Homeಕರ್ನಾಟಕ1785ರಿಂದ 1798ರ ಅವಧಿಯ ಟಿಪ್ಪುವಿನ ಕನಸುಗಳು

1785ರಿಂದ 1798ರ ಅವಧಿಯ ಟಿಪ್ಪುವಿನ ಕನಸುಗಳು

- Advertisement -
- Advertisement -

ಕನಸು 1

ಮರಾಠ ಸೇನೆಯ ಮೂವರು ಅಧಿಕಾರಿಗಳು

ಚಂದ್ರಮಾನದ ಪ್ರಕಾರ ಮೊದಲ ’ಅಹ್ಮದಿ’ ತಿಂಗಳ ಗುರುವಾರ ರಾತ್ರಿ. ಹಿಜರಿಯ 1200 ದಾಲ್ವ್ ವರ್ಷದ ಆರಂಭದಲ್ಲಿ, ರಾತ್ರಿಯ ಮೂರು ಭಾಗ ಹಾಗೂ ಐದು ಪ್ರಹರಗಳು ಕಳೆದಿದ್ದವು. ಶಮ್ಸಾಬಾದ್‌ನಲ್ಲಿ ಇದ್ದಾಗ ನಾನು ಈ ಕನಸ ಕಂಡೆನು.

ಮರಾಠ ಸೈನ್ಯವು ಬಂದಂತೆ ನಾನು ಏಕಾಂಗಿಯಾಗಿ ಮುನ್ನುಗ್ಗಿ ಅದರ ಸೇನಾಧಿಪತಿಗಳ ಬಳಿ ಒಬ್ಬೊಬ್ಬರಾಗಿ ಹೋರಾಡುವ ಸವಾಲು ಹಾಕಿದಂತೆ ಕಾಣಿಸಿತು. ಆ ಸೈನ್ಯದ ಮುಸ್ಲಿಮ್ ಸೇನಾಧಿಕಾರಿ ನನ್ನನ್ನು ಎದುರಿಸಿ ನಿಂತ. ಸಮರಾಂಗಣದಲ್ಲಿ ಎರಡೂ ಸೈನ್ಯಗಳು ಮುಖಾಮುಖಿಯಾಗಿ ಕದನ ನಡೆಸುತ್ತಿರುವಾಗ ನನ್ನ ಖಡ್ಗದ ಒಂದೇ ಏಟಿಗೆ ಆ ಮುಸ್ಲಿಮ್ ಸೇನಾಧಿಪತಿಯನ್ನು ಕೊಂದೆನು. ಅದಾದ ನಂತರ ಸೈನ್ಯದ ನಾಯಕನಾಗಿದ್ದ ಯುವಕ ಅಲ್ಲಿಂದ ಕಾಲ್ಕಿತ್ತು ಓಡಿದ. ನಾನು ಅವನ ಬೆನ್ನಟ್ಟಿದೆ. ಮತ್ತು ಮುಖಾಮುಖಿಯಾಗಿ ಒಂದೇ ಹೊಡೆತಕ್ಕೆ ಅವನನ್ನು ಮುಗಿಸಿದೆ. ಅದೇ ರೀತಿಯಾಗಿ ಮೂರನೇ ಮುಖ್ಯ ಸೇನಾಧಿಪತಿಯನ್ನು ಕೊಂದುಹಾಕಿದೆ. ಮೂವರು ಸೇನಾಧಿಕಾರಿಗಳನ್ನೂ ತಲಾ ಒಂದೊಂದು ಏಟಿಗೆ ಮುಗಿಸಿ ಮರಳಿದೆ. ನನ್ನ ಸೈನ್ಯ ವಿಜಯಶಾಲಿಯಾಗಿ ಸಂಭ್ರಮದಲ್ಲಿತ್ತು.

