಕೆಯಾಗುತ್ತದೆ.

ದೇವರು ನಿನ್ನದೇ ಕಲ್ಪನೆಯ ಕೆಟ್ಟ ಸೃಷ್ಟಿಯೆಂದು ಯಾರಿಗೆ ಗೊತ್ತಿಲ್ಲ
ಧರ್ಮವೆಂಬುದು ಸೃಷ್ಟಿಯ ಬಹುದೊಡ್ದ ಹಗರಣ
ಜಾತಿಯೆಂಬೊಂದು ಆಳ ಆಳದ ಬಾವಿ
ನೀರು ಎಲ್ಲಾ ವಿಕಾರವನ್ನು ಮುಚ್ಚಿಹಾಕಿದೆ..

ನಿಮ್ಮ ಕಲೆಯಿಂದ
ಮತ್ತು ನಿಮ್ಮ ವಿಜ್ಞಾನದಿಂದ ನಾನು
ವಿಪರೀತ ಬೇಸತ್ತು ಹೋಗಿದ್ದೇನೆ
ಇಲ್ಲಿ ರಕ್ತವನ್ನು ಉಗುಳು ಮತ್ತು
ಆಕ್ರಂದನವನು ದೇವಳದ ಭಜನೆ ನುಂಗಿಹಾಕಿದೆ
ಇಲ್ಲಿ ಸತ್ಯವನ್ನು ಸಂಸತ್ತಿನ ಟಾಯ್ಲೆಟ್ ಪೇಪರ್ ಮಾಡಿ
ನೇತುಹಾಕಲಾಗುತ್ತದೆ
ಮುಂಜಾನೆಯಿಂದ ಸಂಜೆವರೆಗೆ ಹೊಸಕಿಹೋದ ಜನರ ಕನಸುಗಳನ್ನು ಒರೆಸಲಾಗುತ್ತದೆ

ನಾನು ಶತಮಾನಗಳಿಂದ ಅನ್ನದ ಅಗುಳನ್ನೂ ಕಾಣದ
ಈ ದೇಶದ ಅನ್ನನಾಳದಿಂದ ಬಂದಿದ್ದೇನೆ
ನಿಮ್ಮ ಹಸಿವೆಯಿಂದ ನನಗೆ ಭಯವಾಗುತ್ತದೆ

ಕೆರೆ ಹಳ್ಳಗಳಿಗಾಗಿ
ನನ್ನನ್ನು ಬಿಟ್ಟುಬಿಡಿ
ಅಲ್ಲಿ ಕಪ್ಪೆ ಮೀನುಗಳು ನನಗಾಗಿ ಕಾಯುತ್ತಿರಬಹುದು
ಯಾರಾದರೂ ಜೀವದ ಗೆಳೆಯನೊಂದಿಗೆ
ಮಳೆಯನ್ನು ನನ್ನ ಅಂಗಿಯನ್ನಾಗಿಸಿ
ನನ್ನ ಕುರಿ ಆಡುಗಳು ನೆನೆಯುವ ಆ ದಿಕ್ಕಿನತ್ತ
ಈಜಲು ಹೋಗುವೆ
ಅಲ್ಲಿ ಯಾವುದಾದರೂ ಮಾವಿನ ಮರದ ಮೇಲೆ
ನನ್ನ ಎರಡೂ ಕೈಗಳು ಸಿಕ್ಕಿಕೊಂಡಿರಬೇಕು
ಮತ್ತು ಅಲ್ಲೇ ಎಲ್ಲೋ ಹತ್ತಿರದಲ್ಲಿ ಸಿಕ್ಕುಸಿಕ್ಕಾದ ನನ್ನ ಮೀನಿನ ಬಲೆ
ನನ್ನ ಬೆರಳುಗಳಿಗಾಗಿ ಕರೆಯುತ್ತಿರಬಹುದು

ಮುಕ್ತಿಬೋಧದ ಬಗ್ಗೆ ಯಾವ ಅಭಿಪ್ರಾಯವೂ ಇಲ್ಲ
ಮಾರ್ಕ್ಸ್ ನನಗೆ ಗುರುತಿಲ್ಲ
ಅಂಬೇಡ್ಕರ್ ಹೆಸರನ್ನೇ ಕೇಳಿರುವೆ ಮೊದಲಬಾರಿ
ಬಹುಶಃ ಅಜ್ಞೇಯನಾಗುವುದೆ ನಿಮ್ಮ ಸಂಸ್ಕೃತಿಯ ದೊಡ್ದ ಕೊಡುಗೆಯಿದ್ದೀತು
ಈಗ ನನ್ನನ್ನು ಹೋಗಲು ಬಿಡಿ

