Homeಕಥೆಸಣ್‌ಸಣ್ ಕಥೆ: ತೆರೇಸಾ ಎಂದು ಕೂಗಿದ ಮನುಷ್ಯ

ಸಣ್‌ಸಣ್ ಕಥೆ: ತೆರೇಸಾ ಎಂದು ಕೂಗಿದ ಮನುಷ್ಯ

- Advertisement -
- Advertisement -

ನಾನು ಪಾದಚಾರಿ ರಸ್ತೆಯಿಂದ ಹೊರಬಿದ್ದು, ಮೇಲೆ ನೋಡುತ್ತಾ ಕೆಲ ಹೆಜ್ಜೆ ಹಿಂದೆ ಬಂದು, ರಸ್ತೆಯ ನಟ್ಟನಡುವೆ ನಿಂತು, ಎರಡೂ ಕೈಗಳನ್ನ ಬಾಯಿಗೆ ಲೌಡ್ ಸ್ಪೀಕರ್ ರೀತಿಯಲ್ಲಿ ಹಿಡಿದುಕೊಂಡು ಬಿಲ್ಡಿಂಗ್‌ನ ಮೇಲ್ಮಹಡಿಗಳತ್ತ ನೋಡುತ್ತ ಜೋರಾಗಿ ಕೂಗಿಕೊಂಡೆ: “ತೆರೇಸಾ”.

ನನ್ನ ನೆರಳು ಚಂದ್ರನಿಗೆ ಹೆದರಿಕೊಂಡಂತೆ, ನನ್ನ ಕಾಲುಗಳ ನಡುವೆ ಬಂದು ಸೇರಿಕೊಂಡಿತು.

ಯಾರೋ ಒಬ್ಬ ಹತ್ತಿರ ಬಂದ, ನಾನು ಮತ್ತೊಮ್ಮೆ ಕೂಗಿಕೊಂಡೆ: “ತೆರೇಸಾ”. ಆ ಮನುಷ್ಯ ನನ್ನ ಹತ್ತಿರ ಬಂದು ಹೇಳಿದ: “ನೀನು ಜೋರಾಗಿ ಕೂಗದಿದ್ದರೆ ಅವಳಿಗೆ ಕೇಳಿಸುವುದಿಲ್ಲ. ಇಬ್ಬರೂ ಸೇರಿ ಪ್ರಯತ್ನ ಮಾಡುವ. ಮೂರು ಎಣಿಸುತ್ತೇನೆ, ಮೂರು ಮುಗಿಯುತ್ತಿದ್ದ ಹಾಗೆ ಇಬ್ಬರೂ ಸೇರಿ ಕೂಗುವ”. ಆ ಮನುಷ್ಯ ಮೂರು ಎಣಿಸಲು ಶುರು ಮಾಡಿದ: “ಒಂದು.. ಎರಡು.. ಮೂರು..”. ಇಬ್ಬರೂ ಜೋರಾಗಿ ಕೂಗಿದೆವು, “ತೆ..ರೇ..ಸಾ..”

ಆ ದಾರಿಯಲ್ಲೇ ಹಾದು ಹೋಗುತ್ತಿದ್ದ, ಬಹುಶಃ ಥಿಯೇಟರ್ ಇಂದ ಅಥವಾ ಕಾಫಿ ಶಾಪ್ ಇಂದ ವಾಪಸ್ಸಾಗುತ್ತಿದ್ದ ಸಣ್ಣ ಗೆಳೆಯರ ಗುಂಪೊಂದು ನಾವು ಕೂಗುವುದನ್ನ ಗಮನಿಸಿ, ನನ್ನ ಹತ್ತಿರ ಬಂದು, “ನಾವೂ ನಿಮ್ಮ ಜೊತೆ ಕೂಗುತ್ತೇವೆ” ಎಂದು ರಸ್ತೆಯ ನಡುವೆ ನಮ್ಮನ್ನು ಸೇರಿಕೊಂಡರು. ಆ ಗುಂಪಿನಲ್ಲಿ ಒಬ್ಬ ಮೂರು ಎಣಿಸಲು ಶುರು ಮಾಡಿದ, ಒಂದು.. ಎರಡು.. ಮೂರು, ನಾವೆಲ್ಲ ಸೇರಿ ಜೋರಾಗಿ ಕೂಗಿದೆವು, “ತೆ.. ರೇ.. ಸಾ..!”

