Homeಕಥೆಸಣ್‌ಸಣ್ ಕಥೆ: ತೆರೇಸಾ ಎಂದು ಕೂಗಿದ ಮನುಷ್ಯ

ಸಣ್‌ಸಣ್ ಕಥೆ: ತೆರೇಸಾ ಎಂದು ಕೂಗಿದ ಮನುಷ್ಯ

- Advertisement -
- Advertisement -

ನಾನು ಪಾದಚಾರಿ ರಸ್ತೆಯಿಂದ ಹೊರಬಿದ್ದು, ಮೇಲೆ ನೋಡುತ್ತಾ ಕೆಲ ಹೆಜ್ಜೆ ಹಿಂದೆ ಬಂದು, ರಸ್ತೆಯ ನಟ್ಟನಡುವೆ ನಿಂತು, ಎರಡೂ ಕೈಗಳನ್ನ ಬಾಯಿಗೆ ಲೌಡ್ ಸ್ಪೀಕರ್ ರೀತಿಯಲ್ಲಿ ಹಿಡಿದುಕೊಂಡು ಬಿಲ್ಡಿಂಗ್‌ನ ಮೇಲ್ಮಹಡಿಗಳತ್ತ ನೋಡುತ್ತ ಜೋರಾಗಿ ಕೂಗಿಕೊಂಡೆ: “ತೆರೇಸಾ”.

ನನ್ನ ನೆರಳು ಚಂದ್ರನಿಗೆ ಹೆದರಿಕೊಂಡಂತೆ, ನನ್ನ ಕಾಲುಗಳ ನಡುವೆ ಬಂದು ಸೇರಿಕೊಂಡಿತು.

ಯಾರೋ ಒಬ್ಬ ಹತ್ತಿರ ಬಂದ, ನಾನು ಮತ್ತೊಮ್ಮೆ ಕೂಗಿಕೊಂಡೆ: “ತೆರೇಸಾ”. ಆ ಮನುಷ್ಯ ನನ್ನ ಹತ್ತಿರ ಬಂದು ಹೇಳಿದ: “ನೀನು ಜೋರಾಗಿ ಕೂಗದಿದ್ದರೆ ಅವಳಿಗೆ ಕೇಳಿಸುವುದಿಲ್ಲ. ಇಬ್ಬರೂ ಸೇರಿ ಪ್ರಯತ್ನ ಮಾಡುವ. ಮೂರು ಎಣಿಸುತ್ತೇನೆ, ಮೂರು ಮುಗಿಯುತ್ತಿದ್ದ ಹಾಗೆ ಇಬ್ಬರೂ ಸೇರಿ ಕೂಗುವ”. ಆ ಮನುಷ್ಯ ಮೂರು ಎಣಿಸಲು ಶುರು ಮಾಡಿದ: “ಒಂದು.. ಎರಡು.. ಮೂರು..”. ಇಬ್ಬರೂ ಜೋರಾಗಿ ಕೂಗಿದೆವು, “ತೆ..ರೇ..ಸಾ..”

ಆ ದಾರಿಯಲ್ಲೇ ಹಾದು ಹೋಗುತ್ತಿದ್ದ, ಬಹುಶಃ ಥಿಯೇಟರ್ ಇಂದ ಅಥವಾ ಕಾಫಿ ಶಾಪ್ ಇಂದ ವಾಪಸ್ಸಾಗುತ್ತಿದ್ದ ಸಣ್ಣ ಗೆಳೆಯರ ಗುಂಪೊಂದು ನಾವು ಕೂಗುವುದನ್ನ ಗಮನಿಸಿ, ನನ್ನ ಹತ್ತಿರ ಬಂದು, “ನಾವೂ ನಿಮ್ಮ ಜೊತೆ ಕೂಗುತ್ತೇವೆ” ಎಂದು ರಸ್ತೆಯ ನಡುವೆ ನಮ್ಮನ್ನು ಸೇರಿಕೊಂಡರು. ಆ ಗುಂಪಿನಲ್ಲಿ ಒಬ್ಬ ಮೂರು ಎಣಿಸಲು ಶುರು ಮಾಡಿದ, ಒಂದು.. ಎರಡು.. ಮೂರು, ನಾವೆಲ್ಲ ಸೇರಿ ಜೋರಾಗಿ ಕೂಗಿದೆವು, “ತೆ.. ರೇ.. ಸಾ..!”

