Homeಕವನಅನುವಾದಿತ ಕವನ; ನಿನ್ನ ಹಸಿವೆಯಿಂದ ಭಯಗೊಂಡಿದ್ದೇನೆ

ಅನುವಾದಿತ ಕವನ; ನಿನ್ನ ಹಸಿವೆಯಿಂದ ಭಯಗೊಂಡಿದ್ದೇನೆ

- Advertisement -
- Advertisement -

ನಾ ನಿನ್ನ ಊರಿನಿಂದ
ಮತ್ತು ನಿನ್ನ ಲೋಕದಿಂದ
ಪೂರಾ ಸೋತುಹೋಗಿದ್ದೇನೆ
ಅನಿಷ್ಟದ ನಗುವನ್ನು
ಕಿರೀಟದಂತೆ ಮುಡಿಸಿಕೊಂಡ
ನಿಮ್ಮ ಆತ್ಮದ ರೀತಿ ರಿವಾಜುಗಳು ಹೊಲಸು ನಾರುತ್ತಿವೆ
ಇನ್ನು ಸಹಿಸಲಾಗದು!

ನಿಮ್ಮ ತಕ್ಕಡಿಯಲ್ಲಿ ನಮ್ಮ ಬದುಕನ್ನಿಟ್ಟು
ಬರುಹೋಗುವ ಉಸಿರನ್ನು ನೋಡುವುದಕ್ಕೂ
ನಾಚಿಕೆಯಾಗುತ್ತದೆ.

ದೇವರು ನಿನ್ನದೇ ಕಲ್ಪನೆಯ ಕೆಟ್ಟ ಸೃಷ್ಟಿಯೆಂದು ಯಾರಿಗೆ ಗೊತ್ತಿಲ್ಲ
ಧರ್ಮವೆಂಬುದು ಸೃಷ್ಟಿಯ ಬಹುದೊಡ್ದ ಹಗರಣ
ಜಾತಿಯೆಂಬೊಂದು ಆಳ ಆಳದ ಬಾವಿ
ನೀರು ಎಲ್ಲಾ ವಿಕಾರವನ್ನು ಮುಚ್ಚಿಹಾಕಿದೆ..

ನಿಮ್ಮ ಕಲೆಯಿಂದ
ಮತ್ತು ನಿಮ್ಮ ವಿಜ್ಞಾನದಿಂದ ನಾನು
ವಿಪರೀತ ಬೇಸತ್ತು ಹೋಗಿದ್ದೇನೆ
ಇಲ್ಲಿ ರಕ್ತವನ್ನು ಉಗುಳು ಮತ್ತು
ಆಕ್ರಂದನವನು ದೇವಳದ ಭಜನೆ ನುಂಗಿಹಾಕಿದೆ
ಇಲ್ಲಿ ಸತ್ಯವನ್ನು ಸಂಸತ್ತಿನ ಟಾಯ್ಲೆಟ್ ಪೇಪರ್ ಮಾಡಿ
ನೇತುಹಾಕಲಾಗುತ್ತದೆ
ಮುಂಜಾನೆಯಿಂದ ಸಂಜೆವರೆಗೆ ಹೊಸಕಿಹೋದ ಜನರ ಕನಸುಗಳನ್ನು ಒರೆಸಲಾಗುತ್ತದೆ

ನಾನು ಶತಮಾನಗಳಿಂದ ಅನ್ನದ ಅಗುಳನ್ನೂ ಕಾಣದ
ಈ ದೇಶದ ಅನ್ನನಾಳದಿಂದ ಬಂದಿದ್ದೇನೆ
ನಿಮ್ಮ ಹಸಿವೆಯಿಂದ ನನಗೆ ಭಯವಾಗುತ್ತದೆ

