Homeಕವನಅನುವಾದಿತ ಕವನ; ನಿನ್ನ ಹಸಿವೆಯಿಂದ ಭಯಗೊಂಡಿದ್ದೇನೆ

ಅನುವಾದಿತ ಕವನ; ನಿನ್ನ ಹಸಿವೆಯಿಂದ ಭಯಗೊಂಡಿದ್ದೇನೆ

- Advertisement -
- Advertisement -

ನಾ ನಿನ್ನ ಊರಿನಿಂದ
ಮತ್ತು ನಿನ್ನ ಲೋಕದಿಂದ
ಪೂರಾ ಸೋತುಹೋಗಿದ್ದೇನೆ
ಅನಿಷ್ಟದ ನಗುವನ್ನು
ಕಿರೀಟದಂತೆ ಮುಡಿಸಿಕೊಂಡ
ನಿಮ್ಮ ಆತ್ಮದ ರೀತಿ ರಿವಾಜುಗಳು ಹೊಲಸು ನಾರುತ್ತಿವೆ
ಇನ್ನು ಸಹಿಸಲಾಗದು!

ನಿಮ್ಮ ತಕ್ಕಡಿಯಲ್ಲಿ ನಮ್ಮ ಬದುಕನ್ನಿಟ್ಟು
ಬರುಹೋಗುವ ಉಸಿರನ್ನು ನೋಡುವುದಕ್ಕೂ
ನಾಚಿಕೆಯಾಗುತ್ತದೆ.

ದೇವರು ನಿನ್ನದೇ ಕಲ್ಪನೆಯ ಕೆಟ್ಟ ಸೃಷ್ಟಿಯೆಂದು ಯಾರಿಗೆ ಗೊತ್ತಿಲ್ಲ
ಧರ್ಮವೆಂಬುದು ಸೃಷ್ಟಿಯ ಬಹುದೊಡ್ದ ಹಗರಣ
ಜಾತಿಯೆಂಬೊಂದು ಆಳ ಆಳದ ಬಾವಿ
ನೀರು ಎಲ್ಲಾ ವಿಕಾರವನ್ನು ಮುಚ್ಚಿಹಾಕಿದೆ..

ನಿಮ್ಮ ಕಲೆಯಿಂದ
ಮತ್ತು ನಿಮ್ಮ ವಿಜ್ಞಾನದಿಂದ ನಾನು
ವಿಪರೀತ ಬೇಸತ್ತು ಹೋಗಿದ್ದೇನೆ
ಇಲ್ಲಿ ರಕ್ತವನ್ನು ಉಗುಳು ಮತ್ತು
ಆಕ್ರಂದನವನು ದೇವಳದ ಭಜನೆ ನುಂಗಿಹಾಕಿದೆ
ಇಲ್ಲಿ ಸತ್ಯವನ್ನು ಸಂಸತ್ತಿನ ಟಾಯ್ಲೆಟ್ ಪೇಪರ್ ಮಾಡಿ
ನೇತುಹಾಕಲಾಗುತ್ತದೆ
ಮುಂಜಾನೆಯಿಂದ ಸಂಜೆವರೆಗೆ ಹೊಸಕಿಹೋದ ಜನರ ಕನಸುಗಳನ್ನು ಒರೆಸಲಾಗುತ್ತದೆ

ನಾನು ಶತಮಾನಗಳಿಂದ ಅನ್ನದ ಅಗುಳನ್ನೂ ಕಾಣದ
ಈ ದೇಶದ ಅನ್ನನಾಳದಿಂದ ಬಂದಿದ್ದೇನೆ
ನಿಮ್ಮ ಹಸಿವೆಯಿಂದ ನನಗೆ ಭಯವಾಗುತ್ತದೆ