ಇನ್ನೂ ಯಾರೋ ಒಬ್ಬರು ಬಂದು ನಮ್ಮನ್ನು ಸೇರಿಕೊಂಡರು; ಹತ್ತು ಹದಿನೈದು ನಿಮಿಷಗಳಲ್ಲಿ ಅಲ್ಲಿ ನಾವು ಒಂದು ಇಪ್ಪತ್ತು ಜನ ಸೇರಿಕೊಂಡಿದ್ದೆವು. ಆಗಾಗ ಇನ್ನೂ ಕೆಲವು ಹೊಸಬರು ನಮ್ಮನ್ನು ಸೇರುತ್ತಲೇ ಇದ್ದರು.

ನಾವೆಲ್ಲರೂ ಸೇರಿ ಒಂದೇ ಬಾರಿ, ಒಂದೇ ರೀತಿಯಲ್ಲಿ ಕೂಗುವುದು ಅಷ್ಟು ಸುಲಭವಾಗಿರಲಿಲ್ಲ. ಯಾರೋ ಒಬ್ಬರು ಮೂರು ಎಣಿಸುವುದಕ್ಕಿಂತ ಮುಂಚೆಯೇ ಕೂಗುತ್ತಿದ್ದರೆ, ಮತ್ತಿನ್ನೊಬ್ಬರು ನಾವೂ ಕೂಗಿ ಆದ ಮೇಲೆ ಕೂಗುತ್ತಿದ್ದರು, ಆದರೆ ಕೊನೆಕೊನೆಗೆ ಎಲ್ಲರೂ ಸೇರಿ ತಕ್ಕಮಟ್ಟಿನ ಜೋರಾದ ಒಂದೇ ದನಿಯ ಕೂಗು ಹಾಕುವುದರಲ್ಲಿ ಸಫಲರಾದೆವು. ’ತೆ’ ಯನ್ನ ಸಣ್ಣದಾಗಿ ಮತ್ತು ಬಹಳ ಹೊತ್ತಿನವರೆಗೆ ಕೂಗುವುದೆಂದೂ, ’ರೆ’ ಯನ್ನ ಜೋರಾಗಿ ಮತ್ತು ಬಹಳ ಹೊತ್ತಿನವರೆಗೆ ಕೂಗುವುದೆಂದೂ ಮತ್ತು ’ಸಾ’ನ್ನ ಮೆಲ್ಲಗೆ ಬೇಗ ಕೂಗಿ ಮುಗಿಸುವುದೆಂದೂ ನಮ್ಮ ನಡುವೆ ಒಪ್ಪಂದವಾಯಿತು. ಈ ಥರ ಕೂಗುವುದು ತುಂಬ ಮಜವಾಗಿಯೂ, ಪರಿಣಾಮಕಾರಿಯೂ ಆಗಿತ್ತು. ಯಾರಾದರೂ ತಪ್ಪು ಮಾಡಿದಾಗ ಆಗಾಗ ಸಣ್ಣಪುಟ್ಟ ತಕರಾರುಗಳು ಹುಟ್ಟಿಕೊಳ್ಳುತ್ತಿದ್ದವು.

ನಮ್ಮ ಕೂಗು ಈಗ ಸರಿಯಾಗಿ ಮೂಡಿಬರುತ್ತಿತ್ತು. ಆಗಲೇ ಒಬ್ಬ-ಅವನ ದನಿಯನ್ನಷ್ಟೇ ಕೇಳಿದರೆ ಇವನದು ವಿಚಿತ್ರ ಮುಖ ಆಗಿರಬಹುದು ಅನಿಸುವಂಥವ-ಪ್ರಶ್ನೆ ಮಾಡಿದ: “ಅವಳು ಮನೆಯಲ್ಲಿರುವುದು ನಿನಗೆ ಖಾತ್ರೀನಾ?”

“ಇಲ್ಲ ನಾನು ಉತ್ತರಿಸಿದೆ”.