ಕೆರೆ ಹಳ್ಳಗಳಿಗಾಗಿ
ನನ್ನನ್ನು ಬಿಟ್ಟುಬಿಡಿ
ಅಲ್ಲಿ ಕಪ್ಪೆ ಮೀನುಗಳು ನನಗಾಗಿ ಕಾಯುತ್ತಿರಬಹುದು
ಯಾರಾದರೂ ಜೀವದ ಗೆಳೆಯನೊಂದಿಗೆ
ಮಳೆಯನ್ನು ನನ್ನ ಅಂಗಿಯನ್ನಾಗಿಸಿ
ನನ್ನ ಕುರಿ ಆಡುಗಳು ನೆನೆಯುವ ಆ ದಿಕ್ಕಿನತ್ತ
ಈಜಲು ಹೋಗುವೆ
ಅಲ್ಲಿ ಯಾವುದಾದರೂ ಮಾವಿನ ಮರದ ಮೇಲೆ
ನನ್ನ ಎರಡೂ ಕೈಗಳು ಸಿಕ್ಕಿಕೊಂಡಿರಬೇಕು
ಮತ್ತು ಅಲ್ಲೇ ಎಲ್ಲೋ ಹತ್ತಿರದಲ್ಲಿ ಸಿಕ್ಕುಸಿಕ್ಕಾದ ನನ್ನ ಮೀನಿನ ಬಲೆ
ನನ್ನ ಬೆರಳುಗಳಿಗಾಗಿ ಕರೆಯುತ್ತಿರಬಹುದು

ಮುಕ್ತಿಬೋಧದ ಬಗ್ಗೆ ಯಾವ ಅಭಿಪ್ರಾಯವೂ ಇಲ್ಲ
ಮಾರ್ಕ್ಸ್ ನನಗೆ ಗುರುತಿಲ್ಲ
ಅಂಬೇಡ್ಕರ್ ಹೆಸರನ್ನೇ ಕೇಳಿರುವೆ ಮೊದಲಬಾರಿ
ಬಹುಶಃ ಅಜ್ಞೇಯನಾಗುವುದೆ ನಿಮ್ಮ ಸಂಸ್ಕೃತಿಯ ದೊಡ್ದ ಕೊಡುಗೆಯಿದ್ದೀತು
ಈಗ ನನ್ನನ್ನು ಹೋಗಲು ಬಿಡಿ

ಗಾಲಿಬನನ್ನು ನಾಲಿಗೆಯಲೂ ನೆನೆಯುವುದಿಲ್ಲ
ಜಯಸಿಯೇ ಯುದ್ಧದ ನಿರರ್ಥಕತೆಯನ್ನು ಸಾರಿದ ಮೊದಲ ಕವಿಯೆಂದು
ವಾದಿಸುವುದಿಲ್ಲ ನಾನು
ನನಗೆ ಹೋಗಲು ಬಿಡಿ

ನನ್ನನ್ನು ನೀವು ಪುಕ್ಕಲು ಎನ್ನಿ
ಪಲಾಯನವಾದಿ ಎನ್ನಿ
ಆದರೆ ಹೋಗಲು ಬಿಡಿ

ನಾನು ಹೋಗುವ ಅಜ್ಞಾತವಾಸದ ಅರ್ಥ
ಬಹುಶಃ ನಿಮಗೆ ಗೊತ್ತಿದ್ದೀತು ಅಥವಾ
ನಿಮಗೆಂದಿಗೂ ಗೊತ್ತಾಗದು
ತುದಿ ಮಣಿಸಿ ಬಾಗಿಸಿದ ಬಿದಿರ ಚಿಗುರು ಸಂಕಟದಲಿ
ನಡುಗಿದ್ದು
ಅದೇ ನನಗೆ ಹೇಳಿಕೊಟ್ಟಿದೆ
ಹೇಗೆ ವಿನಮ್ರತೆ ದೈನೇಸಿಯಾಗಿ ಬದಲಾಗುವ ಮೊದಲು
ಪ್ರತಿಭಟನೆಯಾಗಿ ಬದಲಾಗುವುದೇ
ಬದುಕಿನ ಸಾಕ್ಷಿಯಾಗಿದೆ..!

ಹಿಂದಿ ಮೂಲ: ಪರಾಗ್ ಪಾವನ್
ಕನ್ನಡಕ್ಕೆ: ರೇಣುಕಾ ನಿಡಗುಂದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...