Homeಕವನಅನುವಾದಿತ ಕವನ; ನಿನ್ನ ಹಸಿವೆಯಿಂದ ಭಯಗೊಂಡಿದ್ದೇನೆ

ಅನುವಾದಿತ ಕವನ; ನಿನ್ನ ಹಸಿವೆಯಿಂದ ಭಯಗೊಂಡಿದ್ದೇನೆ

- Advertisement -
- Advertisement -

ನಾ ನಿನ್ನ ಊರಿನಿಂದ
ಮತ್ತು ನಿನ್ನ ಲೋಕದಿಂದ
ಪೂರಾ ಸೋತುಹೋಗಿದ್ದೇನೆ
ಅನಿಷ್ಟದ ನಗುವನ್ನು
ಕಿರೀಟದಂತೆ ಮುಡಿಸಿಕೊಂಡ
ನಿಮ್ಮ ಆತ್ಮದ ರೀತಿ ರಿವಾಜುಗಳು ಹೊಲಸು ನಾರುತ್ತಿವೆ
ಇನ್ನು ಸಹಿಸಲಾಗದು!

ನಿಮ್ಮ ತಕ್ಕಡಿಯಲ್ಲಿ ನಮ್ಮ ಬದುಕನ್ನಿಟ್ಟು
ಬರುಹೋಗುವ ಉಸಿರನ್ನು ನೋಡುವುದಕ್ಕೂ
ನಾಚಿಕೆಯಾಗುತ್ತದೆ.

ದೇವರು ನಿನ್ನದೇ ಕಲ್ಪನೆಯ ಕೆಟ್ಟ ಸೃಷ್ಟಿಯೆಂದು ಯಾರಿಗೆ ಗೊತ್ತಿಲ್ಲ
ಧರ್ಮವೆಂಬುದು ಸೃಷ್ಟಿಯ ಬಹುದೊಡ್ದ ಹಗರಣ
ಜಾತಿಯೆಂಬೊಂದು ಆಳ ಆಳದ ಬಾವಿ
ನೀರು ಎಲ್ಲಾ ವಿಕಾರವನ್ನು ಮುಚ್ಚಿಹಾಕಿದೆ..

ನಿಮ್ಮ ಕಲೆಯಿಂದ
ಮತ್ತು ನಿಮ್ಮ ವಿಜ್ಞಾನದಿಂದ ನಾನು
ವಿಪರೀತ ಬೇಸತ್ತು ಹೋಗಿದ್ದೇನೆ
ಇಲ್ಲಿ ರಕ್ತವನ್ನು ಉಗುಳು ಮತ್ತು
ಆಕ್ರಂದನವನು ದೇವಳದ ಭಜನೆ ನುಂಗಿಹಾಕಿದೆ
ಇಲ್ಲಿ ಸತ್ಯವನ್ನು ಸಂಸತ್ತಿನ ಟಾಯ್ಲೆಟ್ ಪೇಪರ್ ಮಾಡಿ
ನೇತುಹಾಕಲಾಗುತ್ತದೆ
ಮುಂಜಾನೆಯಿಂದ ಸಂಜೆವರೆಗೆ ಹೊಸಕಿಹೋದ ಜನರ ಕನಸುಗಳನ್ನು ಒರೆಸಲಾಗುತ್ತದೆ

ನಾನು ಶತಮಾನಗಳಿಂದ ಅನ್ನದ ಅಗುಳನ್ನೂ ಕಾಣದ
ಈ ದೇಶದ ಅನ್ನನಾಳದಿಂದ ಬಂದಿದ್ದೇನೆ
ನಿಮ್ಮ ಹಸಿವೆಯಿಂದ ನನಗೆ ಭಯವಾಗುತ್ತದೆ

