Homeಕರ್ನಾಟಕ1785ರಿಂದ 1798ರ ಅವಧಿಯ ಟಿಪ್ಪುವಿನ ಕನಸುಗಳು

1785ರಿಂದ 1798ರ ಅವಧಿಯ ಟಿಪ್ಪುವಿನ ಕನಸುಗಳು

- Advertisement -
- Advertisement -

ಕನಸು 1

ಮರಾಠ ಸೇನೆಯ ಮೂವರು ಅಧಿಕಾರಿಗಳು

ಚಂದ್ರಮಾನದ ಪ್ರಕಾರ ಮೊದಲ ’ಅಹ್ಮದಿ’ ತಿಂಗಳ ಗುರುವಾರ ರಾತ್ರಿ. ಹಿಜರಿಯ 1200 ದಾಲ್ವ್ ವರ್ಷದ ಆರಂಭದಲ್ಲಿ, ರಾತ್ರಿಯ ಮೂರು ಭಾಗ ಹಾಗೂ ಐದು ಪ್ರಹರಗಳು ಕಳೆದಿದ್ದವು. ಶಮ್ಸಾಬಾದ್‌ನಲ್ಲಿ ಇದ್ದಾಗ ನಾನು ಈ ಕನಸ ಕಂಡೆನು.

ಮರಾಠ ಸೈನ್ಯವು ಬಂದಂತೆ ನಾನು ಏಕಾಂಗಿಯಾಗಿ ಮುನ್ನುಗ್ಗಿ ಅದರ ಸೇನಾಧಿಪತಿಗಳ ಬಳಿ ಒಬ್ಬೊಬ್ಬರಾಗಿ ಹೋರಾಡುವ ಸವಾಲು ಹಾಕಿದಂತೆ ಕಾಣಿಸಿತು. ಆ ಸೈನ್ಯದ ಮುಸ್ಲಿಮ್ ಸೇನಾಧಿಕಾರಿ ನನ್ನನ್ನು ಎದುರಿಸಿ ನಿಂತ. ಸಮರಾಂಗಣದಲ್ಲಿ ಎರಡೂ ಸೈನ್ಯಗಳು ಮುಖಾಮುಖಿಯಾಗಿ ಕದನ ನಡೆಸುತ್ತಿರುವಾಗ ನನ್ನ ಖಡ್ಗದ ಒಂದೇ ಏಟಿಗೆ ಆ ಮುಸ್ಲಿಮ್ ಸೇನಾಧಿಪತಿಯನ್ನು ಕೊಂದೆನು. ಅದಾದ ನಂತರ ಸೈನ್ಯದ ನಾಯಕನಾಗಿದ್ದ ಯುವಕ ಅಲ್ಲಿಂದ ಕಾಲ್ಕಿತ್ತು ಓಡಿದ. ನಾನು ಅವನ ಬೆನ್ನಟ್ಟಿದೆ. ಮತ್ತು ಮುಖಾಮುಖಿಯಾಗಿ ಒಂದೇ ಹೊಡೆತಕ್ಕೆ ಅವನನ್ನು ಮುಗಿಸಿದೆ. ಅದೇ ರೀತಿಯಾಗಿ ಮೂರನೇ ಮುಖ್ಯ ಸೇನಾಧಿಪತಿಯನ್ನು ಕೊಂದುಹಾಕಿದೆ. ಮೂವರು ಸೇನಾಧಿಕಾರಿಗಳನ್ನೂ ತಲಾ ಒಂದೊಂದು ಏಟಿಗೆ ಮುಗಿಸಿ ಮರಳಿದೆ. ನನ್ನ ಸೈನ್ಯ ವಿಜಯಶಾಲಿಯಾಗಿ ಸಂಭ್ರಮದಲ್ಲಿತ್ತು.

