Homeಕವನಅನುವಾದಿತ ಕವನ; ನಿನ್ನ ಹಸಿವೆಯಿಂದ ಭಯಗೊಂಡಿದ್ದೇನೆ

ಅನುವಾದಿತ ಕವನ; ನಿನ್ನ ಹಸಿವೆಯಿಂದ ಭಯಗೊಂಡಿದ್ದೇನೆ

- Advertisement -
- Advertisement -

ನಾ ನಿನ್ನ ಊರಿನಿಂದ
ಮತ್ತು ನಿನ್ನ ಲೋಕದಿಂದ
ಪೂರಾ ಸೋತುಹೋಗಿದ್ದೇನೆ
ಅನಿಷ್ಟದ ನಗುವನ್ನು
ಕಿರೀಟದಂತೆ ಮುಡಿಸಿಕೊಂಡ
ನಿಮ್ಮ ಆತ್ಮದ ರೀತಿ ರಿವಾಜುಗಳು ಹೊಲಸು ನಾರುತ್ತಿವೆ
ಇನ್ನು ಸಹಿಸಲಾಗದು!

ನಿಮ್ಮ ತಕ್ಕಡಿಯಲ್ಲಿ ನಮ್ಮ ಬದುಕನ್ನಿಟ್ಟು
ಬರುಹೋಗುವ ಉಸಿರನ್ನು ನೋಡುವುದಕ್ಕೂ
ನಾಚಿಕೆಯಾಗುತ್ತದೆ.

ದೇವರು ನಿನ್ನದೇ ಕಲ್ಪನೆಯ ಕೆಟ್ಟ ಸೃಷ್ಟಿಯೆಂದು ಯಾರಿಗೆ ಗೊತ್ತಿಲ್ಲ
ಧರ್ಮವೆಂಬುದು ಸೃಷ್ಟಿಯ ಬಹುದೊಡ್ದ ಹಗರಣ
ಜಾತಿಯೆಂಬೊಂದು ಆಳ ಆಳದ ಬಾವಿ
ನೀರು ಎಲ್ಲಾ ವಿಕಾರವನ್ನು ಮುಚ್ಚಿಹಾಕಿದೆ..

ನಿಮ್ಮ ಕಲೆಯಿಂದ
ಮತ್ತು ನಿಮ್ಮ ವಿಜ್ಞಾನದಿಂದ ನಾನು
ವಿಪರೀತ ಬೇಸತ್ತು ಹೋಗಿದ್ದೇನೆ
ಇಲ್ಲಿ ರಕ್ತವನ್ನು ಉಗುಳು ಮತ್ತು
ಆಕ್ರಂದನವನು ದೇವಳದ ಭಜನೆ ನುಂಗಿಹಾಕಿದೆ
ಇಲ್ಲಿ ಸತ್ಯವನ್ನು ಸಂಸತ್ತಿನ ಟಾಯ್ಲೆಟ್ ಪೇಪರ್ ಮಾಡಿ
ನೇತುಹಾಕಲಾಗುತ್ತದೆ
ಮುಂಜಾನೆಯಿಂದ ಸಂಜೆವರೆಗೆ ಹೊಸಕಿಹೋದ ಜನರ ಕನಸುಗಳನ್ನು ಒರೆಸಲಾಗುತ್ತದೆ

ನಾನು ಶತಮಾನಗಳಿಂದ ಅನ್ನದ ಅಗುಳನ್ನೂ ಕಾಣದ
ಈ ದೇಶದ ಅನ್ನನಾಳದಿಂದ ಬಂದಿದ್ದೇನೆ
ನಿಮ್ಮ ಹಸಿವೆಯಿಂದ ನನಗೆ ಭಯವಾಗುತ್ತದೆ