ಕೆರೆ ಹಳ್ಳಗಳಿಗಾಗಿ
ನನ್ನನ್ನು ಬಿಟ್ಟುಬಿಡಿ
ಅಲ್ಲಿ ಕಪ್ಪೆ ಮೀನುಗಳು ನನಗಾಗಿ ಕಾಯುತ್ತಿರಬಹುದು
ಯಾರಾದರೂ ಜೀವದ ಗೆಳೆಯನೊಂದಿಗೆ
ಮಳೆಯನ್ನು ನನ್ನ ಅಂಗಿಯನ್ನಾಗಿಸಿ
ನನ್ನ ಕುರಿ ಆಡುಗಳು ನೆನೆಯುವ ಆ ದಿಕ್ಕಿನತ್ತ
ಈಜಲು ಹೋಗುವೆ
ಅಲ್ಲಿ ಯಾವುದಾದರೂ ಮಾವಿನ ಮರದ ಮೇಲೆ
ನನ್ನ ಎರಡೂ ಕೈಗಳು ಸಿಕ್ಕಿಕೊಂಡಿರಬೇಕು
ಮತ್ತು ಅಲ್ಲೇ ಎಲ್ಲೋ ಹತ್ತಿರದಲ್ಲಿ ಸಿಕ್ಕುಸಿಕ್ಕಾದ ನನ್ನ ಮೀನಿನ ಬಲೆ
ನನ್ನ ಬೆರಳುಗಳಿಗಾಗಿ ಕರೆಯುತ್ತಿರಬಹುದು

ಮುಕ್ತಿಬೋಧದ ಬಗ್ಗೆ ಯಾವ ಅಭಿಪ್ರಾಯವೂ ಇಲ್ಲ
ಮಾರ್ಕ್ಸ್ ನನಗೆ ಗುರುತಿಲ್ಲ
ಅಂಬೇಡ್ಕರ್ ಹೆಸರನ್ನೇ ಕೇಳಿರುವೆ ಮೊದಲಬಾರಿ
ಬಹುಶಃ ಅಜ್ಞೇಯನಾಗುವುದೆ ನಿಮ್ಮ ಸಂಸ್ಕೃತಿಯ ದೊಡ್ದ ಕೊಡುಗೆಯಿದ್ದೀತು
ಈಗ ನನ್ನನ್ನು ಹೋಗಲು ಬಿಡಿ

ಗಾಲಿಬನನ್ನು ನಾಲಿಗೆಯಲೂ ನೆನೆಯುವುದಿಲ್ಲ
ಜಯಸಿಯೇ ಯುದ್ಧದ ನಿರರ್ಥಕತೆಯನ್ನು ಸಾರಿದ ಮೊದಲ ಕವಿಯೆಂದು
ವಾದಿಸುವುದಿಲ್ಲ ನಾನು
ನನಗೆ ಹೋಗಲು ಬಿಡಿ

ನನ್ನನ್ನು ನೀವು ಪುಕ್ಕಲು ಎನ್ನಿ
ಪಲಾಯನವಾದಿ ಎನ್ನಿ
ಆದರೆ ಹೋಗಲು ಬಿಡಿ

ನಾನು ಹೋಗುವ ಅಜ್ಞಾತವಾಸದ ಅರ್ಥ
ಬಹುಶಃ ನಿಮಗೆ ಗೊತ್ತಿದ್ದೀತು ಅಥವಾ
ನಿಮಗೆಂದಿಗೂ ಗೊತ್ತಾಗದು
ತುದಿ ಮಣಿಸಿ ಬಾಗಿಸಿದ ಬಿದಿರ ಚಿಗುರು ಸಂಕಟದಲಿ
ನಡುಗಿದ್ದು
ಅದೇ ನನಗೆ ಹೇಳಿಕೊಟ್ಟಿದೆ
ಹೇಗೆ ವಿನಮ್ರತೆ ದೈನೇಸಿಯಾಗಿ ಬದಲಾಗುವ ಮೊದಲು
ಪ್ರತಿಭಟನೆಯಾಗಿ ಬದಲಾಗುವುದೇ
ಬದುಕಿನ ಸಾಕ್ಷಿಯಾಗಿದೆ..!