ಇನ್ನೂ ಯಾರೋ ಒಬ್ಬರು ಬಂದು ನಮ್ಮನ್ನು ಸೇರಿಕೊಂಡರು; ಹತ್ತು ಹದಿನೈದು ನಿಮಿಷಗಳಲ್ಲಿ ಅಲ್ಲಿ ನಾವು ಒಂದು ಇಪ್ಪತ್ತು ಜನ ಸೇರಿಕೊಂಡಿದ್ದೆವು. ಆಗಾಗ ಇನ್ನೂ ಕೆಲವು ಹೊಸಬರು ನಮ್ಮನ್ನು ಸೇರುತ್ತಲೇ ಇದ್ದರು.

ನಾವೆಲ್ಲರೂ ಸೇರಿ ಒಂದೇ ಬಾರಿ, ಒಂದೇ ರೀತಿಯಲ್ಲಿ ಕೂಗುವುದು ಅಷ್ಟು ಸುಲಭವಾಗಿರಲಿಲ್ಲ. ಯಾರೋ ಒಬ್ಬರು ಮೂರು ಎಣಿಸುವುದಕ್ಕಿಂತ ಮುಂಚೆಯೇ ಕೂಗುತ್ತಿದ್ದರೆ, ಮತ್ತಿನ್ನೊಬ್ಬರು ನಾವೂ ಕೂಗಿ ಆದ ಮೇಲೆ ಕೂಗುತ್ತಿದ್ದರು, ಆದರೆ ಕೊನೆಕೊನೆಗೆ ಎಲ್ಲರೂ ಸೇರಿ ತಕ್ಕಮಟ್ಟಿನ ಜೋರಾದ ಒಂದೇ ದನಿಯ ಕೂಗು ಹಾಕುವುದರಲ್ಲಿ ಸಫಲರಾದೆವು. ’ತೆ’ ಯನ್ನ ಸಣ್ಣದಾಗಿ ಮತ್ತು ಬಹಳ ಹೊತ್ತಿನವರೆಗೆ ಕೂಗುವುದೆಂದೂ, ’ರೆ’ ಯನ್ನ ಜೋರಾಗಿ ಮತ್ತು ಬಹಳ ಹೊತ್ತಿನವರೆಗೆ ಕೂಗುವುದೆಂದೂ ಮತ್ತು ’ಸಾ’ನ್ನ ಮೆಲ್ಲಗೆ ಬೇಗ ಕೂಗಿ ಮುಗಿಸುವುದೆಂದೂ ನಮ್ಮ ನಡುವೆ ಒಪ್ಪಂದವಾಯಿತು. ಈ ಥರ ಕೂಗುವುದು ತುಂಬ ಮಜವಾಗಿಯೂ, ಪರಿಣಾಮಕಾರಿಯೂ ಆಗಿತ್ತು. ಯಾರಾದರೂ ತಪ್ಪು ಮಾಡಿದಾಗ ಆಗಾಗ ಸಣ್ಣಪುಟ್ಟ ತಕರಾರುಗಳು ಹುಟ್ಟಿಕೊಳ್ಳುತ್ತಿದ್ದವು.

ನಮ್ಮ ಕೂಗು ಈಗ ಸರಿಯಾಗಿ ಮೂಡಿಬರುತ್ತಿತ್ತು. ಆಗಲೇ ಒಬ್ಬ-ಅವನ ದನಿಯನ್ನಷ್ಟೇ ಕೇಳಿದರೆ ಇವನದು ವಿಚಿತ್ರ ಮುಖ ಆಗಿರಬಹುದು ಅನಿಸುವಂಥವ-ಪ್ರಶ್ನೆ ಮಾಡಿದ: “ಅವಳು ಮನೆಯಲ್ಲಿರುವುದು ನಿನಗೆ ಖಾತ್ರೀನಾ?”

“ಇಲ್ಲ ನಾನು ಉತ್ತರಿಸಿದೆ”.