ಆಗ ಕನಸಿನಲ್ಲಿ ನನ್ನ ಸೈನ್ಯದ ಎಲ್ಲ ಅಧಿಕಾರಿಗಳು ಹಾಗೂ ಹೈದರ್ ಸಾಹಿಬ್ ಅವರು ಮನೆಯಲ್ಲಿ ಊಟ ಮಾಡುತ್ತಿರುವಂತೆ ಕಂಡೆನು. ತುಂಬಾ ದಣಿದಿದ್ದ ನಾನು ಕುಡಿಯುವುದಕ್ಕಾಗಿ ನೀರು ಕೇಳಿದೆ. ಅಲ್ಲಿದ್ದವರು ನನಗೆ ಶುಭಾಶಯ ಕೋರಿದರು ಹಾಗೂ ಊಟ ಮಾಡಿದ ನಂತರ ನೀರು ಕುಡಿಯುವಂತೆ ಮನವಿ ಮಾಡಿದರು. ಈ ಮಧ್ಯೆ ದುರ್ಬಲನಾದ ಬಿಳಿಗಡ್ಡದ ಮುದುಕನೊಬ್ಬ ನನ್ನ ಮುಂದೆ ಕಾಣಿಸಿಕೊಂಡ. ಅವನ ಕೈಯಲ್ಲಿ ಕೆನೆ ಹಾಗೂ ಸಿಹಿಯಾದ ತಿಂಡಿಗಳಿದ್ದವು. ಅವನ್ನು ತೆಗೆದುಕೊಳ್ಳುವಂತೆ ಕೇಳಿದ. ಆ ಸಿಹಿ ತಿಂಡಿಗಳನ್ನು ಅವನಿಂದ ಪಡೆದು ತಿಂದ ನಂತರ ನನ್ನಷ್ಟಕ್ಕೆ ನಾನೇ ಹೇಳಿಕೊಂಡೆ. “ಇಷ್ಟೊಂದು ಸ್ವಾದಿಷ್ಟ ಹಾಗೂ ರುಚಿಯಾದ ಆಹಾರ ಹಿಂದೆಂದೂ ತಿಂದಿರಲಿಲ್ಲ. ಅವು ಅತ್ಯಂತ ರುಚಿಕರವಾಗಿದ್ದವು.” ಸ್ನಾನ ಮಾಡಿ ಶುದ್ಧಿಯಾದ ನಂತರ ನನ್ನ ಅಧಿಕಾರಿಗಳ ಬಳಿ ವಿಚಾರಿಸಿದೆ. ಅವರು ಕಾಫಿರರ ಸೈನ್ಯವನ್ನು ನಾಶ ಮಾಡಿದ ಬಗ್ಗೆ; ಹೈದರಿ ಸೈನ್ಯದ ಅಧಿಕಾರಿಗಳು ಇಲ್ಲ ಎಂದು ಉತ್ತರಿಸಿದರು. ಮತ್ತು ಈ ವಿಷಯದಲ್ಲಿ ಅಂತಹ ಯಾವುದೇ ಕ್ರಮ ತೆಗೆದುಕೊಂಡಿರಲಿಲ್ಲ. ಹಾಗೂ ಅವರು ಸೂಕ್ತ ಆದೇಶಕ್ಕಾಗಿ ಕಾಯುತ್ತಿದ್ದುದಾಗಿ ತಿಳಿಸಿದರು.

ಈ ಮಧ್ಯೆ ಅವರು, ಕಾಫಿರರ /ಸತ್ಯನಿಷೇಧಿಗಳ/ ನಂಬಿಕೆ ಇಲ್ಲದವರ ಸೈನ್ಯದ ಬಳಿ ನೆಲೆನಿಂತ ಹಳ್ಳಿಯಲ್ಲಿ ಕೊಳ್ಳೆಹೊಡೆದ ವಸ್ತುಗಳಿದ್ದವು ಎಂದು ಹೇಳಿದರು. ನಾನು ನನ್ನ ಸೈನ್ಯವನ್ನು ಸಿದ್ಧಗೊಳಿಸಿ, ಆ ಸೈನ್ಯ ಇರುವಲ್ಲಿಗೆ ಹೊರಟೆ. ಸಹಾಯಕರ ನೆರವಿನಿಂದ ಸೊಂಟಕ್ಕೆ ಕಟ್ಟಿದ ಒರೆಯಿಂದ ನನ್ನ ಖಡ್ಗ ಹೊರ ತೆಗೆದೆ. ಸೈಯದ್ ಜುನೈದ್, ಸೈಯದ್ ಗಫಾರ್ ಮತ್ತು ಇತರ ಅಧಿಕಾರಿಗಳಿಗೆ ಯುದ್ಧಕ್ಕೆ ಸಿದ್ಧರಾಗುವಂತೆ ಹೇಳಿದೆ. ಈ ಕನಸಿನಲ್ಲಿ ಕಂಡದ್ದು ಇಷ್ಟೇ.