ಆಗ ಕನಸಿನಲ್ಲಿ ನನ್ನ ಸೈನ್ಯದ ಎಲ್ಲ ಅಧಿಕಾರಿಗಳು ಹಾಗೂ ಹೈದರ್ ಸಾಹಿಬ್ ಅವರು ಮನೆಯಲ್ಲಿ ಊಟ ಮಾಡುತ್ತಿರುವಂತೆ ಕಂಡೆನು. ತುಂಬಾ ದಣಿದಿದ್ದ ನಾನು ಕುಡಿಯುವುದಕ್ಕಾಗಿ ನೀರು ಕೇಳಿದೆ. ಅಲ್ಲಿದ್ದವರು ನನಗೆ ಶುಭಾಶಯ ಕೋರಿದರು ಹಾಗೂ ಊಟ ಮಾಡಿದ ನಂತರ ನೀರು ಕುಡಿಯುವಂತೆ ಮನವಿ ಮಾಡಿದರು. ಈ ಮಧ್ಯೆ ದುರ್ಬಲನಾದ ಬಿಳಿಗಡ್ಡದ ಮುದುಕನೊಬ್ಬ ನನ್ನ ಮುಂದೆ ಕಾಣಿಸಿಕೊಂಡ. ಅವನ ಕೈಯಲ್ಲಿ ಕೆನೆ ಹಾಗೂ ಸಿಹಿಯಾದ ತಿಂಡಿಗಳಿದ್ದವು. ಅವನ್ನು ತೆಗೆದುಕೊಳ್ಳುವಂತೆ ಕೇಳಿದ. ಆ ಸಿಹಿ ತಿಂಡಿಗಳನ್ನು ಅವನಿಂದ ಪಡೆದು ತಿಂದ ನಂತರ ನನ್ನಷ್ಟಕ್ಕೆ ನಾನೇ ಹೇಳಿಕೊಂಡೆ. “ಇಷ್ಟೊಂದು ಸ್ವಾದಿಷ್ಟ ಹಾಗೂ ರುಚಿಯಾದ ಆಹಾರ ಹಿಂದೆಂದೂ ತಿಂದಿರಲಿಲ್ಲ. ಅವು ಅತ್ಯಂತ ರುಚಿಕರವಾಗಿದ್ದವು.” ಸ್ನಾನ ಮಾಡಿ ಶುದ್ಧಿಯಾದ ನಂತರ ನನ್ನ ಅಧಿಕಾರಿಗಳ ಬಳಿ ವಿಚಾರಿಸಿದೆ. ಅವರು ಕಾಫಿರರ ಸೈನ್ಯವನ್ನು ನಾಶ ಮಾಡಿದ ಬಗ್ಗೆ; ಹೈದರಿ ಸೈನ್ಯದ ಅಧಿಕಾರಿಗಳು ಇಲ್ಲ ಎಂದು ಉತ್ತರಿಸಿದರು. ಮತ್ತು ಈ ವಿಷಯದಲ್ಲಿ ಅಂತಹ ಯಾವುದೇ ಕ್ರಮ ತೆಗೆದುಕೊಂಡಿರಲಿಲ್ಲ. ಹಾಗೂ ಅವರು ಸೂಕ್ತ ಆದೇಶಕ್ಕಾಗಿ ಕಾಯುತ್ತಿದ್ದುದಾಗಿ ತಿಳಿಸಿದರು.

ಈ ಮಧ್ಯೆ ಅವರು, ಕಾಫಿರರ /ಸತ್ಯನಿಷೇಧಿಗಳ/ ನಂಬಿಕೆ ಇಲ್ಲದವರ ಸೈನ್ಯದ ಬಳಿ ನೆಲೆನಿಂತ ಹಳ್ಳಿಯಲ್ಲಿ ಕೊಳ್ಳೆಹೊಡೆದ ವಸ್ತುಗಳಿದ್ದವು ಎಂದು ಹೇಳಿದರು. ನಾನು ನನ್ನ ಸೈನ್ಯವನ್ನು ಸಿದ್ಧಗೊಳಿಸಿ, ಆ ಸೈನ್ಯ ಇರುವಲ್ಲಿಗೆ ಹೊರಟೆ. ಸಹಾಯಕರ ನೆರವಿನಿಂದ ಸೊಂಟಕ್ಕೆ ಕಟ್ಟಿದ ಒರೆಯಿಂದ ನನ್ನ ಖಡ್ಗ ಹೊರ ತೆಗೆದೆ. ಸೈಯದ್ ಜುನೈದ್, ಸೈಯದ್ ಗಫಾರ್ ಮತ್ತು ಇತರ ಅಧಿಕಾರಿಗಳಿಗೆ ಯುದ್ಧಕ್ಕೆ ಸಿದ್ಧರಾಗುವಂತೆ ಹೇಳಿದೆ. ಈ ಕನಸಿನಲ್ಲಿ ಕಂಡದ್ದು ಇಷ್ಟೇ.