“ಇದು ಕಷ್ಟ, ಕೀ ಏನಾದರೂ ಮರೆತಿದ್ದೀಯಾ?” ಇನ್ನೊಬ್ಬ ಕೇಳಿದ.

“ಇಲ್ಲ ಇಲ್ಲ ಕೀ ನನ್ನ ಹತ್ತಿರವೇ ಇದೆ”

ಉತ್ತರಿಸಿದೆ.

“ಮೇಲೆ ಹೋಗಿ ಯಾಕೆ ಚೆಕ್ ಮಾಡಬಾರದು ನೀನು?” ಮತ್ತೊಬ್ಬ ಸಲಹೆ ನೀಡಿದ.

“ನಾನು ಇಲ್ಲಿರುವುದಿಲ್ಲ, ನಾನು ಇರೋದು ಊರಿನ ಇನ್ನೊಂದು ಬದಿಯಲ್ಲಿ ಸಮಾಧಾನವಾಗಿ ಹೇಳಿದೆ”.

“ನನ್ನ ಕುತೂಹಲಕ್ಕೆ ಕ್ಷಮೆ ಇರಲಿ, ಹಾಗಾದರೆ ಇಲ್ಲಿ ಇರೋದು ಯಾರು?” ವಿಚಿತ್ರ ದನಿಯ ಮನುಷ್ಯ ಮೆಲುದನಿಯಲ್ಲಿ ಪ್ರಶ್ನೆ ಮಾಡಿದ.

“ನಿಜವಾಗಿಯೂ ನನಗೆ ಗೊತ್ತಿಲ್ಲ ನಾನು ಉತ್ತರಿಸಿದೆ”.

ನನ್ನ ಉತ್ತರ ಕೇಳಿ ಸುತ್ತ ಇದ್ದ ಜನ ಬೇಸರ ಮಾಡಿಕೊಂಡರು.

“ಹಾಗಾದರೆ ನೀನು ಇಲ್ಲಿ ನಿಂತು ತೆರೇಸಾ ಅಂತ ಕೂಗುತ್ತಿರುವುದು ಯಾರನ್ನ?” ಕೀರಲು ದನಿಯ ವ್ಯಕ್ತಿಯೊಬ್ಬ ಸ್ವಲ್ಪ ಗಡುಸಾಗಿಯೇ ಪ್ರಶ್ನಿಸಿದ.

“ನನ್ನ ಪ್ರಕಾರ, ನಾವು ಬೇರೆ ಯಾವ ಹೆಸರನ್ನಾದರೂ ಕೂಗಬಹುದು ಅಥವಾ ಬೇರೆ ಯಾವ ಜಾಗದಲ್ಲೂ ಕೂಗಬಹುದು, ಅದೇನು ಅಂಥ ದೊಡ್ಡ ವಿಷಯ ಅಲ್ಲ” ನಾನೂ ಸ್ವಲ್ಪ ಗಡುಸಾಗಿಯೇ ಉತ್ತರಿಸಿದೆ.

ನನ್ನ ಉತ್ತರದಿಂದ ಸುತ್ತಲಿನ ಜನಕ್ಕೆ ಸಿಟ್ಟು ಬಂತು.

“ನೀನು ನಮ್ಮನ್ನ ಯಾವುದರಲ್ಲಾದರೂ ಸಿಕ್ಕಿಸಿ ಹಾಕಿಸುತ್ತಿಲ್ಲ ತಾನೇ?” ಕೀರಲು ದನಿಯ ಮನುಷ್ಯ ಮತ್ತೆ ಪ್ರಶ್ನೆ ಮಾಡಿದ.

“ಏನು ಹಾಗಂದರೆ?” ನಾನೂ ಸ್ವಲ್ಪ ಸಿಟ್ಟಾದೆ, ನನ್ನ ಒಳ್ಳೆಯತನಕ್ಕಾಗಿ ಸಾಕ್ಷಿ ಹೇಳುವಂತೆ ಸುತ್ತಲಿನ ಜನರನ್ನೊಮ್ಮೆ ತಿರುಗಿ ನೋಡಿದೆ. ಎಲ್ಲ ಸುಮ್ಮನೇ ನಿಂತಿದ್ದರು, ನನ್ನ ಸೂಚನೆಯನ್ನ ಗಮನಿಸದವರಂತೆ.