***

ಕನಸು 21

ನಿಜಾಮ್‌ನ ಪ್ರತಿನಿಧಿ

ರಾಸಿಕ್ ವರ್ಷದ ರಬ್ಬಾನಿ ತಿಂಗಳಿನ 25ನೇ ದಿನ. ಮುಹಮ್ಮದರು ಜನಿಸಿದ ದಿನದಿಂದ ಆರಂಭಿಸಿದ 1222ನೇ ವರ್ಷಕ್ಕೆ ಸಮನಾಗುತ್ತದೆ. ದಿನದ ನಾಲ್ಕು ಗಂಟೆಗಳು ಉಳಿದಿದ್ದವು. ಆಗ ಈ ಕನಸ ಕಂಡೆ. ನಿಜಾಮ್ ಅಲಿಖಾನ್ ಅವರ ದಿವಾನ್ ಬರುವುದ ಕಂಡೆ. ಕಾಣಿಸುತ್ತಿದ್ದಂತೆಯೇ ಅವನಿಗೆ ಹಲ್ಲು ಇಲ್ಲದೇ ಇರುವುದು ಹಾಗೆಯೇ ತಲೆಗೂದಲಿಗೆ ಬಣ್ಣ ಹಚ್ಚಿಕೊಂಡಿರುವುದನ್ನು ಗಮನಿಸಿದೆ. ಅವನು ನನ್ನಿಂದ ಸಹಾಯ ಯಾಚಿಸಿದ. ದೇವರ ಸೇವಕನು ಅವನಿಗೆ ಹೇಳಿದ, “ಆಗಲಿ, ನೀನು ನೆಮ್ಮದಿಯಿಂದಿರು, ನನ್ನ ಸಲಹೆಗಾರರ ಜೊತೆ ಮಾತನಾಡುವೆ, ಅದಾದ ನಂತರ ನಿನಗೆ ಉತ್ತರ ನೀಡುವೆ.” ಈ ರೀತಿಯಲ್ಲಿ ಮಾತನಾಡಿದ ನಂತರ ಅವನನ್ನು ಕೋಟೆಯಿಂದ ಹೊರಗೆ ಕಳುಹಿಸಿದೆ. ಇಂತಹ ವ್ಯಕ್ತಿಗಳ ಜೊತೆಗೆ ಸಾಂತ್ವನ ಹೇಳುವ ರೀತಿಯಲ್ಲಿಯೇ ಮಾತನಾಡಬೇಕು ಎಂದು ನನ್ನಷ್ಟಕ್ಕೆ ನಾನೇ ಹೇಳಿಕೊಂಡೆ. ಹೀಗೆ ಸಹಾಯ ಕೇಳಿದವರಲ್ಲಿ ಪೂನಾದವರು ಮೊದಲಿಗರು. ಮತ್ತು ಈಗ ಇವರು ಸಹಾಯ ಕೇಳಲು ಬಂದಿದ್ದಾರೆ. ಆದರೆ, ಅವರ ಮಾತುಗಳನ್ನ ನಂಬುವ ಹಾಗಿಲ್ಲ. ಈ ಹಂತದಲ್ಲಿ ಎಚ್ಚರಾಗಿ ಎದ್ದು ಕುಳಿತೆ.

***

ಕನಸು 22

ಅಸಾಧಾರಣ ಮೂರ್ತಿಗಳು, ಪ್ರತಿಮೆ, ಶಿಲ್ಪ

ಹಿರಾಸತ್ ವರ್ಷದ ಝಕಾರಿ ತಿಂಗಳಿನ 8ನೇ ದಿನ, ಮಂಗಳವಾರ ರಾತ್ರಿ, ಮರುದಿನ ಬುಧವಾರ ಇತ್ತು. ಅದು ಮುಹಮ್ಮದ್ ಜನಿಸಿದ ದಿನದಿಂದ ಆರಂಭಿಸಿ 1224ನೇ ವರ್ಷದ ಜಮಾದಿ-ಉಲ್ ಥಾನಿಯ 7ನೇ ದಿನಕ್ಕೆ ಸಮನಾಗುತ್ತದೆ. ಬೆಳಗಿನ ಜಾವ ಈ ಕನಸು ಕಂಡೆ. ಅಲ್ಲೊಂದು ಬೃಹತ್ ದೇವಾಲಯ ಕಾಣಿಸಿತು. ಅದರ ಹಿಂಭಾಗ ಸ್ವಲ್ಪ ಮಟ್ಟಿಗೆ ಧಕ್ಕೆಗೆ ಒಳಗಾಗಿತ್ತು. ಅದರಲ್ಲಿ ಹಲವು ದೊಡ್ಡಗಾತ್ರದ ಪ್ರತಿಮೆಗಳಿದ್ದವು. ನಾನು ಹಲವು ಜನರೊಡನೆ ಸೇರಿ ದೇವಾಲಯದೊಳಕ್ಕೆ ಹೋದೆ. ಪ್ರತಿಮೆಗಳು ಮನುಷ್ಯರ ಹಾಗೆ ನೋಡುತ್ತಿರುವ ಹಾಗೆ ಅವುಗಳ ಕಣ್ಣುಗಳು ಅಲುಗಾಡುತ್ತಿರುವುದನ್ನು ಗಮನಿಸಿದೆವು. ಪ್ರತಿಮೆಗಳ ಕಣ್ಣುಗಳು ಜೀವಂತ ಇರುವವರಂತೆ ಅಲುಗಾಡುವುದ ನೋಡಿದೆ, ಅದೇಕೆ ಹಾಗಿರಬಹುದು ಎಂದು ಅಚ್ಚರಿಯಾಯಿತು. ಆಗ ನಾನು ಅವುಗಳ ಸಮೀಪ ಹೋದೆ. ಕೊನೆಯ ಸಾಲಿನಲ್ಲಿ ಎರಡು ಸ್ತ್ರೀಪ್ರತಿಮೆಗಳಿದ್ದವು. ಆ ಎರಡರ ಪೈಕಿ ಒಂದು ಪ್ರತಿಮೆಯ ಸೀರೆ ಉಟ್ಟ ಕಾಲುಗಳು ಕಾಣಿಸಿದವು. ಅದರಿಂದ ಇಬ್ಬರು ಮಹಿಳೆಯರು ಉಳಿದೆಲ್ಲ ಪ್ರತಿಮೆಗಳು ಪುರುಷರು ಮತ್ತು ಇತರ ವಸ್ತುಗಳು ಎಂದು ಗೊತ್ತಾಯಿತು. ಅವಳು ಹೇಳಿದಳು, ತಾವು ದೀರ್ಘಕಾಲದಿಂದ ದೇವರ ಹತ್ತಿರ ಪ್ರಾರ್ಥಿಸುತ್ತಿದ್ದೇವೆ ಮತ್ತು ಪ್ರತಿಯೊಬ್ಬರೂ ನಮ್ಮನ್ನು ನಾವೇ ನೋಡಿಕೊಳ್ಳುತ್ತಿದ್ದೇವೆ. ನಾನು ಅವಳಿಗೆ ಹೇಳಿದೆ “ಒಳ್ಳೆಯದಾಯಿತು. ನಿಮ್ಮಷ್ಟಕ್ಕೆ ನೀವು ದೇವರ ಸ್ಮರಣೆಯನ್ನು ಮುಂದುವರಿಸಿರಿ”. ಹಾಗೆ ಹೇಳಿದ ಮೇಲೆ ಕಟ್ಟಡದ ಶಿಥಿಲಗೊಂಡ ಭಾಗವನ್ನು ದುರಸ್ತಿ ಮಾಡುವಂತೆ ಆದೇಶಿಸಿದೆ. ಈ ಮಧ್ಯೆ ನನಗೆ ಎಚ್ಚರವಾಯಿತು.