ಗಾಲಿಬನನ್ನು ನಾಲಿಗೆಯಲೂ ನೆನೆಯುವುದಿಲ್ಲ
ಜಯಸಿಯೇ ಯುದ್ಧದ ನಿರರ್ಥಕತೆಯನ್ನು ಸಾರಿದ ಮೊದಲ ಕವಿಯೆಂದು
ವಾದಿಸುವುದಿಲ್ಲ ನಾನು
ನನಗೆ ಹೋಗಲು ಬಿಡಿ

ನನ್ನನ್ನು ನೀವು ಪುಕ್ಕಲು ಎನ್ನಿ
ಪಲಾಯನವಾದಿ ಎನ್ನಿ
ಆದರೆ ಹೋಗಲು ಬಿಡಿ

ನಾನು ಹೋಗುವ ಅಜ್ಞಾತವಾಸದ ಅರ್ಥ
ಬಹುಶಃ ನಿಮಗೆ ಗೊತ್ತಿದ್ದೀತು ಅಥವಾ
ನಿಮಗೆಂದಿಗೂ ಗೊತ್ತಾಗದು
ತುದಿ ಮಣಿಸಿ ಬಾಗಿಸಿದ ಬಿದಿರ ಚಿಗುರು ಸಂಕಟದಲಿ
ನಡುಗಿದ್ದು
ಅದೇ ನನಗೆ ಹೇಳಿಕೊಟ್ಟಿದೆ
ಹೇಗೆ ವಿನಮ್ರತೆ ದೈನೇಸಿಯಾಗಿ ಬದಲಾಗುವ ಮೊದಲು
ಪ್ರತಿಭಟನೆಯಾಗಿ ಬದಲಾಗುವುದೇ
ಬದುಕಿನ ಸಾಕ್ಷಿಯಾಗಿದೆ..!

ಹಿಂದಿ ಮೂಲ: ಪರಾಗ್ ಪಾವನ್
ಕನ್ನಡಕ್ಕೆ: ರೇಣುಕಾ ನಿಡಗುಂದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದತ್ತಾಂಶ ಸಂರಕ್ಷಣಾ ಕಾನೂನಿನಡಿಯಲ್ಲಿ ಆರ್‌ಟಿಐ ತಿದ್ದುಪಡಿಗೆ ತಡೆ ನೀಡಲು ನಿರಾಕರಿಸಿದ ಸುಪ್ರೀಂ ಕೋರ್ಟ್

ಡಿಜಿಟಲ್ ವೈಯಕ್ತಿಕ ದತ್ತಾಂಶ ಸಂರಕ್ಷಣಾ ಕಾಯ್ದೆಯ ಮೂಲಕ ಪರಿಚಯಿಸಲಾದ ಮಾಹಿತಿ ಹಕ್ಕು ಕಾಯ್ದೆಗೆ ತಿದ್ದುಪಡಿಯನ್ನು ತಡೆಹಿಡಿಯಲು ಸುಪ್ರೀಂ ಕೋರ್ಟ್ ಸೋಮವಾರ ನಿರಾಕರಿಸಿದೆ ಎಂದು 'ಬಾರ್ ಮತ್ತು ಬೆಂಚ್' ವರದಿ ಮಾಡಿದೆ. ಸಾರ್ವಜನಿಕ ಹಿತಾಸಕ್ತಿಯ ಆಧಾರದ...

ಅಜಿತ್ ಪವಾರ್ ಸಾವು : ಎರಡೂ ಫ್ಲೈಟ್ ರೆಕಾರ್ಡರ್‌ಗಳು ಹಾನಿಗೊಳಗಾಗಿವೆ ಎಂದ ವಿಮಾನಯಾನ ಸಚಿವಾಲಯ

ಬಾರಾಮತಿಯಲ್ಲಿ ಜನವರಿ 28 ರಂದು ಅಜಿತ್ ಪವಾರ್ ಅವರನ್ನು ಹೊತ್ತೊಯ್ಯುತ್ತಿದ್ದ ವಿಮಾನ ಅಪಘಾತಕ್ಕೀಡಾದ ಬಗ್ಗೆ ನಾಗರಿಕ ವಿಮಾನಯಾನ ಸಚಿವಾಲಯವು ಮಂಗಳವಾರ (ಫೆ.17) ಅಧಿಕೃತ ಹೇಳಿಕೆ ಬಿಡುಗಡೆ ಮಾಡಿದ್ದು, ವಿಮಾನದ ಎರಡೂ ಸ್ವತಂತ್ರ ಫ್ಲೈಟ್...