***

ಕನಸು 21

ನಿಜಾಮ್‌ನ ಪ್ರತಿನಿಧಿ

ರಾಸಿಕ್ ವರ್ಷದ ರಬ್ಬಾನಿ ತಿಂಗಳಿನ 25ನೇ ದಿನ. ಮುಹಮ್ಮದರು ಜನಿಸಿದ ದಿನದಿಂದ ಆರಂಭಿಸಿದ 1222ನೇ ವರ್ಷಕ್ಕೆ ಸಮನಾಗುತ್ತದೆ. ದಿನದ ನಾಲ್ಕು ಗಂಟೆಗಳು ಉಳಿದಿದ್ದವು. ಆಗ ಈ ಕನಸ ಕಂಡೆ. ನಿಜಾಮ್ ಅಲಿಖಾನ್ ಅವರ ದಿವಾನ್ ಬರುವುದ ಕಂಡೆ. ಕಾಣಿಸುತ್ತಿದ್ದಂತೆಯೇ ಅವನಿಗೆ ಹಲ್ಲು ಇಲ್ಲದೇ ಇರುವುದು ಹಾಗೆಯೇ ತಲೆಗೂದಲಿಗೆ ಬಣ್ಣ ಹಚ್ಚಿಕೊಂಡಿರುವುದನ್ನು ಗಮನಿಸಿದೆ. ಅವನು ನನ್ನಿಂದ ಸಹಾಯ ಯಾಚಿಸಿದ. ದೇವರ ಸೇವಕನು ಅವನಿಗೆ ಹೇಳಿದ, “ಆಗಲಿ, ನೀನು ನೆಮ್ಮದಿಯಿಂದಿರು, ನನ್ನ ಸಲಹೆಗಾರರ ಜೊತೆ ಮಾತನಾಡುವೆ, ಅದಾದ ನಂತರ ನಿನಗೆ ಉತ್ತರ ನೀಡುವೆ.” ಈ ರೀತಿಯಲ್ಲಿ ಮಾತನಾಡಿದ ನಂತರ ಅವನನ್ನು ಕೋಟೆಯಿಂದ ಹೊರಗೆ ಕಳುಹಿಸಿದೆ. ಇಂತಹ ವ್ಯಕ್ತಿಗಳ ಜೊತೆಗೆ ಸಾಂತ್ವನ ಹೇಳುವ ರೀತಿಯಲ್ಲಿಯೇ ಮಾತನಾಡಬೇಕು ಎಂದು ನನ್ನಷ್ಟಕ್ಕೆ ನಾನೇ ಹೇಳಿಕೊಂಡೆ. ಹೀಗೆ ಸಹಾಯ ಕೇಳಿದವರಲ್ಲಿ ಪೂನಾದವರು ಮೊದಲಿಗರು. ಮತ್ತು ಈಗ ಇವರು ಸಹಾಯ ಕೇಳಲು ಬಂದಿದ್ದಾರೆ. ಆದರೆ, ಅವರ ಮಾತುಗಳನ್ನ ನಂಬುವ ಹಾಗಿಲ್ಲ. ಈ ಹಂತದಲ್ಲಿ ಎಚ್ಚರಾಗಿ ಎದ್ದು ಕುಳಿತೆ.

***

ಕನಸು 22

ಅಸಾಧಾರಣ ಮೂರ್ತಿಗಳು, ಪ್ರತಿಮೆ, ಶಿಲ್ಪ

ಹಿರಾಸತ್ ವರ್ಷದ ಝಕಾರಿ ತಿಂಗಳಿನ 8ನೇ ದಿನ, ಮಂಗಳವಾರ ರಾತ್ರಿ, ಮರುದಿನ ಬುಧವಾರ ಇತ್ತು. ಅದು ಮುಹಮ್ಮದ್ ಜನಿಸಿದ ದಿನದಿಂದ ಆರಂಭಿಸಿ 1224ನೇ ವರ್ಷದ ಜಮಾದಿ-ಉಲ್ ಥಾನಿಯ 7ನೇ ದಿನಕ್ಕೆ ಸಮನಾಗುತ್ತದೆ. ಬೆಳಗಿನ ಜಾವ ಈ ಕನಸು ಕಂಡೆ. ಅಲ್ಲೊಂದು ಬೃಹತ್ ದೇವಾಲಯ ಕಾಣಿಸಿತು. ಅದರ ಹಿಂಭಾಗ ಸ್ವಲ್ಪ ಮಟ್ಟಿಗೆ ಧಕ್ಕೆಗೆ ಒಳಗಾಗಿತ್ತು. ಅದರಲ್ಲಿ ಹಲವು ದೊಡ್ಡಗಾತ್ರದ ಪ್ರತಿಮೆಗಳಿದ್ದವು. ನಾನು ಹಲವು ಜನರೊಡನೆ ಸೇರಿ ದೇವಾಲಯದೊಳಕ್ಕೆ ಹೋದೆ. ಪ್ರತಿಮೆಗಳು ಮನುಷ್ಯರ ಹಾಗೆ ನೋಡುತ್ತಿರುವ ಹಾಗೆ ಅವುಗಳ ಕಣ್ಣುಗಳು ಅಲುಗಾಡುತ್ತಿರುವುದನ್ನು ಗಮನಿಸಿದೆವು. ಪ್ರತಿಮೆಗಳ ಕಣ್ಣುಗಳು ಜೀವಂತ ಇರುವವರಂತೆ ಅಲುಗಾಡುವುದ ನೋಡಿದೆ, ಅದೇಕೆ ಹಾಗಿರಬಹುದು ಎಂದು ಅಚ್ಚರಿಯಾಯಿತು. ಆಗ ನಾನು ಅವುಗಳ ಸಮೀಪ ಹೋದೆ. ಕೊನೆಯ ಸಾಲಿನಲ್ಲಿ ಎರಡು ಸ್ತ್ರೀಪ್ರತಿಮೆಗಳಿದ್ದವು. ಆ ಎರಡರ ಪೈಕಿ ಒಂದು ಪ್ರತಿಮೆಯ ಸೀರೆ ಉಟ್ಟ ಕಾಲುಗಳು ಕಾಣಿಸಿದವು. ಅದರಿಂದ ಇಬ್ಬರು ಮಹಿಳೆಯರು ಉಳಿದೆಲ್ಲ ಪ್ರತಿಮೆಗಳು ಪುರುಷರು ಮತ್ತು ಇತರ ವಸ್ತುಗಳು ಎಂದು ಗೊತ್ತಾಯಿತು. ಅವಳು ಹೇಳಿದಳು, ತಾವು ದೀರ್ಘಕಾಲದಿಂದ ದೇವರ ಹತ್ತಿರ ಪ್ರಾರ್ಥಿಸುತ್ತಿದ್ದೇವೆ ಮತ್ತು ಪ್ರತಿಯೊಬ್ಬರೂ ನಮ್ಮನ್ನು ನಾವೇ ನೋಡಿಕೊಳ್ಳುತ್ತಿದ್ದೇವೆ. ನಾನು ಅವಳಿಗೆ ಹೇಳಿದೆ “ಒಳ್ಳೆಯದಾಯಿತು. ನಿಮ್ಮಷ್ಟಕ್ಕೆ ನೀವು ದೇವರ ಸ್ಮರಣೆಯನ್ನು ಮುಂದುವರಿಸಿರಿ”. ಹಾಗೆ ಹೇಳಿದ ಮೇಲೆ ಕಟ್ಟಡದ ಶಿಥಿಲಗೊಂಡ ಭಾಗವನ್ನು ದುರಸ್ತಿ ಮಾಡುವಂತೆ ಆದೇಶಿಸಿದೆ. ಈ ಮಧ್ಯೆ ನನಗೆ ಎಚ್ಚರವಾಯಿತು.

