Homeಕಥೆಸಣ್‌ಸಣ್ ಕಥೆ: ತೆರೇಸಾ ಎಂದು ಕೂಗಿದ ಮನುಷ್ಯ

ಸಣ್‌ಸಣ್ ಕಥೆ: ತೆರೇಸಾ ಎಂದು ಕೂಗಿದ ಮನುಷ್ಯ

- Advertisement -
- Advertisement -

ನಾನು ಪಾದಚಾರಿ ರಸ್ತೆಯಿಂದ ಹೊರಬಿದ್ದು, ಮೇಲೆ ನೋಡುತ್ತಾ ಕೆಲ ಹೆಜ್ಜೆ ಹಿಂದೆ ಬಂದು, ರಸ್ತೆಯ ನಟ್ಟನಡುವೆ ನಿಂತು, ಎರಡೂ ಕೈಗಳನ್ನ ಬಾಯಿಗೆ ಲೌಡ್ ಸ್ಪೀಕರ್ ರೀತಿಯಲ್ಲಿ ಹಿಡಿದುಕೊಂಡು ಬಿಲ್ಡಿಂಗ್‌ನ ಮೇಲ್ಮಹಡಿಗಳತ್ತ ನೋಡುತ್ತ ಜೋರಾಗಿ ಕೂಗಿಕೊಂಡೆ: “ತೆರೇಸಾ”.

ನನ್ನ ನೆರಳು ಚಂದ್ರನಿಗೆ ಹೆದರಿಕೊಂಡಂತೆ, ನನ್ನ ಕಾಲುಗಳ ನಡುವೆ ಬಂದು ಸೇರಿಕೊಂಡಿತು.

ಯಾರೋ ಒಬ್ಬ ಹತ್ತಿರ ಬಂದ, ನಾನು ಮತ್ತೊಮ್ಮೆ ಕೂಗಿಕೊಂಡೆ: “ತೆರೇಸಾ”. ಆ ಮನುಷ್ಯ ನನ್ನ ಹತ್ತಿರ ಬಂದು ಹೇಳಿದ: “ನೀನು ಜೋರಾಗಿ ಕೂಗದಿದ್ದರೆ ಅವಳಿಗೆ ಕೇಳಿಸುವುದಿಲ್ಲ. ಇಬ್ಬರೂ ಸೇರಿ ಪ್ರಯತ್ನ ಮಾಡುವ. ಮೂರು ಎಣಿಸುತ್ತೇನೆ, ಮೂರು ಮುಗಿಯುತ್ತಿದ್ದ ಹಾಗೆ ಇಬ್ಬರೂ ಸೇರಿ ಕೂಗುವ”. ಆ ಮನುಷ್ಯ ಮೂರು ಎಣಿಸಲು ಶುರು ಮಾಡಿದ: “ಒಂದು.. ಎರಡು.. ಮೂರು..”. ಇಬ್ಬರೂ ಜೋರಾಗಿ ಕೂಗಿದೆವು, “ತೆ..ರೇ..ಸಾ..”

ಆ ದಾರಿಯಲ್ಲೇ ಹಾದು ಹೋಗುತ್ತಿದ್ದ, ಬಹುಶಃ ಥಿಯೇಟರ್ ಇಂದ ಅಥವಾ ಕಾಫಿ ಶಾಪ್ ಇಂದ ವಾಪಸ್ಸಾಗುತ್ತಿದ್ದ ಸಣ್ಣ ಗೆಳೆಯರ ಗುಂಪೊಂದು ನಾವು ಕೂಗುವುದನ್ನ ಗಮನಿಸಿ, ನನ್ನ ಹತ್ತಿರ ಬಂದು, “ನಾವೂ ನಿಮ್ಮ ಜೊತೆ ಕೂಗುತ್ತೇವೆ” ಎಂದು ರಸ್ತೆಯ ನಡುವೆ ನಮ್ಮನ್ನು ಸೇರಿಕೊಂಡರು. ಆ ಗುಂಪಿನಲ್ಲಿ ಒಬ್ಬ ಮೂರು ಎಣಿಸಲು ಶುರು ಮಾಡಿದ, ಒಂದು.. ಎರಡು.. ಮೂರು, ನಾವೆಲ್ಲ ಸೇರಿ ಜೋರಾಗಿ ಕೂಗಿದೆವು, “ತೆ.. ರೇ.. ಸಾ..!”