ಎಲ್ಲರ ಮುಖದಲ್ಲೂ ಮುಜುಗರ ಎದ್ದು ಕಾಣುತ್ತಿತ್ತು.

“ಇಲ್ಲಿಂದ ಹೊರಡುವ ಮುನ್ನ ಯಾಕೆ ನಾವು ಒಮ್ಮೆ ಕೊನೆಯ ಬಾರಿ ಪ್ರಯತ್ನ ಮಾಡಬಾರದು?” ಮೃದು ಸ್ವಭಾವದವನಂತೆ ಕಾಣಿಸುತ್ತಿದ್ದ ವ್ಯಕ್ತಿಯೊಬ್ಬ ಮಾತನಾಡಿದ. ಅವನ ಮಾತು ಒಪ್ಪಿಕೊಂಡವರಂತೆ ಒಂದು.. ಎರಡು.. ಮೂರು ಎಣಿಸುತ್ತ ಎಲ್ಲರೂ ಜೋರಾಗಿ ಕೂಗಿದೆವು, ತೆ.. ರೇ.. ಸಾ.. ಆದರೆ ಯಾಕೋ ಈ ಕೂಗು ಅಷ್ಟು ಸರಿಯಾಗಿ ಮೂಡಿ ಬರಲಿಲ್ಲ. ಆಮೇಲೆ ಎಲ್ಲರೂ ತಮ್ಮತಮ್ಮ ದಾರಿ ಹಿಡಿದು ಅಲ್ಲಿಂದ ಹೊರಟುಹೋದರು.

ನಾನೂ ಆ ಜಾಗ ಖಾಲಿ ಮಾಡಿ ಮುಂದಿನ ರಸ್ತೆಯ ಚೌಕಿಗೆ ಬರುತ್ತಿದ್ದ ಹಾಗೆಯೇ, ತೆ.. ರೇ.. ಸಾ ಎಂದು ಕೂಗುತ್ತಿದ್ದ ಒಂದು ದನಿ ನನ್ನ ಕಿವಿಗೆ ಬಿತ್ತು.

ಯಾರೋ ಒಬ್ಬ ಇನ್ನೂ ಅಲ್ಲೇ ನಿಂತು ಪ್ರಯತ್ನ ಮಾಡುತ್ತಿದ್ದಾನೆ, ಯಾರೋ ಒಬ್ಬ ಮೊಂಡ ಮನುಷ್ಯ.

ಅನುವಾದ: ಚಿದಂಬರ ನರೇಂದ್ರ

ಇಟಾಲೋ ಕ್ಯಾಲ್ವಿನೋ

ಇಟಾಲೋ ಕ್ಯಾಲ್ವಿನೋ
ಇಟಾಲಿಯನ್ ಕಥೆಗಾರ-ಕಾದಂಬರಿಕಾರ. ’ಕಾಸ್ಮಿಕಾಮಿಕ್ಸ್’, ’ಇನ್‌ವಿಸಿಬಲ್ ಸಿಟೀಸ್’, ’ಇಫ್ ಆನ್ ಎ ವಿಂಟರ್ಸ್ ನೈಟ್ ಎ ಟ್ರಾವೆಲ್ಲರ್’ ಅವರ ಪುಸ್ತಕಗಳಲ್ಲಿ ಕೆಲವು. ಪ್ರಸ್ತುತ ಕಥೆ ಅವರ ’ನಂಬರ್ಸ್ ಇನ್ ಡಾರ್ಕ್’ ಕಥಾಸಂಕಲನದಿಂದ ಆಯ್ದುಕೊಳ್ಳಲಾಗಿದೆ.


ಇದನ್ನೂ ಓದಿ: ನಾನೊಂದ ಬುಕ್ಕ ಕಂಡೆ: ಪುಸ್ತಕ ಸಂಗ್ರಹ ಲೋಕದ ಕುರಿತ ಪ್ರಬಂಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...