(1785ರಿಂದ 1798ರ ಅವಧಿಯಲ್ಲಿ ಟಿಪ್ಪು ಸುಲ್ತಾನ ದಾಖಲಿಸಿದ 37 ಕನಸುಗಳನ್ನು ಇಂಗ್ಲಿಷ್‌ನಲ್ಲಿ ’ದ ಬುಕ್ ಆಫ್ ಡ್ರೀಮ್ಸ್’ ಎಂದು ಪ್ರಕಟಿಸಲಾಗಿದೆ. ಬ್ರಿಟಿಷರು, ನಿಜಾಮ, ಮರಾಠರನ್ನು ಯುದ್ಧದಲ್ಲಿ ಸೋಲಿಸುವ ಬಗ್ಗೆ ಹಾಗೂ ಇನ್ನೂ ಹಲವು ವಿಷಯಗಳ ಬಗ್ಗೆ ಟಿಪ್ಪುವಿನ ಸುಪ್ತಮನಸ್ಸಿನ ದಾಖಲೆಗಳಿವು. ಈ ಕನಸುಗಳನ್ನು ಕನ್ನಡಕ್ಕೆ ದೇವು ಪತ್ತಾರ ದೀರ್ಘ ಪ್ರಸ್ತಾವನೆಯೊಂದಿಗೆ ಅನುವಾದಿಸಿದ್ದಾರೆ. ಗೌರಿ ಮೀಡಿಯಾ ಟ್ರಸ್ಟ್ ಇದನ್ನು ಡಿಸೆಂಬರ್ ತಿಂಗಳಿನಲ್ಲಿ ಪ್ರಕಟಿಸಲಿದೆ.)

ದೇವು ಪತ್ತಾರ

(ಕನ್ನಡಕ್ಕೆ): ದೇವು ಪತ್ತಾರ
ಹಿರಿಯ ಪತ್ರಕರ್ತರು. ಕ್ಯಾಮರಾ ಇಂಜಿನಿಯರ್ ಗುಲಾಂ ಮುಂತಕಾ, ಮಹಾದೇವ ಬಾಬಾ ಮೆಡೋಸ್ ಟೇಲರ್(ಸಂಪಾದಿತ), ಈಗ ಹೀಗಿರುವ ಲೋಕದಲ್ಲಿ (ವ್ಯಕ್ತಿಚಿತ್ರ), ಬಹಮನಿ ಸಾಮ್ರಾಜ್ಯ ಅವರ ಪ್ರಕಟಿತ ಕೃತಿಗಳಲ್ಲಿ ಕೆಲವು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...