ರಾಜಸ್ಥಾನ| ಮೊದಲ ಬಜೆಟ್‌ನಲ್ಲಿ ಪಕ್ಷವು ‘ಗಂಡು ಮಗುವಿಗೆ ಜನ್ಮ ನೀಡಿದೆ’ ಎಂದು ವಿವಾದಾತ್ಮಕ ಹೇಳಿಕೆ ನೀಡಿದ ಬಿಜೆಪಿ ಶಾಸಕ

ರಾಜಸ್ಥಾನದ ಬಿಜೆಪಿ ಶಾಸಕ ಬಹದ್ದೂರ್ ಸಿಂಗ್ ಕೋಲಿ, ತಮ್ಮ ಪಕ್ಷ ಮತ್ತು ಕಾಂಗ್ರೆಸ್ ಮಂಡಿಸಿದ ಬಜೆಟ್‌ಗಳನ್ನು ಗಂಡು ಮತ್ತು ಹೆಣ್ಣು ಮಗುವಿನ ಜನನಕ್ಕೆ ಹೋಲಿಸಿದ ಬಳಿಕ ವಿಧಾನಸಭೆಯಲ್ಲಿ ವಿವಾದ ಭುಗಿಲೆದ್ದಿತು. ರಾಜ್ಯ ಬಜೆಟ್ ಮೇಲಿನ...

ಬಾಂಗ್ಲಾದೇಶದ ನೂತನ ಪ್ರಧಾನಿಯಾಗಿ ತಾರಿಖ್ ರೆಹಮಾನ್ ಪ್ರಮಾಣವಚನ ಸ್ವೀಕಾರ

ಬಾಂಗ್ಲಾದೇಶದ ನೂತನ ಪ್ರಧಾನಿಯಾಗಿ ಬಾಂಗ್ಲಾದೇಶ್ ನ್ಯಾಷನಲಿಸ್ಟ್ ಪಾರ್ಟಿ (ಬಿಎನ್‌ಪಿ) ನಾಯಕ ತಾರಿಖ್ ರೆಹಮಾನ್ ಅವರು ಮಂಗಳವಾರ (ಫೆ.17) ಪ್ರಮಾಣ ವಚನ ಸ್ವೀಕರಿಸಿದರು. ಪದಗ್ರಹಣ ಕಾರ್ಯಕ್ರಮವು ಸಂಪ್ರದಾಯದಂತೆ ಅಧ್ಯಕ್ಷೀಯ ಅರಮನೆಯಲ್ಲಿ ನಡೆಯುವ ಬದಲು, ಢಾಕಾದ ರಾಷ್ಟ್ರೀಯ...

ಮಹಾರಾಷ್ಟ್ರ| ಪರೀಕ್ಷೆಯ ಸಮಯದಲ್ಲಿ ಸಾಮೂಹಿಕ ನಕಲಿಗೆ ಬೆಂಬಲಿಸಿದ 5 ಜನ ಶಿಕ್ಷಕರ ಅಮಾನತು

ಮಹಾರಾಷ್ಟ್ರದ ಬೀಡ್ ಜಿಲ್ಲೆಯ ಕೇಂದ್ರವೊಂದರಲ್ಲಿ ನಡೆದ 12 ನೇ ತರಗತಿಯ ಹೆಚ್‌ಎಸ್‌ಸಿ ಪರೀಕ್ಷೆಯ ಪ್ರಶ್ನೆ ಪತ್ರಿಕೆಯ ಸಮಯದಲ್ಲಿ ದೊಡ್ಡ ಪ್ರಮಾಣದಲ್ಲಿ ನಕಲು ಮಾಡಲು ಅನುಕೂಲ ಮಾಡಿಕೊಟ್ಟ ಆರೋಪದ ಮೇಲೆ ಸಿಕ್ಕಿಬಿದ್ದ ಐದು ಶಿಕ್ಷಕರನ್ನು...

ಬಿಜೆಪಿ ವಿರುದ್ಧ 40% ಕಮಿಷನ್ ಜಾಹೀರಾತು : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಪ್ರಕರಣ ರದ್ದುಗೊಳಿಸಿದ ಹೈಕೋರ್ಟ್‌

ಜಾಹೀರಾತಿಗೆ ಸಂಬಂಧಿಸಿದಂತೆ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ದಾಖಲಿಸಿದ್ದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯನ್ನು ಹೈಕೋರ್ಟ್ ಮಂಗಳವಾರ (ಫೆ.17) ರದ್ದುಗೊಳಿಸಿದೆ ಎಂದು ಕಾನೂನು ಸುದ್ದಿ ಸಂಸ್ಥೆ ಬಾರ್ & ಬೆಂಚ್ ವರದಿ ಮಾಡಿದೆ. ಪ್ರಕರಣ ರದ್ದುಕೋರಿ...