“ಇದು ಕಷ್ಟ, ಕೀ ಏನಾದರೂ ಮರೆತಿದ್ದೀಯಾ?” ಇನ್ನೊಬ್ಬ ಕೇಳಿದ.

“ಇಲ್ಲ ಇಲ್ಲ ಕೀ ನನ್ನ ಹತ್ತಿರವೇ ಇದೆ”

ಉತ್ತರಿಸಿದೆ.

“ಮೇಲೆ ಹೋಗಿ ಯಾಕೆ ಚೆಕ್ ಮಾಡಬಾರದು ನೀನು?” ಮತ್ತೊಬ್ಬ ಸಲಹೆ ನೀಡಿದ.

“ನಾನು ಇಲ್ಲಿರುವುದಿಲ್ಲ, ನಾನು ಇರೋದು ಊರಿನ ಇನ್ನೊಂದು ಬದಿಯಲ್ಲಿ ಸಮಾಧಾನವಾಗಿ ಹೇಳಿದೆ”.

“ನನ್ನ ಕುತೂಹಲಕ್ಕೆ ಕ್ಷಮೆ ಇರಲಿ, ಹಾಗಾದರೆ ಇಲ್ಲಿ ಇರೋದು ಯಾರು?” ವಿಚಿತ್ರ ದನಿಯ ಮನುಷ್ಯ ಮೆಲುದನಿಯಲ್ಲಿ ಪ್ರಶ್ನೆ ಮಾಡಿದ.

“ನಿಜವಾಗಿಯೂ ನನಗೆ ಗೊತ್ತಿಲ್ಲ ನಾನು ಉತ್ತರಿಸಿದೆ”.

ನನ್ನ ಉತ್ತರ ಕೇಳಿ ಸುತ್ತ ಇದ್ದ ಜನ ಬೇಸರ ಮಾಡಿಕೊಂಡರು.

“ಹಾಗಾದರೆ ನೀನು ಇಲ್ಲಿ ನಿಂತು ತೆರೇಸಾ ಅಂತ ಕೂಗುತ್ತಿರುವುದು ಯಾರನ್ನ?” ಕೀರಲು ದನಿಯ ವ್ಯಕ್ತಿಯೊಬ್ಬ ಸ್ವಲ್ಪ ಗಡುಸಾಗಿಯೇ ಪ್ರಶ್ನಿಸಿದ.

“ನನ್ನ ಪ್ರಕಾರ, ನಾವು ಬೇರೆ ಯಾವ ಹೆಸರನ್ನಾದರೂ ಕೂಗಬಹುದು ಅಥವಾ ಬೇರೆ ಯಾವ ಜಾಗದಲ್ಲೂ ಕೂಗಬಹುದು, ಅದೇನು ಅಂಥ ದೊಡ್ಡ ವಿಷಯ ಅಲ್ಲ” ನಾನೂ ಸ್ವಲ್ಪ ಗಡುಸಾಗಿಯೇ ಉತ್ತರಿಸಿದೆ.

ನನ್ನ ಉತ್ತರದಿಂದ ಸುತ್ತಲಿನ ಜನಕ್ಕೆ ಸಿಟ್ಟು ಬಂತು.

“ನೀನು ನಮ್ಮನ್ನ ಯಾವುದರಲ್ಲಾದರೂ ಸಿಕ್ಕಿಸಿ ಹಾಕಿಸುತ್ತಿಲ್ಲ ತಾನೇ?” ಕೀರಲು ದನಿಯ ಮನುಷ್ಯ ಮತ್ತೆ ಪ್ರಶ್ನೆ ಮಾಡಿದ.

“ಏನು ಹಾಗಂದರೆ?” ನಾನೂ ಸ್ವಲ್ಪ ಸಿಟ್ಟಾದೆ, ನನ್ನ ಒಳ್ಳೆಯತನಕ್ಕಾಗಿ ಸಾಕ್ಷಿ ಹೇಳುವಂತೆ ಸುತ್ತಲಿನ ಜನರನ್ನೊಮ್ಮೆ ತಿರುಗಿ ನೋಡಿದೆ. ಎಲ್ಲ ಸುಮ್ಮನೇ ನಿಂತಿದ್ದರು, ನನ್ನ ಸೂಚನೆಯನ್ನ ಗಮನಿಸದವರಂತೆ.