ಇನ್ನೂ ಯಾರೋ ಒಬ್ಬರು ಬಂದು ನಮ್ಮನ್ನು ಸೇರಿಕೊಂಡರು; ಹತ್ತು ಹದಿನೈದು ನಿಮಿಷಗಳಲ್ಲಿ ಅಲ್ಲಿ ನಾವು ಒಂದು ಇಪ್ಪತ್ತು ಜನ ಸೇರಿಕೊಂಡಿದ್ದೆವು. ಆಗಾಗ ಇನ್ನೂ ಕೆಲವು ಹೊಸಬರು ನಮ್ಮನ್ನು ಸೇರುತ್ತಲೇ ಇದ್ದರು.

ನಾವೆಲ್ಲರೂ ಸೇರಿ ಒಂದೇ ಬಾರಿ, ಒಂದೇ ರೀತಿಯಲ್ಲಿ ಕೂಗುವುದು ಅಷ್ಟು ಸುಲಭವಾಗಿರಲಿಲ್ಲ. ಯಾರೋ ಒಬ್ಬರು ಮೂರು ಎಣಿಸುವುದಕ್ಕಿಂತ ಮುಂಚೆಯೇ ಕೂಗುತ್ತಿದ್ದರೆ, ಮತ್ತಿನ್ನೊಬ್ಬರು ನಾವೂ ಕೂಗಿ ಆದ ಮೇಲೆ ಕೂಗುತ್ತಿದ್ದರು, ಆದರೆ ಕೊನೆಕೊನೆಗೆ ಎಲ್ಲರೂ ಸೇರಿ ತಕ್ಕಮಟ್ಟಿನ ಜೋರಾದ ಒಂದೇ ದನಿಯ ಕೂಗು ಹಾಕುವುದರಲ್ಲಿ ಸಫಲರಾದೆವು. ’ತೆ’ ಯನ್ನ ಸಣ್ಣದಾಗಿ ಮತ್ತು ಬಹಳ ಹೊತ್ತಿನವರೆಗೆ ಕೂಗುವುದೆಂದೂ, ’ರೆ’ ಯನ್ನ ಜೋರಾಗಿ ಮತ್ತು ಬಹಳ ಹೊತ್ತಿನವರೆಗೆ ಕೂಗುವುದೆಂದೂ ಮತ್ತು ’ಸಾ’ನ್ನ ಮೆಲ್ಲಗೆ ಬೇಗ ಕೂಗಿ ಮುಗಿಸುವುದೆಂದೂ ನಮ್ಮ ನಡುವೆ ಒಪ್ಪಂದವಾಯಿತು. ಈ ಥರ ಕೂಗುವುದು ತುಂಬ ಮಜವಾಗಿಯೂ, ಪರಿಣಾಮಕಾರಿಯೂ ಆಗಿತ್ತು. ಯಾರಾದರೂ ತಪ್ಪು ಮಾಡಿದಾಗ ಆಗಾಗ ಸಣ್ಣಪುಟ್ಟ ತಕರಾರುಗಳು ಹುಟ್ಟಿಕೊಳ್ಳುತ್ತಿದ್ದವು.

ನಮ್ಮ ಕೂಗು ಈಗ ಸರಿಯಾಗಿ ಮೂಡಿಬರುತ್ತಿತ್ತು. ಆಗಲೇ ಒಬ್ಬ-ಅವನ ದನಿಯನ್ನಷ್ಟೇ ಕೇಳಿದರೆ ಇವನದು ವಿಚಿತ್ರ ಮುಖ ಆಗಿರಬಹುದು ಅನಿಸುವಂಥವ-ಪ್ರಶ್ನೆ ಮಾಡಿದ: “ಅವಳು ಮನೆಯಲ್ಲಿರುವುದು ನಿನಗೆ ಖಾತ್ರೀನಾ?”

“ಇಲ್ಲ ನಾನು ಉತ್ತರಿಸಿದೆ”.