(1785ರಿಂದ 1798ರ ಅವಧಿಯಲ್ಲಿ ಟಿಪ್ಪು ಸುಲ್ತಾನ ದಾಖಲಿಸಿದ 37 ಕನಸುಗಳನ್ನು ಇಂಗ್ಲಿಷ್‌ನಲ್ಲಿ ’ದ ಬುಕ್ ಆಫ್ ಡ್ರೀಮ್ಸ್’ ಎಂದು ಪ್ರಕಟಿಸಲಾಗಿದೆ. ಬ್ರಿಟಿಷರು, ನಿಜಾಮ, ಮರಾಠರನ್ನು ಯುದ್ಧದಲ್ಲಿ ಸೋಲಿಸುವ ಬಗ್ಗೆ ಹಾಗೂ ಇನ್ನೂ ಹಲವು ವಿಷಯಗಳ ಬಗ್ಗೆ ಟಿಪ್ಪುವಿನ ಸುಪ್ತಮನಸ್ಸಿನ ದಾಖಲೆಗಳಿವು. ಈ ಕನಸುಗಳನ್ನು ಕನ್ನಡಕ್ಕೆ ದೇವು ಪತ್ತಾರ ದೀರ್ಘ ಪ್ರಸ್ತಾವನೆಯೊಂದಿಗೆ ಅನುವಾದಿಸಿದ್ದಾರೆ. ಗೌರಿ ಮೀಡಿಯಾ ಟ್ರಸ್ಟ್ ಇದನ್ನು ಡಿಸೆಂಬರ್ ತಿಂಗಳಿನಲ್ಲಿ ಪ್ರಕಟಿಸಲಿದೆ.)

ದೇವು ಪತ್ತಾರ

(ಕನ್ನಡಕ್ಕೆ): ದೇವು ಪತ್ತಾರ
ಹಿರಿಯ ಪತ್ರಕರ್ತರು. ಕ್ಯಾಮರಾ ಇಂಜಿನಿಯರ್ ಗುಲಾಂ ಮುಂತಕಾ, ಮಹಾದೇವ ಬಾಬಾ ಮೆಡೋಸ್ ಟೇಲರ್(ಸಂಪಾದಿತ), ಈಗ ಹೀಗಿರುವ ಲೋಕದಲ್ಲಿ (ವ್ಯಕ್ತಿಚಿತ್ರ), ಬಹಮನಿ ಸಾಮ್ರಾಜ್ಯ ಅವರ ಪ್ರಕಟಿತ ಕೃತಿಗಳಲ್ಲಿ ಕೆಲವು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....