ಎಲ್ಲರ ಮುಖದಲ್ಲೂ ಮುಜುಗರ ಎದ್ದು ಕಾಣುತ್ತಿತ್ತು.

“ಇಲ್ಲಿಂದ ಹೊರಡುವ ಮುನ್ನ ಯಾಕೆ ನಾವು ಒಮ್ಮೆ ಕೊನೆಯ ಬಾರಿ ಪ್ರಯತ್ನ ಮಾಡಬಾರದು?” ಮೃದು ಸ್ವಭಾವದವನಂತೆ ಕಾಣಿಸುತ್ತಿದ್ದ ವ್ಯಕ್ತಿಯೊಬ್ಬ ಮಾತನಾಡಿದ. ಅವನ ಮಾತು ಒಪ್ಪಿಕೊಂಡವರಂತೆ ಒಂದು.. ಎರಡು.. ಮೂರು ಎಣಿಸುತ್ತ ಎಲ್ಲರೂ ಜೋರಾಗಿ ಕೂಗಿದೆವು, ತೆ.. ರೇ.. ಸಾ.. ಆದರೆ ಯಾಕೋ ಈ ಕೂಗು ಅಷ್ಟು ಸರಿಯಾಗಿ ಮೂಡಿ ಬರಲಿಲ್ಲ. ಆಮೇಲೆ ಎಲ್ಲರೂ ತಮ್ಮತಮ್ಮ ದಾರಿ ಹಿಡಿದು ಅಲ್ಲಿಂದ ಹೊರಟುಹೋದರು.

ನಾನೂ ಆ ಜಾಗ ಖಾಲಿ ಮಾಡಿ ಮುಂದಿನ ರಸ್ತೆಯ ಚೌಕಿಗೆ ಬರುತ್ತಿದ್ದ ಹಾಗೆಯೇ, ತೆ.. ರೇ.. ಸಾ ಎಂದು ಕೂಗುತ್ತಿದ್ದ ಒಂದು ದನಿ ನನ್ನ ಕಿವಿಗೆ ಬಿತ್ತು.

ಯಾರೋ ಒಬ್ಬ ಇನ್ನೂ ಅಲ್ಲೇ ನಿಂತು ಪ್ರಯತ್ನ ಮಾಡುತ್ತಿದ್ದಾನೆ, ಯಾರೋ ಒಬ್ಬ ಮೊಂಡ ಮನುಷ್ಯ.

ಅನುವಾದ: ಚಿದಂಬರ ನರೇಂದ್ರ

ಇಟಾಲೋ ಕ್ಯಾಲ್ವಿನೋ

ಇಟಾಲೋ ಕ್ಯಾಲ್ವಿನೋ
ಇಟಾಲಿಯನ್ ಕಥೆಗಾರ-ಕಾದಂಬರಿಕಾರ. ’ಕಾಸ್ಮಿಕಾಮಿಕ್ಸ್’, ’ಇನ್‌ವಿಸಿಬಲ್ ಸಿಟೀಸ್’, ’ಇಫ್ ಆನ್ ಎ ವಿಂಟರ್ಸ್ ನೈಟ್ ಎ ಟ್ರಾವೆಲ್ಲರ್’ ಅವರ ಪುಸ್ತಕಗಳಲ್ಲಿ ಕೆಲವು. ಪ್ರಸ್ತುತ ಕಥೆ ಅವರ ’ನಂಬರ್ಸ್ ಇನ್ ಡಾರ್ಕ್’ ಕಥಾಸಂಕಲನದಿಂದ ಆಯ್ದುಕೊಳ್ಳಲಾಗಿದೆ.


ಇದನ್ನೂ ಓದಿ: ನಾನೊಂದ ಬುಕ್ಕ ಕಂಡೆ: ಪುಸ್ತಕ ಸಂಗ್ರಹ ಲೋಕದ ಕುರಿತ ಪ್ರಬಂಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...