“ಇದು ಕಷ್ಟ, ಕೀ ಏನಾದರೂ ಮರೆತಿದ್ದೀಯಾ?” ಇನ್ನೊಬ್ಬ ಕೇಳಿದ.

“ಇಲ್ಲ ಇಲ್ಲ ಕೀ ನನ್ನ ಹತ್ತಿರವೇ ಇದೆ”

ಉತ್ತರಿಸಿದೆ.

“ಮೇಲೆ ಹೋಗಿ ಯಾಕೆ ಚೆಕ್ ಮಾಡಬಾರದು ನೀನು?” ಮತ್ತೊಬ್ಬ ಸಲಹೆ ನೀಡಿದ.

“ನಾನು ಇಲ್ಲಿರುವುದಿಲ್ಲ, ನಾನು ಇರೋದು ಊರಿನ ಇನ್ನೊಂದು ಬದಿಯಲ್ಲಿ ಸಮಾಧಾನವಾಗಿ ಹೇಳಿದೆ”.

“ನನ್ನ ಕುತೂಹಲಕ್ಕೆ ಕ್ಷಮೆ ಇರಲಿ, ಹಾಗಾದರೆ ಇಲ್ಲಿ ಇರೋದು ಯಾರು?” ವಿಚಿತ್ರ ದನಿಯ ಮನುಷ್ಯ ಮೆಲುದನಿಯಲ್ಲಿ ಪ್ರಶ್ನೆ ಮಾಡಿದ.

“ನಿಜವಾಗಿಯೂ ನನಗೆ ಗೊತ್ತಿಲ್ಲ ನಾನು ಉತ್ತರಿಸಿದೆ”.

ನನ್ನ ಉತ್ತರ ಕೇಳಿ ಸುತ್ತ ಇದ್ದ ಜನ ಬೇಸರ ಮಾಡಿಕೊಂಡರು.

“ಹಾಗಾದರೆ ನೀನು ಇಲ್ಲಿ ನಿಂತು ತೆರೇಸಾ ಅಂತ ಕೂಗುತ್ತಿರುವುದು ಯಾರನ್ನ?” ಕೀರಲು ದನಿಯ ವ್ಯಕ್ತಿಯೊಬ್ಬ ಸ್ವಲ್ಪ ಗಡುಸಾಗಿಯೇ ಪ್ರಶ್ನಿಸಿದ.

“ನನ್ನ ಪ್ರಕಾರ, ನಾವು ಬೇರೆ ಯಾವ ಹೆಸರನ್ನಾದರೂ ಕೂಗಬಹುದು ಅಥವಾ ಬೇರೆ ಯಾವ ಜಾಗದಲ್ಲೂ ಕೂಗಬಹುದು, ಅದೇನು ಅಂಥ ದೊಡ್ಡ ವಿಷಯ ಅಲ್ಲ” ನಾನೂ ಸ್ವಲ್ಪ ಗಡುಸಾಗಿಯೇ ಉತ್ತರಿಸಿದೆ.

ನನ್ನ ಉತ್ತರದಿಂದ ಸುತ್ತಲಿನ ಜನಕ್ಕೆ ಸಿಟ್ಟು ಬಂತು.

“ನೀನು ನಮ್ಮನ್ನ ಯಾವುದರಲ್ಲಾದರೂ ಸಿಕ್ಕಿಸಿ ಹಾಕಿಸುತ್ತಿಲ್ಲ ತಾನೇ?” ಕೀರಲು ದನಿಯ ಮನುಷ್ಯ ಮತ್ತೆ ಪ್ರಶ್ನೆ ಮಾಡಿದ.

“ಏನು ಹಾಗಂದರೆ?” ನಾನೂ ಸ್ವಲ್ಪ ಸಿಟ್ಟಾದೆ, ನನ್ನ ಒಳ್ಳೆಯತನಕ್ಕಾಗಿ ಸಾಕ್ಷಿ ಹೇಳುವಂತೆ ಸುತ್ತಲಿನ ಜನರನ್ನೊಮ್ಮೆ ತಿರುಗಿ ನೋಡಿದೆ. ಎಲ್ಲ ಸುಮ್ಮನೇ ನಿಂತಿದ್ದರು, ನನ್ನ ಸೂಚನೆಯನ್ನ ಗಮನಿಸದವರಂತೆ.