ಕೆರೆ ಹಳ್ಳಗಳಿಗಾಗಿ
ನನ್ನನ್ನು ಬಿಟ್ಟುಬಿಡಿ
ಅಲ್ಲಿ ಕಪ್ಪೆ ಮೀನುಗಳು ನನಗಾಗಿ ಕಾಯುತ್ತಿರಬಹುದು
ಯಾರಾದರೂ ಜೀವದ ಗೆಳೆಯನೊಂದಿಗೆ
ಮಳೆಯನ್ನು ನನ್ನ ಅಂಗಿಯನ್ನಾಗಿಸಿ
ನನ್ನ ಕುರಿ ಆಡುಗಳು ನೆನೆಯುವ ಆ ದಿಕ್ಕಿನತ್ತ
ಈಜಲು ಹೋಗುವೆ
ಅಲ್ಲಿ ಯಾವುದಾದರೂ ಮಾವಿನ ಮರದ ಮೇಲೆ
ನನ್ನ ಎರಡೂ ಕೈಗಳು ಸಿಕ್ಕಿಕೊಂಡಿರಬೇಕು
ಮತ್ತು ಅಲ್ಲೇ ಎಲ್ಲೋ ಹತ್ತಿರದಲ್ಲಿ ಸಿಕ್ಕುಸಿಕ್ಕಾದ ನನ್ನ ಮೀನಿನ ಬಲೆ
ನನ್ನ ಬೆರಳುಗಳಿಗಾಗಿ ಕರೆಯುತ್ತಿರಬಹುದು

ಮುಕ್ತಿಬೋಧದ ಬಗ್ಗೆ ಯಾವ ಅಭಿಪ್ರಾಯವೂ ಇಲ್ಲ
ಮಾರ್ಕ್ಸ್ ನನಗೆ ಗುರುತಿಲ್ಲ
ಅಂಬೇಡ್ಕರ್ ಹೆಸರನ್ನೇ ಕೇಳಿರುವೆ ಮೊದಲಬಾರಿ
ಬಹುಶಃ ಅಜ್ಞೇಯನಾಗುವುದೆ ನಿಮ್ಮ ಸಂಸ್ಕೃತಿಯ ದೊಡ್ದ ಕೊಡುಗೆಯಿದ್ದೀತು
ಈಗ ನನ್ನನ್ನು ಹೋಗಲು ಬಿಡಿ

ಗಾಲಿಬನನ್ನು ನಾಲಿಗೆಯಲೂ ನೆನೆಯುವುದಿಲ್ಲ
ಜಯಸಿಯೇ ಯುದ್ಧದ ನಿರರ್ಥಕತೆಯನ್ನು ಸಾರಿದ ಮೊದಲ ಕವಿಯೆಂದು
ವಾದಿಸುವುದಿಲ್ಲ ನಾನು
ನನಗೆ ಹೋಗಲು ಬಿಡಿ

ನನ್ನನ್ನು ನೀವು ಪುಕ್ಕಲು ಎನ್ನಿ
ಪಲಾಯನವಾದಿ ಎನ್ನಿ
ಆದರೆ ಹೋಗಲು ಬಿಡಿ

ನಾನು ಹೋಗುವ ಅಜ್ಞಾತವಾಸದ ಅರ್ಥ
ಬಹುಶಃ ನಿಮಗೆ ಗೊತ್ತಿದ್ದೀತು ಅಥವಾ
ನಿಮಗೆಂದಿಗೂ ಗೊತ್ತಾಗದು
ತುದಿ ಮಣಿಸಿ ಬಾಗಿಸಿದ ಬಿದಿರ ಚಿಗುರು ಸಂಕಟದಲಿ
ನಡುಗಿದ್ದು
ಅದೇ ನನಗೆ ಹೇಳಿಕೊಟ್ಟಿದೆ
ಹೇಗೆ ವಿನಮ್ರತೆ ದೈನೇಸಿಯಾಗಿ ಬದಲಾಗುವ ಮೊದಲು
ಪ್ರತಿಭಟನೆಯಾಗಿ ಬದಲಾಗುವುದೇ
ಬದುಕಿನ ಸಾಕ್ಷಿಯಾಗಿದೆ..!

ಹಿಂದಿ ಮೂಲ: ಪರಾಗ್ ಪಾವನ್
ಕನ್ನಡಕ್ಕೆ: ರೇಣುಕಾ ನಿಡಗುಂದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...