ಹಿಂದಿ ಮೂಲ: ಪರಾಗ್ ಪಾವನ್
ಕನ್ನಡಕ್ಕೆ: ರೇಣುಕಾ ನಿಡಗುಂದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಧ್ಯಪ್ರಾಚ್ಯ ಉದ್ವಿಗ್ನತೆ: ಎಲ್‌ಪಿಜಿ ಕೊರತೆಗೆ ಮುಂಬೈನಲ್ಲಿ ಶೇ. 20 ರಷ್ಟು ಹೋಟೆಲ್‌, ರೆಸ್ಟೋರೆಂಟ್‌ ಬಂದ್: ಬೆಂಗಳೂರು, ಚೆನ್ನೈನಲ್ಲೂ ಸಮಸ್ಯೆ

ಪಶ್ಚಿಮ ಏಷ್ಯಾ ಸಂಘರ್ಷ ಹತ್ತು ದಿನಗಳಿಗೂ ಹೆಚ್ಚು ಕಾಲ ಮುಂದುವರಿದಿರುವುದರಿಂದ, ಭಾರತದ ಹೋಟೆಲ್‌ಗಳು ಮತ್ತು ಇತರ ಉಧ್ಯಮಗಳು ಎಲ್‌ಪಿಜಿ ಪೂರೈಕೆ ಬಿಕ್ಕಟ್ಟನ್ನು ಎದುರಿಸುತ್ತಿವೆ. ಬೆಂಗಳೂರಿನ ನಂತರ, ಚೆನ್ನೈ ಮತ್ತು ಮುಂಬೈನಂತಹ ಇತರ ನಗರಗಳು ಸಹ...

‘ಕೋವಿಡ್ ಲಸಿಕೆ ಪೀಡಿತರಿಗಾಗಿ ಪರಿಹಾರ ನೀತಿ ಅಳವಡಿಸಿಕೊಳ್ಳಿ..’; ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕೋವಿಡ್ ವಿರುದ್ಧ ರೋಗನಿರೋಧಕ ಶಕ್ತಿಯಾಗಿ ಲಸಿಕೆ ನೀಡಿದ ನಂತರ ಉಂಟಾಗುವ ಪ್ರತಿಕೂಲ ಪರಿಣಾಮಗಳ ವೈಜ್ಞಾನಿಕ ಮೌಲ್ಯಮಾಪನಕ್ಕಾಗಿ ಅಸ್ತಿತ್ವದಲ್ಲಿರುವ ಕಾರ್ಯವಿಧಾನವನ್ನು ಮುಂದುವರಿಸಬೇಕೆಂದು ಸುಪ್ರೀಂ ಕೋರ್ಟ್ ಮಂಗಳವಾರ ಆದೇಶಿಸಿದೆ. ಅದೇ ಸಮಯದಲ್ಲಿ, ಕೋವಿಡ್ -19 ವ್ಯಾಕ್ಸಿನೇಷನ್ ನಂತರದ...

ಮೇಘಾಲಯ|ಜಿಲ್ಲಾ ಪರಿಷತ್ ಚುನಾವಣೆಯಲ್ಲಿ ವಿವಾದಾತ್ಮಕ ಅಧಿಸೂಚನೆ: ಪಶ್ಚಿಮ ಗಾರೋ ಬೆಟ್ಟಗಳಲ್ಲಿ ಭುಗಿಲೆದ್ದ ಹಿಂಸಾಚಾರ; ಇಬ್ಬರ ಸಾವು

ಗುವಾಹಟಿ: ಏಪ್ರಿಲ್ 10 ರಂದು ನಡೆಯಲಿರುವ ಗಾರೋ ಹಿಲ್ಸ್ ಸ್ವಾಯತ್ತ ಜಿಲ್ಲಾ ಮಂಡಳಿ (ಜಿಎಚ್‌ಎಡಿಸಿ) ಚುನಾವಣೆಯಲ್ಲಿ ಬುಡಕಟ್ಟು ಜನಾಂಗದವರಲ್ಲದವರು ಸ್ಪರ್ಧಿಸುವುದನ್ನು ನಿಷೇಧಿಸುವ ವಿವಾದಾತ್ಮಕ ಅಧಿಸೂಚನೆಯನ್ನು ವಿರೋಧಿಸಿ ಮೇಘಾಲಯದ ಪಶ್ಚಿಮ ಗಾರೋ ಹಿಲ್ಸ್ ಜಿಲ್ಲೆಯಲ್ಲಿ...