ಕೆರೆ ಹಳ್ಳಗಳಿಗಾಗಿ
ನನ್ನನ್ನು ಬಿಟ್ಟುಬಿಡಿ
ಅಲ್ಲಿ ಕಪ್ಪೆ ಮೀನುಗಳು ನನಗಾಗಿ ಕಾಯುತ್ತಿರಬಹುದು
ಯಾರಾದರೂ ಜೀವದ ಗೆಳೆಯನೊಂದಿಗೆ
ಮಳೆಯನ್ನು ನನ್ನ ಅಂಗಿಯನ್ನಾಗಿಸಿ
ನನ್ನ ಕುರಿ ಆಡುಗಳು ನೆನೆಯುವ ಆ ದಿಕ್ಕಿನತ್ತ
ಈಜಲು ಹೋಗುವೆ
ಅಲ್ಲಿ ಯಾವುದಾದರೂ ಮಾವಿನ ಮರದ ಮೇಲೆ
ನನ್ನ ಎರಡೂ ಕೈಗಳು ಸಿಕ್ಕಿಕೊಂಡಿರಬೇಕು
ಮತ್ತು ಅಲ್ಲೇ ಎಲ್ಲೋ ಹತ್ತಿರದಲ್ಲಿ ಸಿಕ್ಕುಸಿಕ್ಕಾದ ನನ್ನ ಮೀನಿನ ಬಲೆ
ನನ್ನ ಬೆರಳುಗಳಿಗಾಗಿ ಕರೆಯುತ್ತಿರಬಹುದು

ಮುಕ್ತಿಬೋಧದ ಬಗ್ಗೆ ಯಾವ ಅಭಿಪ್ರಾಯವೂ ಇಲ್ಲ
ಮಾರ್ಕ್ಸ್ ನನಗೆ ಗುರುತಿಲ್ಲ
ಅಂಬೇಡ್ಕರ್ ಹೆಸರನ್ನೇ ಕೇಳಿರುವೆ ಮೊದಲಬಾರಿ
ಬಹುಶಃ ಅಜ್ಞೇಯನಾಗುವುದೆ ನಿಮ್ಮ ಸಂಸ್ಕೃತಿಯ ದೊಡ್ದ ಕೊಡುಗೆಯಿದ್ದೀತು
ಈಗ ನನ್ನನ್ನು ಹೋಗಲು ಬಿಡಿ

ಗಾಲಿಬನನ್ನು ನಾಲಿಗೆಯಲೂ ನೆನೆಯುವುದಿಲ್ಲ
ಜಯಸಿಯೇ ಯುದ್ಧದ ನಿರರ್ಥಕತೆಯನ್ನು ಸಾರಿದ ಮೊದಲ ಕವಿಯೆಂದು
ವಾದಿಸುವುದಿಲ್ಲ ನಾನು
ನನಗೆ ಹೋಗಲು ಬಿಡಿ

ನನ್ನನ್ನು ನೀವು ಪುಕ್ಕಲು ಎನ್ನಿ
ಪಲಾಯನವಾದಿ ಎನ್ನಿ
ಆದರೆ ಹೋಗಲು ಬಿಡಿ

ನಾನು ಹೋಗುವ ಅಜ್ಞಾತವಾಸದ ಅರ್ಥ
ಬಹುಶಃ ನಿಮಗೆ ಗೊತ್ತಿದ್ದೀತು ಅಥವಾ
ನಿಮಗೆಂದಿಗೂ ಗೊತ್ತಾಗದು
ತುದಿ ಮಣಿಸಿ ಬಾಗಿಸಿದ ಬಿದಿರ ಚಿಗುರು ಸಂಕಟದಲಿ
ನಡುಗಿದ್ದು
ಅದೇ ನನಗೆ ಹೇಳಿಕೊಟ್ಟಿದೆ
ಹೇಗೆ ವಿನಮ್ರತೆ ದೈನೇಸಿಯಾಗಿ ಬದಲಾಗುವ ಮೊದಲು
ಪ್ರತಿಭಟನೆಯಾಗಿ ಬದಲಾಗುವುದೇ
ಬದುಕಿನ ಸಾಕ್ಷಿಯಾಗಿದೆ..!