‘ನಾವು ಎಐ ಯುಗದಲ್ಲಿದ್ದೇವೆ..’; ಸೋನಮ್ ವಾಂಗ್‌ಚುಕ್ ವೀಡಿಯೊ ಪ್ರತಿಗಳ ಅನುವಾದದ ಬಗ್ಗೆ ಸುಪ್ರೀಂ ಅಸಮಾಧಾನ

ಲಡಾಖ್ ಸಾಮಾಜಿಕ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ವಿರುದ್ಧ ಸಲ್ಲಿಸಿದ ವೀಡಿಯೊ ಪ್ರತಿಗಳ ಅನುವಾದದ ಬಗ್ಗೆ ಸುಪ್ರೀಂ ಕೋರ್ಟ್ ಸೋಮವಾರ ಕೇಂದ್ರವನ್ನು ಪ್ರಶ್ನಿಸಿದೆ. ಕೃತಕ ಬುದ್ಧಿಮತ್ತೆ (ಎಐ) ಕಾಲದಲ್ಲಿ ಅನುವಾದ ನಿಖರವಾಗಿರಬೇಕು ಎಂದು ಹೇಳಿದೆ. ನ್ಯಾಯಮೂರ್ತಿಗಳಾದ...

ಬಜೆಟ್ ಅಧಿವೇಶನದಲ್ಲಿ ‘ರೋಹಿತ್ ಕಾಯ್ದೆ’ ಜಾರಿಗೆ ಆಗ್ರಹ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ದೌರ್ಜನ್ಯವನ್ನು ತಡೆಯುವ ಸಲುವಾಗಿ ತುರ್ತಾಗಿ 'ರೋಹಿತ್ ವೇಮುಲ ಕಾಯ್ದೆ'ಯನ್ನು ಜಾರಿಗೊಳಿಸಬೇಕು ಎಂದು 'ರೋಹಿತ್ ವೇಮುಲ ಕಾಯ್ದೆಗಾಗಿ ಜನಾಂದೋಲನ' ತಂಡ ರಾಜ್ಯ ಸರ್ಕಾರವನ್ನು ಆಗ್ರಹಿಸಿತು. ಮಂಗಳವಾರ (ಫೆ.17) ಬೆಂಗಳೂರಿನ ಪ್ರೆಸ್‌...

ಖಾಸಗಿ ಜಾಗದಲ್ಲಿ ನಮಾಝ್ ತಡೆದ ಅಧಿಕಾರಿಗಳು: ನ್ಯಾಯಾಂಗ ನಿಂದನೆ ನೋಟಿಸ್ ನೀಡಿದ ಅಲಹಾಬಾದ್ ಹೈಕೋರ್ಟ್

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮೊಹಮ್ಮದ್‌ಗಂಜ್ ಗ್ರಾಮದ ಖಾಲಿ ಮನೆಯೊಂದರಲ್ಲಿ ಮುಸ್ಲಿಂ ಸಮುದಾಯದವರು ನಮಾಝ್ ಮಾಡುವುದನ್ನು ತಡೆದ ಜಿಲ್ಲಾಧಿಕಾರಿ ಅವಿನಾಶ್ ಸಿಂಗ್ ಮತ್ತು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಅನುರಾಗ್ ಆರ್ಯ ಅವರಿಗೆ ಅಲಹಾಬಾದ್...

ರೂ. 80 ಸಾವಿರ ಕೋಟಿ ವೆಚ್ಚದ ವಿವಾದಾತ್ಮಕ ಗ್ರೇಟ್ ನಿಕೋಬಾರ್ ಯೋಜನೆಗೆ ಎನ್‌ಜಿಟಿ ಹಸಿರು ನಿಶಾನೆ

ತೀವ್ರ ವಿರೋಧಗಳ ನಡುವೆಯೇ 80 ಸಾವಿರ ಕೋಟಿ ರೂಪಾಯಿ ವೆಚ್ಚದ ವಿವಾದಾತ್ಮಕ ಗ್ರೇಟ್ ನಿಕೋಬಾರ್ ಯೋಜನೆಗೆ ರಾಷ್ಟ್ರೀಯ ಹಸಿರು ನ್ಯಾಯಾಧಿಕರಣ (ಎನ್‌ಜಿಟಿ) ಸೋಮವಾರ (ಫೆ.16) ಹಸಿರು ನಿಶಾನೆ ತೋರಿದೆ. ಆರು ಸದಸ್ಯರ ಎನ್‌ಜಿಟಿಯ ವಿಶೇಷ...