ಸಂವಿಧಾನ, ಸದನದ ಘನತೆ ಉಳಿಸಲು ಲೋಕಸಭಾ ಸ್ಪೀಕರ್ ವಿರುದ್ಧ ನಿರ್ಣಯ: ಕಾಂಗ್ರೆಸ್ ಸಂಸದ ಗೊಗೊಯ್

ಸ್ಪೀಕರ್ ಓಂ ಬಿರ್ಲಾ ಪಕ್ಷಪಾತಿ ವರ್ತನೆ ಹೊಂದಿದ್ದಾರೆ. ಹಾಗಾಗಿ, ಸಂವಿಧಾನ ಉಳಿಸಲು ವಿರೋಧ ಪಕ್ಷವು ಅವರನ್ನು ಪದಚ್ಯುತಗೊಳಿಸುವ ನಿರ್ಣಯ ತರಬೇಕಾಯಿತು ಎಂದು ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಮಂಗಳವಾರ (ಮಾ.10) ಲೋಕಸಭೆಯಲ್ಲಿ ಹೇಳಿದರು....

ನಿರಂತರ ಎಲ್‌ಪಿಜಿ ಪೂರೈಕೆ ಖಚಿತಪಡಿಸಿಕೊಳ್ಳಲು ‘ಅಗತ್ಯ ಸರಕು ಕಾಯ್ದೆ’ ಜಾರಿಗೆ ತಂದ ಕೇಂದ್ರ

ಹೋಟೆಲ್‌ ಮತ್ತು ರೆಸ್ಟೋರೆಂಟ್‌ಗಳು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆ ಕುರಿತು ದೂರು ನೀಡಿದ ನಂತರ, ದೇಶೀಯ ಅಡುಗೆ ಅನಿಲದ ನಿರಂತರ ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ಸರ್ಕಾರವು 'ಅಗತ್ಯ ಸರಕು ಕಾಯ್ದೆ'ಯನ್ನು ಜಾರಿಗೆ ತಂದಿದೆ ಎಂದು...

‘ಯುದ್ಧ ಯಾವಾಗ ಕೊನೆಗೊಳ್ಳುತ್ತದೆ ಎಂಬುದನ್ನು ಇರಾನ್ ನಿರ್ಧರಿಸುತ್ತದೆ’: ಟ್ರಂಪ್ ‘ಅಲ್ಪಾವಧಿಯ ಸಂಘರ್ಷ’ ಹೇಳಿಕೆಗೆ ಇರಾನ್ ತಿರುಗೇಟು 

ಟೆಹ್ರಾನ್: ಇರಾನ್‌ನಲ್ಲಿ ಯುದ್ಧವನ್ನು ಕೊನೆಗೊಳಿಸುವ ಬಗ್ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಟೆಹ್ರಾನ್ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದು, ಅಮೆರಿಕ ಮತ್ತು ಇಸ್ರೇಲಿ ಗುರಿಗಳ ವಿರುದ್ಧದ ಮಿಲಿಟರಿ ಕ್ರಮಗಳು ಯಾವಾಗ ನಿಂತವು ಎಂಬುದನ್ನು...

ಮಹಿಳಾ ಮೀಸಲಾತಿ ಮಸೂದೆ; ತ್ವರಿತ ಅನುಷ್ಠಾನಕ್ಕೆ ವಿಪಕ್ಷಗಳ ಅಭಿಪ್ರಾಯ ಕೇಳಿದ ಕೇಂದ್ರ ಸರ್ಕಾರ

ನವದೆಹಲಿ: ಮಹಿಳಾ ಮೀಸಲಾತಿ ಕಾನೂನಿನ ಅನುಷ್ಠಾನವನ್ನು ತ್ವರಿತಗೊಳಿಸುವ ಪ್ರಯತ್ನದಲ್ಲಿ, ಲೋಕಸಭೆ ಮತ್ತು ರಾಜ್ಯ ಶಾಸಕಾಂಗ ಸಭೆಗಳಲ್ಲಿ ಮಹಿಳೆಯರಿಗೆ ಶೇ 33 ರಷ್ಟು ಮೀಸಲಾತಿ ನೀಡುವ ಶಾಸನವನ್ನು ತಿದ್ದುಪಡಿ ಮಾಡುವ ಪ್ರಸ್ತಾಪದ ಕುರಿತು ಅಭಿಪ್ರಾಯಗಳನ್ನು...