ಹಿಂದಿ ಮೂಲ: ಪರಾಗ್ ಪಾವನ್
ಕನ್ನಡಕ್ಕೆ: ರೇಣುಕಾ ನಿಡಗುಂದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...

ಕ್ಯಾಂಪಸ್ ಜಾತಿ ತಾರತಮ್ಯ ವಿರುದ್ಧದ ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ರಾಜ್ಯ ಸಚಿವ ಸಂಪುಟ ಗುರುವಾರ (ಏ.16) ರಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ'ಗೆ ಅನುಮೋದನೆ ನೀಡಿತು. ಜೊತೆಗೆ, ಪ್ರಮುಖ ಮೂಲಸೌಕರ್ಯ ಮತ್ತು...

ಮಧ್ಯಪ್ರದೇಶ| ವಂದೇ ಮಾತರಂ ಹಾಡಲು ನಿರಾಕರಣೆ; ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್

ಏಪ್ರಿಲ್ 8 ರಂದು ಇಂದೋರ್ ಮುನ್ಸಿಪಲ್ ಕಾರ್ಪೊರೇಷನ್‌ನ ಬಜೆಟ್ ಅಧಿವೇಶನದಲ್ಲಿ ಧಾರ್ಮಿಕ ಮತ್ತು ಸಾಂವಿಧಾನಿಕ ಕಾರಣಗಳನ್ನು ಉಲ್ಲೇಖಿಸಿ ವಂದೇ ಮಾತರಂ ಹಾಡಲು ನಿರಾಕರಿಸಿದ್ದಕ್ಕಾಗಿ ಮಧ್ಯಪ್ರದೇಶ ಪೊಲೀಸರು ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್...

ನ್ಯಾಯಾಂಗ ಸೇವೆಗಳು, ಸರ್ಕಾರಿ ಸಮಿತಿಗಳಲ್ಲಿ ಶೇ. 50 ಮಹಿಳಾ ಪ್ರಾತಿನಿಧ್ಯ ಕೋರಿ ಪಿಐಎಲ್ : ವಜಾಗೊಳಿಸಿದ ಸುಪ್ರೀಂ ಕೋರ್ಟ್

ಸರ್ಕಾರಿ ಸಮಿತಿಗಳು ಮತ್ತು ನ್ಯಾಯಾಂಗ ಸೇವೆಯ ಖಾಲಿ ಇರುವ ಸ್ಥಾನಗಳಲ್ಲಿ ಮಹಿಳೆಯರಿಗೆ ಶೇ. 50ರಷ್ಟು ಪ್ರಾತಿನಿಧ್ಯ ನೀಡಬೇಕೆಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆಗೆ ಸ್ವೀಕರಿಸಲು ಸುಪ್ರೀಂ ಕೋರ್ಟ್ ಗುರುವಾರ...

ರಷ್ಯಾ ತೈಲ ಖರೀದಿಸಲು ಭಾರತಕ್ಕೆ ನೀಡಿದ್ದ ಕಾಲಾವಕಾಶ ವಿಸ್ತರಿಸುವುದಿಲ್ಲ: ಅಮೆರಿಕ

ಇರಾನ್ ಮತ್ತು ರಷ್ಯಾದಿಂದ ತೈಲವನ್ನು ಖರೀದಿಸಲು ಭಾರತ ಸೇರಿದಂತೆ ವಿವಿಧ ದೇಶಗಳಿಗೆ ಈವರೆಗೆ ನೀಡಲಾಗಿದ್ದ ನಿರ್ಬಂಧ ಸಡಿಲಿಕೆಯನ್ನು ಇನ್ನು ಮುಂದೆ ಮುಂದುವರಿಸುವುದಿಲ್ಲ ಎಂದು ಅಮೆರಿಕದ ಖಜಾನೆ ಕಾರ್ಯದರ್ಶಿ ಸ್ಕಾಟ್ ಬೆಸೆಂಟ್ ಬುಧವಾರ (ಏ.15)...