ಎಲ್ಲರ ಮುಖದಲ್ಲೂ ಮುಜುಗರ ಎದ್ದು ಕಾಣುತ್ತಿತ್ತು.

“ಇಲ್ಲಿಂದ ಹೊರಡುವ ಮುನ್ನ ಯಾಕೆ ನಾವು ಒಮ್ಮೆ ಕೊನೆಯ ಬಾರಿ ಪ್ರಯತ್ನ ಮಾಡಬಾರದು?” ಮೃದು ಸ್ವಭಾವದವನಂತೆ ಕಾಣಿಸುತ್ತಿದ್ದ ವ್ಯಕ್ತಿಯೊಬ್ಬ ಮಾತನಾಡಿದ. ಅವನ ಮಾತು ಒಪ್ಪಿಕೊಂಡವರಂತೆ ಒಂದು.. ಎರಡು.. ಮೂರು ಎಣಿಸುತ್ತ ಎಲ್ಲರೂ ಜೋರಾಗಿ ಕೂಗಿದೆವು, ತೆ.. ರೇ.. ಸಾ.. ಆದರೆ ಯಾಕೋ ಈ ಕೂಗು ಅಷ್ಟು ಸರಿಯಾಗಿ ಮೂಡಿ ಬರಲಿಲ್ಲ. ಆಮೇಲೆ ಎಲ್ಲರೂ ತಮ್ಮತಮ್ಮ ದಾರಿ ಹಿಡಿದು ಅಲ್ಲಿಂದ ಹೊರಟುಹೋದರು.

ನಾನೂ ಆ ಜಾಗ ಖಾಲಿ ಮಾಡಿ ಮುಂದಿನ ರಸ್ತೆಯ ಚೌಕಿಗೆ ಬರುತ್ತಿದ್ದ ಹಾಗೆಯೇ, ತೆ.. ರೇ.. ಸಾ ಎಂದು ಕೂಗುತ್ತಿದ್ದ ಒಂದು ದನಿ ನನ್ನ ಕಿವಿಗೆ ಬಿತ್ತು.

ಯಾರೋ ಒಬ್ಬ ಇನ್ನೂ ಅಲ್ಲೇ ನಿಂತು ಪ್ರಯತ್ನ ಮಾಡುತ್ತಿದ್ದಾನೆ, ಯಾರೋ ಒಬ್ಬ ಮೊಂಡ ಮನುಷ್ಯ.

ಅನುವಾದ: ಚಿದಂಬರ ನರೇಂದ್ರ

ಇಟಾಲೋ ಕ್ಯಾಲ್ವಿನೋ

ಇಟಾಲೋ ಕ್ಯಾಲ್ವಿನೋ
ಇಟಾಲಿಯನ್ ಕಥೆಗಾರ-ಕಾದಂಬರಿಕಾರ. ’ಕಾಸ್ಮಿಕಾಮಿಕ್ಸ್’, ’ಇನ್‌ವಿಸಿಬಲ್ ಸಿಟೀಸ್’, ’ಇಫ್ ಆನ್ ಎ ವಿಂಟರ್ಸ್ ನೈಟ್ ಎ ಟ್ರಾವೆಲ್ಲರ್’ ಅವರ ಪುಸ್ತಕಗಳಲ್ಲಿ ಕೆಲವು. ಪ್ರಸ್ತುತ ಕಥೆ ಅವರ ’ನಂಬರ್ಸ್ ಇನ್ ಡಾರ್ಕ್’ ಕಥಾಸಂಕಲನದಿಂದ ಆಯ್ದುಕೊಳ್ಳಲಾಗಿದೆ.


ಇದನ್ನೂ ಓದಿ: ನಾನೊಂದ ಬುಕ್ಕ ಕಂಡೆ: ಪುಸ್ತಕ ಸಂಗ್ರಹ ಲೋಕದ ಕುರಿತ ಪ್ರಬಂಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....