ಕೋಲ್ಕತ್ತಾ : ಕಾಳಿಘಾಟ್ ಬಳಿಕ ದಕ್ಷಿಣೇಶ್ವರದಲ್ಲೂ ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ‘ಗೋ ಬ್ಯಾಕ್ ಘೋಷಣೆ’

ಕಾಳಿಘಾಟ್ ಬಳಿಕ ಕೋಲ್ಕತ್ತಾದ ದಕ್ಷಿಣೇಶ್ವರ ದೇವಸ್ಥಾನದಲ್ಲೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ದ 'ಗೋ ಬ್ಯಾಕ್ ಘೋಷಣೆಗಳು' ಕೇಳಿ ಬಂದಿವೆ. ಮಂಗಳವಾರ (ಮಾ.10) ಬೆಳಿಗ್ಗೆ ಜ್ಞಾನೇಶ್ ಕುಮಾರ್ ದಕ್ಷಿಣೇಶ್ವರ ಕಾಳಿ ದೇವಸ್ಥಾನಕ್ಕೆ ಭೇಟಿ...

ಉತ್ತರ ಪ್ರದೇಶ| ಹೋಳಿ ಹಬ್ಬದ ಶುಭ ಕೋರಿದ ದಲಿತ ಯುವಕನನ್ನು ಕೊಂದ ಪ್ರಬಲಜಾತಿ ಕುಟುಂಬ

ಉತ್ತರ ಪ್ರದೇಶದ ಲಕ್ನೋದ ದುಬಗ್ಗಾ ಪ್ರದೇಶದಲ್ಲಿ, ಹೋಳಿ ಹಬ್ಬದ ಸಂದರ್ಭದಲ್ಲಿ ಶುಭಕೋರಿದ 22 ವರ್ಷದ ದಲಿತ ವ್ಯಕ್ತಿಯನ್ನು ಬ್ರಾಹ್ಮಣ ಕುಟುಂಬದ ಸದಸ್ಯರು ಇರಿದು ಕೊಂದಿದ್ದಾರೆ ಎಂದು ಆರೋಪಿಸಲಾಗಿದೆ. ಈ ಘಟನೆ ಮಾರ್ಚ್ 4...

‘ಒಂದು ಲೀಟರ್ ತೈಲವನ್ನೂ ರಫ್ತು ಮಾಡುವುದಿಲ್ಲ’: ಟ್ರಂಪ್ ‘ಹಾರ್ಮುಜ್ ಜಲಸಂಧಿ ಸ್ವಾಧೀನ’ ಹೇಳಿಕೆಯ ನಂತರ ಕಠಿಣ ಎಚ್ಚರಿಕೆ ನೀಡಿದ ಇರಾನ್

ಟೆಹ್ರಾನ್: ಇಸ್ರೇಲ್-ಅಮೆರಿಕ ಮತ್ತು ಇರಾನ್ ನಡುವೆ ನಡೆಯುತ್ತಿರುವ ಸಂಘರ್ಷದ ಮಧ್ಯೆ, ತನ್ನ ವಿರುದ್ಧ ದಾಳಿಗಳು ಮುಂದುವರಿದರೆ, ಈ ಪ್ರದೇಶದಿಂದ ಒಂದು ಲೀಟರ್ ತೈಲವನ್ನು ರಫ್ತು ಮಾಡಲು ಸಹ ಇರಾನ್ ಅನುಮತಿಸುವುದಿಲ್ಲ ಎಂದು ಇರಾನ್...